Cyber crime: ಬೆಂಗಳೂರಿಗರಿಗೆ 142 ಕೋಟಿ ರೂ. ವಂಚನೆ


Team Udayavani, Oct 14, 2023, 12:40 PM IST

tdy-16

ಬೆಂಗಳೂರು: ಒಂದೂವರೆ ವರ್ಷದಲ್ಲಿ ರಾಜಧಾನಿ ಬೆಂಗಳೂರಿಗರ 141.94 ಕೋಟಿ ರೂ. ಸೈಬರ್‌ ವಂಚಕರ ಪಾಲಾಗಿರುವುದು ಆತಂಕ ಹುಟ್ಟಿಸಿದೆ.ಪ್ರತಿ ನಿತ್ಯ ಸರಾಸರಿ 15 ಮಂದಿ ಬೆಂಗಳೂರಿಗರು ಸೈಬರ್‌ ಕಳ್ಳರ ಗಾಳಕ್ಕೆ ಸಿಲುಕಿ ಲಕ್ಷಾಂತರ ರೂ. ಕಳೆದುಕೊಳ್ಳುತ್ತಿದ್ದಾರೆ. ವಂಚನೆಗೊಳಗಾದ ಸಾವಿರಾರು ಸಂತ್ರಸ್ತರು ಸೈಬರ್‌ ಕ್ರೈಂ ಠಾಣೆಗೆ ಅಲೆದು ದುಡ್ಡು ವಾಪಸ್‌ ಬರುವ ನಿರೀಕ್ಷೆ ಕಳೆದುಕೊಂಡಿದ್ದಾರೆ.

ಬೆಂಗಳೂರೊಂದರಲ್ಲೇ 2022ರಲ್ಲಿ 76.94 ಕೋಟಿ ರೂ. ಹಾಗೂ 2023ರಲ್ಲಿ ಕಳೆದ 6 ತಿಂಗಳಿನಲ್ಲೇ 65 ಕೋಟಿ ರೂ. ಸೈಬರ್‌ ಕಳ್ಳರ ಪಾಲಾಗಿದೆ. ಇತ್ತ ಎಫ್ಐಆರ್‌ ದಾಖಲಿಸಿಕೊಂಡಿರುವ ಖಾಕಿ ಕಾರ್ಯಾಚರಣೆ ನಡೆಸದೇ ಸೈಲೆಂಟ್‌ ಆಗಿದ್ದು, ಸಂತ್ರಸ್ತರ ಗೋಳು ಕೇಳುವವರೇ ಇಲ್ಲದಂತಾಗಿದೆ. ಸಿಲಿಕಾನ್‌ ಸಿಟಿಯಲ್ಲಿ 2017ರಿಂದ ಈಚೆಗೆ 50,027 ಸೈಬರ್‌ ವಂಚನೆಗಳು ನಡೆದರೂ ಶಿಕ್ಷೆಯಾಗಿರುವುದು ಕೇವಲ 26 ವಂಚಕರಿಗೆ ಮಾತ್ರ.

ಏನಿದು ಪಾರ್ಟ್‌ ಟೈಂ ಜಾಬ್‌ ವಂಚನೆ?: ಬೆಂಗಳೂರಿನಲ್ಲಿ ಕಳೆದ 4 ತಿಂಗಳಿಂದ ಪಾರ್ಟ್‌ ಟೈಂ ಉದ್ಯೋಗದ ಹೆಸರಲ್ಲಿ ನಡೆಯುತ್ತಿರುವ ಸೈಬರ್‌ ವಂಚನೆ ಮಿತಿ ಮೀರಿದ್ದು, ಇದರ ಪ್ರಮಾಣ ಶೇ.75ರಷ್ಟಿದೆ ಎಂದು ಸೈಬರ್‌ ಕ್ರೈಂ ಪೊಲೀಸ್‌ ಮೂಲಗಳು ತಿಳಿಸಿವೆ. ಪಾರ್ಟ್‌ ಟೈಂ ಉದ್ಯೋಗ ಕೊಡಿಸುವ ನೆಪದಲ್ಲಿ ಸೈಬರ್‌ ಕಳ್ಳರು ಮೊಬೈಲ್‌ಗೆ ಕಳುಹಿಸುವ ಸಂದೇಶಗಳಿಗೆ ಮರುಳಾಗಿ ಪ್ರತಿಕ್ರಿಯಿಸಿದರೆ ಕೂಡಲೇ ನಿಮ್ಮನ್ನು ಅವರ ಟೆಲಿಗ್ರಾಂ ಗ್ರೂಪ್‌ವೊಂದಕ್ಕೆ ಸೇರ್ಪಡೆ ಮಾಡುತ್ತಾರೆ. ಲಿಂಕ್‌ ಮೂಲಕ ಆನ್‌ಲೈನ್‌ ಟ್ರೇಡಿಂಗ್‌ನಲ್ಲಿ ನಿಮ್ಮನ್ನು ರಿಜಿಸ್ಟ್ರಾರ್‌ ಮಾಡಿಸುವುದಾಗಿ ಹೇಳುತ್ತಾರೆ. ಇದಕ್ಕೆ ನೀವು ಸಮ್ಮತಿಸಿದರೆ, “ತಾವು ಸೂಚಿಸುವ ಖಾತೆಗೆ ಲಕ್ಷಾಂತರ ರೂ. ಜಮೆ ಮಾಡಿದರೆ ಟಾಸ್ಕ್ಗಳ ಮೂಲಕ ಹಣ ದ್ವಿಗುಣಗೊಳಿಸಬಹುದು’ ಎಂದು ನಂಬಿಸುತ್ತಾರೆ. ದುಡ್ಡು ಪಾವತಿಸಿದ ಕೂಡಲೇ ಕಮೀಷನ್‌ ರೂಪದಲ್ಲಿ ಸ್ವಲ್ಪ ದುಡ್ಡು ನಿಮ್ಮ ಖಾತೆಗೆ ಜಮೆಯಾಗುತ್ತದೆ. ಇದಾದ ಬಳಿಕ ಸೈಬರ್‌ ಕಳ್ಳರು ಅಸಲಿ ಆಟ ಶುರುಮಾಡುತ್ತಾರೆ. ನಿಮ್ಮ ಅಸಲು ದುಡ್ಡು ಡ್ರಾ ಮಾಡಬೇಕಾದರೆ ಇನ್ನಷ್ಟು ಹಣ ಜಮೆ ಮಾಡುವಂತೆ ಪೀಡಿಸಿ ಹಂತ-ಹಂತವಾಗಿ ಲಕ್ಷಾಂತರ ರೂ. ಲಪಟಾಯಿಸುತ್ತಾರೆ. ಇದಾದ 3-4 ದಿನಗಳ ಬಳಿಕ ಸೈಬರ್‌ ಕಳ್ಳರು ಸಂಪರ್ಕಕ್ಕೆ ಸಿಗುವುದಿಲ್ಲ .

ರಾಜ್ಯ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸುವ ವಂಚಕರು: ಬೆಂಗಳೂರು ಪೊಲೀಸರು ಪಾರ್ಟ್‌ ಟೈಂ ಜಾಬ್‌ ವಂಚನೆಯ ಜಾಡು ಹಿಡಿಯುವ ನಿಟ್ಟಿನಲ್ಲಿ ಕೆಲವು ತಿಂಗಳ ಹಿಂದೆ ಕಾರ್ಯಾಚರಣೆಗೆ ಇಳಿದಾಗ ಹರಿಯಾಣ, ರಾಜಸ್ತಾನ ಮತ್ತು ಗುಜರಾತ್‌ ರಾಜ್ಯಗಳಲ್ಲಿ ಸೈಬರ್‌ ಕಳ್ಳರ ಟವರ್‌ ಲೊಕೇಶನ್‌ ಪತ್ತೆಯಾಗಿತ್ತು. ಪೊಲೀಸರು ಜಿಯೋ ಲೊಕೇಶನ್‌ ಮೂಲಕ ಉತ್ತರ ಭಾರತಕ್ಕೆ ತೆರಳಿ ಅಲ್ಲಿನ ಪೊಲೀಸರನ್ನು ಸಂಪರ್ಕಿಸಿದರೆ ಈ ಲೊಕೇಶನ್‌ ನಮ್ಮಲ್ಲಿ ಬರುವುದಿಲ್ಲ ಎಂದು ಪಕ್ಕದ ರಾಜ್ಯಗಳತ್ತ ಬೊಟ್ಟು ಮಾಡಿ ಸಾಗಹಾಕಿದ್ದರು. ಇಲ್ಲಿನ ಪೊಲೀಸರು ತಾಂತ್ರಿಕ ತನಿಖೆ ನಡೆಸಿದಾಗ, “ವಂಚಕರು ಒಂದು ರಾಜ್ಯದಲ್ಲಿ ನಕಲಿ ದಾಖಲೆ ಮೂಲಕ ಸಿಮ್‌ ಖರೀದಿಸಿ, ಮತ್ತೂಂದು ರಾಜ್ಯದಲ್ಲಿ ಕುಳಿತುಕೊಂಡು ಕೃತ್ಯ ಎಸಗುತ್ತಾರೆ. ಪೊಲೀಸರ ಕಣ್ತಪ್ಪಿಸಲೆಂದೇ ಸೈಬರ್‌ ವಂಚಕರು ಈ ಆಟವಾಡುತ್ತಾರೆ. ನಂತರ ಅಲ್ಲಿಂದಲೂ ಪರಾರಿಯಾಗಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದಾರೆ ಎಂಬುದು ಖಾಕಿ ತನಿಖೆಯಲ್ಲಿ ಗೊತ್ತಾಗಿದೆ.

ಸಿಲಿಕಾನ್‌ ಸಿಟಿಯ ಜನರೇ ಸೈಬರ್‌ ಕಳ್ಳರ ಟಾರ್ಗೆಟ್‌: ಉತ್ತರ ಭಾರತದ ರಾಜಸ್ತಾನ, ಜಾರ್ಖಂಡ್‌, ಗುಜರಾತ್‌, ಪಶ್ಚಿಮ ಬಂಗಾಳ, ದೆಹಲಿ, ಮುಂಬೈ, ಬಿಹಾರ ರಾಜ್ಯಗಳ ಗ್ರಾಮೀಣ ಭಾಗಗಳಲೇ ಕುಳಿತುಕೊಂಡು ಆನ್‌ಲೈನ್‌ ಮೂಲಕ ಸೈಬರ್‌ ಕಳ್ಳರು ಬೆಂಗಳೂರಿಗರ ದುಡ್ಡು ದೋಚುವ ಸಂಗತಿ ಜಗತ್‌ಜಾಹಿರವಾಗಿದೆ. ದೇಶದಲ್ಲೇ ಅತ್ಯಧಿಕ ಟೆಕಿಗಳು, ಖಾಸಗಿ ಕಂಪನಿ ಉದ್ಯೋಗಿಗಳನ್ನು ಒಳಗೊಂಡಿರುವ ಐಟಿ-ಬಿಟಿ ಸಿಟಿಯೇ ಇವರ ಹಾಟ್‌ಸ್ಪಾಟ್‌. ಎಂಜಿನಿಯರಿಂಗ್‌, ಎಂ.ಟೆಕ್‌ ಪದವೀಧರರೇ ಈ ಸೈಬರ್‌ ಗ್ಯಾಂಗ್‌ನ ಸೂತ್ರದಾರರು. ಪಿಯು ವ್ಯಾಸಂಗ ಮೊಟಕುಗೊಳಿಸಿದವರಿಗೆ ತರಬೇತಿ ಕೊಟ್ಟು ವೇತನವನ್ನೂ ಕೊಟ್ಟು ಈ ದಂಧೆಗೆ ಬಳಸಿಕೊಳ್ಳುತ್ತಾರೆ. ಸಾಫ್ಟ್ ವೇರ್‌ ಎಂಜಿನಿಯರ್‌ಗಳೂ ತಮ್ಮ ಅರಿವಿಗೆ ಬಾರದೇ ಸೈಬರ್‌ ಕಳ್ಳರಿಗೆ ನೆರವಾಗುತ್ತಿದ್ದಾರೆ. ಡಾಟಾ ಅನಲೀಸಿಸ್‌ ಮಾಡಿ ಬೆಂಗಳೂರಿಗರ ಮೊಬೈಲ್‌ ನಂಬರ್‌ ಪತ್ತೆ ಹಚ್ಚಲೆಂದೇ ಸೈಬರ್‌ ಕಳ್ಳರಲ್ಲಿ ಪ್ರತ್ಯೇಕ ತಂಡವಿದೆ. ಕರೆ ಮಾಡಿ ಟ್ರ್ಯಾಪ್‌ ಮಾಡುವುದೇ ಬೇರೆ ತಂಡ ಎಂದು ಸೈಬರ್‌ ಕ್ರೈಂ ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ.

ಬೆಂಗಳೂರಿನಲ್ಲಿ ಸೈಬರ್‌ ಅಪರಾಧಕ್ಕೆ ಬ್ರೇಕ್‌ ಹಾಕುವ ನಿಟ್ಟಿನಲ್ಲಿ ಎಲ್ಲ ಪೊಲೀಸ್‌ ಠಾಣೆಗಳಲ್ಲೂ ದೂರು ನೀಡಲು ಅವಕಾಶ ಒದಗಿಸಲಾ ಗಿದೆ. ವಂಚನೆಗೊಳಗಾದ ಗಂಟೆಯೊಳಗೆ 1930ಗೆ ಕರೆ ಮಾಡಿ ಮಾಹಿತಿ ನೀಡಿದರೆ ವಂಚನೆಗೊಳಗಾದವರ ದುಡ್ಡನ್ನು ಫ್ರಿಜ್‌ ಮಾಡಬಹುದು. ಟಾಸ್ಕ್ ಮೂಲಕ ಹಣ ದ್ವಿಗುಣಗೊಳಿಸುವ ಸೈಬರ್‌ ವಂಚನೆ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಬೇಕು. – ಬಿ.ದಯಾನಂದ್‌, ಬೆಂಗಳೂರು ಪೊಲೀಸ್‌ ಆಯುಕ್ತ

 

ಟಾಪ್ ನ್ಯೂಸ್

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

PMFBY ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

1-24-saturday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್‌ಟಿಯೂ ಅಗತ್ಯ

Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್‌ಟಿಯೂ ಅಗತ್ಯ

Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್‌ನಲ್ಲಿ ಮಾತ್ರವೇ ಲಭ್ಯ

Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್‌ನಲ್ಲಿ ಮಾತ್ರವೇ ಲಭ್ಯ

Uppinangady ಮನೆಯೊಡತಿಯ ಆತ್ಮಹತ್ಯೆ ತಡೆದ ಶ್ವಾನ!

Uppinangady ಮನೆಯೊಡತಿಯ ಆತ್ಮಹತ್ಯೆ ತಡೆದ ಶ್ವಾನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dengue

Bengaluru: ಡೆಂಘೀ ತಡೆಗೆ ಮನೆ ಮನೆ ಸಮೀಕ್ಷೆ- ಮುಖ್ಯ ಆಯುಕ್ತ

Prajwal Revanna ಗೆ ಮತ್ತೆ ಜೈಲು… ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Prajwal Revanna ಗೆ ಜೈಲೇ ಗತಿ… ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Ramachandrapura-matha

Sri Raghaweshwara Swamiji: 29ಕ್ಕೆ ಭಾವರಾಮಾಯಣ ರಾಮಾವತರಣ ಕೃತಿ ಬಿಡುಗಡೆ

Pavithra

Renukaswamy case: ಪುತ್ರಿ ನೋಡಿ ಪವಿತ್ರಾ ಕಣ್ಣೀರು; ಕ್ಷಮೆಯಾಚನೆ

Renukaswamy

Renukaswamy, 17 ಆರೋಪಿಗಳ ಹೆಸರಲ್ಲಿ ಡೂಪ್ಲಿಕೇಟ್‌ ಸಿಮ್‌ ಖರೀದಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

PMFBY ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

1-24-saturday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್‌ಟಿಯೂ ಅಗತ್ಯ

Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್‌ಟಿಯೂ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.