Gobi Manchurian: ಗೋಬಿ ಮಂಚೂರಿಗೂ ನಿಷೇಧದ ಕರಿನೆರಳು?

ಬಾಂಬೆ ಮಿಠಾಯಿ ಬೆನ್ನಲ್ಲೇ ಗೋಬಿ ಮಂಚೂರಿ ಮಾದರಿ ಪರೀಕ್ಷೆಗೆ ಆರೋಗ್ಯ ಇಲಾಖಾಧಿಕಾರಿಗಳಿಂದ ಸಿದ್ಧತೆ

Team Udayavani, Feb 23, 2024, 2:21 PM IST

10-gobi

ರಾಸಾಯನಿಕ ಪದಾರ್ಥಗಳು ಅಧಿಕ ಬಳಕೆ ಮಾಡುವ ಆಹಾರಪಟ್ಟಿಯಲ್ಲಿ ಇದೀಗ ಗೋಬಿ ಮಂಚೂರಿ ಸೇರ್ಪಡೆ

ಬೆಂಗಳೂರು: ಅನಾರೋಗ್ಯಕ್ಕೆ ಕಾರಣವಾಗುತ್ತಿರುವ ಅಂಶಗಳು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಬಾಂಬೆ ಮಿಠಾಯಿ ಮಾದರಿಗಳ ಪರೀಕ್ಷೆಗೆ ಕಳುಹಿಸಿರುವ ಬೆನ್ನಲ್ಲೇ ಗೋಬಿ ಮಂಚೂರಿಯ ಮಾದರಿಗಳನ್ನೂ ಪರೀಕ್ಷೆಗೆ ಒಳಪಡಿಸಲು ಆರೋಗ್ಯ ಇಲಾಖೆ ಮುಂದಾಗಿದೆ.

ಸಾಮಾನ್ಯವಾಗಿ ಯಾವುದೇ ಒಂದು ಆಹಾರ ಪದಾರ್ಥಗಳನ್ನು ತಯಾರಿಸುವ ಆಹಾರ ಸ್ವಾಸ್ಥ್ಯ ಮಾನದಂಡ ಅನುಸರಿಸಬೇಕು.

ಪ್ರಸ್ತುತ ಹೆಚ್ಚಿನ ಕಡೆಯಲ್ಲಿ ಖಾದ್ಯದ ಚೆಂದ ಹಾಗೂ ರುಚಿ ಹೆಚ್ಚಿಸಿ ಲಾಭಗಳಿಸಲು ರಾಸಾಯನಿಕ ಪದಾರ್ಥ ಬಳಕೆ ಮಾಡಲಾಗುತ್ತಿದೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ. ಇಂತಹ ರಾಸಾಯನಿಕ ಪದಾರ್ಥಗಳು ಅಧಿಕ ಬಳಕೆ ಮಾಡುವ ಆಹಾರಪಟ್ಟಿಯಲ್ಲಿ ಇದೀಗ ಗೋಬಿ ಮಂಚೂರಿ ಸೇರ್ಪಡೆಯಾಗಿದೆ.

ಗೋವಾದಲ್ಲಿ ಬ್ಯಾನ್‌ ಏಕೆ?: ಗೋವಾದ ಮಾಪುಸಾ ನಗರದಲ್ಲಿ ಗೋಬಿ ಮಂಚೂರಿ ತಯಾರಿಕೆಗೆ ಬಳಸುವ ಕೃತಕ ಬಣ್ಣ ಹಾಗೂ ಕಳಪೆ ಗುಣಮಟ್ಟದ ಸಾಸ್‌ನಿಂದ ಆರೋಗ್ಯದ ಮೇಲೆ ಬೀರುವ ಪರಿಣಾಮಗಳು ಹಾಗೂ ಶುಚಿತ್ವ, ನೈರ್ಮಲ್ಯ ಬಗ್ಗೆ ದೂರುಗಳು ದಾಖಲಾಗಿದ್ದವು.

ಈ ಬಗ್ಗೆ ಅಲ್ಲಿನ ಆಹಾರ ಸುರಕ್ಷತಾ ಇಲಾಖೆಯು ಹಲವು ಕಡೆ ದಾಳಿ ನಡೆಸಿ ನೋಟಿಸ್‌ ನೀಡಿದರೂ ಯಾರೊಬ್ಬರು ತಲೆ ಕಡೆಸಿಕೊಂಡಿರಲಿಲ್ಲ. ಯಾರೂ ಎಚ್ಚೆತ್ತುಕೊಳ್ಳದ ಹಿನ್ನೆಲೆಯಲ್ಲಿ ಇದೀಗ ಗೋಬಿ ಮಂಚೂರಿಯನ್‌ ನಿಷೇಧಿಸಿದೆ.

ಕರ್ನಾಟಕಕ್ಕೆ ಬೇಕಿದೆ ಬ್ಯಾನ್‌!: ರಾಜ್ಯದಲ್ಲಿ ಒಂದು ಬೀದಿಗೆ ಕನಿಷ್ಠವೆಂದರೂ ಎರಡು ಚೈನಿಸ್‌ ಸೆಂಟರ್‌ ಗಳಿವೆ. ಅಲ್ಲಿ ತಯಾರಿಸುವ ಆಹಾರಗಳಿಗೆ ಬಳಕೆ ಮಾಡುವ ಸಾಸ್‌, ಕೃತಕ ಬಣ್ಣ ನೀಡಲು ಬಳಸುವ ಬಣ್ಣಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಗಳು ಗಮನ ಹರಿಸಬೇಕಾಗಿದೆ. ನಗರ ಸೇರಿ ಗ್ರಾಮೀಣ ಭಾಗದಲ್ಲಿ ವಿಶೇಷವಾಗಿ ಗೋಬಿ ಮಂಚೂರಿ ತಯಾರಿಸಲು ಕಳಪೆ ಗುಣಮಟ್ಟದ ಸಾಸ್‌ ಹಾಗೂ ಸಿಂಥೆಟಿಕ್‌ ಬಣ್ಣ ಬಳಸುತ್ತಿರುವುದರಿಂದ ಗ್ರಾಹಕರ ಆರೋಗ್ಯದ ಮೇಲೆ ಭಾರಿ ದುಷ್ಪಾರಿಣಾಮ ಬೀರುತ್ತಿದೆ.

ಜತೆಗೆ ಸ್ವತ್ಛತೆಯ ಬಗ್ಗೆ ಕೆಲವೆಡೆ ಮಾತನಾಡುವಂತಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಗೋಬಿ ಮಂಚೂರಿ ತಯಾರಿಸುವ ಸೆಂಟರ್‌ಗಳ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಬೇಕು. ಒಂದು ವೇಳೆ ಆರೋಗ್ಯಕ್ಕೆ ಹಾನಿಕಾರಕ ಪದಾರ್ಥ ಬಳಕೆಯಾಗುವುದು ವರದಿಯಾದರೆ ಗೋವಾದ ಮಾಪುಸಾ ನಗರದಂತೆ ಕರ್ನಾಟಕದಲ್ಲಿಯೂ ಗೋಬಿ ಬ್ಯಾನ್‌ ಮಾಡುವಂತೆ ಕೂಗುಗಳು ಕೇಳಿ ಬರುತ್ತಿದೆ.

ಕಣ್ಣಾಮುಚ್ಚಾಲೆ ಆಟಕ್ಕೆ ಕಡಿವಾಣ: ಸಾಮಾನ್ಯವಾಗಿ ಗೋಬಿ ಮಂಚೂರಿ ತಯಾರಿಸುವ ಕಡೆಯಲ್ಲಿ ಪ್ರದರ್ಶನಕ್ಕೆ ಗುಣಮಟ್ಟದ ಸಾಸ್‌ಗಳನ್ನು ಪ್ರದರ್ಶನಕ್ಕೆ ಇಡುತ್ತಾರೆ. ಇಲ್ಲವೇ ಗುಣಮಟ್ಟದ ಸಾಸ್‌ ಬಾಟಲಿಗೆ ಕಳಪೆ ಗುಣಮಟ್ಟದ ಸಾಸ್‌ ತುಂಬಿಸಿ ಗ್ರಾಹಕರಿಗೆ ವಂಚಿಸುತ್ತಿದ್ದಾರೆ.

ತಯಾರಿಕೆಗೆ ಬಳಸುವ ಹಿಟ್ಟಿನಲ್ಲಿ ರುಚಿ ಹೆಚ್ಚಿಸುವ ರಾಸಾಯನಿಕ ಪದಾರ್ಥ ಹಾಗೂ ಜೋಳದ ಪಿಷ್ಟಯನ್ನು ಸಹ ಬಳಕೆ ಮಾಡುತ್ತಾರೆ. ಇದರಿಂದಾಗಿ ಆಳವಾಗಿ ಹುರಿದ ಬಳಿಕವೂ ಹೂ ಕೋಸ್‌ ದೀರ್ಘ‌ಕಾಲದವರೆಗೆ ಗರಿಗರಿಯಾಗಿ ರುತ್ತವೆ ಎಂದು ಗ್ರಾಹಕರು ದೂರಿದ್ದಾರೆ.

ಮೈದಾ, ಚೈನೀಸ್‌ ಸಾಸ್‌, ಸಕ್ಕರೆ ಮಟ್ಟ ಹೆಚ್ಚಿಸುತ್ತೆ

ಗೋಬಿ ಮಂಚೂರಿ ತಯಾರಿಕೆಗೆ ಬಳಸುವ ಮೈದಾ, ಚೈನೀಸ್‌ ಸಾಸ್‌ಗಳಿಂದ ಮನುಷ್ಯನ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಿಸುತ್ತದೆ. ದೇಹದಲ್ಲಿ ಸೋಡಿಯಂ ಮಟ್ಟವನ್ನು ಹೆಚ್ಚಿಸಿ, ಅಧಿಕ ರಕ್ತದೊತ್ತಡ, ತೂಕ ಹೆಚ್ಚಳಕ್ಕೆ ಕಾರಣವಾಗಲಿದೆ. ದೀರ್ಘಾವಧಿಯಲ್ಲಿ ಇದು ಮೂತ್ರಪಿಂಡದ ಸಮಸ್ಯೆಗಳು ಮತ್ತು ಹೃದಯರಕ್ತನಾಳದ ಬ್ಲಾಕ್‌ಗೆ ಕಾರಣವಾಗಬಹುದು. ಇನ್ನು ಕೆಲವರಿಗೆ ಅಲರ್ಜಿ, ಮಲಬದ್ಧತೆಯಿಂದ ಬಳಲು ಸಾಧ್ಯಗಳಿವೆ. ಅತಿಯಾದ ರಾಸಾಯನಿಕ ಪದಾರ್ಥಗಳ ಬಳಕೆ ಕ್ಯಾನ್ಸರ್‌ಗೂ ಕಾರಣವಾಗಲಿದೆ ಎನ್ನುತ್ತಾರೆ ವೈದ್ಯರು.

ಆರೋಗ್ಯಕ್ಕೆ ಹಾನಿ ಉಂಟು ಮಾಡುವ ರಾಸಾಯನಿಕಗಳನ್ನು ವಿಪರೀತ ಬಳಸಲಾಗುತ್ತಿದೆ ಎಂಬ ವ್ಯಾಪಕ ದೂರುಗಳ ಹಿನ್ನೆಲೆಯಲ್ಲಿ ಗೋಬಿ ಮಂಚೂರಿ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ●ಡಿ.ರಂದೀಪ್‌, ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

-ಉದಯವಾಣಿ ಸಮಾಚಾರ

ಟಾಪ್ ನ್ಯೂಸ್

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

Sathish-rajanna-mahadevappa

Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್‌ ಲೀಡರ್‌ʼ ಅಸ್ತ್ರ

Jayalalittha-Golds

Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ

MUST WATCH

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

ಹೊಸ ಸೇರ್ಪಡೆ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.