Bengaluru: ರೋಡ್‌ ರೇಜ್‌: ಕಾರಿನಿಂದ ಬೈಕ್‌ಗೆ ಡಿಕ್ಕಿ ಹೊಡೆದು ಸವಾರನ ಹತ್ಯೆ

ರಸ್ತೆಯಲ್ಲಿ ಕಾರಿಗೆ ತಗುಲಿದ ಬೈಕ್‌ ; ಈ ವೇಳೆ ಬೈಕ್‌ ನಿಲ್ಲಿಸುವಂತೆ ಹೇಳಿದ ಕಾರು ಚಾಲಕ

Team Udayavani, Aug 23, 2024, 2:39 PM IST

9-bng-crime

ಬೆಂಗಳೂರು: ನಗರದಲ್ಲಿ ರೋಡ್‌ ರೇಜ್‌ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಪ್ತಗಿರಿ ಲೇಔಟ್‌ನ ಜಿಕೆವಿಕೆ ಡಬಲ್‌ ರಸ್ತೆಯಲ್ಲಿ ನಡೆದ ಸಣ್ಣ ಅಪಘಾತಕ್ಕೆ ಕಾರು ಚಾಲಕ ಸಿನಿಮೀಯವಾಗಿ ಬೆನ್ನಟ್ಟಿ ವಾಹನ ಗುದ್ದಿಸಿ ಫ‌ುಡ್‌ ಡೆಲಿ ವರಿ ಬಾಯ್‌ನನ್ನು ಹತ್ಯೆಗೈದಿ ರುವ ಘಟನೆ ಬುಧವಾರ ರಾತ್ರಿ ವಿದ್ಯಾರಣ್ಯಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಚಾಮುಂಡೇಶ್ವರಿ ಲೇಔಟ್‌ ನಿವಾಸಿ ಮಹೇಶ್‌ (21) ಕೊಲೆಯಾದ ಪುಡ್‌ ಡೆಲಿವರಿ ಬಾಯ್‌.

ಈ ಸಂಬಂಧ ಕೊಡಿಗೇಹಳ್ಳಿಯ ನಿವಾಸಿಗಳಾದ ಬೆಳ್ಳಂದೂರು ಬ್ಯಾಂಕ್‌ವೊಂದರ ವ್ಯವಸ್ಥಾಪಕ ಅರವಿಂದ ಹಾಗೂ ಸಿವಿಲ್‌ ಎಂಜಿನಿಯರ್‌ ಚನ್ನಕೇಶ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿ ಕ್ಯಾಮೆರಾದಿಂದ ಕೃತ್ಯ ಬಯಲಿಗೆ ಬಂದಿದೆ. ಕೋಲಾರ ಜಿಲ್ಲೆ ಕೆಜಿಎಫ್ ಮೂಲದ ಮಹೇಶ್‌, ಪೋಷಕರೊಂದಿಗೆ ಬಹಳ ವರ್ಷಗಳಿಂದ ಚಾಮುಂಡೇಶ್ವರಿ ಲೇಔಟ್‌ನಲ್ಲಿ ವಾಸವಾಗಿದ್ದರು. ಈತನ ಪೋಷಕರು ಕೂಲಿ ಕೆಲಸ ಮಾಡಿಕೊಂಡಿದ್ದಾರೆ. ಬಿ.ಕಾಂ ಓದುತ್ತಿದ್ದ ಈತ ವಿದ್ಯಾಭ್ಯಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡುತ್ತಿದ್ದ.

ರಾತ್ರಿ ಆತನ ಸ್ನೇಹಿತರಾದ ನಿಖೀಲ್‌ ಮತ್ತು ಬಾಲಾಜಿ ಜೊತೆಗೆ ಕಾಫಿ ಕುಡಿಯಲು ಬೈಕ್‌ ನಲ್ಲಿ ಹೋಗಿದ್ದಾಗ ದುರ್ಘ‌ಟನೆ ನಡೆದಿದೆ ಎಂದು ಪೊಲೀಸರು ಹೇಳಿದರು. ಬುಧವಾರ ರಾತ್ರಿ 9.30ರ ಸುಮಾರಿಗೆ ಮಹೇಶ್‌ ಹಾಗೂ ಸ್ನೇಹಿತರು ಒಂದೇ ಬೈಕ್‌ನಲ್ಲಿ ಮನೆಗೆ ಜಿಕೆವಿಕೆ ಡಬಲ್‌ ರಸ್ತೆಯಲ್ಲಿ ಹೋಗುತ್ತಿದ್ದರು. ಆಗ ಹಿಂದಿನಿಂದ ಬಂದ ಕಾರು ಚಾಲಕ ಅರವಿಂದ್‌ ದಾರಿ ಬಿಡುವಂತೆ ಹಾರ್ನ್ ಮಾಡಿದ್ದಾನೆ. ಆದರೆ, ಮಹೇಶ್‌ ಕಾರಿಗೆ ಜಾಗ ಬಿಡದೆ ಬೈಕ್‌ ಚಲಾಯಿಸಿದ್ದಾನೆ. ಈ ವೇಳೆ ಅರವಿಂದ್‌ರ ಕಾರಿಗೆ ಬೈಕ್‌ ತಗುಲಿದೆ. ಆಗ ಅರವಿಂದ್‌, ಬೈಕ್‌ ನಿಲ್ಲಿಸುವಂತೆ ಮಹೇಶ್‌ಗೆ ಸೂಚಿಸಿದ್ದಾನೆ. ಆದರೆ, ಆತನ ಮಾತಿಗೆ ಕಿವಿಗೊಡದ ಮಹೇಶ್‌, ಮತ್ತಷ್ಟು ವೇಗವಾಗಿ ಬೈಕ್‌ವಾಗಿ ಚಲಾಯಿಸಿಕೊಂಡು ಮುಂದೆ ಹೋಗಿದ್ದಾನೆ ಎಂದು ಪೊಲೀಸರು ಹೇಳಿದರು.

ಸಿನಿಮೀಯವಾಗಿ ಚೇಸಿಂಗ್‌ ಮಾಡಿ ಹತ್ಯೆ: ಅದರಿಂದ ಕೋಪಗೊಂಡ ಅರವಿಂದ್‌, ಮಹೇಶ್‌ನನ್ನು ಸಿನಿಮೀಯವಾಗಿ ಹಿಂಬಾಲಿಸಿಕೊಂಡು ಹೋಗಿದ್ದು, ಆಗ ಮಹೇಶ್‌ನ ಹಿಂಬದಿಯಲ್ಲಿ ಕುಳಿತಿದ್ದ ನಿಖೀಲ್‌ ಮತ್ತು ಬಾಲಾಜಿ, ರಸ್ತೆ ತಿರುವಿನಲ್ಲಿ ಬೈಕ್‌ನಿಂದ ಜಿಗಿದು ಓಡಿ ಹೋಗಿದ್ದಾರೆ. ಆ ನಂತರವೂ ಅರವಿಂದ್‌, ಮಹೇಶ್‌ನನ್ನು ಬೆನ್ನಟ್ಟಿದ್ದಾರೆ. ಅದರಿಂದ ಗಾಬರಿಯಾದ ಮಹೇಶ್‌, ಸಪ್ತಗಿರಿ ಲೇಔಟ್‌ ಕಡೆಗೆ ಬೈಕ್‌ ನುಗ್ಗಿಸಿದ್ದಾನೆ.

ಈ ಹಂತದಲ್ಲಿ ಅರವಿಂದ್‌, ಆತನ ಬೈಕ್‌ಗೆ ಹಿಂದಿನಿಂದ ಕಾರು ಗುದ್ದಿಸಿದ್ದಾರೆ. ಪರಿಣಾಮ ಮಹೇಶ್‌ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಾಗ ಆತನ ತಲೆ ರಸ್ತೆ ಬದಿಯ ಮನೆಯೊಂದರ ಕಾಂಪೌಂಡ್‌ಗೆ ತಗುಲಿ, ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವವಾಗಿದೆ. ಬಳಿಕ ಆರೋಪಿಗಳು ಕಾರು ನಿಲ್ಲಿಸಿ ಗಾಯಾಳು ಮಹೇಶ್‌ನನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಮಾರ್ಗ ಮಧ್ಯೆಯೇ ಮಹೇಶ್‌ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದಾಗಿ ಪೊಲೀಸರು ಮಾಹಿತಿ ನೀಡಿದರು.

ರಸ್ತೆ ಅಪಘಾತ ಎಂದು ಕಥೆ ಕಟ್ಟಿದ್ದ ಆರೋಪಿಗಳು

ಆರಂಭದಲ್ಲಿ ರಸ್ತೆ ಅಪಘಾತ ಎಂದೇ ಆರೋಪಿಗಳು ಕಥೆ ಕಟ್ಟಿದ್ದರು. ಹೀಗಾಗಿ ಸಂಚಾರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದರು. ಆದರೆ, ಆರೋಪಿಗಳ ವರ್ತನೆಯಿಂದ ಅನುಮಾನಗೊಂಡ ಪೊಲೀಸರು, ಘಟನಾ ಸ್ಥಳ ಸುತ್ತ-ಮುತ್ತ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಉದ್ದೇಶಪೂರ್ವಕವಾಗಿ ಬೈಕ್‌ ಹಿಂಬಾಲಿಸಿ ಕಾರಿನಿಂದ ಡಿಕ್ಕಿ ಹೊಡೆದು ಹತ್ಯೆ ಮಾಡಿರುವುದು ಪತ್ತೆಯಾಗಿತ್ತು. ಬಳಿಕ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಾಯಿಬಿಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.

ವಾರದೊಳಗೆ 4 ರೋಡ್‌ ರೇಜ್‌ ಪ್ರಕರಣ

ಕಳೆದೊಂದು ವಾರದಲ್ಲಿ ನಗರದಲ್ಲಿ 4 ರೋಡ್‌ ರೇಜ್‌ ಪ್ರಕರಣಗಳು ದಾಖಲಾಗಿವೆ. ಆ.20 ರಂದು ಸರ್ಜಾಪುರ ರಸ್ತೆಯಲ್ಲಿ ದಂಪತಿ ತೆರಳು ತ್ತಿದ್ದ ಕಾರನ್ನು ಅಡ್ಡಗಟ್ಟಿದ ಬೌನ್ಸರ್‌ವೊಬ್ಬ, ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ ದೌರ್ಜನ್ಯ ಎಸಗಿದ್ದ. ಆ.20ರಂದು ಇಂದಿರಾನಗರದಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಜಿತಿನ್‌ ಕುಮಾರ್‌ ಎಂಬವರನ್ನು ಬೈಕ್‌ನಲ್ಲಿ ಬಂದು ಅಡ್ಡಗಟ್ಟಿದ ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಆರ್‌ .ಟಿ.ನಗರದಲ್ಲೂ ಕಾರು ಚಾಲಕನ ಅಡ್ಡಗಟ್ಟಿದ ಬೈಕ್‌ ಸವಾರ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಮುಂದಾಗಿದ್ದ. ಆ.21ರಂದು ವಿದ್ಯಾರಣ್ಯಪುರದಲ್ಲಿ ಕಾರಿಗೆ ಆಕಸ್ಮಿಕವಾಗಿ ಬೈಕ್‌ ತಗುಲಿದಾಗ, ಚೇಸ್‌ ಮಾಡಿ ಕಾರಿನಿಂದ ಬೈಕ್‌ಗೆ ಡಿಕ್ಕಿ ಹೊಡೆಸಿ ಸವಾರನನ್ನು ಹತ್ಯೆ ಮಾಡಲಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.