Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

6 ಮಂದಿ ಆರೋಪಿಗಳ ವಿರುದ್ಧ ಎಫ್ಐಆರ್‌ ದಾಖಲು

Team Udayavani, Sep 20, 2024, 12:17 PM IST

6-bng

ಬೆಂಗಳೂರು: ಬೆಸ್ಕಾಂ, ಕೆಪಿಟಿಸಿಎಲ್‌ ಸೇರಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ 23 ಲಕ್ಷ ರೂ. ವಂಚಿಸಿದ್ದ ಆರೋಪದಡಿ ಹಲಸೂರುಗೇಟ್‌ ಪೊಲೀಸ್‌ ಠಾಣೆಯಲ್ಲಿ ಆರು ಮಂದಿ ವಿರುದ್ಧ ಎಫ್ಐಆರ್‌ ದಾಖಲಾಗಿದೆ.

ಮಾದವನಗರ ನಿವಾಸಿ ಲೋಹಿತ್‌ಗೌಡ ಎಂಬುವರು ನೀಡಿದ ದೂರಿನ ಮೇರೆಗೆ ಟಿ.ದಾಸರಹಳ್ಳಿಯ ಪ್ರವೀಣ್‌ ಎಂ. ಸೋಮನಕಟ್ಟಿ (30), ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ವಿಘ್ನೇಶ್‌ ಹೆಗಡೆ (44), ದಾಬಸ್‌ ಪೇಟೆಯ ವೆಂಕಟೇಶಯ್ಯ, ಆರ್‌.ಟಿ ನಗರದ ಶಿವಣ್ಣ, ತಿಪ್ಪಸಂದ್ರದ ಶ್ರೀನಿವಾಸ್‌ (29), ಸಹಕಾರ ನಗರದ ರಜನೀಶ್‌ (42) ಎಂಬುವರ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ದೂರುದಾರ ಲೋಹಿತ್‌ಗೌಡ ಎಂಬುವರಿಗೆ 2021ರಲ್ಲಿ ಆರೋಪಿಗಳಾದ ಪ್ರವೀಣ್‌ ಹಾಗೂ ವಿಘ್ನೇಶ್‌ ಪರಿಚಯವಾಗಿದ್ದರು. ಈ ವೇಳೆ ಬೆಸ್ಕಾಂ ಮತ್ತು ಕೆಪಿಟಿಸಿಎಲ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ್ದಾರೆ. ನಂತರ, ದೂರುದಾರರನ್ನು ಇಬ್ಬರು ಆರೋಪಿಗಳು ಹೋಟೆಲ್‌ವೊಂದಕ್ಕೆ ಕರೆಸಿಕೊಂಡಿದ್ದು, ಅಲ್ಲಿಗೆ ಇತರೆ ಮೂವರು ಆರೋಪಿಗಳು ಬಂದಿದ್ದರು. ಆಗ ಬೆಸ್ಕಾಂ ಹಾಗೂ ಕೆಪಿಟಿಸಿಎಲ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ್ದರು.

ಈ ವೇಳೆ ಆರೋಪಿ ಪ್ರವೀಣ್‌ ತಾನು ಬೆಸ್ಕಾಂ ಉದ್ಯೋಗಿ ಎಂದು ಹೇಳಿಕೊಂಡಿದ್ದ. ವೆಂಕಟೇಶಯ್ಯ ಹಾಗೂ ಶಿವಣ್ಣ ಸಹ ರೈಲ್ವೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದಾಗಿ ಹೇಳಿಕೊಂಡಿದ್ದರು. ಶ್ರೀನಿವಾಸ್‌ ಬೆಸ್ಕಾಂನ ರೀಡರ್‌ ಎಂದು ಪರಿಚಯಿಸಿಕೊಂಡಿದ್ದ. ಹೀಗೆ ನಕಲಿ ಗುರುತಿನ ಚೀಟಿ ತೋರಿಸಿದ್ದರು.

ಆರೋಪಿಗಳ ಮಾತು ನಂಬಿದ ಲೋಹಿತ್‌ಗೌಡ, ತಮಗೆ ಪರಿಚಯ ಇದ್ದವರಿಗೂ ಉದ್ಯೋಗದ ಬಗ್ಗೆ ಮಾಹಿತಿ ನೀಡಿದ್ದರು. ಉದ್ಯೋಗ ಆಕಾಂಕ್ಷಿಗಳು ಸೇರಿ ಒಟ್ಟು 23 ಲಕ್ಷ ರೂ. ನೀಡಿದ್ದರು. ಆ ಬಳಿಕ ಲೋಹಿತ್‌ ಗೌಡ ಸೇರಿ ಕೆಲ ಆಕಾಂಕ್ಷಿಗಳಿಗೆ ಉದ್ಯೋಗದ ನಕಲಿ ನೇಮಕಾತಿ ಪತ್ರ ನೀಡಿದ್ದರು. ಅಲ್ಲದೇ ಹೊರಗುತ್ತಿಗೆ ನೌಕರಿ ಕೆಲಸಕ್ಕೆ ಸೇರಿಸಿ, 18 ತಿಂಗಳ ನಂತರ ಕೆಲಸ ಕಾಯಂ ಆಗಲಿದೆಯೆಂದು ಹೇಳಿದ್ದರು. ಬಳಿಕ ಅದನ್ನು ಇಲಾಖೆಗೆ ಹೋಗಿ ತೋರಿಸಿದಾಗ ತಾವು ವಂಚನೆಗೊಳಗಾಗಿರುವುದು ಗೊತ್ತಾಗಿದೆ.

ವಂಚನೆ ಆಗಿದ್ದು ಹೇಗೆ?  ಬೆಸ್ಕಾ, ರೈಲ್ವೆ ಉದ್ಯೋಗಿ ಎಂದು ಹೇಳಿಕೊಂಡಿದ್ದ ಆರೋಪಿಗಳು  ಉದ್ಯೋಗ ಆಕಾಂಕ್ಷಿಗಳಿಗೆ ನಕಲಿ ಗುರುತಿನ ಚೀಟಿ ತೋರಿಸಿದ್ದರು  ನೌಕರಿ ಕೊಡಿಸುವುದಾಗಿ ಹೇಳಿ ಆಕಾಂಕ್ಷಿಗಳಿಂದ 23 ಲಕ್ಷ ರೂ. ವಸೂಲಿ  ಬಳಿಕ ಕೆಲವರಿಗೆ ಉದ್ಯೋಗದ ನಕಲಿ ನೇಮಕಾತಿ ಪತ್ರ ನೀಡಿದ್ದರು  ಇಲಾಖೆಗೆ ಹೋಗಿ ನೇಮಕಾತಿ ಪತ್ರ ತೋರಿಸಿದಾಗ ವಂಚನೆ ಬೆಳಕಿಗೆ

ಟಾಪ್ ನ್ಯೂಸ್

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.