Bengaluru: ತನ್ನ ಮಗುವನ್ನೇ ಕತ್ತು ಹಿಸುಕಿ ಕೊಂದ ಸಾಫ್ಟ್ವೇರ್ ಉದ್ಯೋಗಿ ತಾಯಿ ಸೆರೆ
Team Udayavani, Jun 14, 2024, 2:51 PM IST
ಬೆಂಗಳೂರು: ಟೆಕಿ ತಾಯಿಯೇ ತನ್ನ 3 ವರ್ಷ 10 ತಿಂಗಳ ಬುದ್ಧಿಮಾಂದ್ಯ ಹೆಣ್ಣು ಮಗುವಿನ ಕತ್ತು ಹಿಸುಕಿ ಉಸಿರುಗಟ್ಟಿಸಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಚಿಕ್ಕಲ್ಲಸಂದ್ರದ ಮಂಜುನಾಥನಗರದ ಸಿರಿ ಅಪಾರ್ಟ್ಮೆಂಟ್ನ ನಿವಾಸಿ ಪ್ರೀತಿಕಾ (3 ವರ್ಷ 10 ತಿಂಗಳು) ಕೊಲೆಯಾದ ಮಗು. ಈಕೆಯ ತಾಯಿ ರಮ್ಯಾ(35) ಬಂಧಿತ ಆರೋಪಿ.
ಆರೋಪಿ ರಮ್ಯಾ ಹಾಗೂ ವೆಂಕಟೇಶ್ ಕೃಷ್ಣನ್ ಕಳೆದ 10 ವರ್ಷದ ಹಿಂದೆ ವಿವಾಹವಾಗಿದ್ದು, ದಂಪತಿಗೆ 3 ವರ್ಷ 10 ತಿಂಗಳ ಅವಳಿ ಹೆಣ್ಣು ಮಕ್ಕಳಿದ್ದರು. ವೃತ್ತಿಯಲ್ಲಿ ದಂಪತಿ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದಾರೆ.
ವೆಂಕಟೇಶ್ ನಾರ್ವೆಯಲ್ಲಿ ಉದ್ಯೋಗ ದಲ್ಲಿದ್ದರೆ, ರಮ್ಯಾ ಕೆಲ ವರ್ಷ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿ ಮಕ್ಕಳ ಆರೈಕೆಗಾಗಿ ಕೆಲಸ ತೊರೆದಿದ್ದರು. ಚಿಕ್ಕಲ್ಲಸಂದ್ರದ ಮಂಜುನಾಥನಗರದ ಅಪಾರ್ಟ್ಮೆಂಟ್ ನಲ್ಲಿ ಸ್ವಂತ ಫ್ಲಾಟ್ನಲ್ಲಿ ವಾಸಿಸುತ್ತಿದ್ದರು.
ಅವಳಿ ಮಕ್ಕಳ ಪೈಕಿ ಪ್ರೀತಿಕಾ ಬುದ್ಧಿಮಾಂದ್ಯೆಯಾಗಿದ್ದು, 3 ವರ್ಷ 10 ತಿಂಗಳಾದರೂ ಪ್ರೀತಿಕಾಗೆ ಮಾತು ಬರುತ್ತಿರಲಿಲ್ಲ. ಇದರಿಂದ ಬೇಸರಗೊಂಡಿದ್ದ ರಮ್ಯಾ ಗುರುವಾರ ಮಧ್ಯಾಹ್ನ 12.30ಕ್ಕೆ ಮಗಳು ಪ್ರೀತಿಕಾಳ ಕತ್ತು ಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದರು. ನಂತರ ತನ್ನ ತಪ್ಪಿನ ಅರಿವಾಗಿ ಪ್ರಜ್ಞಾಹೀನ ಸ್ಥಿತಿ ಯಲ್ಲಿದ್ದ ಪ್ರೀತಿಕಾಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು.
ಮಗು ಪ್ರೀತಿಕಾಳನ್ನು ಪರೀ ಕ್ಷಿಸಿದ ವೈದ್ಯರು ಆಕೆ ಮೃತಪಟ್ಟಿರು ವು ದನ್ನು ದೃಢಪಡಿಸಿದ್ದರು. ಬಳಿಕ ರಮ್ಯಾ ವಾಜರಹಳ್ಳಿಯಲ್ಲಿದ್ದ ತನ್ನ ಮೈದುನಾಗೆ ಕರೆ ಮಾಡಿ ಮಗು ಪ್ರೀತಿಕಾಳನ್ನು ಕೊಲೆ ಮಾಡಿರುವ ವಿಚಾರ ಹೇಳಿದ್ದಳು. ಕೂಡಲೇ ಮೈದುನಾ ಆಸ್ಪತ್ರೆಗೆ ಬಂದು ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಗೆ ಅತ್ತಿಗೆ ರಮ್ಯಾ ವಿರುದ್ಧ ದೂರು ನೀಡಿದ್ದರು. ಪ್ರಕರಣ ದಾಖಲಿ ಸಿಕೊಂಡ ಪೊಲೀಸರು ರಮ್ಯಾ ಅವರನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಭಾರತದಲ್ಲಿ ಪಾಕ್ ಸಿನಿಮಾ ದ ಲೆಜೆಂಡ್ ಆಫ್ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ
Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ ಬಿಗಿ ಪೊಲೀಸ್ ಭದ್ರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.