Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

ನಮಾಜ್‌ ವೇಳೆ ಹಿಂದಿ ಭಜನೆ ಸೌಂಡ್‌ ಹೆಚ್ಚಿಸಿದಕ್ಕೆ ಗಲಾಟೆ; ರಾಜಕೀಯ ತಿರುವು ಪಡೆದ ಪ್ರಕರಣ

Team Udayavani, Mar 19, 2024, 8:27 AM IST

2-bng-crime

ಬೆಂಗಳೂರು: ಹಿಂದಿ ಭಜನೆ ಹಾಕಿ ಧ್ವನಿವರ್ಧಕ ಶಬ್ಧ ಹೆಚ್ಚಿಸಿದ ವಿಚಾರಕ್ಕೆ ಮೊಬೈಲ್‌ ರಿಪೇರಿ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಮೂವರು ಯುವಕರನ್ನು ಹಲಸೂರು ಗೇಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮತ್ತೂಂದೆಡೆ ಘಟನೆ ರಾಜಕೀಯ ತಿರುವು ಪಡೆದುಕೊಂಡಿದ್ದು, ಸಂಸದ ತೇಜಸ್ವಿ ಸೂರ್ಯ ಮತ್ತು ಪಿ.ಸಿ.ಮೋಹನ್‌ ಹಲ್ಲೆಗೊಳಗಾದ ಯುವಕನನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.

ಕುಂಬಾರಪೇಟೆ ನಿವಾಸಿಗಳಾದ ಸುಲೇಮಾನ್‌ (27), ಶಹನವಾಜ್‌(27) ಮತ್ತು ರೋಹಿತ್‌(28) ಬಂಧಿತರು. ಇತರೆ ಮೂವರು ಆರೋಪಿಗಳಾದ ಡ್ಯಾನೀಶ್‌, ದಡಿಯಾ ಅಲಿಯಾಸ್‌ ತರುಣ್‌ ಹಾಗೂ ಮತ್ತೂಬ್ಬ ಆರೋಪಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಆರೋಪಿಗಳು ಮಾ.17ರಂದು ಸಂಜೆ ನಗರತ್‌ ಪೇಟೆಯ ಸಿದ್ದಣ್ಣಗಲ್ಲಿಯ ಜುಮ್ಮಾ ಮಸೀದಿಯಲ್ಲಿ ಮೊಬೈಲ್‌ ಅಂಗಡಿ ಮಾಲೀಕ ಮುಖೇಶ್‌ ಎಂಬಾತನ ಮೇಲೆ ಹಲ್ಲೆ ನಡೆಸಿದ್ದರು. ಈ ಸಂಬಂಧ ಮುಖೇಶ್‌ ನೀಡಿದ ದೂರಿನ ಮೇರೆಗೆ ಆರೋಪಿಗಳ ವಿರುದ್ಧ ಜೀವಬೆದರಿಕೆ, ಸಾರ್ವಜನಿಕ ಶಾಂತಿಗೆ ಭಂಗವುಂಟು ಮಾಡಲು ಪ್ರಚೋದನೆ, ಕೊಲೆಗೆ ಯತ್ನ ಆರೋಪದಡಿ ಐವರು ಹಾಗೂ ಇತರೆ ಆರೋಪಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಕಿಡ್ನಾಪ್‌ ಕೇಸಲ್ಲಿ ಸೆರೆಯಾಗಿದ್ದ ಸುಲೇಮಾನ್‌:

ಆರೋಪಿಗಳ ಪೈಕಿ ಸುಲೇಮಾನ್‌ ವಿರುದ್ಧ 2018 ರಲ್ಲಿ ಅಪಹರಣ, 2023ರಲ್ಲಿ ಹಲ್ಲೆ ಆರೋಪದಡಿ ಹಲಸೂರು ಗೇಟ್‌ ಠಾಣೆಯಲ್ಲಿ ಕೇಸು ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿತ್ತು. ಜಾಮೀನು ಪಡೆದು ಆರೋಪಿ ಬಿಡುಗಡೆಯಾಗಿದ್ದ. ಇತರೆ ಇಬ್ಬರು ಆರೋಪಿಗಳ ವಿರುದ್ಧ ಸದ್ಯ ಯಾವುದೇ ಕೇಸುಗಳು ದಾಖಲಾಗಿಲ್ಲ. ತನಿಖೆ ಮುಂದುವರಿದಿದೆಂದು ಪೊಲೀಸರು ಹೇಳಿದರು.

ಹಲ್ಲೆ ಮಾಡಿ, ಮುಖಕ್ಕೆ ಗುದ್ದಿದ್ರು!

ಘಟನೆ ಬಗ್ಗೆ ಮಾಧ್ಯಮಗಳಿಗೆ ವಿವರಿಸಿದ ಮುಖೇಶ್‌, ಭಾನುವಾರ ಸಂಜೆ ಅಂಗಡಿಯಲ್ಲಿದ್ದೆ. ಈ ವೇಳೆ 6 ಮಂದಿ ನಮ್ಮ ಅಂಗಡಿಗೆ ಬಂದು ನಮ್ಮ ಆಜಾನ್‌ ಸಮಯಕ್ಕೆ ಭಜನೆ ಹಾಡು ಏಕೆ ಹಾಕುತ್ತೀಯಾ? ಏಕೆ ಜೋರು ಶಬ್ಧ ಕೊಟ್ಟಿದ್ದಿಯಾ, ಈ ಸಮಯಕ್ಕೆ ಭಜನೆ ಹಾಡು ಹಾಕಿದ್ರೆ ಪರಿಣಾಮ ಸರಿ ಇರಲ್ಲ ಎಂದು ಏರುಧ್ವನಿಯಲ್ಲಿ ಎಚ್ಚರಿಕೆ ನೀಡಿದರು. ಆಗ ನಾನೇಕೆ ಭಜನೆ ಹಾಡು ನಿಲ್ಲಿಸಬೇಕು ಎಂದು ಪ್ರಶ್ನಿಸಿದೆ. ಅಷ್ಟಕ್ಕೆ ನನ್ನ ಕೊರಳಪಟ್ಟಿ ಹಿಡಿದು ಹಲ್ಲೆ ಮಾಡಿ, ಅಂಗಡಿಯಿಂದ ಹೊರಗೆಳೆದು ಹಲ್ಲೆ ಮಾಡಿದರು. ಆಯುಧದ ರೀತಿಯ ವಸ್ತುನಿಂದ ಮುಖಕ್ಕೆ ಹೊಡೆದರು. ಧ್ವನಿವರ್ಧಕಗಳಿಂದ ತಲೆಗೆ ಹೊಡೆದರು. ಯಾರೂ ನನ್ನ ಸಹಾಯಕ್ಕೆ ಬರಲಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

ಹಲ್ಲೆಗೊಳಗಾಗಿದ್ದ ಮೊಬೈಲ್‌ ಅಂಗಡಿ ಮಾಲೀಕ ಮುಖೇಶ್‌ನನ್ನು ಬಿಜೆಪಿ ಸಂಸದರಾದ ತೇಜಸ್ವಿ ಸೂರ್ಯ, ಪಿ.ಸಿ.ಮೋಹನ್‌, ಶಾಸಕರಾದ ಉದಯ್‌ ಗರುಡಾಚಾರ್‌, ಸಿ.ಕೆ.ರಾಮಮೂರ್ತಿ, ಎಂಎಲ್ಸಿ ಚಲವಾದಿ ನಾರಾಯಣ ಸ್ವಾಮಿ ಭೇಟಿ ಮಾಡಿ ಸಾಂತ್ವನ ಹೇಳಿದರು. ಈ ವೇಳೆ ಮಾತ ನಾಡಿದ ತೇಜಸ್ವಿ ಸೂರ್ಯ, ಮುಖೇಶ್‌ ಹಿಂದಿ ಭಾಷಿಕನಾಗಿದ್ದು, ಕನ್ನಡ ಅಷ್ಟಾಗಿ ಬರಲ್ಲ. ಪೊಲೀಸರು ಹನುಮಾನ್‌ ಚಾಲಿಸಾ ಬಗ್ಗೆ ಕೇಸಲ್ಲಿ ಉಲ್ಲೇಖಿಸಿಲ್ಲ. ಸರ್ಕಾರದಿಂದ ಯಾವುದೇ ಒತ್ತಡ ಬಂದರೂ, ಪೊಲೀಸರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರಿಗೆ ನಿಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಕ್ತಿ ಬಂದಿದೆ. ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ದೃಢಪಟ್ಟಿದೆ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು. ಕೆಲ ದಿನಗಳಲ್ಲೇ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟವಾಯಿತು. ಆಗ ಸಿಲಿಂಡರ್‌ ಸ್ಫೋಟ ಎಂದು ದಾರಿ ತಪ್ಪಿಸಲು ಯತ್ನಿಸಿದ್ದರು. ಮಂಗಳವಾರದೊಳಗೆ ಎಲ್ಲಾ ಆರೋಪಿಗಳ ಬಂಧನವಾಗಬೇಕು. ಇಲ್ಲವಾದರೆ, ನಗರತ್‌ಪೇಟೆ ಬಂದ್‌ ಆಗುತ್ತೆ ಎಂದು ಎಚ್ಚರಿಕೆ ನೀಡಿದರು.

ಸಿಸಿ ಕ್ಯಾಮೆರಾದಲ್ಲಿ ಹಲ್ಲೆ ದೃಶ್ಯ ಸೆರೆ: ಸಾಮಾಜಿಕ ಜಾಲತಾಣದಲ್ಲಿ ವೈರಲ್‌

ಆರೋಪಿಗಳು ಸಂಜೆ 6.25ರ ಸುಮಾರಿಗೆ ಅಂಗಡಿಗೆ ಬಂದು ಮುಖೇಶ್‌ ಜತೆ ಜಗಳ ತೆಗೆದು ಹಲ್ಲೆ ನಡೆಸಿದ್ದಾರೆ. ಬಳಿಕ ರಸ್ತೆಗೆ ಎಳೆದುಕೊಂಡು ಹಲ್ಲೆ ಮಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ರಾಷ್ಟ್ರಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಘಟನೆ ಸಂಬಂಧ ಮುಖೇಶ್‌ ದೂರು ನೀಡಿದ ಬೆನ್ನಲ್ಲೇ ಹಲಸೂರು ಗೇಟ್‌ ಠಾಣೆ ಪೊಲೀಸರು, ಸಿಸಿ ಕ್ಯಾಮೆರಾ ದೃಶ್ಯಾವಳಿಗಳ ಸಂಗ್ರಹಿಸಿ ಪರಿಶೀಲಿಸಿದ್ದರು. ಅದರ ಆಧಾರದ ಮೇಲೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಬಿಜೆಪಿ ನಾಯಕರಿಂದ ಹನುಮಾನ್‌ ಚಾಲೀಸಾ ಪಠಣ

ಮೊಬೈಲ್‌ ಅಂಗಡಿ ಮಾಲೀಕ ಮುಖೇಶ್‌ ಮೇಲಿನ ಹಲ್ಲೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಹಾಗೂ ನೂರಾರು ವರ್ತಕರು ಘಟನಾ ಸ್ಥಳದಲ್ಲಿ ಹನುಮಾನ್‌ ಚಾಲೀಸಾ ಪಠಿಸಿದರು.

ಠಾಣೆ ಎದುರು ನಗರತ್‌ಪೇಟೆ, ಕಬ್ಬನ್‌ಪೇಟೆ ವರ್ತಕರ ಪ್ರತಿಭಟನೆ: ಪೊಲೀಸ್‌ ಬಂದೋಬಸ್ತ್

ಘಟನೆ ವಿಚಾರ ತಿಳಿಯುತ್ತಿದ್ದಂತೆ ನಗರತ್‌ಪೇಟೆ, ಕಬ್ಬನ್‌ಪೇಟೆ ಸೇರಿ ಪಕ್ಕ-ಪಕ್ಕದ ನೂರಾರು ವರ್ತಕರು ಭಾನುವಾರ ತಡರಾತ್ರಿ ಹಲಸೂರು ಗೇಟ್‌ ಪೊಲೀಸ್‌ ಠಾಣೆ ಎದುರು ಜಮಾಯಿಸಿ ಪ್ರತಿಭಟಿಸಿದರು.

ಕಳೆದ 15 ದಿನಗಳಿಂದ ನಗರತ್‌ಪೇಟೆಯಲ್ಲಿ ಪುಂಡರ ಹಾವಳಿ ಹೆಚ್ಚಾಗಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಕ್ರಮಕೈಗೊಳ್ಳುತ್ತಿಲ್ಲ. ಆದರಿಂದ ಅಂಗಡಿಗೆ ನುಗ್ಗಿ ಮುಖೇಶ್‌ ಮೇಲೆ ಹಲ್ಲೆ ನಡೆಸಿದ ಪುಂಡರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.

ಸೋಮವಾರ ಬೆಳಗ್ಗೆಯೂ ಕೆಲ ವರ್ತಕರು ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದಲ್ಲದೆ, ಒಂದು ವೇಳೆ ಆರೋಪಿಗಳ ಬಂಧಿಸದಿದ್ದಲ್ಲೇ ಇಡೀ ನಗರತ್‌ಪೇಟೆ ಬಂದ್‌ ಮಾಡಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ನೂರಾರು ಜನ ನಗರತ್‌ಪೇಟೆಯಲ್ಲಿ ಜಮಾವಣೆಗೊಳ್ಳುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಕೂಡಲೇ ಎರಡು ಕೆಎಸ್‌ ಆರ್‌ಪಿ ತುಕಡಿಯನ್ನು ಸ್ಥಳಕ್ಕೆ ಕರೆಸಿಕೊಂಡು ಎಲ್ಲೆಡೆ ಬಿಗಿ ಬಂದೋಬಸ್ತ್ ಕೈಗೊಂಡರು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.