Bengaluru: ಜಯದೇವಕ್ಕೆ ಇನ್ನೂ ಇಲ್ಲ ಪೂರ್ಣಾವಧಿ ನಿರ್ದೇಶಕ

ಪ್ರತಿಷ್ಠಿತ ಸಂಸ್ಥೆಯಲ್ಲೇ ಅನುಭವಿಗಳಿದ್ದರೂ ನಿವೃತ್ತರಿಗೆ ಹಂಗಾಮಿ ಅಧಿಕಾರ: ಚರ್ಚೆಗೆ ಗ್ರಾಸವಾದ ಕ್ರಮ

Team Udayavani, Feb 23, 2024, 3:47 PM IST

14-bng

ಬೆಂಗಳೂರು: ಡಾ| ಸಿ.ಎನ್‌.ಮಂಜುನಾಥ್‌ ನಿವೃತ್ತಿಯಿಂದ ತೆರವಾಗಿರುವ ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನಗಳ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಸ್ಥಾನದ ಮೇಲೆ ಹಲವರು ಕಣ್ಣಿಟ್ಟಿದ್ದು, ಹುದ್ದೆ ಗಿಟ್ಟಿಸಲು ಭಾರೀ ಪೈಪೋಟಿ ಶುರುವಾಗಿದೆ. ಆದರೆ ಈ ನಡುವೆಯೇ, ಇಷ್ಟೊಂದು ದೊಡ್ಡ ಸಂಸ್ಥೆಗೆ ನಿರ್ದೇಶಕರಾಗಲು ಸಂಸ್ಥೆಯಲ್ಲಿಯೇ ಹಲವು ಮಂದಿ ಹಿರಿಯರು, ಅನುಭವಿಗಳು, ಸೇವಾ ಹಿರಿತನವುಳ್ಳವರಿದ್ದರೂ ನಿವೃತ್ತರೊಬ್ಬರನ್ನು ಹಂಗಾಮಿಯಾಗಿ ನೇಮಿಸಿರುವುದು ಸಂಸ್ಥೆಯಲ್ಲಿ ಅನೇಕರ ಹುಬ್ಬೇರಿಸಿದೆ.

ಬೆಂಗಳೂರು, ಮೈಸೂರು, ಕಲಬುರಗಿ ಸೇರಿ 3 ಸಾವಿರ ಹಾಸಿಗೆ ಸಾಮರ್ಥ್ಯದ ಹೃದ್ರೋಗ ಚಿಕಿತ್ಸಾಲ ಯ ಆಗಲಿದೆ. ಹೃದ್ರೋಗಿಗಳ ಚಿಕಿತ್ಸೆಗೆಂದೇ ಪ್ರತ್ಯೇಕವಾಗಿ ಇಷ್ಟು ದೊಡ್ಡ ವ್ಯವಸ್ಥೆ ಹೊಂದಿರುವ ಬೆಂಗಳೂರು ಆಸ್ಪತ್ರೆ ಒಂದರÇÉೇ ಬಡವರಿಗೆ ಕೈಗೆಟಕುವ ದರದಲ್ಲಿ ಚಿಕಿತ್ಸೆಗಳು ಸಿಗುತ್ತಿವೆ. ಪ್ರಮುಖವಾಗಿ ಆಂಜಿಯೋಗ್ರಾಮ್, ಆಂಜಿಯೋಪ್ಲಾಸ್ಟಿ ಸೇರಿ 35 ಸಾವಿರ ವೈದ್ಯಕೀಯ ಸೇವೆಗಳು ಲಭ್ಯವಿವೆ. ಸಾವಿರಾರು ಸಿಬ್ಬಂದಿ ಹಾಗೂ ನಿತ್ಯ ಹೊರರೋಗಿ ವಿಭಾಗವೊಂದರಲ್ಲೇ 1500ಕ್ಕೂ ಅಧಿಕ ಮಂದಿಗೆ ಚಿಕಿತ್ಸೆ ನೀಡುವ ವ್ಯವಸ್ಥೆ ಇದೆ. ಇಂತಹ ಸಂಸ್ಥೆಗೆ ಪೂರ್ಣಾವಧಿಯ ನಿರ್ದೇಶಕರನ್ನು ನೇಮಿಸದೆ ಇರುವುದು ಚರ್ಚೆಗೆ ಗ್ರಾಸವಾಗಿದೆ.

ಡಾ.ಮಂಜುನಾಥ್‌ ನಿವೃತ್ತಿಯಿಂದ ತೆರವಾಗಿರುವ ಹುದ್ದೆಗೆ ನಿವೃತ್ತ ಕುಲಪತಿ ಡಾ.ಕೆ.ಎಸ್‌. ರವೀಂದ್ರನಾಥ್‌ ಅವರನ್ನು ಪ್ರಭಾರಿಯಾಗಿ ನೇಮಿಸಲಾಗಿದೆ. ಮಂಜು ನಾಥ್‌ ಅವರನ್ನು ನಿವೃತ್ತಿ ನಂತರವೂ ಎರಡು ಬಾರಿ ನಿರ್ದೇಶಕ ಹುದ್ದೆಯ ಸೇವಾವಧಿಯನ್ನು ಸರ್ಕಾರ ವಿಸ್ತರಿಸಿತ್ತು. ಹುದ್ದೆ ಖಾಲಿಯಾಗುವ ನಿರೀಕ್ಷೆಯಲ್ಲಿ 20 ಮಂದಿ ನಿರ್ದೇಶಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು.

ಬಹುತೇಕರು ಹಿರಿಯರು ಹಾಗೂ ಅನುಭವಿಗಳೇ ಇದ್ದರು. ಈ ಪೈಕಿ ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇ ಶನಾಲಯದಿಂದ 12 ಮಂದಿಯ ಆಯ್ಕೆಪಟ್ಟಿಯನ್ನು ಆಡಳಿತ ಮಂಡಳಿ ಮುಂದೆ ಮಂಡಿಸಲಾಗಿತ್ತು. ಜಯದೇವ ಆಸ್ಪತ್ರೆ ಆಡಳಿತ ಮಂಡಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅಧ್ಯಕ್ಷರಾಗಿದ್ದು, ಪೂರ್ಣಪ್ರಮಾಣದ ನಿರ್ದೇಶಕರ ನೇಮಕಕ್ಕೆ ಕರೆದಿದ್ದ ಸಭೆಯನ್ನೂ ಕಡೇ ಗಳಿಗೆಯಲ್ಲಿ ಹಠಾತ್‌ ಮುಂದೂಡ ಲಾಗಿದೆ. ಇದರಿಂದಾಗಿ ನಿರ್ದೇಶಕ ಸ್ಥಾನದ ಮೇಲೆ ಹಲವರ ಕಣ್ಣು ನೆಟ್ಟಿದ್ದು, ಒತ್ತಡಗಳೂ ಹೆಚ್ಚುತ್ತಿವೆ.

ಪ್ರಸ್ತುತ ವೈದ್ಯಕೀಯ ವರಿಷ್ಠಾಧಿಕಾರಿ (ಮೆಡಿಕಲ್‌ ಸೂಪ ರಿಂಟೆಂಡೆಂಟ್‌) ಆಗಿರುವ ಡಾ.ಕೆ.ಎಚ್‌. ಶ್ರೀನಿವಾಸ್‌, ಹಿರಿಯ ಹೃದ್ರೋಗ ತಜ್ಞರಾದ ಡಾ. ನಾಗ ಮಣಿ, ಡಾ.ಪ್ರಸನ್ನಸಿಂಹ ಸೇರಿದಂತೆ ಹಲವರ ಹೆಸರುಗಳು ನಿರ್ದೇಶಕ ಹುದ್ದೆಗೆ ಕೇಳಿಬಂದಿತ್ತು. ಆದರೆ, ಮೈಸೂರಿನ ವೈದ್ಯಕೀಯ ಕಾಲೇಜಿನ ಸಾಮಾನ್ಯ ವೈದ್ಯಕೀಯ (ಜನರಲ್‌ ಮೆಡಿಸಿನ್‌) ವಿಭಾಗದಲ್ಲಿದ್ದ ವೈದ್ಯರೊಬ್ಬರು ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಜನರಲ್‌ ಮೆಡಿಸಿನ್‌ ವಿಭಾಗದಲ್ಲಿ ಮಾಡಿರುವ ತಮ್ಮ ಸೇವೆಯನ್ನೂ ಪರಿಗಣಿಸಿ ಜ್ಯೇಷ್ಠತೆಯ ಹಕ್ಕು ಸಾಧಿಸಿ ಬೆಂಗಳೂರು ಜಯದೇವ ಆಸ್ಪತ್ರೆ ನಿರ್ದೇಶಕ ಹುದ್ದೆಗೆ ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ನಿರ್ದೇಶಕರ ನೇಮಕಕ್ಕೆ ಒತ್ತಡ: ಲೋಕಸಭೆ ಚುನಾವಣೆ ಸಮೀಪದಲ್ಲೇ ಇದೆಯಲ್ಲದೆ, ನೀತಿಸಂಹಿತೆ ಜಾರಿಯಿಂದ ನಿರ್ದೇಶಕ ಹುದ್ದೆಯ ನೇಮಕಾತಿ ಮತ್ತಷ್ಟು ಮುಂದೂಡಿಕೆ ಆಗಬಹುದು. ಸಂಸ್ಥೆಯ ಭವಿಷ್ಯ ಹಾಗೂ ರೋಗಿಗಳ ಹಿತದೃಷ್ಟಿಯಿಂದ ಅರ್ಹ ಹಿರಿಯರನ್ನು ಸಂಸ್ಥೆಗೆ ಪೂರ್ಣ ಪ್ರಮಾಣದ ನಿರ್ದೇಶಕರನ್ನಾಗಿ ನೇಮಿಸಬೇಕೆಂದು ಸರ್ಕಾರದ ಮೇಲೆ ಕೆಲವರು ಒತ್ತಡ ಹಾಕುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

■ ಉದಯವಾಣಿ ಸಮಾಚಾರ

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.