Bengaluru: ಕದ್ದ ಒಡವೆಯನ್ನು ಪ್ರೇಯಸಿಗೆ ಕೊಟ್ಟಿದ್ದ ವ್ಯಕ್ತಿ ಸೇರಿ ಇಬ್ಬರ ಸೆರೆ
Team Udayavani, Aug 17, 2024, 1:26 PM IST
ಬೆಂಗಳೂರು: ಮನೆಗಳ್ಳತನ ಮಾಡಿದ ಚಿನ್ನನ್ನು ಪ್ರೇಯಸಿಗೆ ಹಾಗೂ ಸ್ನೇಹಿತನಿಗೆ ನೀಡಿದ್ದ ಆರೋಪಿ ಸೇರಿದಂತೆ ಇಬ್ಬರನ್ನು ಬಂಧಿಸಿರುವ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು, 31 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.
ಕಾರ್ತಿಕ್ (36) ಹಾಗೂ ಆತನ ಸ್ನೇಹಿತ ರಘು (26) ಬಂಧಿತರು.
ಬಂಧಿತರಿಂದ 31 ಲಕ್ಷ ರೂ. ಮೌಲ್ಯದ 470 ಗ್ರಾಂ ಚಿನ್ನಾಭರಣ ಮತ್ತು 3 ಕೆ.ಜಿ.ಬೆಳ್ಳಿಯ ಗಟ್ಟಿ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಜು.8ರಂದು ಕೆ.ಎಸ್.ಲೇಔಟ್ನ ಮನೆಯೊಂದರ ಬೀಗ ಮುರಿದು ಕಳ್ಳತನ ಮಾಡಿದ್ದರು. ಪೊಲೀಸರು ತನಿಖೆ ನಡೆಸಿದಾಗ ಆರೋಪಿ ಕಾರ್ತಿಕ್ ಸಿಕ್ಕಿ ಬಿದ್ದಿದ್ದ. ಆತ ಕೊಟ್ಟ ಮಾಹಿತಿ ಆಧರಿಸಿ ಆತನೊಂದಿಗೆ ಕಳ್ಳತನಕ್ಕೆ ಕೈ ಜೋಡಿಸುತ್ತಿದ್ದ ಆರೋಪಿ ರಘುವನ್ನು ಬಂಧಿಸಿದ್ದಾರೆ.
ಕಳವು ಮಾಡಿದ ಕೆಲವು ಚಿನ್ನಾಭರಣಗಳನ್ನು ಬೆಂಗಳೂರು ನಗರ ಮತ್ತು ಹೈದರಾಬಾದ್ನ ವಿವಿಧ ಜ್ಯೂವೆಲ್ಲರಿ ಅಂಗಡಿಗಳಲ್ಲಿ ಅಡಮಾನ ಇಟ್ಟಿದ್ದೆ. ಇನ್ನೂ ಕೆಲವನ್ನು ಪ್ರೇಯಸಿ ಹಾಗೂ ಸ್ನೇಹಿತ ರಘುಗೆ ನೀಡಿರುವುದಾಗಿ ವಿಚಾರಣೆಯಲ್ಲಿ ಕಾರ್ತಿಕ್ ಬಾಯ್ಬಿಟ್ಟಿದ್ದ. ಈ ಮಾಹಿತಿ ಆಧರಿಸಿ ಆರೋಪಿ ರಘು, ಆತನ ಪ್ರೇಯಸಿಯ ಬಳಿಯಿದ್ದ ಚಿನ್ನ, ಅಡವಿಟ್ಟಿದ್ದ ಆಭರಣ ಸೇರಿ ಒಟ್ಟು 470 ಗ್ರಾಂ ಚಿನ್ನಾಭರಣ, 3 ಕೆ.ಜಿ.ಬೆಳ್ಳಿಯನ್ನು ವಶ ಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.