Bengaluru: ಅಕ್ರಮ ಆಸ್ತಿ: ಬೆಸ್ಕಾಂ ಎಇಇಗೆ 3 ವರ್ಷ ಸಜೆ,1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್
Team Udayavani, Jul 5, 2024, 2:48 PM IST
ಬೆಂಗಳೂರು: ಆದಾಯಕ್ಕಿಂತ ಶೇ.44.6ರಷ್ಟು ಅಕ್ರಮ ಆಸ್ತಿ ಹೊಂದಿದ್ದ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ವೊಬ್ಬರಿಗೆ ಬೆಂಗಳೂರಿನ ಘನ 23ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ (ಸಿಸಿಎಚ್-24) 3 ವರ್ಷ ಸಜೆ ವಿಧಿಸಿದೆ.
ಬೆಂಗಳೂರು ವಿದ್ಯುತ್ ಕಂಪನಿಯ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಸಿ.ರಾಮಲಿಂಗಯ್ಯ ಅಪರಾಧಿ. ನ್ಯಾಯಾಧೀಶ ಕೆ.ಎಂ.ರಾಧಕೃಷ್ಣ ಜೂನ್29ರಂದು ಅಂತಿಮ ತೀರ್ಪು ನೀಡಿ, ಸಿ.ರಾಮಲಿಂಗಯ್ಯಗೆ 3 ವರ್ಷ ಕಠಿಣ ಸಜೆ, 1 ಕೋಟಿ ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದಲ್ಲಿ 4 ತಿಂಗಳ ಸಾದಾ ಸಜೆ ಅನುಭವಿಸತಕ್ಕದೆಂದು ಆದೇಶಿಸಲಾಗಿದೆ.
ಏನಿದು ಪ್ರಕರಣ?: ಸಿ.ರಾಮಲಿಂಗಯ್ಯ ತಮ್ಮ ಬಲ್ಲ ಮೂಲಗಳ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಅಕ್ರಮ ಆಸ್ತಿ ಹೊಂದಿರುವ ಆರೋಪದಡಿ 2011 ಸೆ.29ರಂದು ಬೆಂಗಳೂರು ಲೋಕಾಯುಕ್ತ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿ.ರಾಮಲಿಂಗಯ್ಯ ತಮ್ಮ ಬಲ್ಲ ಮೂಲಗಳ ಆದಾಯಕ್ಕಿಂತ 1,03,26,142 ರೂ. (ಶೇ.44.6) ರಷ್ಟು ಅಕ್ರಮ ಆಸ್ತಿ ಹೊಂದಿರುವುದು ತನಿಖೆಯಲ್ಲಿ ದೃಢಪಟ್ಟಿತ್ತು.
ತನಿಖಾಧಿಕಾರಿಗಳು ಈ ಬಗ್ಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ದೋಷ ರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕ ರಮೇಶ್ ಬಾಬು ಹಾಗೂ ಮಂಜುನಾಥ ಹೊನ್ನಯ್ಯ ನಾಯಕ್ ಲೋಕಾಯುಕ್ತ ಪರ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಶಾಸಕರಿಗೆ ಶುಭ ಕೋರಿ ಹಾಕಿದ್ದ ಫ್ಲೆಕ್ಸ್ ಬಿದ್ದು ವೃದ್ಧ ಕೋಮಾಕ್ಕೆೆ
Bengaluru: ನಿಯಂತ್ರಣ ತಪ್ಪಿದ ಬುಲೆಟ್ ತಡೆಗೋಡೆಗೆ ಡಿಕ್ಕಿ: ಸವಾರ ಸಾವು
Bengaluru: ರಾಜಕಾಲುವೆಗೆ ಬಿದ್ದಿದ್ದ ದ್ವಿಚಕ್ರ ಸವಾರನ ಶವ 3 ದಿನ ಬಳಿಕ ಪತ್ತೆ
Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು
Arrested: ಪಿಜಿ ಬಗ್ಗೆ ಕೆಟ್ಟ ವಿಮರ್ಶೆ ಮಾಡಿದ್ದಕ್ಕೆ ಯುವತಿಗೆ ಕಿರುಕುಳ; ಮಾಲೀಕ ಸೆರೆ
MUST WATCH
ಹೊಸ ಸೇರ್ಪಡೆ
Ronny; ಕಿರಣ್ ರಾಜ್ ನಟನೆಯ ಸಿನಿಮಾದ ಹಾಡು ಬಂತು
Karachi: ಪಾಕಿಸ್ತಾನ್ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ
IshanKishan; ರಣಜಿ ಆಡಬೇಕೆಂಬ ಬಿಸಿಸಿಐ ಸೂಚನೆ ನಿರ್ಲಕ್ಷ್ಯ ಮಾಡಿದ್ದೇಕೆ? ಉತ್ತರಿಸಿದ ಇಶಾನ್
Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು
Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.