Bengaluru: ವಾಹನ ಕಳ್ಳನ ಬಂಧನ: 30 ದ್ವಿಚಕ್ರ ವಾಹನ ಜಪ್ತಿ
ರಾತ್ರಿ ವೇಳೆ ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ; ಕ್ಯಾಮೆರಾ ಸುಳಿವು ಆಧರಿಸಿ ಬಂಧನ
Team Udayavani, Sep 28, 2024, 12:49 PM IST
ಬೆಂಗಳೂರು: ಮನೆ ಎದುರು ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳ ಹ್ಯಾಂಡಲ್ ಲಾಕ್ ಮುರಿದು ಕಳವು ಮಾಡುತ್ತಿದ್ದ ಆರೋಪಿಯನ್ನು ಕೆ.ಆರ್.ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸುಂಕದಕಟ್ಟೆ ಮುದ್ದಿನಪಾಳ್ಯದ ಹನುಮೇಶ್ ಅಲಿಯಾಸ್ ಚಿನ್ನ ಹನುಮಯ್ಯ(32) ಬಂಧಿತ. ಆರೋಪಿಯಿಂದ 22.50 ಲಕ್ಷ ರೂ. ಮೌಲ್ಯದ 30 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಕೆ.ಆರ್.ಪುರ ಸಮೀಪದ ಕೌದೇನಹಳ್ಳಿ ಮನೆಯೊಂದರ ಬಳಿ ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನ ಕಳ್ಳತನವಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾ ಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಘಟನಾ ಸ್ಥಳದ ಸುತ್ತಮುತ್ತಲ ಸಿಸಿ ಕ್ಯಾಮೆರಾ ಪರಿಶೀಲನೆ ವೇಳೆ ಸಿಕ್ಕ ಸುಳಿವು ಹಾಗೂ ಬಾತ್ಮೀದಾರರು ನೀಡಿದ ಖಚಿತ ಮಾಹಿತಿ ಮೇರೆಗೆ ಮುದ್ದಿನಪಾಳ್ಯದಲ್ಲಿ ದ್ವಿಚಕ್ರ ವಾಹನ ಸಹಿತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಆರೋಪಿಯು ದ್ವಿಚಕ್ರ ವಾಹನ ಕಳ್ಳತನ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಗರದಲ್ಲಿ ಕದ್ದ ಬೈಕ್ ಆಂಧ್ರಪ್ರದೇಶದಲ್ಲಿ ಮಾರಾಟ! ಆರೋಪಿ ಕೆಲವು ದ್ವಿಚಕ್ರ ವಾಹನಗಳನ್ನು ಆಂಧ್ರಪ್ರದೇಶಕ್ಕೆ ತೆಗೆದುಕೊಂಡು ಹೋಗಿ ಮಾರಾಟ ಮಾಡಲು ಪ್ರಯತ್ನಿಸಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ. ಈತನ ಬಂಧನದಿಂದ ಕೆ.ಆರ್.ಪುರದಲ್ಲಿ 3, ಎಚ್ಎಎಲ್, ಮಹದೇವಪುರ, ಪರಪ್ಪನ ಅಗ್ರಹಾರ, ಬ್ಯಾಡರಹಳ್ಳಿ, ಹೆಬ್ಬಗೋಡಿ ಠಾಣೆ ತಲಾ 1 ಸೇರಿ ಒಟ್ಟು 8 ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದರು.
ಆರೋಪಿ ಹನುಮೇಶ್ ನೀಡಿದ ಮಾಹಿತಿ ಮೇರೆಗೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಕಂದಕೂರು ಗ್ರಾಮದ ಖಾಲಿ ಜಾಗದಲ್ಲಿ ನಿಲುಗಡೆ ಮಾಡಿದ್ದ 8 ದ್ವಿಚಕ್ರ ವಾಹನಗಳು, ಕೆ.ಆರ್.ಪುರದ ಖಾಲಿ ಜಾಗದಲ್ಲಿ ನಿಲುಗಡೆ ಮಾಡಿದ್ದ 10 ದ್ವಿಚಕ್ರ ವಾಹನಗಳು ಹಾಗೂ ಯಲಹಂಕದ ಬಳಿ ನಿಲುಗಡೆ ಮಾಡಿದ್ದ 11 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಭಾರತದ ಚಾಟಿ
Laapataa Ladies: ಕಾಣೆಯಾದ ಮಹಿಳೆಯರ ಆಸ್ಕರ್ ಪ್ರಯಾಣ
Kanpur Test: ಪಂದ್ಯ ಬಿಟ್ಟು ಹೋಟೆಲ್ ಗೆ ತೆರಳಿದ ಭಾರತೀಯ ಆಟಗಾರರು
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.