Bengaluru: ದ್ವಿಚಕ್ರ ವಾಹನ ಕಳ್ಳತನ ಆರೋಪಿ ಸೆರೆ, 4 ಬೈಕ್ ಜಪ್ತಿ
Team Udayavani, Oct 18, 2024, 12:28 PM IST
ಬೆಂಗಳೂರು: ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಆರೋಪಿಯನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜೆ.ಪಿ.ನಗರ ನಿವಾಸಿ ರಘುನಂದನ್(23) ಬಂಧಿತ. ಆರೋಪಿಯಿಂದ 1.25 ಲಕ್ಷ ರೂ. ಮೌಲ್ಯದ 4 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿ ಇತ್ತೀಚೆಗೆ ಠಾಣೆ ವ್ಯಾಪ್ತಿಯ ಎ.ಕೆ.ಕಾಲೋನಿಯ ಮನೆ ಮುಂದೆ ನಿಲುಗಡೆ ಮಾಡಿದ್ದ ಬೈಕ್ ಕಳವು ಮಾಡಿದ್ದ. ಆರೋಪಿ ಬೈಕ್ಗಳ ಕಳವು ಮಾಡುವುದನ್ನೇ ವೃತ್ತಿಯನ್ನಾಗಿಸಿಕೊಂಡಿದ್ದು, ಮನೆ ಮುಂದೆ ಹಾಗೂ ಪಾರ್ಕಿಂಗ್ನಲ್ಲಿ ನಿಲುಗಡೆ ಮಾಡಿದ್ದ ಬೈಕ್ಗಳ ಹ್ಯಾಂಡಲ್ ಲಾಕ್ ಮುರಿದು ಕಳವು ಮಾಡುತ್ತಿದ್ದ. ಅವುಗಳನ್ನು ಕಡಿಮೆ ಮೊತ್ತಕ್ಕೆ ಗ್ರಾಮಾಂತರ ಭಾಗದಲ್ಲಿ ಮಾರಾಟ ಮಾಡುತ್ತಿದ್ದ.
ಈತನ ಬಂಧನದಿಂದ ಬನಶಂಕರಿ, ಜೆ.ಪಿ.ನಗರ ಠಾಣೆಗಳಲ್ಲಿ ದಾಖಲಾಗಿದ್ದ 4 ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಜೂಜಾಟದಿಂದ ಮಾಡಿದ್ದ ಭಾರೀ ಸಾಲ ತೀರಿಸಲು ಮನೆ ಕಳ್ಳತನ
Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ
Bengaluru: ಉದ್ಯಮಿ ಮನೆಯಲ್ಲಿ 1.22 ಕೋಟಿ ಚಿನ್ನ ಕಳವು; ಇಬ್ಬರ ಸೆರೆ
Kundapura: ಮರವಂತೆ ಮಾರಸ್ವಾಮಿ ಸ್ಟಾಪ್ನಲ್ಲಿ ನಿಲ್ಲದ ಸರಕಾರಿ ಬಸ್!
Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.