Bengaluru: 2.5 ಕೋಟಿ ರೂ. ಮೌಲ್ಯದ ಕೆರೆ ಒತ್ತುವರಿ ಜಾಗ ತೆರವು ಕಾರ್ಯಾಚರಣೆ
ಕಗ್ಗದಾಸಪುರ ಕೆರೆಯ 2.5 ಗುಂಟೆ ತೆರವುಗೊಳಿಸಿದ ಪಾಲಿಕೆ
Team Udayavani, Oct 5, 2024, 12:37 PM IST
ಬೆಂಗಳೂರು: ಕೆರೆಗಳ ಒತ್ತುವರಿ ಜಾಗದ ಸಂರಕ್ಷಣೆಗೆ ಮುಂದಾಗಿರುವ ಬಿಬಿಎಂಪಿ ಇದೀಗ ತನ್ನ ವಶದಲ್ಲಿದ್ದ ಬೆಂಗಳೂರಿನ ಪೂರ್ವ ವಲಯದ ಕಗ್ಗದಾಸಪುರ ಕೆರೆ ಜಾಗದ ಸಮೀಕ್ಷೆ ನಡೆಸಿ ಒತ್ತುವರಿಯಾಗಿದ್ದ 2.50 ಗುಂಟೆ ಜಾಗವನ್ನು ಶುಕ್ರವಾರ ವಶಕ್ಕೆ ಪಡೆದಿದೆ.
ಹೈಕೋರ್ಟ್ ರಿಟ್ ಅರ್ಜಿ ಆದೇಶದನ್ವಯ ಬಿಬಿಎಂಪಿ ಕೆರೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕಾರ್ಯಾಚರಣೆ ಕೈಗೊಂಡಿದ್ದು ಕಂದಾಯ ಇಲಾಖೆ ಸಹಕಾರದೊಂದಿಗೆ ಕಗ್ಗದಾಸಪುರ ಕೆರೆಯ ಸರ್ವೆ ಕಾರ್ಯ ನಡೆಸಿ 2.50 ಗುಂಟೆ ಜಾಗ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ಜೆಸಿಬಿ ಯಂತ್ರದ ಮೂಲಕ ನೆಲಸಮಗೊಳಿಸಿ ಖಾಲಿ ಜಾಗವನ್ನು ಪಾಲಿಕೆ ವಶಕ್ಕೆ ಪಡೆದುಕೊಳ್ಳಲಾಗಿದೆ.
ಒತ್ತುವರಿ ಪ್ರದೇಶವು ಸುಮಾರು 2 ಕೋಟಿ ರೂ. ಮಾರುಕಟ್ಟೆ ಮೌಲ್ಯ ಹೊಂದಿದ್ದು ಪಾಲಿಕೆಯಿಂದ ತೆರವಾದ ಪ್ರದೇಶಕ್ಕೆ ತಂತಿ ಬೇಲಿ ಅಳವಡಿಸುವ ಕಾರ್ಯ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.