Bengaluru: ಹಾಸಿಗೆ ಮೇಲಿಟ್ಟಿದ್ದ ಚಿನ್ನದ ಸರ ಕದ್ದವರ ಸೆರೆ
ಶ್ರೀನಗರದಲ್ಲಿ ಬಾಗಿಲು ತೆರೆದು ಸ್ನಾನಕ್ಕೆ ಹೋಗಿದ್ದ ಮಾಲಿಕ ; ಈ ವೇಳೆ ಸರ ಕದ್ದು ಪರಾರಿ
Team Udayavani, Sep 14, 2024, 12:31 PM IST
ಬೆಂಗಳೂರು: ಮೋಜಿನ ಜೀವನಕ್ಕಾಗಿ ರಾತ್ರಿ ವೇಳೆ ಮನೆಗಳ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹನುಮಂತನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೈಸೂರು ಮೂಲದ ರವಿ ಅಲಿಯಾಸ್ ಪ್ರವೀಣ್ ಅಲಿಯಾಸ್ ಕರಿಯಾ(27) ಮತ್ತು ಮಂಡ್ಯ ಮೂಲದ ಅರುಣ್(19) ಬಂಧಿತರು. ಆರೋಪಿಗಳಿಂದ 31 ಲಕ್ಷ ರೂ. ಮೌಲ್ಯದ 478 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳಿಬ್ಬರು ಕೆಲ ವರ್ಷಗಳಿಂದ ಸ್ನೇಹಿತರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.
ಠಾಣೆ ವ್ಯಾಪ್ತಿಯ ಶ್ರೀನಗರದಲ್ಲಿ ವಾಸವಾಗಿರುವ ದೂರುದಾರರು, ಮೇ 23ರಂದು ಮುಂಜಾನೆ 5 ಗಂಟೆಗೆ ಎದ್ದು ಮನೆ ಬಾಗಿಲು ಸ್ವಚ್ಛಗೊಳಿಸಿ, ಬಾಗಿಲ ಚೀಲಕ ಹಾಕದೆ ಚಿನ್ನದ ಸರವನ್ನು ಹಾಸಿಗೆ ಮೇಲೆ ಇಟ್ಟು ಸ್ನಾನಕ್ಕೆ ತೆರಳಿದ್ದರು. ಸ್ನಾನ ಮುಗಿಸಿ ಕೆಲ ಹೊತ್ತಿನ ಬಳಿಕ ಬಂದು ನೋಡಿದಾಗ ಚಿನ್ನದ ಸರ ಕಳುವಾಗಿತ್ತು. ಈ ಸಂಬಂಧ ದೂರು ದಾಖಲಿಸಿದ್ದರು.
ಈ ಮಧ್ಯೆ ಶ್ರೀನಗರದ ಬಸ್ ನಿಲ್ದಾಣ ಸಮೀಪದಲ್ಲಿ ಇಬ್ಬರು ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಈ ಮಾಹಿತಿ ಮೇರೆಗೆ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳವು ಕೃತ್ಯ ಬಾಯಿಬಿಟ್ಟಿದ್ದಾರೆ. ಅಲ್ಲದೆ, ಆರೋಪಿಗಳು ಈ ಹಿಂದೆಯೂ ಮಂಡ್ಯ, ಮೈಸೂರು ಭಾಗದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿರುವ ಮನೆಗಳ ಬೀಗ ಮುರಿದು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.
ಮೋಜು ಮಸ್ತಿಗಾಗಿ ಕಳ್ಳತನ ಆರೋಪಿಗಳು ಕಳವು ವಸ್ತುಗಳನ್ನು ಫೈನಾನ್ಸ್ ಹಾಗೂ ಚಿನ್ನಾಭರಣ ಮಳಿಗೆಗಳಲ್ಲಿ ಅಡಮಾನ ಇಟ್ಟು ಬಂದ ಹಣದಲ್ಲಿ ಮದ್ಯ ಸೇವನೆ, ಪ್ರವಾಸಿ ತಾಣಗಳಿಗೆ ಭೇಟಿ ಹಾಗೂ ಇತರೆ ಶೋಕಿಗಾಗಿ ವ್ಯಯಿಸಿ ಜೀವನ ನಡೆಸುತ್ತಿದ್ದರು. ಕಳವು ಚಿನ್ನಾಭರಣಗಳನ್ನು ಮೈಸೂರು, ಮಂಡ್ಯದ ಕೆಲ ಜ್ಯುವೆಲ್ಲರಿ ಶಾಪ್ಗಳಲ್ಲಿ ಅಡಮಾನ ಇಟ್ಟಿರುವುದು ಗೊತ್ತಾಗಿ, ಎಲ್ಲವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
Road rage case: ರೋಡ್ ರೇಜ್ ಕೇಸ್ ಬಗ್ಗೆ ದೂರು ನೀಡಿ; ಕಮಿಷನರ್
Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ
Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್ಟಾಪ್ ಕದ್ದ ಟೆಕ್ಕಿ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.