Bengaluru: ಹೈಸ್ಕೂಲ್ ಸಹಪಾಠಿಗಳ ಕಿರುಕುಳ: ಗೃಹಿಣಿ ಆತ್ಮಹತ್ಯೆ
ಮಹಿಳೆಗೆ ಮದುವೆಯಾಗಿದ್ದರೂ ಆರೋಪಿಗಳಿಂದ ಲೈಂಗಿಕ ಕಿರುಕುಳ ; ಬಾಗಲಗುಂಟೆಯಲ್ಲಿ ಘಟನೆ
Team Udayavani, Aug 3, 2024, 1:16 PM IST
ಬೆಂಗಳೂರು: ಶಾಲಾ ಸಹಪಾಠಿಗಳ ಲೈಂಗಿಕ ಕಿರುಕುಳಕ್ಕೆ ಬೇಸತ್ತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಗುಂಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸಿಡೇದಹಳ್ಳಿ ನಿವಾಸಿ ಮಮತಾ (31) ಮೃತ ಮಹಿಳೆ.
ಬಾಗಲಗುಂಟೆ ಠಾಣಾ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ಬುಧವಾರ ಈ ಘಟನೆ ನಡೆದಿದ್ದು, ಪೊಲೀಸರು, ಜೆ.ಪಿ.ನಗರ ನಿವಾಸಿ, ಆರೋಪಿ ಗಣೇಶ್ ಎಂಬಾತನನ್ನು ಬಂಧಿಸಿದ್ದಾರೆ. ಮತ್ತೂಬ್ಬ ಆರೋಪಿ ಅಶೋಕ್ ಎಂಬಾತನ ಬಂಧನಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ವಿವಾಹ ಪೂರ್ವದಲ್ಲಿ ಜೆ.ಪಿ.ನಗರದಲ್ಲಿ ವಾಸವಾಗಿದ್ದ ಮಮತಾಗೆ ಆರೋಪಿಗಳು ಹೈಸ್ಕೂಲ್ ಸಹಪಾಠಿಗಳಾಗಿದ್ದರು. ಆ ನಂತರ ಮಮತಾರಿಗೆ ಕೆಲ ವರ್ಷಗಳ ಹಿಂದೆ ಲೋಕೇಶ್ ಎಂಬಾತನೊಂದಿಗೆ ವಿವಾಹವಾಗಿತ್ತು. ದಂಪತಿಗೆ 6 ವರ್ಷದ ಗಂಡು ಮಗು ಇದ್ದು, ಸಿಡೇದಹಳ್ಳಿಯಲ್ಲಿ ವಾಸವಿದ್ದರು. ಲೋಕೇಶ್ ಫುಡ್ ಡಿಲಿವರಿ ಏಜೆಂಟ್ ಆಗಿ ಕೆಲಸ ಮಾಡಿಕೊಂಡಿದ್ದರು. ಬುಧವಾರ ಸಂಜೆ ಪತಿ ಲೋಕೇಶ್, ಹಲವು ಬಾರಿ ಕರೆ ಮಾಡಿದರು ಪತ್ನಿ ಕರೆ ಸ್ವೀಕರಿಸಿಲ್ಲ. ಅನುಮಾನಗೊಂಡು ಪಕ್ಕದ ಮನೆಯವರಿಗೆ ಲೋಕೇಶ್ ಕರೆ ಮಾಡಿ ತಿಳಿಸಿದ್ದರು. ಪಕ್ಕದ ಮನೆಯವರು ಬಂದು ನೋಡಿದಾಗ ಮಮತಾ ಆತ್ಮಹತ್ಯೆಗೆ ಶರಣಾಗಿರುವುದು ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಆರೋಪಿಗಳಿಂದ ಸೆಕ್ಸ್ ಗೆ ಒತ್ತಾಯ: ಡೆತ್ನೋಟ್
ಆತ್ಮಹತ್ಯೆಗೂ ಮೊದಲು ಮಮತಾ, ಹೈಸ್ಕೂಲ್ನ ಸಹಪಾಠಿಗಳಾದ ಅಶೋಕ್ ಮತ್ತು ಗಣೇಶ್ ಅವರ ಲೈಂಗಿಕ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನಗೆ ಏನಾದರೂ ಆದರೆ ಅದಕ್ಕೆ ಅಶೋಕ್ ಹಾಗೂ ಗಣೇಶ್ ಹೊಣೆ ಎಂದು ಡೆತ್ನೋಟ್ನಲ್ಲಿ ಉಲ್ಲೇಖೀಸಿದ್ದಾರೆ. ಇನ್ನು ಮಮತಾಗೆ ಹೈಸ್ಕೂಲ್ ಸಹಪಾಠಿಗಳಾಗಿದ್ದ ಆರೋಪಿಗಳು, ಆಕೆಗೆ ರಾತ್ರಿ ವೇಳೆಯಲ್ಲಿ ಮೇಸೆಜ್ ಕಳುಹಿಸುತ್ತಿದ್ದರು. ಹೊರಗಡೆ ಹೋಗೋಣ, ಟ್ರಿಪ್ಗೆ ಹೋಗೋಣ ಬಾ ಅಂತಾ ಕರೆಯುತ್ತಿದ್ದರು. ಅಲ್ಲದೇ ಆಕೆಗೆ ಅಶ್ಲೀಲ ಸಂದೇಶ ಕಳಿಸುವುದಲ್ಲದೇ ತಮ್ಮೊಂದಿಗೆ ದೈಹಿಕವಾಗಿ ಸಹಕರಿಸುವಂತೆ ಒತ್ತಾಯಿಸುತ್ತಿದ್ದರು. ಸಹಕರಿಸದಿದ್ದರೆ ನಿನ್ನ ಸಂಸಾರ ಹಾಳು ಮಾಡುವುದಾಗಿ ಬೆದರಿಕೆಯೊಡ್ಡುತ್ತಿದ್ದರು. ಈ ವಿಚಾರ ಮಮತಾ ಪತಿಗೂ ಗೊತ್ತಾಗಿ ಆರೋಪಿಗಳಿಗೆ ಎಚ್ಚರಿಕೆ ನೀಡಿದ್ದರು. ಆದರೂ ಸಹ ಆರೋಪಿಗಳು ಮಮತಾಗೆ ಕಿರುಕುಳ ನೀಡುವುದನ್ನು ಬಿಟ್ಟಿರಲಿಲ್ಲ. ಅದರಿಂದ ಮನನೊಂದ ಮಮತಾ, ಡೆತ್ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.