Bengaluru: ಜೈಲಿನಲ್ಲಿ ವಸ್ತುಗಳ ಸ್ಥಳಾಂತರ ಕೇಸ್‌: ಅಧಿಕಾರಿಗಳ ವಿಚಾರಣೆ

ಸಿಸಿಬಿ ದಾಳಿಗೆ ಮೊದಲು 4 "ಕಸದ ಬಾಕ್ಸ್‌' ಸ್ಥಳಾಂತರ ಪ್ರಕರಣ ಬಾಕ್ಸ್‌ನಲ್ಲಿ ಏನಿತ್ತು? ; ವಿಚಾರಣೆಗೆ ಸ್ಪಂದಿಸದ ಅಧಿಕಾರಿಗಳು

Team Udayavani, Aug 30, 2024, 10:28 AM IST

6-bng

ಬೆಂಗಳೂರು: ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರ ದಾಳಿಗೂ ಮೊದಲು ಪರಪ್ಪನ ಅಗ್ರಹಾರ ಕಾರಾಗೃಹದ ಕೊಠಡಿಯಲ್ಲಿದ್ದ ಕೆಲ ವಸ್ತುಗಳ ಸ್ಥಳಾಂತರ ಪ್ರಕರಣ ಸಂಬಂಧ ಗುರುವಾರ ಎಲೆಕ್ಟ್ರಾನಿಕ್‌ ಸಿಟಿ ಉಪವಿಭಾಗದ ಎಸಿಪಿ ಮಂಜುನಾಥ್‌ ಅವರು ಜೈಲಿನ ಮೂವರು ಅಧಿಕಾರಿಗಳು ಹಾಗೂ ಒಬ್ಬ ಸಜಾಬಂಧಿಯನ್ನು ವಿಚಾರಣೆ ನಡೆಸಿದ್ದಾರೆ.

ಜೈಲು ಸಿಬ್ಬಂದಿ ಸುದರ್ಶನ್‌, ಪರಮೇಶ್‌ ನಾಯಕ್‌, ಕೆ.ಬಿ.ರಾಯಮನೆ ಹಾಗೂ ಶಿಕ್ಷಾಬಂಧಿ ಮುಜೀಬ್‌ನನ್ನು ಪ್ರತ್ಯೇಕವಾಗಿ ಸುಮಾರು 3 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಿಸಿಬಿ ಪೊಲೀಸರು ತಪಾಸಣೆಗೆಂದು ಬಂದಾಗ “ನಾಲ್ಕು ರಟ್ಟಿನ ಬಾಕ್ಸ್‌ಗಳಲ್ಲಿ ಕಸ ಇದೆ’ ಎಂದು ಹೊರಗೆ ತೆಗೆದುಕೊಂಡು ಹೋಗಿದ್ದ ಬಗ್ಗೆ ಮಾಹಿತಿ ಪಡೆಯಲಾಗಿದೆ. ಈ ವೇಳೆ ಸಜಾಬಂಧಿ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಕೆಲ ಆರೋಪಿಗಳ ಕೊಠಡಿಯಲ್ಲಿದ್ದ ವಸ್ತುಗಳನ್ನು ಹೊರಗಡೆ ಹಾಕಿದ್ದೇನೆ. ಅದರಲ್ಲಿ ಕೆಲವು ಟೀ ಕಪ್‌ಗ್ಳು ಹಾಗೂ ಇತರೆ ವಸ್ತುಗಳು ಇತ್ತು ಎಂದಿದ್ದಾನೆ.

ಇನ್ನು ಮೂವರು ಅಧಿಕಾರಿಗಳಿಗೆ ಸಿಸಿಬಿ ಪೊಲೀಸರು ಬಂದ ಸಂದರ್ಭದಲ್ಲಿ ಯಾಕೆ ತಡೆದೀರಿ? ಕಸದ ಬಾಕ್ಸ್‌ಗಳನ್ನು ಎಲ್ಲಿ ತೆಗೆದುಕೊಂಡು ಹೋಗಿ ಹಾಕಲಾಗಿದೆ? ಅದರಲ್ಲಿ ಯಾವ ರೀತಿಯ ಕಸ ಇತ್ತು? ಪ್ರತಿದಿನ ಹೀಗೆ ಮಾಡು¤ದ್ದೀರಾ? ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಲಾಗಿದೆ. ಆದರೆ, ಅಧಿಕಾರಿಗಳು ವ್ಯತಿರಿಕ್ತವಾದ ಹೇಳಿಕೆ ನೀಡುತ್ತಿದ್ದಾರೆ. ವಿಚಾರಣೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

ಸಿಸಿಬಿ ದಾಳಿ ನಡೆಸಿದ್ದು ಏಕೆ?

ಜೈಲಿನಲ್ಲಿ ಮೊಬೈಲ್‌ ಹಾಗೂ ಮಾದಕವಸ್ತು ಸೇರಿ ನಿಷೇಧಿತ ವಸ್ತುಗಳ ಬಳಕೆ ಹಿನ್ನೆಲೆ ಸಿಸಿಬಿ ಪೊಲೀಸರು ಆ. 24 ರಂದು ದಾಳಿ ನಡೆಸಿದ್ದರು. ಅದಕ್ಕೂ ಮುನ್ನ ಸಿಸಿಬಿ ದಾಳಿ ಮಾಹಿತಿ ಸೋರಿಕೆ ಹಿನ್ನೆಲೆಯಲ್ಲಿ ಆ.23 ರ ರಾತ್ರಿ 10.58 ರಿಂದ 11.30ರ ವರೆಗೆ ಆರೋಪಿಗಳು ಕೆಲ ವಸ್ತುಗಳನ್ನು ಸಾಗಿಸುತ್ತಿ ರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಅನುಮಾನಾಸ್ಪದ ರೀತಿಯಲ್ಲಿ ಸಾಗಿಸಿರುವ ಬಗ್ಗೆ ಪ್ರಶ್ನಿಸಿದಾಗ ಕಸ ಎಂದು ಸಿಬ್ಬಂದಿ ಸಮಜಾಯಿಷಿ ನೀಡಿದ್ದರು. ಅಲ್ಲದೆ, ಸಿಸಿಬಿ ದಾಳಿ ವೇಳೆ ನಿಷೇಧಿತ ವಸ್ತುಗಳು ಸಿಗದಿರು ವುದಕ್ಕೆ ಜೈಲು ಸಿಬ್ಬಂದಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು.ಈ ಸಂಬಂಧ ಅಂದಿನ ಡಿಐಜಿ ಸೋಮಶೇಖರ್‌ ದಾಖಲಿಸಿದ್ದ ದೂರಿನ ಮೇರೆಗೆ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.