Bengaluru: 20 ಲಕ್ಷ ಚಿನ್ನ ಕದ್ದು ಪ್ರೇಯಸಿಗೆ ಕೊಟ್ಟಿದ್ದ ವಿವಾಹಿತ!

ಡೇಟಿಂಗ್‌ ಆ್ಯಪ್‌ನಲ್ಲಿ ಪರಿಚಯವಾಗಿದ್ದ ಆರೋಪಿಗಳು; ಕಳ್ಳತನದಿಂದ ಬಂದ ಹಣದಲ್ಲಿ ಬದುಕು ಕಟ್ಟಿ ಕೊಳ್ಳಲು ನಿರ್ಧರಿಸಿದ್ದ ಪ್ರಿಯಕರ-ಪ್ರೇಯಸಿ ಬಂಧನ

Team Udayavani, Aug 10, 2024, 10:33 AM IST

3-bng

ಬೆಂಗಳೂರು: ತಾನು ಕೆಲಸಕ್ಕಿದ್ದ ಸಾಫ್ಟ್ ವೇರ್‌ ಎಂಜಿನಿಯರ್‌ ಮನೆಯಲ್ಲಿ ಚಿನ್ನಾಭರಣ ಕದ್ದು ಪ್ರೇಯಸಿಗೆ ಕೊಟ್ಟಿದ್ದ ಕಳ್ಳ ಹಾಗೂ ಆತನ ಪ್ರೇಯಸಿ ಆಡುಗೋಡಿ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ತಮಿಳುನಾಡು ಮೂಲದ ನಾರಾಯಣಸ್ವಾಮಿ (34) ಹಾಗೂ ನವೀನಾ (39) ಬಂಧಿತರು.

ಆರೋಪಿ ಗಳಿಂದ 20 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ನಾರಾಯಣ ಸ್ವಾಮಿ ಪತ್ನಿಗೆ ಪ್ಯಾರಲಿಸಿಸ್‌ ಆಗಿತ್ತು. ಇತ್ತ ನವೀನಾಳ ಗಂಡನಿಗೂ ಪ್ಯಾರಲಿಸಿಸ್‌ ಆಗಿತ್ತು. ಈ ನಡುವೆ ಕೆಲ ತಿಂಗಳ ಹಿಂದೆ ಡೇಟಿಂಗ್‌ ಆ್ಯಪ್‌ವೊಂದರಲ್ಲಿ ನಾರಾಯಣಸ್ವಾಮಿ ನವೀನಾಳ ಪರಿಚಯವಾಗಿತ್ತು. ಇವರ ಪ್ರೇಮವು ಪ್ರೀತಿಗೆ ತಿರುಗಿ ಇಬ್ಬರೂ ವಿವಾಹ ಮಾಡಿಕೊಳ್ಳಲು ಪರಸ್ಪರ ಸಿದ್ಧರಾಗಿದ್ದರು.

ನಾರಾಯಣಸ್ವಾಮಿ ಹಾಗೂ ನವೀನಾ ಇವರಿಬ್ಬರಿಗೂ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಆದರೆ, ಮಕ್ಕಳನ್ನು ಬಿಟ್ಟು ಇಬ್ಬರು ಮದುವೆಯಾಗುವ ನಿರ್ಧಾರ ಮಾಡಿದ್ದರು. ವಿವಾಹ ಮಾಡಿಕೊಂಡು ಸಂಸಾರ ನಡೆಸಲು ಹಣ ಹೊಂದಿಸುವುದೇ ಇಬ್ಬರಿಗೂ ಕಷ್ಟವಾಗಿತ್ತು. ಆರೋಪಿ ನಾರಾ ಯಣಸ್ವಾಮಿ ತಾಯಿ ಬೆಳ್ಳಿಯಮ್ಮ ಕಳೆದ 20 ವರ್ಷಗಳಿಂದ ಲಕ್ಕಸಂದ್ರದ ಸಾಫ್ಟ್ ವೇರ್‌ ಎಂಜಿನಿಯರ್‌ವೊಬ್ಬರ ಮನೆಯಲ್ಲಿ ಮನೆ ಕೆಲಸ ಮಾಡುತ್ತಿದ್ದರು. ಮಗ ನಾರಾಯಣಸ್ವಾಮಿಯೂ ಆಗಾಗ್ಗೆ ಇವರ ಮನೆಗೆ ಬಂದು ಹೋಗುತ್ತಾ ಮನೆ ಮಾಲೀಕರ ವಿಶ್ವಾಸ ಗಳಿಸಿದ್ದ.

ಇತ್ತೀಚೆಗೆ ಮನೆ ಮಾಲೀಕರು ಕೆಲಸದ ನಿಮಿತ್ತ ಕುಟುಂಬ ಸಮೇತ ದುಬೈಗೆ ತೆರಳಿದ್ದರು. ನಾರಾಯಣ ಸ್ವಾಮಿಗೆ ಮನೆ ಸ್ವತ್ಛ ಮಾಡಲು ತಿಳಿಸಿ ಮನೆಯ ಬೀಗದ ಕೀಯನ್ನು ನೆಲಮಹಡಿಯಲ್ಲಿರುವ ಅವರ ಸಂಬಂಧಿಕರ ಮನೆಯಲ್ಲಿ ಕೊಟ್ಟು ಹೋಗಿದ್ದರು. ತಾನು ಕೆಲಸ ಮಾಡುತ್ತಿದ್ದ ವಿಚಾರವನ್ನೂ ನಾರಾಯಣ ಸ್ವಾಮಿ ಪ್ರೇಯಸಿ ಬಳಿ ಹೇಳಿಕೊಂಡಿದ್ದ. ಇತ್ತ ಪ್ರೇಯಸಿಯು ಎಲ್ಲಾದರೂ ಮನೆಗಳ್ಳತನ ಕಳ್ಳತನ ಮಾಡಿ ಹಣ ಹೊಂದಿಸುವಂತೆ ತಿಳಿಸಿದ್ದಳು.

ಎಲ್ಲೆಲ್ಲೋ ಕಳ್ಳತನ ಮಾಡುವ ಬದಲು ತಾನು ಕೆಲಸ ಮಾಡುವ ಮನೆಯಲ್ಲೇ ಚಿನ್ನಾಭರಣ ಕದ್ದರೆ ತನ್ನ ಮೇಲೆ ಯಾರಿಗೂ ಅನುಮಾನ ಬರುವುದಿಲ್ಲ ಎಂದು ನಾರಾಯಣಸ್ವಾಮಿ ಯೋಚಿಸಿ, ತಾನು ಕೆಲಸಕ್ಕಿದ್ದ ಮನೆಗೆ ಕನ್ನ ಹಾಕಲು ಸಂಚು ರೂಪಿಸಿದ್ದ. ಅದರಂತೆ ಇತ್ತೀಚೆಗೆ ಮನೆ ಮಾಲೀಕರ ಕೊಠಡಿಯ ಬೀಗ ಮುಗಿದು 20 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕದ್ದು ಬೀಗ ಹಾಕಿಕೊಂಡು ಹೋಗಿದ್ದ. ನಂತರ ಕದ್ದ ಚಿನ್ನದೊಂದಿಗೆ ಚೆನ್ನೈಗೆ ತೆರಳಿ ಪ್ರೇಯಸಿ ನವೀನಾಗೆ ಕೊಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಸಿಕ್ಕಿ ಬಿದ್ದಿದ್ದು ಹೇಗೆ?

ಇತ್ತ ದುಬೈಗೆ ಹೋಗಿದ್ದ ಟೆಕಿ ಕುಟುಂಬ ವಾಪಸ್‌ ಬಂದಾಗ ಕೊಠಡಿಯಲ್ಲಿದ್ದ ಚಿನ್ನಾಭರಣ ಕಳವಾಗಿರುವುದು ಗಮನಕ್ಕೆ ಬಂದಿತ್ತು. ಮನೆ ಸ್ವತ್ಛ ಮಾಡಲು ಬರುತ್ತಿದ್ದ ನಾರಾಯಣ ಸ್ವಾಮಿಯೇ ಕಳುವು ಮಾಡಿರುವ ಅನುಮಾನ ಮೂಡಿತ್ತು. ಆಡುಗೋಡಿ ಪೊಲೀಸ್‌ ಠಾಣೆಗೆ ಚಿನ್ನ ಕಳ್ಳತನವಾ ಗಿರುವ ಕುರಿತು ಮನೆ ಮಾಲೀಕರು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀ ಸರು ಅನುಮಾನದ ಮೇರೆಗೆ ನಾರಾಯಣಸ್ವಾಮಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ನಡೆದ ಸಂಗತಿ ವಿವರಿಸಿದ್ದ. ನಂತರ ಚೆನ್ನೈನ ರಾಜೇಶ್ವರಿನಗರದಲ್ಲಿರುವ ಆತನ ಪ್ರೇಯಸಿ ಯನ್ನು ವಶಕ್ಕೆ ಪಡೆದು ಚಿನ್ನಾಭರಣದ ಬಗ್ಗೆ ವಿಚಾ ರಿಸಿದಾಗ ಆಕೆ ಗಿರವಿ ಇಟ್ಟಿರುವುದಾಗಿ ತಿಳಿಸಿದ್ದಳು. ಆಕೆ ಕೆಲಸ ಮಾಡುವ ಪಾರ್ಲರ್‌ ಮಾಲೀಕರ ಬಳಿ ಗಿರಿವಿ ಇಟ್ಟಿದ್ದ 20 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.