Bengaluru:ಪತ್ನಿಯನ್ನು “ಹೀಗೆ ಕೊಂದೆ’ ಎಂದು ಫೇಸ್‌ಬುಕ್‌ನಲ್ಲಿ ಲೈವ್‌ ಮಾಡಿದ ಕ್ರೂರ ಪತಿ!

ತವರಿನಲ್ಲಿದ್ದ ಪತ್ನಿ ಮನೆಗೆ ತೆರಳಿ ಚಾಕುವಿನಿಂದ ಇರಿದು ಹತ್ಯೆ

Team Udayavani, Aug 3, 2024, 1:01 PM IST

8-crime

ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ತವರು ಮನೆಯಲ್ಲಿದ್ದ ಪತ್ನಿಗೆ ಪತಿಯೇ ಚಾಕುವಿನಿಂದ ಹತ್ತಾರು ಭಾರೀ ಇರಿದು ಭೀಕರವಾಗಿ ಹತ್ಯೆಗೈದಿರುವ ಘಟನೆ ಚಾಮರಾಜಪೇಟೆ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದ್ದು, ಆರೋಪಿ ಪತಿ ತನ್ನ ವಿಕೃತಿಯನ್ನು ಫೇಸ್‌ಬುಕ್‌ ಲೈವ್‌ ಮಾಡಿ, ಯಾವ ರೀತಿ ಹತ್ಯೆ ಮಾಡಿದ್ದೇನೆ ಎಂದು ಬಹಿರಂಗ ಪಡಿಸಿದ್ದಾನೆ.

ಚಾಮರಾಜಪೇಟೆಯ ಎಂ.ಡಿ.ಬ್ಲಾಕ್‌ ನಿವಾಸಿ ಸೈಯಿದಾ ಫಾಜೀಲ್‌ ಫಾತೀಮಾ(34) ಕೊಲೆಯಾದ ಮಹಿಳೆ.

ಕೃತ್ಯ ಎಸಗಿದ ಈಕೆಯ ಪತಿ ತಬ್ರೇಜ್‌ ಪಾಷಾ(37) ಎಂಬಾತ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ 2 ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಸಿದ್ದಾಪುರದ ಸೋಮೇಶ್ವರ ನಗರ ನಿವಾಸಿ ತಬ್ರೇಜ್‌ ಪಾಷಾ ಮತ್ತು ಸೈಯಿದಾ ಫಾಜೀಲ್‌ ಫಾತೀಮಾ 9 ವರ್ಷಗಳ ಹಿಂದೆ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಈ ಮಧ್ಯೆ ಕೌಟುಂಬಿಕ ವಿಚಾರವಾಗಿ ಇಬ್ಬರು ದೂರವಾಗಿ ಪ್ರತ್ಯೇಕವಾಗಿ ವಾಸವಾಗಿದ್ದಾರೆ.

ಸೈಯಿದಾ ಎಂ.ಡಿ.ಬ್ಲಾಕ್‌ನಲ್ಲಿ ತವರು ಮನೆಯಲ್ಲಿ ವಾಸವಾಗಿದ್ದರೆ, ಆರೋಪಿ ಸಿದ್ದಾಪುರದಲ್ಲಿ ತನ್ನ ಪೋಷಕರ ಜತೆ ವಾಸವಾಗಿದ್ದ. ಜೀವನ ನಿರ್ವಹಣೆಗಾಗಿ ಸೈಯಿದಾ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.

ಶುಕ್ರವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಪತ್ನಿ ಸೈಯಿದಾ ತವರು ಮನೆಗೆ ಬಂದ ಆರೋಪಿ, ಆಕೆಗೆ ತನ್ನೊಂದಿಗೆ ಮನೆಗೆ ಬರುವಂತೆ ಕೇಳಿದ್ದಾನೆ. ಆದರೆ, ಆಕೆ ನಿರಾಕರಿಸಿದ್ದಾಳೆ. ಅದರಿಂದ ಕೋಪಗೊಂಡ ಆರೋಪಿ ತಾನೂ ತಂದಿದ್ದ ಚಾಕುವಿನಿಂದ ಆಕೆಯ ಹೊಟ್ಟೆ, ತಲೆ, ಕೈ, ಕಾಲು ಹಾಗೂ ದೇಹದ ಇತರೆ ಭಾಗಗಳ ಮೇಲೆ ಹತ್ತಾರು ಬಾರಿ ಇರಿದು ಹತ್ಯೆಗೈದಿದ್ದಾನೆ. ಈ ವೇಳೆ ಸೈಯಿದಾ ಫಾಜೀಲ್‌ ಫಾತೀಮಾ ಅವರ ವಿಶೇಷ ಚೇತನ ತಾಯಿ ಇದ್ದರು. ಆಕೆಯ ಸಹೋದರ ಕಾರ್ಯನಿಮಿತ್ತ ಹೊರಗಡೆ ಹೋಗಿದ್ದ. ಈ ವೇಳೆಯೇ ದುರ್ಘ‌ಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಪತ್ನಿಯನ್ನು ಭೀಕರವಾಗಿ ಹತ್ಯೆಗೈದ ಬಳಿಕ ಆರೋಪಿ, ತಾನೂ ಪತ್ನಿಗೆ ಯಾವ ರೀತಿ ನಿಂದಿಸಿದಿದ್ದೇನೆ. ಹಾಗೆಯೇ ಯಾವ ರೀತಿ ಹತ್ಯೆಗೈದಿದ್ದೇನೆ ಎಂದು ಫೇಸ್‌ ಬುಕ್‌ ಲೈವ್‌ ಮಾಡಿದ್ದಾನೆ. ಆದರೆ, ಅದನ್ನು ಫೇಸ್‌ ಬುಕ್‌ನಲ್ಲಿ ಪ್ರೈವೇಟ್‌ ಮಾಡಿ ಚಾಕು ಹಿಡಿದುಕೊಂಡೇ ಹೊರ ಹೋಗಿದ್ದಾನೆ. ಈತನ ಹಿನ್ನೆಲೆ ಪರಿಶೀಲಿಸಿದಾಗ 2016ರಲ್ಲಿ ಕಾಟನ್‌ಪೇಟೆ ಠಾಣೆ ಪೊಲೀಸರು ಆತನನ್ನು ಸರ ಕಳ್ಳತನ ಪ್ರಕರಣದಲ್ಲಿ ಬಂಧಿಸಿದ್ದರು.

ಆಗಿದ್ದೇನು?

 9 ವರ್ಷ ಹಿಂದೆ ವಿವಾಹವಾಗಿದ್ದ ಫಾತೀಮಾ, ಷಾಪಾ

 ಕೌಟುಂಬಿಕ ವಿಚಾರ: ಇಬ್ಬರೂ ಪ್ರತ್ಯೇಕ ವಾಸ

 ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದ ಫಾತೀಮಾ

 ಇಬ್ಬರಿಂದಲೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ

 ಧರ್ಮಗುರುಗಳ ರಾಜಿಯಿಂದ ಅರ್ಜಿ ವಾಪಸ್‌

 ಫಾತೀಮಾಳ ಮನೆಗೆ ಬಂದು ತನ್ನ ಜತೆ ಬರುವಂತೆ ಪತಿ ಒತ್ತಾಯ

 ನಿರಾಕರಿಸಿದ್ದಕ್ಕೆ ಪತ್ನಿಗೆ ಇರಿದು ಹತ್ಯೆ

 ಚಾಮರಾಜಪೇಟೆಯಲ್ಲಿ ಘಟನೆ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.