Bengaluru: ವಿಧಾನಸೌಧದ ಎದುರೇ ಬೈಕ್‌ಗೆ ಬೆಂಕಿ ಹಚ್ಚಿದ ಭೂಪ!

ದೂರು ನೀಡಲು ಠಾಣೆಗೆ ಹೋಗಿದ್ದ ತಾಯಿಗೆ ನಿಂದಿಸಿದ್ದ ಪೊಲೀಸರ ಮೇಲೆ ಸಿಟ್ಟು; ತನ್ನದೇ ಎಲೆಕ್ಟ್ರಿಕ್‌ ಬೈಕ್‌ಗೆ ಬೆಂಕಿ ಹಚ್ಚಿ ಆಕ್ರೋಶ

Team Udayavani, Aug 15, 2024, 1:27 PM IST

4-blr

ಬೆಂಗಳೂರು: ನಾಪತ್ತೆ ದೂರು ನೀಡಲು ಹೋದ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪೊಲೀಸರ ಮೇಲಿನ ಕೋಪಕ್ಕೆ ಯುವಕನೊಬ್ಬ ವಿಧಾನಸೌಧ ಮುಂಭಾಗ ತನ್ನ ಎಲೆಕ್ಟ್ರಿಕ್‌ ಬೈಕ್‌ಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಈ ಸಂಬಂಧ ಯುವಕನನ್ನು ಬಂಧಿಸಲಾಗಿದೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ಪೃಥ್ವಿರಾಜ್‌(27) ಬಂಧಿತ ಆರೋಪಿ.

ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ವಿಧಾನಸೌಧ ಮುಂಭಾಗ ಬೈಕ್‌ಗೆ ಬೆಂಕಿ ಹಚ್ಚಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಈ ಸಂಬಂಧ ಸಾರ್ವಜನಿಕ ಸ್ಥಳದಲ್ಲಿ ಬೆಂಕಿ ಹಾಕಿ ದುರ್ವರ್ತನೆ ತೋರಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ವಿಧಾನಸೌಧ ಠಾಣೆ ಪೊಲೀಸರು, ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಡಿಪ್ಲೊಮಾ ಪದವಿ ಪಡೆದಿರುವ ಪೃಥ್ವಿರಾಜ್‌ ಯಶವಂತ ಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾನೆ. 15 ದಿನಗಳ ಹಿಂದೆ ಸ್ನೇಹಿತರ ಜತೆಗೆ ಪ್ರವಾಸಕ್ಕೆ ತೆರಳಿದ್ದ. 3 ದಿನ ಕಳೆದರೂ ಚಳ್ಳಕೆರೆಯಲ್ಲಿದ್ದ ತಾಯಿಗೆ ಕರೆ ಮಾಡಿರಲಿಲ್ಲ. ತಾಯಿ ಕರೆ ಮಾಡಿದಾಗ ಈತನ ಮೊಬೈಲ್‌ ಸ್ವಿಚ್ಡ್ ಆಫ್ ಆಗಿತ್ತು. ಅದರಿಂದ ಗಾಬರಿಗೊಂಡಿದ್ದ ತಾಯಿ, ಚಳ್ಳಕೆರೆ ಪೊಲೀಸ್‌ ಠಾಣೆಗೆ ತೆರಳಿ ಮಗನ ನಾಪತ್ತೆ ಪ್ರಕರಣ ದಾಖಲಿಸುವಂತೆ ಕೋರಿ ದ್ದರು. ದೂರು ಸ್ವೀಕರಿದ ಪೊಲೀಸರು, ಆಕೆಯನ್ನು ನಿಂದಿಸಿ ವಾಪಸ್‌ ಕಳುಹಿಸಿದ್ದರು ಎಂದು ಹೇಳಲಾಗಿದೆ.

ಇನ್ನು ವಾರದ ಬಳಿಕ ಪೃಥ್ವಿರಾಜ್‌ ಮನೆಗೆ ಬಂದಿದ್ದ. ಆಗ ಪೊಲೀಸರು ದೂರು ಸ್ವೀಕರಿಸದೇ ನಿಂದಿಸಿ ಕಳುಹಿಸಿದ್ದರು ಎಂದು ತಾಯಿ ಹೇಳಿದ್ದರು. ಅದರಿಂದ ಸಿಟ್ಟಿಗೆದ್ದ ಪೃಥ್ವಿರಾಜ್‌, ತಾಯಿಯೊಂದಿಗೆ ಠಾಣೆಗೆ ತೆರಳಿ ನಾಪತ್ತೆ ದೂರು ಏಕೆ ಸ್ವೀಕರಿಸಿಲ್ಲ ಎಂದು ಪ್ರಶ್ನಿಸಿದ್ದ. ಆಗ ಪೊಲೀಸರು ಮೊಬೈಲ್‌ ಕಸಿದುಕೊಂಡು ಠಾಣೆಯೊಳಗೆ ಕರೆದೊಯ್ದಿದ್ದರು. ಇದರಿಂದ ಸಿಟ್ಟಿಗೆದ್ದು ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ವಿಧಾನಸೌಧ ಸ್ಪೋಟಿಸುವುದಾಗಿ ಬೆದರಿಕೆ

ಆರೋಪಿ ಪೃಥ್ವಿರಾಜ್‌ ಕೆಲ ದಿನಗಳ ಹಿಂದೆ ವಿಧಾನಸೌಧ, ಐಐಎಸ್‌ಸಿ ಸೇರಿ ಕೆಲ ಕಟ್ಟಡ ಗಳನ್ನು ಸ್ಫೋಟಿಸುವುದಾಗಿ ವಿಡಿಯೋ ಮಾಡಿ ಸಾಮಾಜಿಕ ಮಾಧ್ಯಮ ಗಳಲ್ಲಿ ಹರಿಬಿಟ್ಟಿದ್ದ. ಅದನ್ನು ಗಮನಿಸಿದ ಚಳ್ಳ ಕೆರೆ ಡಿವೈಎಸ್ಪಿ ಠಾಣೆಗೆ ಕರೆಸಿ ಪ್ರಶ್ನಿಸಿದಾಗ, ಆಗ ಯುವಕ “ಪಿಎಸ್‌ಐ ವಿರುದ್ಧ ಕ್ರಮ ಕೈಗೊಳ್ಳಿ. ಇಲ್ಲವೇ ಪಿಸ್ತೂಲ್‌ನಿಂದ ಪಿಎಸ್‌ಐಗೆ ಗುಂಡು ಹಾರಿಸುತ್ತೇನೆ’ ಎಂದು ಬೆದರಿಕೆ ಒಡ್ಡಿದ್ದ.

ಆಗ ಪೃಥ್ವಿ ಹಾಗೂ ಅವರ ತಾಯಿಗೆ ಡಿವೈಎಸ್ಪಿ ಎಚ್ಚರಿಕೆ ನೀಡಿ ಕಳುಹಿಸಿ ದ್ದರು. ಬುಧವಾರ ಯಶವಂತ ಪುರಕ್ಕೆ ಮನೆಗೆ ಬಂದು ಸ್ವಂತ ಬೈಕ್‌ ಅನ್ನು ವಿಧಾನಸೌಧ ಎದುರು ತಂದು ಬೆಂಕಿ ಹಾಕಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಏನಿದು ಘಟನೆ?

● ಇತ್ತೀಚೆಗೆ 15 ದಿನ ಕಾಲ ಪ್ರವಾಸಕ್ಕೆ ತೆರಳಿದ್ದ ಯುವಕ, ಆಗ ತಾಯಿಗೆ ಕರೆ ಮಾಡಿರಲಿಲ್ಲ, ಮೊಬೈಲ್‌ ಕೂಡ ಸ್ವಿಚ್ಡ್ ಆಫ್ ಆಗಿತ್ತು

● ಮಗನ ನಾಪತ್ತೆ ಕುರಿತು ಚಳ್ಳಕೆರೆ ಠಾಣೆಗೆ ದೂರು ನೀಡಲು ತೆರಳಿದ್ದ ತಾಯಿ

● ಆಗ ದೂರು ಸ್ವೀಕರಿಸದೇ ಪೊಲೀಸರಿಂದ ತಾಯಿಗೆ ನಿಂದನೆ: ಆರೋಪ

● ಪ್ರವಾಸದಿಂದ ವಾಪಸ್‌ ಬಂದ ಬಳಿಕ ಠಾಣೆ ತೆರಳಿ ಪೊಲೀಸರನ್ನು ಪ್ರಶ್ನಿಸಿದ್ದ ಯುವಕ

● ಆಗ ಪೊಲೀಸರು ಯುವಕನಿಂದ ಮೊಬೈಲ್‌ ಕಸಿದುಕೊಂಡಿದ್ದರು: ಆರೋಪ

● ಪೊಲೀಸರ ಮೇಲಿನ ಸಿಟ್ಟಿನಿಂದಾಗಿ ವಿಧಾನಸೌಧ ಬಳಿ ಬೈಕ್‌ಗೆ ಬೆಂಕಿ ಹಚ್ಚಿದ

ಟಾಪ್ ನ್ಯೂಸ್

Cap-Brijesh-Chowta

MSEZ: ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್‌ನಲ್ಲಿ ಉದ್ಯೋಗ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

Nitin Gadkari responded to complaints of excessive toll collection

ಕಂತಿನಲ್ಲಿ ಕೊಂಡ ಕಾರ್‌ ಬೆಲೆ ಹೆಚ್ಚುವಂತೆ ಟೋಲ್‌ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ

DOOMAKETHU

Space Wonder: ಸೆ.27 ಸೂರ್ಯ, ಅ.12ಕ್ಕೆ ಭೂಮಿಗೆ ಸಮೀಪಿಸುವ ಧೂಮಕೇತು

Modi3.0ರಲ್ಲೇ ಏಕ ಚುನಾವಣೆ: ಕೇಂದ್ರ ಸರಕಾರಕ್ಕೆ 100 ದಿನ ಹಿನ್ನೆಲೆಯಲ್ಲಿ ಅಮಿತ್‌ ಶಾ ಘೋಷಣೆ

Modi3.0ರಲ್ಲೇ ಏಕ ಚುನಾವಣೆ: ಕೇಂದ್ರ ಸರಕಾರಕ್ಕೆ 100 ದಿನ ಹಿನ್ನೆಲೆಯಲ್ಲಿ ಅಮಿತ್‌ ಶಾ ಘೋಷಣೆ

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Dinesh-Meeting

Bengaluru: ನಿಫಾಗೆ ಬಲಿಯಾದ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 25 ಮಂದಿ ಪತ್ತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Cap-Brijesh-Chowta

MSEZ: ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್‌ನಲ್ಲಿ ಉದ್ಯೋಗ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

Nitin Gadkari responded to complaints of excessive toll collection

ಕಂತಿನಲ್ಲಿ ಕೊಂಡ ಕಾರ್‌ ಬೆಲೆ ಹೆಚ್ಚುವಂತೆ ಟೋಲ್‌ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ

DOOMAKETHU

Space Wonder: ಸೆ.27 ಸೂರ್ಯ, ಅ.12ಕ್ಕೆ ಭೂಮಿಗೆ ಸಮೀಪಿಸುವ ಧೂಮಕೇತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.