Bengaluru: ಪತ್ನಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ದೊಣ್ಣೆಯಿಂದ ಹೊಡೆದು ಹತ್ಯೆ ; ನಿರ್ಮಾಣ ಹಂತದ ಕಟ್ಟಡದಲ್ಲಿ ವಾಸವಾಗಿದ್ದ ಪತಿ, ಪತ್ನಿ, ಪ್ರಿಯಕರ ;ಮಲಗಿದ್ದಾಗ ಕೊಲೆಗೈದು ನಾದಿನಿಗೆ ಕರೆ ಮಾಡಿದ್ದ ಹಂತಕ

Team Udayavani, Oct 18, 2024, 11:35 AM IST

4-bng-crime

ಬೆಂಗಳೂರು: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ದೊಣ್ಣೆಯಿಂದ ಹೊಡೆದು ಕೊಲೆಗೈದು ಬಳಿಕ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಣನಕುಂಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಆರ್‌ಬಿಐ ಲೇಔಟ್‌ ನಿವಾಸಿಗಳಾದ ಕೋಲುಸು ಲಕ್ಷ್ಮೀ (33) ಹಾಗೂ ಗಣೇಶ್‌ ಕುಮಾರ್‌ (20) ಕೊಲೆಯಾದವರು. ಕೃತ್ಯ ಎಸಗಿದ ಬಳಿಕ ಲಕ್ಷ್ಮೀಯ ಪತಿ ಕೋಲುಸು ಗೊಲ್ಲಾ(41) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆಂಧ್ರಪ್ರದೇಶದ ಶ್ರೀಕಾಕುಳಂ ಮೂಲದ ಮೂವರು, ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದು, ನಾಲ್ಕೈದು ವರ್ಷಗಳಿಂದ ನಗರದಲ್ಲಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡಿಕೊಂಡಿದ್ದರು.

ಕೋಣನಕುಂಟೆಯ ಆರ್‌ಬಿಐನ ಸೋಮೇಶ್ವರ ಲೇಔಟ್‌ನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಮೂವರು, ಅದೇ ಕಟ್ಟಡದ ನೆಲಮಹಡಿಯ ಒಂದೇ ಕೋಣೆಯಲ್ಲಿ ಮೂವರು ವಾಸವಾಗಿದ್ದರು. ಈ ಮಧ್ಯೆ ಕೋಲುಸು ಲಕ್ಷ್ಮೀ, ಸಹೋದ್ಯೋಗಿ ಗಣೇಶ್‌ ಕುಮಾರ್‌ ಜತೆ ಆತ್ಮೀಯವಾಗಿದ್ದಳು. ಅದರಿಂದ ಪತಿ ಕೋಲುಸು ಗೊಲ್ಲಾ ಪತ್ನಿಯ ನಡವಳಿಕೆ ಬಗ್ಗೆ ಅನುಮಾನ ಬಂದಿದ್ದು, ಇದೇ ವಿಚಾರಕ್ಕೆ ದಂಪತಿ ನಡುವೆ ಪದೇ ಪದೆ ಜಗಳ ನಡೆಯುತ್ತಿತ್ತು ಎಂದು ಪೊಲೀಸರು ಹೇಳಿದರು.

ಕೊಂದು ನಾದಿನಿಗೆ ಕರೆ ಮಾಡಿದ್ದ ಹಂತಕ: ಈ ನಡುವೆ ಪತ್ನಿಯ ನಡವಳಿಕೆ ಬಗ್ಗೆ ಇಸ್ರೋ ಲೇಔಟ್‌ ನಲ್ಲಿ ಕಟ್ಟಡ ಕಾರ್ಮಿಕರಾಗಿರುವ ನಾದಿನಿಗೆ ಕರೆ ಮಾಡಿದ ಕೋಲುಸು ಗೊಲ್ಲಾ, “ನಿನ್ನ ಸಹೋದರಿ ಬೇರೊಬ್ಬನ ಜತೆ ಆತ್ಮೀಯವಾಗಿದ್ದಾಳೆ.

ಇದು ಹೀಗೆ ಮುಂದುವರಿದರೆ, ಆಕೆಯನ್ನು ಕೊಂದು, ನಾನು ಸಾಯುತ್ತೇನೆ’ ಎಂದು ಹೇಳುತ್ತಿದ್ದ. ಆದರೆ, ಆಕೆ ಆತನ ಬೆದರಿಕೆ ಮಾತನ್ನು ಗಂಭೀರವಾಗಿ ಪರಿಗಣಿಸಿಲ್ಲ. ಬುಧವಾರ ರಾತ್ರಿ ಕೂಡ ನಾದಿನಿಗೆ ಕರೆ ಮಾಡಿ, ಪತ್ನಿ ಲಕ್ಷ್ಮೀ ಹಾಗೂ ಆಕೆಯ ಪ್ರಿಯಕರ ಗಣೇಶ್‌ ಕುಮಾರ್‌ನನ್ನು ಕೊಂದು, ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದಿದ್ದಾನೆ.

ಆದರೆ, ನಾದಿನಿ, ಭಾವ ಮದ್ಯದ ಅಮಲಿನಲ್ಲಿ ಮಾತಾಡಬೇಡ. ಬೆಳಗ್ಗೆ ಮಾತಾಡೋಣ ಎಂದು ಕರೆ ಸ್ಥಗಿತಗೊಳಿಸಿದ್ದಾಳೆ. ಆದರೆ, ಮುಂಜಾನೆ 2 ಗಂಟೆಯಿಂದ 4 ಗಂಟೆ ಅವಧಿಯಲ್ಲಿ ದೊಣ್ಣೆಯಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನ ತಲೆಗೆ ಹತ್ತಾರು ಬಾರಿ ಹೊಡೆದು ಕೊಂದ ಆರೋಪಿ, ನಸುಕಿನ 5 ಗಂಟೆ ಸುಮಾರಿಗೆ ನಾದಿನಿಗೆ ಕರೆ ಮಾಡಿ, ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಕೊಂದಿದ್ದೇನೆ ಎಂದು ಹೇಳಿದ್ದಾನೆ.

ಆಗಲೂ ಆಕೆ ಕರೆ ಸ್ಥಗಿತಗೊಳಿಸಿದ್ದಾಳೆ. ಬಳಿಕ ಅದೇ ಕಟ್ಟಡದ 3ನೇ ಮಹಡಿಗೆ ಹೋಗಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಗಾರೆ ಕೆಲಸದ ಮೇಸ್ತ್ರಿ ಬಂದಾಗ ಘಟನೆ ಬೆಳಕಿಗೆ ಬಂದಿದೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲಿಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಪತಿಯೇ ಪತ್ನಿ ಮತ್ತು ಆಕೆಯ ಸ್ನೇಹಿತನನ್ನು ದೊಣ್ಣೆಯಿಂದ ಹೊಡೆದು ಕೊಲೆಗೈದು, ಬಳಿಕ ಆತನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಣನಕುಂಟೆಯ ಆರ್‌ಬಿಐ ಲೇಔಟ್‌ ಸಮೀಪ ದಲ್ಲಿ ನಡೆದಿದೆ. ಈ ಸಂಬಂಧ ಕೋಣನಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ. ●ಲೋಕೇಶ್‌ ಬಿ.ಜಗಲಸಾರ, ಡಿಸಿಪಿ, ದಕ್ಷಿಣ ವಿಭಾಗ

ಏನಿದು ಘಟನೆ?

 ನಿರ್ಮಾಣ ಹಂತದ ಕಟ್ಟಡದಲ್ಲಿ ಪತಿ, ಪತ್ನಿ, ಪ್ರಿಯಕರ ವಾಸ

 ಪ್ರಿಯಕರನೊಂದಿಗೆ ಪತ್ನಿಯ ಅನೈತಿಕ ಸಂಬಂಧದಿಂದ ಜಗಳ

 ಈ ಬಗ್ಗೆ ಪತ್ನಿಯ ಸಹೋದರಿಗೆ ಎಚ್ಚರಿಕೆ ನೀಡಿದ್ದ ಪತಿ

 ಆದರೂ ನಿರ್ಲಕ್ಷಿಸಿದ್ದಕ್ಕೆ ಕೊಲೆ ಮಾಡಲು ಪತಿ ಸಂಚು

 ನಸುಕಿನಲ್ಲಿ ಮಲಗಿದ್ದಾಗ ಪತ್ನಿ, ಪ್ರಿಯಕರನ ಹತ್ಯೆ

 ಬಳಿಕ ಅದೇ ಕಟ್ಟಡದಲ್ಲಿ ಪತಿ ನೇಣಿಗೆ ಶರಣು

 ಆರ್‌ಬಿಐ ಲೇಔಟ್‌ ನಲ್ಲಿ ಘಟನೆ

 ಮೇಸ್ತ್ರೀ ಸ್ಥಳಕ್ಕೆ ಬಂದಾಗ ಕೃತ್ಯ ಬಯಲು

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕದಿಯುತ್ತಿದ್ದ ಆರೋಪಿ ಸೆರೆ

7-bng

Bengaluru: ದ್ವಿಚಕ್ರ ವಾಹನ ಕಳ್ಳತನ ಆರೋಪಿ ಸೆರೆ, 4 ಬೈಕ್‌ ಜಪ್ತಿ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.