Ganesh Chaturthi: ಗಣೇಶ ಹಬ್ಬಕ್ಕೆ ವಸೂಲಿಗಿಳಿದರೆ ಜೋಕೆ: ಕಮಿಷನರ್‌

ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಗಣೇಶ ಪ್ರತಿಷ್ಠಾಪಿಸಿ ; 30 ಅಂಶಗಳ ಮಾರ್ಗಸೂಚಿ ಹೊರಡಿಸಿದ ಪೊಲೀಸ್‌ ಇಲಾಖೆ

Team Udayavani, Aug 31, 2024, 10:56 AM IST

3-ganapa

ಬೆಂಗಳೂರು: ಗಣೇಶ ಹಬ್ಬಕ್ಕೆ ಬಲವಂತವಾಗಿ ಚಂದ ವಸೂಲಿ ಮಾಡಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಎಚ್ಚರಿಕೆ ಕೊಟ್ಟಿದ್ದಾರೆ.

ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಶುಕ್ರವಾರ ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಅವರು, ಸೆ.7ರಿಂದ ನಗರಾದ್ಯಂತ ಗೌರಿ-ಗಣೇಶ ಹಬ್ಬವನ್ನು ಆಚರಿಸುವ ಸಮಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸೂಚಿಸಿರುವ 30 ಅಂಶಗಳ ಮಾರ್ಗಸೂಚಿಯನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಗಣೇಶ ವಿಗ್ರಹ ಪ್ರತಿಷ್ಠಾಪನೆ ಹಾಗೂ ಇತರೆ ಕಾರ್ಯಕ್ರಮಗಳ ಆಯೋಜನೆಗಾಗಿ ಬಲವಂತವಾಗಿ ಹಾಗೂ ಕಾನೂನು ಬಾಹಿರವಾಗಿ ವಂತಿಗೆಯನ್ನು ಸಂಗ್ರಹಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮಾರ್ಗಸೂಚಿಯಲ್ಲೇನಿದೆ?:

ಗಣೇಶ ಮೂರ್ತಿ ಯನ್ನು ಸಾರ್ವಜನಿಕ ಸ್ಥಳದಲ್ಲಿ ಪ್ರತಿಷ್ಠಾಪಿಸುವ ಮೊದಲು ಸಂಬಂಧಪಟ್ಟ ಪೊಲೀಸ್‌ ಠಾಣೆಯಿಂದ ಅನುಮತಿ ಪಡೆದು ಸಾರ್ವಜನಿಕರು ಮತ್ತು ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಪ್ರತಿಷ್ಠಾಪಿಸಬೇಕು. ಸಾರ್ವಜನಿಕರು ಹಾಗೂ ವಾಹನ ಸಂಚಾರ ಒತ್ತಡವಿರುವ ರಸ್ತೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶವಿಲ್ಲ.

 ಗಣೇಶ ವಿಗ್ರಹ ಪ್ರತಿಷ್ಠಾಪನೆ ಹಾಗೂ ಇತರೆ ಕಾರ್ಯಕ್ರಮಗಳ ಆಯೋಜನೆಗಾಗಿ ಬಲವಂತವಾಗಿ ವಂತಿಗೆ ಸಂಗ್ರಹಿಸುವಂತಿಲ್ಲ. ಮೂರ್ತಿ ಪ್ರತಿಷ್ಠಾಪಿಸುವ ಸಾರ್ವಜನಿಕ ಸ್ಥಳದಲ್ಲಿ ಚಪ್ಪರ, ಶಾಮಿಯಾನಗಳನ್ನು ಬಂದೋಬಸ್ತಾಗಿ ನಿರ್ಮಿಸಬೇಕು. ಈ ಬಗ್ಗೆ ಪರವಾನಗಿ ಪಡೆಯಯಬೇಕು.

 ಯಾವುದೇ ಕಾರಣಕ್ಕೂ ವಿವಾದಿತ ಸ್ಥಳದಲ್ಲಿ ಪ್ರತಿಷ್ಠಾಪಿಸಬಾರದು. ಪ್ರತಿಷ್ಠಾಪಿಸುವ ಸ್ಥಳದ ಮಾಲೀಕರ ಅನುಮತಿ ಪಡೆದು ಮಾಹಿತಿಯನ್ನು ಪೊಲೀಸ್‌ ಠಾಣೆಗೆ ನೀಡಬೇಕು.

 ಪ್ಲೆಕ್ಸ್‌, ಬ್ಯಾನರ್‌ಗಳ ಸಂಬಂಧ ಬಿಬಿಎಂಪಿ ಮಾರ್ಗಸೂಚಿ ಪಾಲಿಸಬೇಕು. ಗಣೇಶ ವಿಗ್ರಹಗಳ ಕುರಿತು ಕೆಎಸ್‌ಪಿಸಿಬಿ ಹೊರಡಿಸಿರುವ ಮಾರ್ಗಸೂಚಿ ಪಾಲಿಸತಕ್ಕದ್ದು. ಗಣೇಶ ಪ್ರತಿಷ್ಠಾಪಿಸಿದ ಸ್ಥಳದಲ್ಲಿ ಆಯೋಜಕರ ಪರವಾಗಿ ಇಬ್ಬರು ಜವಾಬ್ದಾರಿಯುತ ಕಾರ್ಯಕರ್ತರು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ದಿನದ 24 ಗಂಟೆಗಳ ಕಾಲ ಇರುವಂತೆ ನೋಡಿಕೊಳ್ಳುವುದು.

 ಆಯೋಜಕರು ಸ್ಥಳದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು, ಸ್ಥಳಗಳಲ್ಲಿ ಬೆಂಕಿ ನಂದಿಸುವ ಸಾಮಗ್ರಿಗಳನ್ನು ಸ್ಥಳೀಯ ಪೊಲೀಸ್‌ ಠಾಣೆ¿ಮತ್ತು ಅಗ್ನಿಶಾಮಕ ದಳದ ದೂರವಾಣಿ ಸಂಖ್ಯೆ ಹಾಗೂ ಪದಾಧಿಕಾರಿಗಳ ಮೊಬೈಲ್‌ ಸಂಖ್ಯೆಗಳನ್ನು ನಮೂದಿಸಿ ಪ್ರದರ್ಶಿಸಬೇಕು. ಬೆಂಕಿ ನಂದಿಸುವ ಸಾಮಗ್ರಿಗಳನ್ನು ಅಳವಡಿಸಿಕೊಳ್ಳಬೇಕು.

 ಗಣೇಶ ಪ್ರತಿಷ್ಠಾಪನಾ ಸ್ಥಳದಲ್ಲಿ ಹಾಗೂ ಸುತ್ತಮುತ್ತ ಯಾವುದೇ ಅಡುಗೆ ಮಾಡುವ ಕಟ್ಟಿಗೆ, ಉರುವಲು, ಸೀಮೆಎಣ್ಣೆ ಸಾಧನಗಳನ್ನು ಇಡಬಾರದು. ಅಡುಗೆ ಮಾಡಬಾರದು. ವಿದ್ಯುತ್‌ ಮತ್ತು ಅಲಂಕಾರಕ್ಕೆ ಸಂಬಂಧಿಸಿದಂತೆ ವೈರಿಂಗ್‌ ಬಗ್ಗೆ ಬೆಸ್ಕಾಂನಿಂದ ಅನುಮತಿ ಪಡೆಯಬೇಕು. ಅಗ್ನಿಶಾಮಕ ದಳ ಹಾಗೂ ಸಂಚಾರ ಪೊಲೀಸರಿಂದ ಎನ್‌ಒಸಿ ಪಡೆಯಬೇಕು.

 ಗಣೇಶ ಮೂರ್ತಿ ಪ್ರತಿಷಷ್ಠಾಪನಾ ಸ್ಥಳದಲ್ಲಿ ದಿನದ 24 ಗಂಟೆ ಸಮರ್ಪಕ ಬೆಳಕು ಇರುವಂತೆ ನೋಡಿಕೊಳ್ಳ ಬೇಕು. ಹಿರಿಯ ನಾಗಕರಿಕರಿಗೆ ಶಾಲಾ ಮಕ್ಕಳಿಗೆ ಹಾಗೂ ಇತರರಿಗೆ ತೊಂದರೆಯಾಗದಂತೆ ಧ್ವನಿವರ್ಧಕಗಳನ್ನು ಬೆಳಗ್ಗೆ 6 ಗಂಟೆಯಿಂದ ರಾತ್ರಿ 10ಗಂಟೆಯವರೆಗೆ ಮಾತ್ರ ಬಳಸಿಕೊಳ್ಳಲು ಸ್ಥಳೀಯ ಪೊಲೀಸರ ಅನುಮತಿ / ಪರವಾನಗಿ ಪಡೆಯಬೇಕು. ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಧ್ವನಿವರ್ಧಕಗಳಿಂದ ಹೊರಡುವ ಶಬ್ದದ ಪ್ರಮಾಣವನ್ನು ಕಡಿಮೆ ಮಟ್ಟದಲ್ಲಿ ಇಟ್ಟುಕೊಳ್ಳಬೇಕು. ಯಾವುದೇ ಕಾರಣಕ್ಕೂ ಡಿ.ಜೆ. ಸೌಂಡ್‌ ಸಿಸ್ಟಂ ಅಳವಡಿಸಲು ಅವಕಾಶ ಇರುವುದಿಲ್ಲ.

ಆಯೋಜಕರ ಜವಾಬ್ದಾರಿಗಳು

 ಆಯೋಜಕರು ಗಣೇಶ ಪ್ರತಿಷ್ಠಾಪನ ಸ್ಥಳಕ್ಕೆ ಆಗಮಿಸುವ ಸಾರ್ವಜನಿಕರಿಗೋಸ್ಕರ ಸಮರ್ಪಕವಾಗಿ ಆಗಮನ ಮತ್ತು ನಿರ್ಗಮನದ ವ್ಯವಸ್ಥೆಯನ್ನು ಮಾಡುವುದರ ಜೊತೆಗೆ ಜನಸಂದಣಿಯನ್ನು ನಿಯಂತ್ರಿಸುವ ಬಗ್ಗೆ ಬ್ಯಾರಿಕೇಡ್‌ಗಳನ್ನು ನಿರ್ಮಿಸಬೇಕು. ಸ್ವಯಂ ಸೇವಕರನ್ನು ನೇಮಿಸಿಕೊಂಡು ಜನದಟ್ಟಣೆಗೆ ಆಸ್ಪದ ನೀಡಬಾರದು. ಗಣೇಶ ವಿಗ್ರಹ ಪ್ರತಿಷ್ಠಾಪನೆಯ ಪರಿಕರಗಳ ರಕ್ಷಣೆಗಾಗಿ ಕಾರ್ಯಕ್ರಮಗಳನ್ನು ಆಯೋಜಿಸುವವರೆ ಜವಾಬ್ದಾರರಾಗಿರುತ್ತಾರೆ.

 ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನಾ ಮೆರವಣಿಗೆ ಸಮಯದಲ್ಲಿ ಯಾವುದೇ ಅಪರಾಧಗಳು ನಡೆಯದಂತೆ ಗಮನಹರಿಸಬೇಕು. ಮೆರವಣಿಗೆ ಸಮಯದಲ್ಲಿ ಯಾವುದೇ ಅಪರಾಧಗಳು ನಡೆದರೆ ಆಯೋಜಕರೇ ಹೊಣೆ.

 ಗಣೇಶ ಮೂರ್ತಿ ಪ್ರತಿಷ್ಠಾಪನೆ, ಮನರಂಜನಾ ಕಾರ್ಯಕ್ರಮ, ಮೆರವಣಿಗೆ ಮತ್ತು ವಿಸರ್ಜನಾ ಸ್ಥಳಗಳಲ್ಲಿ ಹೆಣ್ಣುಮಕ್ಕಳನ್ನು ಚುಡಾಯಿಸುವುದು ಹಾಗೂ ಕೀಟಲೆ ಮಾಡದಂತೆ ನೋಡಿಕೊಳ್ಳಬೇಕು.

 ಗಣೇಶ ಮೂರ್ತಿ ಪ್ರತಿಷ್ಠಾಪನ ಮಂಡಳಿಯ ಸಂಘಟಕರು ತಮ್ಮ ಮಂಡಳಿಯ ಅಧ್ಯಕ್ಷ, ಕಾರ್ಯದರ್ಶಿ ಮತ್ತು ಇತರ ಪದಾಧಿಕಾರಿಗಳ ಹೆಸರು, ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನು ಸಂಬಂಧಪಟ್ಟ ಠಾಣಾಧಿಕಾರಿಗಳಿಗೆ ಒದಗಿಸಬೇಕು.

ವಿಸರ್ಜನೆ ವೇಳೆ ಪಾಲಿಸಬೇಕಾದ ಕ್ರಮಗಳು

ನಗದರಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಸಮಯದಲ್ಲಿ ಆಯೋಜಕರು ಸ್ವಯಂಸೇವಕರನ್ನು ಗುರುಸಲು ಅವರಿಗೆ ಗುರುತಿನ ಚೀಟಿ, ಬ್ಯಾಡ್ಜ್, ಟೀ-ಶರ್ಟ್‌ ಅಥವಾ ಕ್ಯಾಪ್‌ಗ್ಳನ್ನು ನೀಡಿ, ಅವರುಗಳನ್ನು ಗುರುತಿಸಲು ಕ್ರಮ ಕೈಗೊಂಡು, ಮೆರವಣಿಗೆ ಶಾಂತರೀತಿಯಲ್ಲಿ ವಿಸರ್ಜನಾ ಸ್ಥಳಕ್ಕೆ ಹೋಗಲು ಅನುವು ಮಾಡಿಕೊಡಲು ಕೋರಲಾಗಿದೆ.

ಗಣೇಶ ಪ್ರತಿಷ್ಠಾಪನಾ ಸ್ಥಳದಲ್ಲಿ ಏನಾದರೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವುದಿದ್ದಲ್ಲಿ ಸಂಬಂಧಪಟ್ಟ ಪೊಲೀಸ್‌ ಠಾಣೆಗೆ ಮುಂಚಿತವಾಗಿ ಮಾಹಿತಿ ನೀಡಿ ಸೂಕ್ತ ಬಂದೋಬಸ್ತ್ ಮಾಡಿಕೊಳ್ಳಲು ಸ್ಥಳೀಯ ಪೊಲೀಸರೊಂದಿಗೆ ಕಾರ್ಯಕ್ರಮ ಆಯೋಜಕರು ಸಹಕಾರ ನೀಡಬೇಕು.

ಗಣೇಶ ಮೂರ್ತಿ ಮೆರವಣಿಗೆಯು ಸೂಕ್ಷ್ಮ ಸ್ಥಳ, ಅತೀ ಸೂಕ್ಷ್ಮಸ್ಥಳ ಹಾಗೂ ಪ್ರಾರ್ಥನಾ ಸ್ಥಳಗಳ ಮುಂಭಾಗದಲ್ಲಿ ಸಾಗುವಾಗ ಸಿಡಿಮದ್ದು, ಪಟಾಕಿಗಳನ್ನು ಸಿಡಿಸದಂತೆ ಹಾಗೂ ಕರ್ಪೂರಗಳನ್ನು ಹಚ್ಚಬಾರದು.

ಗಣೇಶ ವಿಸರ್ಜನೆ ಮೆರವಣಿಗೆ ಸಂಬಂಧ ಯಾವುದೇ ಕಾರಣಕ್ಕೂ ಮೆರವಣಿಗೆ ಮಾರ್ಗಗಳನ್ನು ಬದಲಾಯಿಸಬಾರದು, ಮಾರ್ಗಗಳನ್ನು ಬದಲಾಯಿಸಿದ್ದಲ್ಲಿ ಆಯೋಜಕರನ್ನೇ ಹೊಣೆಗಾರರನ್ನಾಗಿ ಮಾಡಿ ಕಾನೂನು ರೀತಿಯಲ್ಲಿ ಕಠಿಣ ಕ್ರಮಗಳನ್ನು ಜರುಗಿಸಲಾಗುವುದು.

ಗಣೇಶ ವಿಸರ್ಜನೆ ಸಂಬಂಧ ಮೆರವಣಿಗೆಯು ರಾತ್ರಿ 10ಗಂಟೆಯೊಳಗೆ ಮುಗಿಯುವಂತೆ ಆಯೋಜಕರು ನೋಡಿಕೊಳ್ಳಬೇಕು. ಮೆರವಣಿಗೆ ಸಮಯದಲ್ಲಿ ಎಲೆಕ್ಟ್ರಿಕ್‌ಕಲ್‌ ವೈರುಗಳು, ಮರದ ಕೊಂಬೆಗಳ ಬಗ್ಗೆ ಗಮನಹರಿಸಿ, ವಿಸರ್ಜನಾ ಮೆರವಣಿಗೆ ಸುಸೂತ್ರವಾಗಿ ಹೋಗಲು ಮುಂಜಾಗ್ರತಾ ಕ್ರಮಗಳನ್ನು ಸಂಬಂಧ ಪಟ್ಟ ಇಲಾಖೆಯವರಿಂದ (ಅರಣ್ಯ ಮತ್ತು ಕೆ.ಇ.ಬಿ) ಪಡೆದುಕೊಳ್ಳಬೇಕು.

ಟಾಪ್ ನ್ಯೂಸ್

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

cmCM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ

CM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ

Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ

Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್‌ಟಾಪ್‌ ಕದ್ದ ಟೆಕಿ!

Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್‌ಟಾಪ್‌ ಕದ್ದ ಟೆಕ್ಕಿ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.