Bengaluru: ಅವಶೇಷಗಳಡಿ ಒಬ್ಬ ಕಾರ್ಮಿಕನಿಗೆ ಶೋಧ
Team Udayavani, Oct 25, 2024, 11:54 AM IST
ಬೆಂಗಳೂರು: ಬಾಬುಸಾಬ್ ಪಾಳ್ಯದ 7 ಅಂತಸ್ತಿನ ಕಟ್ಟಡ ಕುಸಿತದಿಂದ ಅವಶೇಷ ಗಳಡಿ ಸಿಲುಕಿದ್ದ ಕಾರ್ಮಿಕನಿಗಾಗಿ ನಡೆಯುತ್ತಿದ್ದ ಶೋಧ ಕಾರ್ಯವನ್ನು ಗುರುವಾರ ರಾತ್ರಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಅಗ್ನಿಶಾಮಳ ದಳ, ಎನ್ ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಸಿಬ್ಬಂದಿ ಸತತ 3 ದಿನಗಳಿಂದ ಅವಶೇಷಗಳನ್ನು ತೆರವುಗೊಳಿಸಿ ಶೋಧಿಸಿದರು. ಏಳುಮಲೈ ಹಾಗೂ ಗಜೇಂದ್ರ ಎಂಬ ಇಬ್ಬರು ಕಾರ್ಮಿಕರಿಗಾಗಿ ಶೋಧ ನಡೆಸಲಾಗುತ್ತಿತ್ತು.
ಆದರೆ, ರಕ್ಷಣೆಯಾದ ಸಹ ಕಾರ್ಮಿಕರನ್ನು ವಿಚಾರಣೆ ನಡೆಸಲಾಗಿದ್ದು, ಗಜೇಂದ್ರ ಹೆಸರಿನ ಕಾರ್ಮಿಕ ಕಟ್ಟಡದಲ್ಲಿ ಕೆಲಸ ಮಾಡುತ್ತಿರಲಿಲ್ಲ ಎಂಬುದು ಗೊತ್ತಾಗಿದೆ. ಸದ್ಯಕ್ಕೆ ಮೇಸ್ತ್ರಿ ಏಳುಮಲೈಗಾಗಿ ಶೋಧ ನಡೆಸಲಾಗುತ್ತಿದೆ. ಕಟ್ಟಡ ಕುಸಿಯುವ ಸಂದರ್ಭದಲ್ಲಿ ಉಂಟಾದ ಜೋರು ಶಬ್ದದಿಂದ ಎಚ್ಚೆತ್ತು ವ್ಯಕ್ತಿಯೊಬ್ಬ ಓಡಿ ಹೋಗುತ್ತಿರುವ ದೃಶ್ಯ ಪಕ್ಕದ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸೆರೆಯಾದ ದೃಶ್ಯದಲ್ಲಿ ವ್ಯಕ್ತಿಯ ಚಹರೆ ಪತ್ತೆ ಆಗುತ್ತಿಲ್ಲ. ಕಟ್ಟಡ ಕುಸಿಯುವುದಕ್ಕೂ ಕೆಲವೇ ನಿಮಿಷಗಳ ಹಿಂದೆ ಏಳುಮಲೈ ಮೊಬೈಲ್ ಅನ್ನು ಕಟ್ಟಡದಲ್ಲಿಯೇ ಬಿಟ್ಟು ಹೊರಗೆ ತೆರಳಿರುವ ಸಾಧ್ಯತೆಯೂ ಇರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ಧಾರೆ. ಅವಶೇಷಗಳನ್ನು ಸಂಪೂರ್ಣ ತೆರವುಗೊಳಿಸದ ಬಳಿಕವಷ್ಟೇ ಏಳುಮಲೈ ತಪ್ಪಿಸಿಕೊಂಡಿದ್ಧಾರೆಯೇ ಅಥವಾ ಅವಶೇಷಗಳ ಅಡಿ ಸಿಲುಕಿಕೊಂಡಿದ್ಧಾರೆಯೇ ಎಂಬುದು ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shiggaon ‘ಕೈ’ ಭಿನ್ನಮತ; ಯಾಸಿರ್ ಖಾನ್ ಬಿಜೆಪಿ ಏಜೆಂಟ್ ಎಂದ ಅಜ್ಜಂಫೀರ್ ಖಾದ್ರಿ
Pakistan: ಅಂದು ಬಿನ್ ಲಾಡೆನ್ ಅಡಗಿದ್ದ ಅಬೋಟಾಬಾದ್ ಈಗ ಉ*ಗ್ರರ ನೂತನ ತರಬೇತಿ ಕೇಂದ್ರ!
Rabkavi Banhatti: ನವೀಕರಣವಿಲ್ಲದೆ ನೆಲೆ ಕಾಣದ ನೇಕಾರರು
Kadur: ಮಗು ನಾಪತ್ತೆ ಪ್ರಕರಣ ಸುಖಾಂತ್ಯ; ಮಗು ಮರೆತು ಕುಡಿಯಲು ಹೋಗಿದ್ದ ಅಪ್ಪ!
Kaup ಪೇಟೆ ಕೊಳಚೆಗೆ ಕೃಷಿ ಭೂಮಿಗಳೇ ಬಲಿ!; 80ಕ್ಕೂ ಅಧಿಕ ಮನೆಗಳಿಗೆ ನಿತ್ಯ ಯಾತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.