Bengaluru Crime: ಮನೆ ಮಾಲಕಿಯ ಕೊಂದು ಚಿನ್ನ ದೋಚಿದಳು!

ಎರಡೂವರೆ ವರ್ಷದ ಮಗುವಿನ ಜತೆಗಿದ್ದ ಮಹಿಳೆಯ ಕತ್ತು ಹಿಸುಕಿ ಕೊಲೆ; ಸಾಲ ತೀರಿಸಲು 36 ಗ್ರಾಂ ಚಿನ್ನಾಭರಣ ಕದ್ದ ಆರೋಪಿ ಸೆರೆ

Team Udayavani, May 16, 2024, 2:39 PM IST

5-bng-crime-1

ಬೆಂಗಳೂರು: ಸಾಲ ತೀರಿಸುವ ಉದ್ದೇಶದಿಂದ ಮನೆ ಮಾಲಕಿಯ ಕತ್ತು ಹಿಸುಕಿ ಹತ್ಯೆ ಮಾಡಿದ ಬಾಡಿಗೆಗಿದ್ದ ಮಹಿಳೆಯನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.

ಕೋಲಾರ ಮೂಲದ ಕೆಂಗೇರಿ ನಿವಾಸಿ ಮೋನಿಕಾ (24) ಬಂಧಿತೆ. ಕೆಂಗೇರಿ ಕೋನಸಂದ್ರದ ನಿವಾಸಿ ದಿವ್ಯಾ (36) ಕೊಲೆಯಾದವರು.

ಮೋನಿಕಾ ಕಳೆದ 4 ವರ್ಷಗಳ ಹಿಂದೆ ವಿವಾಹವಾಗಿದ್ದರು. ಇದಾಗಿ 4 ತಿಂಗಳಿಗೆ ಆಕೆಯ ಪತಿ ಮೃತಪಟ್ಟಿದ್ದರು. ಉದ್ಯೋಗ ಅರಸಿಕೊಂಡು ನಗರಕ್ಕೆ ಬಂದಿದ್ದ ಮೋನಿಕಾ ಕಂಪನಿಯೊಂದರಲ್ಲಿ ಕಳೆದೊಂದು ವರ್ಷದಿಂದ ಡೇಟಾ ಎಂಟ್ರಿ ಕಾರ್ಯ ನಿರ್ವಹಿಸುತ್ತಿದ್ದಳು. ಇಲ್ಲಿ ವ್ಯಕ್ತಿಯೊಬ್ಬನ ಜೊತೆಗೆ ಲಿವ್‌ ಇನ್‌ ರಿಲೇಶನ್‌ಶಿಪ್‌ನಲ್ಲಿದ್ದಳು.

ಇತ್ತ ದಿವ್ಯಾ-ಗುರುಮೂರ್ತಿ ದಂಪತಿ ಕೆಲವು ತಿಂಗಳ ಹಿಂದೆ ಕೋನಸಂದ್ರದಲ್ಲಿರುವ ಸ್ವಂತ ನಿವೇಶನದಲ್ಲಿ ಹೊಸ ಮನೆ ಕಟ್ಟಿದ್ದರು. ಮೊದಲ ಮಹಡಿಯಲ್ಲಿರುವ ಮನೆಯನ್ನು ಬಾಡಿಗೆಗೆ ನೀಡಲು ನಿರ್ಧರಿಸಿದ್ದರು. ಕಳೆದ 2 ತಿಂಗಳ ಹಿಂದೆ ಮೋನಿಕಾ ಬಾಡಿಗೆಗೆ ಮನೆ ಕೇಳಿಕೊಂಡು ದಿವ್ಯಾ-ಗುರುಮೂರ್ತಿ ನಿವಾಸಕ್ಕೆ ಬಂದಿದ್ದಳು. ಆ ವೇಳೆ ಜೊತೆಗಿದ್ದ ಪ್ರಿಯಕರನನ್ನು ತನ್ನ ಪತಿಯೆಂದು ಮನೆ ಮಾಲೀಕರಿಗೆ ಪರಿಚಯಿಸಿ ಬಾಡಿಗೆ ಮನೆ ಪಡೆದುಕೊಂಡಿದ್ದಳು. ಒಂಟಿಯಾಗಿಯೇ ಮನೆಯಲ್ಲಿರುತ್ತಿದ್ದ ಮೋನಿಕಾ ಜೊತೆಗೆ ಕಾಲ ಕಳೆಯಲು ಆಗಾಗ ಬಾಯ್‌ಫ್ರೆಂಡ್‌ ಅಲ್ಲಿಗೆ ಬಂದು ಹೋಗುತ್ತಿದ್ದ ಎಂಬುದು ಗೊತ್ತಾಗಿದೆ.

ಕೊಲೆ ಮಾಡಿ 36 ಗ್ರಾಂ ಚಿನ್ನ ದೋಚಿದಳು:

ಮೋನಿಕಾ ಶೋಕಿಗಾಗಿ ಲಕ್ಷಾಂತರ ರೂ. ಸಾಲ ಮಾಡಿ ಕೊಂಡಿದ್ದಳು. ಜೊತೆಗೆ ಪ್ರಿಯಕರನಿಗೆ ಟಾಟಾ ಏಸ್‌ ವಾಹನ ಖರೀದಿಸಿ ಕೊಟ್ಟಿದ್ದಳು. ಇತ್ತ ತನಗೆ ಬರುತ್ತಿರುವ ವೇತನದಲ್ಲಿ ಸಾಲ ತೀರಿಸಲಾಗದೇ ಒದ್ದಾಡುತ್ತಿದ್ದಳು. ಆಗ ಆಕೆಗೆ ಮನೆ ಮಾಲಕಿ ದಿವ್ಯಾ ಮೈಮೇಲಿದ್ದ ಚಿನ್ನಾಭರಣಗಳ ಮೇಲೆ ಕೆಂಗಣ್ಣು ಬಿದ್ದಿತ್ತು. ಹೇಗಾದರೂ ಮಾಡಿ ಚಿನ್ನಾಭರಣಗಳನ್ನು ದೋಚಬೇಕೆಂದು ಮೋನಿಕಾ ಸಂಚು ರೂಪಿಸುತ್ತಿದ್ದಳು.

ದಿವ್ಯಾ ಅವರ ಅತ್ತೆ, ಮಾವ, ಪತಿ ಬೆಳಗಾದರೆ ಕೆಲಸಕ್ಕೆ ಹೋದಾಗ ಮನೆಯಲ್ಲಿ ದಿವ್ಯಾ 2 ವರ್ಷದ ಮಗುವಿನೊಂದಿಗೆ ಇರುವುದನ್ನು ಗಮನಿಸುತ್ತಿದ್ದಳು. ತಾನು ರೂಪಿಸಿದ ಸಂಚಿನಂತೆ ಕಳೆದ ಮೇ 10ರಂದು ಮಧ್ಯಾಹ್ನ ಮೋನಿಕಾ ಮನೆಯ ಹಿಂಬದಿಯಿಂದ ಮಾಲಕಿ ದಿವ್ಯಾ ಮನೆಗೆ ನುಗ್ಗಿದ್ದಳು. ಬಳಿಕ ಕತ್ತು ಹಿಸುಕಿ ಕೊಲೆ ಮಾಡಿ 36 ಗ್ರಾಂ ಚಿನ್ನಾಭರಣ ಲಪಟಾಯಿಸಿ ನೇರವಾಗಿ ಮೊದಲನೇ ಮಹಡಿಯಲ್ಲಿರುವ ತನ್ನ ಮನೆಗೆ ತೆರಳಿದ್ದಳು. ಆ ವೇಳೆ ಎರಡೂವರೆ ವರ್ಷದ ಮಗು ನಿದ್ದೆಗೆ ಜಾರಿತ್ತು ಎಂದು ತಿಳಿದು ಬಂದಿದೆ.

ಇತ್ತ ಕಟಿಂಗ್‌ ಶಾಪ್‌ ನಡೆಸುತ್ತಿರುವ ಮೃತಳ ಪತಿ ಗುರುಮೂರ್ತಿ ಮಧ್ಯಾಹ್ನ ಪತ್ನಿಗೆ ಕರೆ ಮಾಡಿದಾಗ ಕರೆ ಸ್ವೀಕರಿಸಿಲ್ಲ. ಅನುಮಾನಗೊಂಡು ಮನೆಗೆ ಬಂದು ನೋಡಿದಾಗ ಕೃತ್ಯ ಬೆಳಕಿಗೆ ಬಂದಿತ್ತು.

ಕೆಂಗೇರಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಮರಣೋತ್ತರ ಪರೀಕ್ಷೆ ವೇಳೆ ಕತ್ತು ಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿತ್ತು. ತಾಯಿ ಕಳೆದುಕೊಂಡ ಎರಡೂವರೆ ವರ್ಷದ ಕಂದಮ್ಮ ತಾಯಿಯ ಅಪ್ಪುಗೆಗಾಗಿ ಹಂಬಲಿಸುತ್ತಿದೆ.

ಆರೋಪಿ ಸಿಕ್ಕಿಬಿದ್ದಿದ್ದು ಹೇಗೆ?:

ದಿವ್ಯಾ ಅವರಿಂದ ಕದ್ದ ಒಡವೆಗಳನ್ನು ಆಕೆಯ ಮನೆಗೆ ಹತ್ತಿರದ ಚಿನ್ನಾಭರಣ ಅಂಗಡಿಯೊಂದರಲ್ಲಿ ಮೋನಿಕಾ ಗಿರವಿ ಇಟ್ಟಿದ್ದಳು. ಇತ್ತ ಕೃತ್ಯ ನಡೆಯುವ ವೇಳೆ ಮೊದಲ ಮಹಡಿಯಲ್ಲಿದ್ದ ಮೋನಿಕಾಳಿಂದ ಪೊಲೀಸರು ಮಾಹಿತಿ ಕಲೆ ಹಾಕಿದ್ದರು. ಆಗ ಪೊಲೀಸರ ದಿಕ್ಕು ತಪ್ಪಿಸಲು ತನ್ನ ಮನೆಯಿಂದ 60 ಸಾವಿರ ರೂ. ಕಳುವಾಗಿದೆ ಎಂದಿದ್ದಳು ಎನ್ನಲಾಗಿದೆ.

ಆರಂಭದಲ್ಲಿ ಪೊಲೀಸರೂ ಸಹ ಈಕೆಯ ಮಾತನನ್ನು ನಂಬಿ ಯಾರೋ ಕಳ್ಳರು ಮನೆಗೆ ಬಂದು ಚಿನ್ನ ದೋಚಿರಬಹುದು ಎಂದುಕೊಂಡಿದ್ದರು. ಈ ನಿಟ್ಟಿನಲ್ಲಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದಾಗ ಹೊರಗಿನಿಂದ ದಿವ್ಯಾ ಮನೆಗೆ ಯಾರೂ ಎಂಟ್ರಿ ಕೊಟ್ಟ ಕುರುಹು ಸಿಕ್ಕಿರಲಿಲ್ಲ. ಮೋನಿಕಾಳನ್ನು ಪ್ರಶ್ನಿಸಿದಾಗ ಆಕೆ ಗೊಂದಲದ ಹೇಳಿಕೆ ನೀಡಿದ್ದಳು. ಆಗ ಮೋನಿಕಾ ಮೇಲೆ ಅನುಮಾನ ಬಂದಿತ್ತು. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಮೋನಿಕಾ ಸತ್ಯ ಬಾಯ್ಬಿಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಆಕೆಯ ಪ್ರಿಯಕರ ನಾಪತ್ತೆಯಾಗಿದ್ದು, ಆತನಿಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಆರೋಪಿ ಮಹಿಳೆಗೆ ರೀಲ್ಸ್ ಹುಚ್ಚು

ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡಿದ್ದ ಮೋನಿಕಾ ತನ್ನ ಮೊಬೈಲ್‌ ಕ್ಯಾಮೆರಾ ಮುಂದೆ ನಿಂತ್ಕೊಂಡು ಬಿಂದಾಸ್‌ ಆಗಿ ರೀಲ್ಸ್ ಮಾಡುತ್ತಿದ್ದಳು. ಆದರೆ, 70 ರಿಂದ 80 ಮಂದಿಯಷ್ಟೆ ಫಾಲೋವರ್ಸ್‌ ಇದ್ದರು. ರೀಲ್ಸ್‌ ಮಾಡುವ ಹುಚ್ಚು ಹೆಚ್ಚಾಗುವುದರ ಜೊತೆಗೆ ಐಷಾರಾಮಿ ಲೈಫ್ ಸ್ಟೈಲ್‌ ಲೀಡ್‌ ಮಾಡಬೇಕೆಂಬ ದುರಾಸೆಗೆ ಬಿದ್ದು ಅತಿಯಾದ ಸಾಲ ಮಾಡಿ ಶೋಕಿ ಜೀವನ ನಡೆಸುತ್ತಿದ್ದಳು.

ಮನೆ ಮಾಲಕಿ ದಿವ್ಯಾಳನ್ನ ಕೊಲೆ ಮಾಡಿ ಶವದ ಮೇಲಿದ್ದ ಒಡವೆ ದೋಚಿದ್ದಳು. ಮನೆಗೆ ಬಂದ ದಿವ್ಯಾ ಪತಿ ಗುರುಮೂರ್ತಿ ಅವರು ಮೋನಿಕಾಗೆ ಕರೆ ಮಾಡಿ ಕೇಳಿದಾಗ ತನಗೇನು ಗೊತ್ತೆ ಇಲ್ಲ ಎಂಬಂತೆ ನಾಟಕವಾಡಿದ್ದಾಳೆ. ಈ ವೇಳೆ ಸಾವನ್ನಪ್ಪಿದ್ದ ದಿವ್ಯಾ ಕುತ್ತಿಗೆಯ ಮೇಲೆ ಗಾಯದ ಗುರುತು ಇರುವುದನ್ನು ಗುರುಮೂರ್ತಿ ಗಮನಿಸಿದ್ದರು. ಮೋನಿಕಾ ಕಳೆದ ತಿಂಗಳ ಬಾಡಿಗೆ ಸಹ ಕೊಟ್ಟಿರಲಿಲ್ಲ. ಇನ್ನು 60 ಸಾವಿರ ರೂ. ನನ್ನ ಮನೆಯಿಂದಲೂ ಕಳವಾಗಿದೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿರುವುದು ಅನುಮಾನ ಹುಟ್ಟಿಸಿತ್ತು.

-ಉದಯವಾಣಿ ಸಮಾಚಾರ

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.