ಕೋವಿಡ್‌ 19 ನಿರ್ವಹಣೆಗೆ ಅಷ್ಟ ದಿಕ್ಪಾಲಕರು


Team Udayavani, Jul 10, 2020, 6:23 AM IST

kovid-bbmp

ಬೆಂಗಳೂರು: ಬೆಂಗಳೂರಿನಲ್ಲಿ ಕೋವಿಡ್‌ ನಿಯಂತ್ರಣ ಕಾರ್ಯದ ಪರಿಣಾಮಕಾರಿ ಮೇಲ್ವಿಚಾರಣೆಗಾಗಿ ಬಿಬಿಎಂಪಿಯ ಎಂಟು ವಲಯಗಳ ಉಸ್ತುವಾರಿಯನ್ನು ನಗರದ ಏಳು ಸಚಿವರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ  ಕಾರ್ಯದರ್ಶಿಯೊಬ್ಬರಿಗೆ ವಹಿಸುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿಕೋವಿಡ್‌ 19 ನಿಯಂತ್ರಣಕ್ಕೆ ಶನಿವಾರ ಹಾಗೂ ಭಾನುವಾರ ಲಾಕ್‌ ಡೌನ್‌ ಸೇರಿದಂತೆ ಕೆಲವು ಕ್ರಮಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದು ನಗರದ  ಎಂಟು ವಲಯಗಳಿಗೆ ಒಬೊಬ್ಬ ಸಚಿವರಿಗೆ ಉಸ್ತುವಾರಿ ವಹಿಸುವ ಬಗ್ಗೆ ತೀರ್ಮಾನಿಸಲಾಯಿತು.

ಎಂಟು ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿವಲಯಕ್ಕೆ ಒಬ್ಬ ಸಚಿವರುಗಳಂತೆ ಉಪಮುಖ್ಯಮಂತ್ರಿ ಡಾ. ಸಿ.ಎನ್‌.ಅಶ್ವತ್ಥ  ರಾಯಣ, ಸಚಿವರಾದ  ವಿ.ಸೋಮಣ್ಣ, ಆರ್‌.ಅಶೋಕ್‌, ಎಸ್‌.ಸುರೇಶ್‌ ಕುಮಾರ್‌, ಎಸ್‌.ಟಿ.ಸೋಮಶೇಖರ್‌, ಕೆ.ಗೋಪಾಲಯ್ಯ, ಬಿ.ಎ. ಬಸವರಾಜು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್‌. ಆರ್‌.ವಿಶ್ವನಾಥ್‌  ಅವರನ್ನು ನೇಮಿಸಲಾಗಿದೆ ಎಂದು ಕೋವಿಡ್‌ 19 ಉಸ್ತುವಾರಿ ಹೊತ್ತಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ.

ಪೂರ್ವ ವಲಯದ ಉಸ್ತುವಾರಿಯಾಗಿ ವಿ.ಸೋಮಣ್ಣ, ದಕ್ಷಿಣ ವಲಯಕ್ಕೆ ಆರ್‌.ಅಶೋಕ್‌, ರಾಜರಾಜೇಶ್ವರಿನಗರ ವಲಯಕ್ಕೆ ಎಸ್‌.ಟಿ. ಸೋಮಶೇಖರ್‌,  ದಾಸರಹಳ್ಳಿ ವಲಯಕ್ಕೆ ಕೆ.ಗೋಪಾಲಯ್ಯ, ಮಹದೇವಪುರ ವಲಯಕ್ಕೆ ಬಿ.ಎ.ಬಸವರಾಜು, ಯಲಹಂಕ ವಲಯಕ್ಕೆ ಎಸ್‌.ಆರ್‌.ವಿಶ್ವನಾಥ್‌ ಅವರನ್ನು ಉಸ್ತುವಾರಿಯಾಗಿ  ನಿಯೋಜಿಸುವ ಸಾಧ್ಯತೆ ಇದೆ. ಪೂರ್ವ ವಲಯಕ್ಕೆ ಸಂಬಂಧಪಟ್ಟಂತೆ ವಿ.ಸೋಮಣ್ಣ, ಯಲಹಂಕಕ್ಕೆ ಸಂಬಂಧಪಟ್ಟಂತೆ ಎಸ್‌. ಆರ್‌.ವಿಶ್ವನಾಥ್‌ ಗುರುವಾರದಿಂದಲೇ ಸಭೆಗಳನ್ನು ನಡೆಸಲಾರಂಭಿಸಿದ್ದಾರೆ ಎನ್ನಲಾಗಿದೆ.

ಒಬ್ಬ ಹಿರಿಯ  ಐಎಎಸ್‌ ಅಧಿಕಾರಿ, ಕಾರ್ಪೊರೇಟರ್‌ ಗಳನ್ನೊಳಗೊಂಡ ಟಾಸ್ಕ್ಫೋರ್ಸ್‌ನ ತಂಡಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಲಿವೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಟ್ರೇಸಿಂಗ್‌ ಮತ್ತು ಟ್ರ್ಯಾಕಿಂಗ್‌ ಮಾಡಲು ಕಷ್ಟಸಾಧ್ಯವಾಗಿದೆ. ಇನ್ನು ಮುಂದೆ ಇದನ್ನು ಕಟ್ಟುನಿಟ್ಟಾಗಿ ನಿರ್ವಹಿಸಲಾಗುವುದು. ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಸುಧಾಕರ್‌ ಹೇಳಿದರು.

ಎಂಟು ಐಎಎಸ್‌ ಅಧಿಕಾರಿಗಳಿಗೂ ಜವಾಬ್ದಾರಿ: ರಾಜಧಾನಿಯಲ್ಲಿ ಕೋವಿಡ್‌- 19 ಸೋಂಕು ಹರಡುವಿ  ಕೆಯನ್ನು ಪರಿಣಾಮಕಾರಿ ನಿಯಂತ್ರಣಕ್ಕಾಗಿ ಬಿಬಿಎಂ ಪಿಯ ಎಂಟು ವಲಯಗಳಲ್ಲಿ ಮೇಲ್ವಿಚಾರಣೆಗಾಗಿ ಎಂಟು ಮಂದಿ  ಹಿರಿಯ ಐಎಎಸ್‌ ಅಧಿಕಾರಿಗಳನ್ನು ವಲಯ ಸಂಯೋಜಕರಾಗಿ ಸರ್ಕಾರ ನಿಯೋಜಿಸಿದೆ. ನಗರದಲ್ಲಿ ಸೋಂಕು ನಿಯಂತ್ರಣ ನಿರ್ವಹಣಾ ಕ್ರಮಗಳ ಮೇಲ್ವಿಚಾರಣೆ, ಪರಿಶೀಲನೆ ಹಾಗೂ ತಕ್ಷಣದ ನಿರ್ಧಾರಗಳನ್ನು ತೆಗೆದುಕೊಳ್ಳಲು  ಎಂಟು ವಲಯಗಳಿಗೆ ವಲಯ ಸಂಯೋಜಕರನ್ನಾಗಿ ಹಿರಿಯ ಐಎಎಸ್‌ ಅಧಕಾರಿಗಳನ್ನು ನಿಯೋಜಿಸಿ ಕಾರ್ಯೋನ್ಮುಖರಾಗುವಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್‌ ಗುರುವಾರ ಆದೇಶ ಹೊರಡಿಸಿದ್ದಾರೆ.

ಈ ಎಂಟು  ಮಂದಿ ವಲಯ ಸಂಯೋಜಕರು ಬಿಬಿಎಂಪಿ ಆಯುಕ್ತರ ಮೇಲ್ವಿಚಾರಣೆಯಲ್ಲಿ ಕಾರ್ಯ ನಿರ್ವಹಿಸಬೇಕು. ಹಾಗೆಯೇ ಪಾಲಿಕೆಯ ಎಲ್ಲ ಜಂಟಿ ಆಯುಕ್ತರು, ಅಕಾರಿಗಳು, ಸಿಬ್ಬಂದಿ ಸರ್ಕಾರ ಹಾಗೂ ಸರ್ಕಾರದ ನಿಗಮ/ ಮಂಡಳಿಯ  ಅಧಿಕಾರಿ, ಸಿಬ್ಬಂದಿ ಕೂಡ ವಲಯ ಸಂಯೋಜಕರಿಗೆ ಅಗತ್ಯ ನೆರವು ನೀಡುವಂತೆಯೂ ಆದೇಶದಲ್ಲಿ ಸೂಚಿಸಿದ್ದಾರೆ.

ಶೂನ್ಯ ಮರಣ ಪ್ರಮಾಣ: ಬೆಂಗಳೂರಿನಲ್ಲಿ ಗುರುವಾರದಂದು 606 ಜನರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಆದರೆ ಯಾವುದೇ ಸಾವು ಸಂಭವಿಸಿಲ್ಲ. ಈಗಲೂ ರಾಜ್ಯದ ಮತ್ತು ಬೆಂಗಳೂರಿನ ಮರಣ ಪ್ರಮಾಣ ರಾಷ್ಟ್ರೀಯ  ಸರಾಸರಿಗಿಂತ ಕಡಿಮೆ ಇದೆ. ಶೂನ್ಯ ಮರಣಪ್ರಮಾಣ ಸಾಧಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಸಚಿವರು ಹೇಳಿದರು. 1ಲಕ್ಷ ಆಂಟಿಜೆನ್‌ ಕಿಟ್‌ ತರಿಸಲಾಗಿದ್ದು ವಾರಾಂತ್ಯದಲ್ಲಿ ಬೆಂಗಳೂರಿನಲ್ಲೇ 30-40 ಸಾವಿರ  ಟೆಸ್ಟ್‌  ನಡೆಸಲಾಗುವುದು ಇದರಿಂದ ಸೋಂಕಿತರ ತ್ವರಿತ ಪತ್ತೆಗೆ ಸಹಾಯವಾಗಲಿದೆ ಎಂದು ಡಾ.ಸುಧಾಕರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.