ಕಟ್ಟಡ ವಿಸ್ತೀರ್ಣ ದರದಲ್ಲಿ ಅವ್ಯವಹಾರ: ನಷ್ಟ


Team Udayavani, Jun 13, 2020, 5:47 AM IST

bbmp kattada

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಕಟ್ಟಡಗಳ ವಿಸ್ತೀರ್ಣ ಪತ್ತೆಗೆ ನಡೆಸಲಾದ ಟೋಟಲ್‌ ಸ್ಟೇಷನ್‌ ಸರ್ವೇಯಲ್ಲಿ ಬೆಳಕಿಗೆ ಬಂದ “ವ್ಯತ್ಯಾಸ’ಕ್ಕೆ ದರ ನಿಗದಿ ಮಾಡುವಲ್ಲಿ ನಡೆದ ಅವ್ಯವಹಾರದ ಪ್ರಾಥಮಿಕ ಹಂತದ ಶ್ವೇತಪತ್ರವನ್ನು  ಬಿಬಿಎಂಪಿ ಆಯುಕ್ತ ಬಿ.ಎಚ್‌. ಅನಿಲ್‌ಕುಮಾರ್‌ ಅವರು ಶುಕ್ರವಾರ ನಡೆದ ಕೌನ್ಸಿಲ್‌ ಸಭೆಯಲ್ಲಿ ಮಂಡನೆ ಮಾಡಿದರು. ಈ ಅವ್ಯಹಾರದಿಂದ ಪಾಲಿಕೆಗೆ ಒಟ್ಟು 41.47 ಕೋಟಿ ರೂ. ನಷ್ಟವುಂಟಾಗಿದೆ ಎಂದು ವರದಿಯಲ್ಲಿ  ಉಲ್ಲೇಖೀಸಲಾಗಿದೆ.

ನಗರದಲ್ಲಿ ಆಸ್ತಿ ತೆರಿಗೆ ಮಾಲೀಕರು ಸ್ವಯಂ ಘೋಷಿತ ಆಸ್ತಿ ತೆರಿಗೆ ವ್ಯವಸ್ಥೆಯಡಿ (ಎಸ್‌ಎಎಸ್‌) ತಪ್ಪು ಮಾಹಿತಿ ನೀಡಿರುವುದನ್ನು ಪತ್ತೆ ಹಚ್ಚುವ ಉದ್ದೇಶದಿಂದ ಬಿಬಿಎಂಪಿ ಟೋಟಲ್‌ ಸ್ಟೇಷನ್‌ ಸರ್ವೇ  (ಟಿಎಸ್‌ಎಸ್‌) ಯೋಜನೆಯನ್ನು ಪರಿಚಯಿಸಿತ್ತು. ಆದರೆ, ಇದರಲ್ಲಿಯೂ ಅವ್ಯವಹಾರ ನಡೆದಿದ್ದು, ಅಧಿಕಾರಿಗಳು ಇದರಲ್ಲಿ ಶಾಮೀಲಾಗಿರುವುದ ರಿಂದ ಪಾಲಿಕೆಗೆ ಕೋಟ್ಯಾಂತರ ರೂ. ನಷ್ಟವುಂಟಾಗಿದೆ ಎಂದು ವಿರೋಧ ಪಕ್ಷದ  ಮಾಜಿ ನಾಯಕ ಪದ್ಮನಾಭರೆಡ್ಡಿ ಅವರು ಆರೋಪಿಸಿದ್ದರು.

ಈ ಸಂಬಂಧ ಬಿಬಿಎಂಪಿ ಆಯುಕ್ತರು ಪ್ರತ್ಯೇಕ ಉಪ ಸಮಿತಿ ರಚನೆ ಮಾಡಿದ್ದರು. ವರದಿಯನ್ನು ಶುಕ್ರವಾರ ನಡೆದ ಪಾಲಿಕೆ ಸಭೆಯಲ್ಲಿ ಮಂಡನೆ ಮಾಡಲಾಯಿತು.  ಆದರೆ, ಇದು ಅಪೂರ್ಣ ವರದಿ ಇದಕ್ಕಿಂತ ಹೆಚ್ಚು ಮೊತ್ತದ ನಷ್ಟವುಂಟಾಗಿದೆ. ಮಹದೇವಪುರ ಸೇರಿದಂತೆ ಕೆಲವು ವಲಯಗಳ ಕಟ್ಟಡಗಳಿಗೆ ಸಂಬಂಧಿಸಿದಂತೆ ಪಾರದರ್ಶಕತೆ ಕಾಯ್ದುಕೊಂಡಿಲ್ಲ ಎಂದು  ದೂರಿದರು. ಒಟ್ಟಾರೆಯಾಗಿ 321 ಕೋಟಿಗೂ ಹೆಚ್ಚು ನಷ್ಟವುಂಟಾಗಿದೆ. ಸಮಗ್ರ ವರದಿ ನೀಡಬೇಕು ಎಂದು ಪದ್ಮನಾಭರೆಡ್ಡಿ ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು, ಇನ್ನು 15 ದಿನಗಳ ಒಳಗಾಗಿ ಸಂಪೂರ್ಣ ವರದಿಯನ್ನು ಕೌನ್ಸಿನ್‌ ಸಭೆಗೆ ಮಂಡಿಸುವುದಾಗಿ  ಹೇಳಿದರು.

ನಗರದಲ್ಲಿನ ಕಟ್ಟಡಗಳ ಟೋಟಲ್‌ ಸ್ಟೇಷನ್‌ ಸರ್ವೇ ನಡೆದ ನಂತರದ ಎಸ್‌ ಎಎಸ್‌ ಹಾಗೂ ಟಿಎಸ್‌ಎಸ್‌ನಲ್ಲಿನ ವ್ಯತ್ಯಾಸದ ಆಧಾರದ ಮೇಲೆ ಆಸ್ತಿ ತೆರಿಗೆ ಪರಿಷ್ಕರಿಸಿ ಪರಿಷ್ಕೃತ ವಿಶೇಷ ಸೂಚನಾ ಪತ್ರ ನೀಡಲಾಗುತ್ತಿದೆ.  ಆದರೆ, ಈ ರೀತಿ ಮರು ಪರಿಶೀಲನೆ ಮಾಡುವ ಹಂತದಲ್ಲಿ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿರುವುದು 2019ರ ಅಕ್ಟೋಬರ್‌ನಲ್ಲಿ ಬೆಳಕಿಗೆ ಬಂದಿತ್ತು. ಹೀಗಾಗಿ, ಈ ಸಂಬಂಧ ಆಂತರಿಕ ತನಿಖೆ ನಡೆದಿದ್ದು, ಅವ್ಯವಹಾರದ ಬಗ್ಗೆ  ಆಯುಕ್ತರು ಶ್ವೇತಪತ್ರಹೊರಡಿಸಿದ್ದಾರೆ.

ಶ್ವೇತ ಪತ್ರದಲ್ಲಿ ಏನಿದೆ ?: ಟೋಟಲ್‌ ಸ್ಟೇಷನ್‌ ಸರ್ವೇ ನಂತರದ ವ್ಯತ್ಯಾಸ ಮೊತ್ತ ನಿಗದಿ ಮಾಡುವುದರಲ್ಲಿ ಅವ್ಯವಹಾರ ನಡೆದಿದ್ದು, ಪಾಲಿಕೆಗೆ ಒಟ್ಟು 41.41ಕೋಟಿ ರೂ. ನಷ್ಟವುಂಟಾಗಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಕಟ್ಟಡಗಳಿಂದ ದುಪ್ಪಟ್ಟು ದಂಡ ಹಾಗೂ ಶೇ.2 ರಷ್ಟು ಬಡ್ಡಿ ಸಂಗ್ರಹಿಸಲು ನಿರ್ಧರಿಸಲಾಗಿದೆ. ಪೂರ್ವ ವಲಯದಲ್ಲಿ ಒಟ್ಟು 9 ಕಟ್ಟಡಗಳಿಗೆ ಸಂಬಂಧಿಸಿದಂತೆ ಸರ್ವೇ ವ್ಯತ್ಯಾಸ ಕಂಡುಬಂದಿದ್ದು, ಆಸ್ತಿ ತೆರಿಗೆ ಪುನರ್‌ ವಿಂಗಡಿಸಲಾಗಿದೆ.

ಇದರಿಂದ ಒಟ್ಟು 35.14 ಕೋಟಿ ರೂ. ಆದಾಯ ವ್ಯತ್ಯಾಸ ಕಂಡುಬಂದಿದೆ ಎಂದು ಉಪ ಸಮಿತಿ ವರದಿ ನೀಡಿದೆ. ಈ ಪ್ರಕರಣಗಳಲ್ಲಿ ಮಾಲೀಕರು ಪಾವತಿಸಿರುವ ಆಸ್ತಿ ತೆರಿಗೆ ಮೊತ್ತವನ್ನು ಕಳೆದು ವ್ಯತ್ಯಾಸದ ಮೊತ್ತದ ಜತೆಗೆ ದುಪ್ಪಟ್ಟು  ದಂಡ ಹಾಗೂ ಶೇ.2 ರಷ್ಟು  ಬಡ್ಡಿ ಮೊತ್ತವನ್ನು ಪಾವತಿಸುವಂತೆ ಸೂಚನೆ ನೀಡಲಾಗಿದೆ. ಇದೇ ರೀತಿ ಎಲ್ಲ ಪ್ರಕರಣಗಳಲ್ಲಿಯೂ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಬೊಮ್ಮನಹಳ್ಳಿಯಲ್ಲಿ ಎರಡು ಕಟ್ಟಡಗಳಿಗೆ ಸಂಬಂಧಿಸಿದಂತೆ ದೂರು  ದಾಖಲಾಗಿದ್ದು, ಇದರಿಂದ 3.98 ಕೋಟಿ ರೂ. ವ್ಯತ್ಯಾಸ ಕಂಡುಬಂದಿದೆ.

ಯಲಹಂಕದಲ್ಲಿ 12 ಕಟ್ಟಡಗಳ ಪ್ರಕರಣಕ್ಕೆ ಸಂಬಂಧಿಸಿದಂತೆ 6.35 ಲಕ್ಷ ರೂ. ವ್ಯತ್ಯಾಸ ಕಂಡುಬಂದಿದೆ. ಇನ್ನು ದಕ್ಷಿಣ ವಲಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ 1.17 ಲಕ್ಷ ರೂ. ನಷ್ಟವುಂಟಾಗಿರುತ್ತದೆ. ಅಲ್ಲದೆ, ವ್ಯತ್ಯಾಸ ಮೊತ್ತದಲ್ಲಿ ಶೇ.5 ಪ್ರಮಾಣಕ್ಕಿಂತ ಕಡಿಮೆ ವ್ಯತ್ಯಾಸ ಕಂಡುಬಂದಿದೆ. ಉಳಿದಂತೆ ಮಹದೇವಪುರದಲ್ಲಿ ಯಾವುದೇ ವಿಶೇಷ ಪತ್ರ ನೀಡಿಲ್ಲ. ಕಡತದಲ್ಲೇ ಇದ್ದು,ಅಪೀಲು ನಿರ್ಧಾರಗಳನ್ನು ಜಾರಿ  ಮಾಡಿಲ್ಲ. ಹೀಗಾಗಿ, ಮಹದೇವಪುರ ವ್ಯಾಪ್ತಿಯಲ್ಲಿನ ಕಟ್ಟಡಗಳಿಂದ ಯಾವುದೇ ನಷ್ಟವುಂಟಾಗಿಲ್ಲ ಎಂದು ವರದಿ ನೀಡಲಾಗಿದೆ!

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.