Bengaluru: ಬೇಕರಿ ಮಾಲಿಕರ ಬೆದರಿಸಿ ಸುಲಿಗೆ ಮಾಡುತ್ತಿದ್ದ ಯುಟ್ಯೂಬರ್‌ ಬಂಧನ


Team Udayavani, Oct 11, 2024, 1:35 PM IST

8-bng

ಬೆಂಗಳೂರು: ಪತ್ರಕರ್ತನ ಸೋಗಿನಲ್ಲಿ ಬೇಕರಿ ಮಾಲೀಕರನ್ನು ಬೆದರಿಸಿ ಸುಲಿಗೆ ಮಾಡುತ್ತಿದ್ದ ಯುಟ್ಯೂಬರ್‌ನನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೊಮ್ಮನಹಳ್ಳಿ ನಿವಾಸಿ ಶಫಿ ಬಂಧಿತ.

ಯುಟ್ಯೂಬರ್‌ ಆಗಿರುವ ಆರೋಪಿ, ನಗರದ ಹಲವು ಬೇಕರಿಗಳಿಗೆ ಹೋಗಿ ಸ್ವತ್ಛತೆಯಿಲ್ಲ, ನಿರ್ವಹಣೆ ಸರಿಯಿಲ್ಲ ಎಂದು ಮಾಲಿಕರನ್ನು ಬೆದರಿಸುತ್ತಿದ್ದ. ಏಕಾಏಕಿ ಬೇಕರಿಗಳ ಒಳ ನುಗ್ಗಿ ವಿಡಿಯೋ ಚಿತ್ರೀಕರಿಸಿಕೊಂಡು ಬಿಬಿಎಂಪಿ ಅಧಿಕಾರಿಗಳಿಗೆ ಹೇಳಿ ಪರವಾನಗಿ ರದ್ದು ಮಾಡಿಸುವುದಾಗಿ ಬ್ಲ್ಯಾಕ್‌ವೆುàಲ್‌ ಮಾಡುತ್ತಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಆರೋಪಿ ಇತ್ತೀಚೆಗೆ ಹುಳಿಮಾವು ಬಳಿಯ ಅಕ್ಷಯನಗರದ ಬೇಕರಿಗಳ ಮಾಲಿಕರಿಗೆ ಬೆದರಿಕೆ ಹಾಕಿದ್ದ. ಯು-ಟ್ಯೂಬ್‌ ಚಾನಲ್‌ನ ಪತ್ರಕರ್ತ ಎಂದು ಹೇಳಿಕೊಂಡು ಬೇಕರಿ ಮಾಲಿಕರಿಂದ 10 ಸಾವಿರ ರೂ. ಸುಲಿಗೆ ಮಾಡಿದ್ದ. ಇದೇ ರೀತಿ ಮತ್ತೂಂದು ಬೇಕರಿಯ ಮಾಲಿಕರನ್ನು ಬೆದರಿಸಿ ಹಣ ಸುಲಿಗೆಗೆ ಯತ್ನಿಸಿದ್ದ. ಹಣ ಕೊಡಲು ನಿರಾಕರಿಸಿದ ಬೇಕರಿ ಮಾಲಿಕರು ಯುಟ್ಯೂಬರ್‌ ಶಫಿಯನ್ನು ಹಿಡಿದು ಠಾಣೆಗೆ ಮಾಹಿತಿ ನೀಡಿದರು. ಆಗ ಆರೋಪಿ, ನನಗೆ ಎಂಎಲ್ಎ ಗೊತ್ತು, ಸ್ಥಳೀಯ ರಾಜಕೀಯ ಮುಖಂಡರ ಪರಿಚಯ ಇದೆ ಎಂದೆಲ್ಲ ಧಮ್ಕಿ ಹಾಕಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರು, ಆರೋಪಿಯನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದಾಗ ಸುಲಿಗೆ ಪ್ರಕರಣ ಬೆಳಕಿಗೆ ಬಂದಿದೆ. ‌

ಆರೋಪಿ ಇದೇ ರೀತಿ ಸುಮಾರು 50 ಬೇಕರಿ ಮಾಲಿಕರನ್ನು ಬೆದರಿಸಿ ಹಣ ಸುಲಿಗೆ ಮಾಡಿದ್ದಾನೆ ಎಂದು ಹೇಳಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಆರೋಪಿಯಿಂದ ಮೊಬೈಲ್‌, ನಕಲಿ ಗುರುತಿನ ಚೀಟಿ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-manu

Ramp Walk ಮಾಡಿ ಗಮನ ಸೆಳೆದ ಮನು ಭಾಕರ್ : ವಿಡಿಯೋ ನೋಡಿ

Video: ಪ್ರಧಾನಿ ಮೋದಿ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನೇ ಎಗರಿಸಿದ ಕಳ್ಳ

Video: ಪ್ರಧಾನಿ ಮೋದಿ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನೇ ಎಗರಿಸಿದ ಕಳ್ಳ

1-crick

1st Test; ಪಾಕಿಸ್ಥಾನಕ್ಕೆ ತವರಿನಲ್ಲೇ ಶಾಕ್:ಇಂಗ್ಲೆಂಡ್ ಗೆ ಇನಿಂಗ್ಸ್ & 47 ರನ್‌ಗಳ ಜಯ

Puttur: ಕ್ಯಾಂಪ್ಕೋದಲ್ಲೂ ಹೊಸ ಅಡಿಕೆ ಧಾರಣೆ ಏರಿಕೆ

Puttur: ಕ್ಯಾಂಪ್ಕೋದಲ್ಲೂ ಹೊಸ ಅಡಿಕೆ ಧಾರಣೆ ಏರಿಕೆ

Train: ಕುಂದಾಪುರದಿಂದ ತಿರುಪತಿಗೆ ರೈಲು: ವಿಜಯ ದಶಮಿಯಂದು ಚಾಲನೆ

Train: ಕುಂದಾಪುರದಿಂದ ತಿರುಪತಿಗೆ ರೈಲು: ವಿಜಯ ದಶಮಿಯಂದು ಚಾಲನೆ

Haryana: ಅಕ್ಟೋಬರ್ 15ರಂದು ಹರ್ಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ

Haryana: ಅಕ್ಟೋಬರ್ 15ರಂದು ಹರ್ಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ

10-fonts

UV Fusion: ಫಾಂಟ್‌ ಎಂದು ಉಪೇಕ್ಷಿಸಬೇಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-dasara

Dasara ಹಬ್ಬಕ್ಕೆ ಊರಿಗೆ ಹೊರಟ ಲಕ್ಷಾಂತರ ಜನ: ಹಲವೆಡೆ ಭಾರೀ ಸಂಚಾರ ದಟ್ಟಣೆ

5-bng

Bengaluru: ಜಾಗತಿಕ ವಿವಿ ರ್‍ಯಾಂಕಿಂಗ್‌: ದೇಶದಲ್ಲಿ ಐಐಎಸ್‌ಸಿಗೆ ಅಗ್ರಪಟ್ಟ

4-bng

Bengaluru: ಆರ್‌ಬಿಐಗೇ ನಕಲಿ ನೋಟು ನೀಡಿ ವಂಚನೆ ಯತ್ನ

5

Fraud: ವಸಿಷ್ಠ ಬ್ಯಾಂಕ್ ಠೇವಣಿದಾರರ ಹಣದಲಿ ಆಸ್ತಿ ಖರೀದಿ!

Arrested: ವಿವಾಹ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ

Arrested: ವಿವಾಹ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-manu

Ramp Walk ಮಾಡಿ ಗಮನ ಸೆಳೆದ ಮನು ಭಾಕರ್ : ವಿಡಿಯೋ ನೋಡಿ

9

Mangaluru: ಜರ್ಮನಿ ಪಾರ್ಲಿಮೆಂಟ್‌ ಪುಸ್ತಕದಲ್ಲಿ ಸ್ಪೀಕರ್‌ ಖಾದರ್‌ ಸಹಿ

Video: ಪ್ರಧಾನಿ ಮೋದಿ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನೇ ಎಗರಿಸಿದ ಕಳ್ಳ

Video: ಪ್ರಧಾನಿ ಮೋದಿ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನೇ ಎಗರಿಸಿದ ಕಳ್ಳ

12-hosapete

Hosapete ರೋಟರಿ ಕ್ಲಬ್ ನೂತನ ಸಭಾಂಗಣಕ್ಕೆ ರತನ್ ಟಾಟಾ ಹೆಸರು

8

ಇಂದ್ರಾಳಿ ಮೇಲ್ಸೇತುವೆ ನ.10ರೊಳಗೆ ಪೂರ್ಣಗೊಳಿಸಲು ಡಿಸಿ ನಿರ್ದೇಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.