Crime: ಅಪ್ಪನ ಕಣ್ಣು ಕಿತ್ತಿದ್ದ ಮಗನಿಗೆ ಜೈಲು
ತನ್ನ ಹೆಸರಿಗೆ ಆಸ್ತಿ ವರ್ಗಾವಣೆ ಮಾಡಿಲ್ಲ ಎಂದು ಮಾರಣಾಂತಿಕ ಹಲ್ಲೆ
Team Udayavani, Nov 23, 2023, 3:46 PM IST
ಬೆಂಗಳೂರು: ಆಸ್ತಿ ವಿಚಾರಕ್ಕೆ ತಂದೆಯ ಕಣ್ಣು ಕಿತ್ತು ಹಾಕಿ ಹಲ್ಲೆ ನಡೆಸಿದ್ದ ಮಗನಿಗೆ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ 9 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 42 ಸಾವಿರ ರೂ. ದಂಡ ವಿಧಿಸಿದೆ.
ಪ್ರಕರಣದಲ್ಲಿ ಅಭಿಷೇಕ್ ಚೇತನ್ (44) ಶಿಕ್ಷೆಗೊಳಗಾದ ಅಪರಾಧಿ.
ಮಾರಣಾಂತಿಕ ಹಲ್ಲೆ, ಕೊಲೆ ಯತ್ನ, ಆಸ್ತಿ ವಿಚಾರವಾಗಿ ನಂಬಿಕೆ ದ್ರೋಹ ಮತ್ತು ಶಾಂತಿಭಂಗ ಮತ್ತು ಆಸ್ತಿ ಹಾನಿ ಪ್ರಕರಣಕ್ಕೆ ಸಂಬಂಧ 9 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 42 ಸಾವಿರ ರೂ. ದಂಡ ವಿಧಿಸಿದೆ.ದಂಡ ಮೊತ್ತದ ಪೈಕಿ 40 ಸಾವಿರ ರೂ. ಅನ್ನು ಪ್ರಕರಣ ಸಂತ್ರಸ್ತರಾದ ಅಪ ರಾಧಿಯ ತಂದೆ ಪರಮೇಶ್ಗೆ ನೀಡುವಂತೆ ಕೋರ್ಟ್ ಸೂಚಿಸಿದೆ.
2018ರ ಆ.29ರಂದು ಅಪರಾಧಿ ಪರಮೇಶ್ ತನ್ನ ಹೆಸರಿಗೆ ಆಸ್ತಿ ವರ್ಗಾವಣೆ ಮಾಡಿಲ್ಲ ಎಂಬ ಕಾರಣಕ್ಕೆ ತನ್ನ ತಂದೆ ಪರಮೇಶ್ (66) ಮೇಲೆ ಹಲ್ಲೆ ನಡೆಸಿ ಕಣ್ಣು ಕಿತ್ತುಹಾಕಿದ್ದ.
ಬನಶಂಕರಿಯ ಶಾಕಾಂಬರಿ ನಗರದಲ್ಲಿ ಈ ಘಟನೆ ನಡೆದಿತ್ತು. ಜೆ.ಪಿ.ನಗರ ಠಾಣಾ ಪೊಲೀಸರು ಎಫ್ಐಆರ್ ದಾಖಲಿಸಿ ಅಭಿಷೇಕ್ನನ್ನು ಬಂಧಿಸಲಾಗಿತ್ತು. ನಂತರ ತನಿಖೆ ಪೂರ್ಣಗೊಳಿಸಿ, ಆತನ ವಿರುದ್ಧ ಆರೋಪಪಟ್ಟಿ ಕೂಡ ಸಲ್ಲಿಸಲಾಗಿತ್ತು. ಆದರೆ, ಜಾಮೀನು ಮೇಲೆ ಹೊರಬಂದಿದ್ದ ಅಭಿಷೇಕ್, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಪ್ರಕರಣದ ವಿಚಾರಣೆ ಮುಂದುವರಿಸಿದ್ದ ನಗರದ 57ನೇ ಹೆಚ್ಚುವರಿ ಜಿÇÉಾ ಮತ್ತು ಸೆಷನ್ಸ್ ನ್ಯಾಯಾಲಯವು ಇದೀಗ ಅಭಿಷೇಕ್ ತಂದೆಯ ಮೇಲೆ ಹಲ್ಲೆ ನಡೆಸಿ, ಕಣ್ಣು ಕಿತ್ತುಹಾಕಿರುವುದು ಸಾಕ್ಷ್ಯಗಳ ಸಮೇತ ದೃಢಪಟ್ಟಿದೆ ಎಂದು ತೀರ್ಮಾನಿಸಿ ಶಿಕ್ಷೆ ವಿಧಿಸಿದೆ.
ತಲೆ ಮರೆಸಿಕೊಂಡಿದ್ದ ಅಪರಾಧಿಯನ್ನು ಪೊಲೀಸರು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಸದ್ಯ ನ್ಯಾಯಾಲಯವು ಅಪರಾಧಿಯನ್ನು ಜೈಲಿಗೆ ಕಳುಹಿಸಿದೆ. ಸರ್ಕಾರಿ ಅಭಿಯೋಜಕರಾಗಿ ಕೆ.ಎಸ್.ವೀಣಾ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Flipkart Big Billion Day ಸೆ. 27 ರಿಂದ ಆರಂಭ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ
Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.