Bengaluru: ರೈಲ್ವೆ ನಿಲ್ದಾಣದಲ್ಲಿ ನಾಯಿ ಮಾಂಸ ಗಲಾಟೆ

ಇಲ್ಲ, ಇಲ್ಲ.. ಇದು ನಾಯಿ ಮಾಂಸ: ಹಿಂದೂ ಸಂಘಟನೆಗಳು , ಸ್ಯಾಂಪಲ್‌ ಪಡೆದ ಆಹಾರ ಅಧಿಕಾರಿಗಳು‌

Team Udayavani, Jul 27, 2024, 2:59 PM IST

6-bng

ಬೆಂಗಳೂರು: ರಾಜಸ್ಥಾನದಿಂದ ಬೆಂಗಳೂರಿಗೆ ರೈಲಿನಲ್ಲಿ ವಾರದ ಮೂರು ದಿನಗಳು ಸರಬರಾಜು ಆಗುತ್ತಿದ್ದ 4,500 ಕೆ.ಜಿ. ಮಟನ್‌ ಮಾಂಸದ ಮೇಲೆ “ನಾಯಿ ಮಾಂಸ’ ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಗೂ ಮಾಂಸ ಮಾರಾಟ ವ್ಯಾಪಾರಿಗಳು ಅನುಮಾನ ವ್ಯಕ್ತಪಡಿಸಿ, ಆಕ್ರೋಶ ಹೊರ ಹಾಕಿರುವ ಪ್ರಕರಣ ನಡೆದಿದೆ.

ರಾಜಸ್ಥಾನದಿಂದ ರೈಲಿನಲ್ಲಿ ಬೆಂಗಳೂರಿಗೆ ಶುಕ್ರವಾರ 90 ಮಾಂಸದ ಬಾಕ್ಸ್‌ಗಳು ಬಂದಿದ್ದವು. ಈ ವಿಚಾರ ತಿಳಿದು ಹಿಂದೂ ಕಾರ್ಯಕರ್ತರು ಮೆಜೆಸ್ಟಿಕ್‌ ರೈಲ್ವೆ ನಿಲ್ದಾಣದ ಬಳಿ ಬಂದು ಇದು ಯಾವುದರ ಮಾಂಸ ಎಂದು ಗಲಾಟೆ ಮಾಡಿದ್ದಾರೆ.

ಆ ವೇಳೆ ಮಾಂಸ ತರಿಸಿಕೊಂಡ ವ್ಯಾಪಾರಿ ಸ್ಥಳಕ್ಕೆ ಧಾವಿಸಿದ್ದು ಅಲ್ಲಿ ನೆರೆದಿದ್ದವರಿಗೆ ಬಾಕ್ಸ್‌ಗಳನ್ನು ತೆರೆಯಲು ಬಿಡಲಿಲ್ಲ. ನಂತರ ಶಿವಾಜಿನಗರ, ಯಶವಂತಪುರ ಸೇರಿ ವಿವಿಧೆಡೆಯಿಂದ ಬಂದ ಮಾಂಸ ಖರೀದಿ ವ್ಯಾಪಾರಿ ಗಳು “ಇದು ನಾಯಿ ಮಾಂಸ ಅಲ್ಲ’ ಎಂದು ಹೇಳಿ ಬಾಕ್ಸ್‌ ತೆರೆದ ಹಿಂದೂ ಕಾರ್ಯಕರ್ತರ ಮೇಲೆ ಆಕ್ರೋಶ ಹೊರ ಹಾಕಿದರು.

ಇದಾದ ನಂತರ ರೈಲಿನಲ್ಲಿ ಬಂದಿದ್ದ ಮಾಂಸವನ್ನು ಎತ್ತಿ ನೋಡಿದ್ದಾರೆ. ಆಗ ಉದ್ದ ಬಾಲವಿರುವ ನಾಯಿಯ ಆಕಾರದಲ್ಲಿ ಹೋಲುತ್ತಿರುವ ಮಾಂಸವನ್ನು ನೋಡಿ ಇದು ನಾಯಿ ಮಾಂಸ ಎಂದು ಆರೋಪಿಸಿದ್ದಾರೆ. ಆಗ ಎಲ್ಲ ಬಾಕ್ಸ್‌ಗಳಲ್ಲಿರುವ ಮಾಂಸ ಪರಿಶೀಲಿಸುವಂತೆ ಅಲ್ಲಿದ್ದ ಹಿಂದೂ ಕಾರ್ಯಕರ್ತರು ಒತ್ತಾಯಿಸಿದರು. ಆದರೆ ವ್ಯಾಪಾರಿ ವ್ಯಾಪಾರ ಮಾಡುವುಕ್ಕೆ ಕಷ್ಟವಾಗುತ್ತದೆ ಎಂದು ಉಳಿದ ಬಾಕ್ಸ್‌ಗಳನ್ನು ತೆರೆಯಲು ಬಿಡಲಿಲ್ಲ. ನಂತರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿ ಗಳು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದರು.

ಸ್ಯಾಂಪಲ್‌ ಪಡೆದುಕೊಂಡ ಆಹಾರ ಸುರಕ್ಷತಾ ಅಧಿಕಾರಿಗಳು:

ಈ ಪ್ರಕರಣದ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಬಿಬಿಎಂಪಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಅಧಿಕಾರಿಯಾಗಿ ದೌಡಾಯಿಸಿದ್ದು, ಸ್ಥಳೀಯ ಪೊಲೀಸರೊಂದಿಗೆ ಸೇರಿ ಮಾಂಸದ ಬಾಕ್ಸ್‌ಗಳನ್ನು ಓಪನ್‌ ಮಾಡಿ ಪರಿಶೀಲನೆ ಮಾಡಿದ್ದಾರೆ. ಮಾಂಸದ ಸ್ಯಾಂಪಲ್‌ ಪಡೆದುಕೊಂಡಿದ್ದಾರೆ.

ಒಟ್ಟು 4 ಬಾಕ್ಸ್‌ಗಳಿಂದ ಸ್ಯಾಂಪಲ್‌ ಸಂಗ್ರಹಿಸಲಾಗಿದೆ. ವಿವಿಧ ಭಾಗಗಳಿಂದ ಮಾಂಸವನ್ನು ಸ್ಯಾಂಪಲ್‌ ಆಗಿ ಪಡೆದಿದ್ದೇವೆ. ಇದನ್ನು ಲ್ಯಾಬ್‌ಗ ರವಾನಿಸಿ ಪರೀಕ್ಷಿಸಲಾಗುತ್ತದೆ. ಇದರ ವರದಿ ಬರುವುದಕ್ಕೆ 14 ದಿನಗಳ ಕಾಲವಕಾಶ ಬೇಕಾಗುತ್ತದೆ. ಮೇಲ್ನೋಟಕ್ಕೆ ನೋಡಿ ಇದು ಯಾವ ಮಾಂಸ ಎಂದು ಹೇಳಲಾಗುವುದಿಲ್ಲ. ಈ ಮಾಂಸದ ಗುಣಮಟ್ಟ ಹಾಗೂ ಯಾವುದರ ಮಾಂಸ ಎಂಬ ದೃಢೀಕರಣ ಟೆಸ್ಟಿಂಗ್‌ನಲ್ಲಿ ಗೊತ್ತಾಗಲಿದೆ ಎಂದು ಬಿಬಿಎಂಪಿ ಆಹಾರ ಸುರಕ್ಷತೆ ಅಧಿಕಾರಿಯೊಬ್ಬರು ಮಾಧ್ಯಮದವರಿಗೆ ತಿಳಿಸಿದ್ದಾರೆ.

ಏನಿದು ಗಲಾಟೆ?

 12 ವರ್ಷದಿಂದ ಕಡಿಮೆ ರೇಟ್‌ಗೆ ಮಾಂಸ ತರಿಸಿಕೊಳ್ಳುತ್ತಿರುವ ವ್ಯಾಪಾರಿ

 ಬೆಂಗಳೂರಿನ ಹೋಟೆಲ್‌, ಅಂಗಡಿಗಳಿಗೆ ಕೆಜಿಗೆ 700-800 ರೂ.ಗೆ ಮಾರಾಟ

 ಕಡಿಮೆ ದರಕ್ಕೆ ಮಾರುವುದರಿಂದ ಬೆಂಗಳೂರಿನ ಸ್ಥಳೀಯ ವ್ಯಾಪಾರಿಗಳಿಗೆ ನಷ್ಟ

 ಹೀಗೆ ಶುಕ್ರವಾರ ಬಂದ ಮಾಂಸಕ್ಕೆ ಪುನೀತ್‌ ಕೆರೆಹಳ್ಳಿ ತಂಡ ತಡೆ, ನಾಯಿ ಮಾಂಸವೆಂದು ಶಂಕೆ ‌

12 ವರ್ಷಗಳಿಂದ ಮಾಂಸ ವ್ಯಾಪಾರ

ಕಳೆದ 12 ವರ್ಷಗಳಿಂದ ಅಬ್ದುಲ್‌ ರಜಾಕ್‌ ಎನ್ನುವ ವ್ಯಾಪಾರಿ ರಾಜಸ್ಥಾನದಿಂದ ಕಡಿಮೆ ಬೆಲೆಗೆ ಕುರಿ ಮಾಂಸವನ್ನು ಬೆಂಗಳೂರಿಗೆ ತರಿಸಿ ಕೊಂಡು ಅದನ್ನು ಹೋಟೆಲ್, ರೆಸ್ಟೋರೆಂಟ್‌ ಸೇರಿ ಇತರೆ ಅಂಗಡಿಗಳಿಗೆ ಕಡಿಮೆ ದರಕ್ಕೆ ಸರಬರಾಜು ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ 700 ರೂ.ಗಳಿಂದ 800 ರೂ.ಗಳಿಗೆ ಮಾಂಸ ಮಾರಾಟ ಮಾಡಲಾಗುತ್ತಿದ್ದು. ರಾಜಸ್ಥಾನದಿಂದ ತರಿಸಿಕೊಂಡು ಬೆಂಗಳೂರಿನಲ್ಲಿ ಅಂಗಡಿ ಮುಂಗಟ್ಟುಗಳಿಗೆ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವುದರಿಂದ ಇಲ್ಲಿನ ಮಟನ್‌ ಮಾರಾಟ ವ್ಯಾಪಾರಿಗಳಿಗೆ ನಷ್ಟ ಉಂಟಾಗುತ್ತದೆ ಎಂಬ ಆರೋಪ ಕೇಳಿ ಬಂದಿದೆ.

ಮಾಲೀಕ ರಜಾಕ್‌, ಪುನೀತ್‌ ಮಧ್ಯೆ ಗಲಾಟೆ

ಮೆಜೆಸ್ಟಿಕ್‌ ರೈಲ್ವೆ ನಿಲ್ದಾಣದಲ್ಲಿ ಪುನೀತ್‌ ಕೆರೆಹಳ್ಳಿ ಸಂಗಡಿಗರು ಮಾಂಸದ ಬಾಕ್ಸ್‌ಗಳನ್ನು ತಡೆದಿದ್ದು ನಾಯಿ ಮಾಂಸ ಇದೆ ಎಂಬ ವಿಚಾರಕ್ಕೆ ಅಬ್ದುಲ್‌ ರಜಾಕ್‌ ಮತ್ತು ಪುನೀತ್‌ ಮಧ್ಯೆ ಗಲಾಟೆ ನಡೆದಿತ್ತು. ಈ ಬಗ್ಗೆ ಅಬ್ದುಲ್‌ ರಜಾಕ್‌ ಮಾಧ್ಯಮದವರ ಜತೆಗೆ ಮಾತ ನಾಡಿದ್ದು ಇದು ಅಕ್ರಮ ಬ್ಯುಸಿನೆಸ್‌ ಅಲ್ಲ. ನಮ್ಮ ಬಳಿ ಎಲ್ಲ ಸರ್ಟಿಫಿಕೇಟ್‌ ಇದೆ. ಎಲ್ಲ ಬಾಕ್ಸ್ ಗಳಲ್ಲಿ ಕುರಿ ಮಾಂಸ ಮಾತ್ರವಿದೆ. 12 ವರ್ಷದಿಂದ ಈ ಬ್ಯುಸಿನೆಸ್‌ ಮಾಡುತ್ತಿದ್ದೇವೆ. ಅವರೇ ಬಾಕ್ಸ್‌ ಓಪನ್‌ ಮಾಡಿಸಿದ್ದಾರೆ. ಕುರಿಯ ಮಾಂಸ ಇರುವುದನ್ನು ನೋಡಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.