ಕೋವಿಡ್‌ ನಿಯಂತ್ರಣಕ್ಕೆ ಸರ್ಕಾರದಿಂದ ಶತಪ್ರಯತ್ನ


Team Udayavani, Jul 10, 2020, 6:14 AM IST

kovi-shata

ಬೆಂಗಳೂರು: ದೇಶದಲ್ಲೇ ಪ್ರಥಮ ಎಂಬಂತೆ ನಗರದಲ್ಲಿ ಅತಿ ದೊಡ್ಡ 10,000 ಹಾಸಿಗೆಯ ಕೋವಿಡ್‌ ಕೇರ್‌ ಸೆಂಟರ್‌ ರೂಪುಗೊಂಡಿದ್ದು, ಕೋವಿಡ್‌ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಎಲ್ಲ ರೀತಿ ಪ್ರಯತ್ನಗಳನ್ನು ಕೈಗೊಳ್ಳುತ್ತಿದೆ ಎಂದು  ಮುಖ್ಯ ಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ತುಮಕೂರು ರಸ್ತೆ ಮಾದಾವರ ಬಳಿಯ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಿರ್ಮಿಸಲಾಗಿರುವ ಕೋವಿಡ್‌ ಕೇರ್‌ ಸೆಂಟರ್‌ಗೆ ಗುರುವಾರ ಭೇಟಿ ನೀಡಿ  ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿ ಬಳಿಕ ಮಾತನಾಡಿದರು.

ದೇಶದಲ್ಲಿ 10,000ಕ್ಕೂ ಹೆಚ್ಚು ಹಾಸಿಗೆಯ ಕೋವಿಡ್‌ ಕೇರ್‌ ಸೆಂಟರ್‌ ಇದೇ ಮೊದಲು ಎನಿಸಿದೆ. ಈ ಕೇಂದ್ರಕ್ಕೆ ಅಗತ್ಯವಾದ ವೈದ್ಯರು, ಸಿಬ್ಬಂದಿಯನ್ನು ವ್ಯವಸ್ಥೆ ಮಾಡುವ  ಜವಾಬ್ದಾರಿ ಸರ್ಕಾರದ ಮೇಲಿದ್ದು, ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಬೆಂಗಳೂರಿನಲ್ಲಿ ಕೋವಿಡ್‌ ತೀವ್ರಗತಿಯಲ್ಲಿ ಹೆಚ್ಚುತ್ತಿದ್ದು, ಅದರ ನಿಯಂತ್ರಣಕ್ಕೆ ಎಲ್ಲ ಕ್ರಮ ವಹಿಸಲಾಗುತ್ತಿದೆ. ನಿರೀಕ್ಷೆಯಂತೆ ಎಲ್ಲವೂ  ಸಿದ್ಧ ವಾದರೆ 10,100 ಹಾಸಿಗೆ ಸಾಮರ್ಥಯದ ಕೋವಿಡ್‌ ಕೇರ್‌ ಸೆಂಟರ್‌ ರೂಪುಗೊಳ್ಳಲಿದೆ ಎಂದರು.

ಅಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ: ತೋಟ  ಗಾರಿಕೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಟಾರಿಯಾ, ಬಿಬಿಎಂಪಿ  ಆಯುಕ್ತ ಬಿ.ಎಚ್‌.ಅನಿಲ್‌ ಕುಮಾರ್‌, ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿ ಟಿ.ಕೆ. ಅನಿಲ್‌ ಕುಮಾರ್‌, ಬಿಬಿಎಂಪಿ ಜಂಟಿ ಆಯುಕ್ತ ಸಫì ರಾಜ್‌ ಖಾನ್‌, ನನ್ನ ರಾಜಕೀಯ ಕಾರ್ಯದರ್ಶಿ ಎಸ್‌.ಆರ್‌.ವಿಶ್ವನಾಥ್‌ ಸೇರಿದಂತೆ ಎಲ್ಲರ ಶ್ರಮದಿಂದ ಒಳ್ಳೆಯ ವ್ಯವಸ್ಥೆ ಮಾಡಲು ಸಾಧ್ಯವಾಗಿದೆ ಎಂದು ಶ್ಲಾಘಿಸಿದರು.

ವಾರದೊಳಗೆ ಸಿದ್ಧ: ವಾರದೊಳಗೆ ಕೇಂದ್ರವು ಬಳಕೆಗೆ ಸಿದ್ಧವಾಗಲಿದೆ. ಆದರೆ ನಗರದಲ್ಲಿ ಗುರುತಿಸಲಾದ ಎಲ್ಲ ಹಾಸಿಗೆಗಳು ಭರ್ತಿಯಾದ ಬಳಿಕವಷ್ಟೇ ಈ ಕೇಂದ್ರದ ಬಳಕೆ ಆರಂಭ ವಾಗ ಲಿದೆ ಎಂದು ತಿಳಿಸಿದರು. ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ಸಚಿವರಾದ ಬಸವರಾಜ ಬೊಮ್ಮಾಯಿ, ಆರ್‌.ಅಶೋಕ್‌, ಬಿ.ಶ್ರೀರಾಮುಲು, ಡಾ.ಕೆ.ಸುಧಾಕರ್‌, ಕಾರ್ಯದರ್ಶಿ ಎಸ್‌.ಆರ್‌.ವಿಶ್ವನಾಥ್‌ ಇತರರಿದ್ದರು.

ರೋಗಿಗಳ ನೆರವಿಗೆ ರೊಬೊಟ್‌: ನಿರ್ದಿಷ್ಟ ಬ್ಲಾಕ್‌ಗೆ ಒಂದು ರೊಬೊಟ್‌ ವ್ಯವಸ್ಥೆ ಮಾಡಲಾಗಿದೆ. ರೋಗಿ ಗುಂಡಿ ಒತ್ತಿದ ಕೂಡಲೇ ರೊಬೊಟ್‌ ಅವರಿರುವ ಹಾಸಿಗೆ ಬಳಿಗೆ ಧಾವಿಸುತ್ತದೆ. ಅದರ ಮುಂದೆ ತಮ್ಮ ಆರೋಗ್ಯ ಸಮಸ್ಯೆಯನ್ನು  ಹೇಳಿಕೊಂಡರೆ ತಕ್ಷಣವೇ ಸಂಬಂಧಪಟ್ಟ ವೈದ್ಯರಿಗೆ ಮಾಹಿತಿ ರವಾನೆಯಾಗಿ ಅದರ ಮಾನಿಟರ್‌ನಲ್ಲೇ ವೈದ್ಯರು ರೋಗಿಯೊಂದಿಗೆ ಸಂವಹನ ನಡೆಸುವ ವ್ಯವಸ್ಥೆ ರೂಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹಾಸಿಗೆ ಸಾಮರ್ಥ್ಯ: ಹಾಲ್‌ 1- 1200, ಹಾಲ್‌ 2- 1200, ಹಾಲ್‌ 3- 2100, ಹಾಲ್‌ 4- 2800, ಹಾಲ್‌ 5- 2800 ಪ್ರತಿ 100 ರೋಗಿಗಳಿಗೆ: ವೈದ್ಯ- 1, ದಾದಿಯರು- 2, ಸಹಾಯಕರು- 1, ಸ್ವಚ್ಛತಾ ಸಿಬ್ಬಂದಿ- 1, ಬಿಬಿಎಂಪಿ ಮಾರ್ಷಲ್‌- 2.

ಯಾವುದೇ ಕಾರಣಕ್ಕೂ ಜನ ವಿಶ್ವಾಸ ಕಳೆದುಕೊಳ್ಳಬಾರದು. ಸ್ವಲ್ಪ ತಾಳ್ಮೆಯಿಂದ ಸರ್ಕಾರದೊಂದಿಗೆ ಸಹಕರಿಸಬೇಕು. ಕೋವಿಡ್‌ ಪಾಸಿಟಿವ್‌ ಕಂಡುಬಂದ ಕೂಡಲೇ ಆ್ಯಂಬುಲೆನ್ಸ್‌ ತಲುಪುವುದು ವಿಳಂಬವಾದರೆ ಇಲ್ಲವೇ ಸೋಂಕಿತರನ್ನು  ಆಸ್ಪತ್ರೆಗೆ ದಾಖಲಿಸಲು ವಿನಾಕಾರಣ ನಿರಾಕರಿಸಿದರೆ ನಮ್ಮ ಗಮನಕ್ಕೆ ತರಬೇಕು. ಕೂಡಲೇ ಕ್ರಮ ಕೈಗೊಳ್ಳಲಾಗುವುದು.
-ಬಿ.ಎಸ್‌. ಯಡಿಯೂರಪ್ಪ, ಮುಖ್ಯಮಂತ್ರಿ

ಟಾಪ್ ನ್ಯೂಸ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Mangaluru: ವಿಧಾನ ಪರಿಷತ್ ಉಪಚುನಾವಣೆ… ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು

Mangaluru: ವಿಧಾನ ಪರಿಷತ್ ಉಪಚುನಾವಣೆ… ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBMP: ಬಿಬಿಎಂಪಿಯಲ್ಲಿ 2067 ಕೋಟಿ ರೂ. ಅಕ್ರಮ: ಎನ್‌.ಆರ್‌.ರಮೇಶ್‌

BBMP: ಬಿಬಿಎಂಪಿಯಲ್ಲಿ 2067 ಕೋಟಿ ರೂ. ಅಕ್ರಮ: ಎನ್‌.ಆರ್‌.ರಮೇಶ್‌

4

Kannada Pustaka Habba: ನಾಡಿದ್ದಿನಿಂದ ಡಿ.1ರವರೆಗೆ ಕನ್ನಡ ಪುಸ್ತಕ ಹಬ್ಬ

Blackmail: ಅಶ್ಲೀಲ ವಿಡಿಯೋ; ಅಕ್ಕನಿಂದ ತಂಗಿಯ ಬ್ಲ್ಯಾಕ್‌ಮೇಲ್ ‌

Blackmail: ಅಶ್ಲೀಲ ವಿಡಿಯೋ; ಅಕ್ಕನಿಂದ ತಂಗಿಯ ಬ್ಲ್ಯಾಕ್‌ಮೇಲ್ ‌

Bengaluru Rain: ದ್ವೀಪದಂತಾದ ಬಡಾವಣೆ, ಅಪಾರ್ಟ್‌ಮೆಂಟ್‌ಗಳು!

Bengaluru Rain: ದ್ವೀಪದಂತಾದ ಬಡಾವಣೆ, ಅಪಾರ್ಟ್‌ಮೆಂಟ್‌ಗಳು!

Bengaluru Rain: ರಾಜಧಾನಿಯ ಹಿಂಡಿ ಹಿಪ್ಪೆ ಮಾಡಿದ ಹಿಂಗಾರು  

Bengaluru Rain: ರಾಜಧಾನಿಯ ಹಿಂಡಿ ಹಿಪ್ಪೆ ಮಾಡಿದ ಹಿಂಗಾರು  

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3

Muddebihal:‌ ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.