![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jun 18, 2020, 5:32 AM IST
ಬೆಂಗಳೂರು: ಸಿಗರೇಟ್ ವ್ಯಾಪಾರಿಗಳಿಂದ ಹಣ ಸುಲಿಗೆ ಆರೋಪ ಸಂಬಂಧ ಎಸಿಪಿಯಾಗಿದ್ದ ಪ್ರಭು ಶಂಕರ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಪ್ರತ್ಯೇಕ 3 ಎಫ್ಐಆರ್ಗಳಿಗೆ ನೀಡಲಾಗಿರುವ ತಡೆಯಾಜ್ಞೆಯನ್ನು ಹೈಕೋರ್ಟ್ ಜೂ.23ರವರೆಗೂ ವಿಸ್ತರಿಸಿದೆ.
ಎಸಿಬಿ ತಮ್ಮ ವಿರುದ್ಧ ದಾಖಲಿಸಿರುವ 3ಪ್ರತ್ಯೇಕಎಫ್ಐಆರ್ ರದ್ದುಪಡಿಸುವಂತೆ ಕೋರಿ ಪ್ರಭು ಶಂಕರ್ ಸಲ್ಲಿಸಿದ ಕ್ರಿಮಿನಲ್ ಅರ್ಜಿಗಳು ನ್ಯಾ.ಎಚ್.ಪಿ.ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು. ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕೆಂದು ಸರ್ಕಾರದ ಪರ ವಕೀಲರು ಮಾಡಿದ ಮನವಿ ಪರಿಗಣಿಸಿದ ನ್ಯಾಯಪೀಠ ವಿಚಾರಣೆ ಜೂ.23ಕ್ಕೆ ಮುಂದೂಡಿತು.
ಜತೆಗೆ, ಅರ್ಜಿ ದಾರರ ವಿರುದ್ಧ ಎಸಿಬಿ ದಾಖಲಿಸಿರುವ 3 ಎಫ್ಐಆರ್ಗಳಿಗೆ ಈ ಹಿಂದೆ ನೀಡಲಾಗಿರುವ ತಡೆಯಾಜ್ಞೆಯನ್ನು ಮುಂದಿನ ವಿಚಾರಣೆವರೆಗೂ ವಿಸ್ತರಿಸಿತು. ಈ ಸಂಬಂಧ ಕಾಟನ್ಪೇಟೆ ಪೊಲೀ ಸರು ದಾಖಲಿಸಿ ರುವ ಪ್ರತ್ಯೇಕ 2 ಎಫ್ ಐಆರ್ಗಳಿಗೆ ನೀಡಿರುವ ತಡೆಯಾಜ್ಞೆ ಜೂ.23ರವರೆಗೆ ವಿಸ್ತರಿಸಿ ಹೈಕೋರ್ಟ್ ಮಂಗಳವಾರ (ಜೂ.16) ಆದೇಶಿಸಿದೆ. ಲಾಕ್ಡೌನ್ ವೇಳೆ ಅಕ್ರಮವಾಗಿ ಸಿಗರೇ ಟ್ ಮಾರಾಟಕ್ಕೆ ನೆರವು ನೀಡುವು ದಾಗಿ ತಿಳಿಸಿ ವ್ಯಾಪಾರಿಗಳಿಂದ 62.5 ಲಕ್ಷ ರೂ. ಲಂಚ ಸ್ವೀಕಾರ ಆರೋಪದ ಮೇಲೆ ಕಾಟ ನ್ಪೇಟೆ ಪೊಲೀಸರು, ಎಸಿಬಿ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.