ಸಮುದಾಯ ಮಟ್ಟದ ಪರೀಕ್ಷೆಗೆ ವೈದ್ಯರ ಕೊರತೆ?


Team Udayavani, May 16, 2020, 4:55 AM IST

vydyaru

ಬೆಂಗಳೂರು: ಪಾದರಾಯನಪುರದಲ್ಲಿ ಸಮುದಾಯ ಮಟ್ಟದಲ್ಲಿ ಕೊರೊನಾ ಸೋಂಕು ಪರೀಕ್ಷೆಗೆ ಕೆಲವು ವೈದ್ಯಕೀಯ ಸಿಬ್ಬಂದಿ ಹಿಂದೇಟು ಹಾಕುತ್ತಿರುವುದರಿಂದ ಹಾಗೂ ವೈದ್ಯಕೀಯ ಸಿಬ್ಬಂದಿಯ ಕೊರತೆಯಿಂದಾಗಿ ಪರೀಕ್ಷೆ  ಪ್ರಕ್ರಿಯೆ ಆಮೆ ವೇಗ ಪಡೆದುಕೊಂಡಿದೆ. ಈ ಭಾಗದಲ್ಲಿ ರ್‍ಯಾಂಡಮ್‌ ಪರೀಕ್ಷೆಯಲ್ಲೂ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಗುರುವಾರದಿಂದ ಇಲ್ಲಿನ ಏಳು ಸಾವಿರ ಕುಟುಂಬದ ಸುಮಾರು 40 ಸಾವಿರ ಮಂದಿಯನ್ನು ಆರೋಗ್ಯತಪಾಸಣೆಗೆ ಒಳಪಡಿಸಿ  ಮನೆಗೆ ಒಬ್ಬರಂತೆ ಗಂಟಲು ದ್ರವ ಸಂಗ್ರಹಿಸುವ ಮೂಲಕ ಕೊರೊನಾ ಸೋಂಕು ಪರೀಕ್ಷೆಗೆ ಒಳಪಡಿಲಾಗು ತ್ತಿದೆ.

ಆದರೆ, ಸೋಂಕು ಪರೀಕ್ಷೆಗೆ ಪ್ರಾರಂಭದಿಂದಲೂ ವಿಘ್ನಗಳು ಸೃಷ್ಟಿಯಾಗುತ್ತಿದ್ದು, ಈಗ  ವೈದ್ಯಕೀಯ ಸಿಬ್ಬಂದಿಯ ಕೊರತೆ ಉಂಟಾಗಿದೆ. ಸಮುದಾಯ ಮಟ್ಟದಲ್ಲಿ ಕೊರೊನಾ ಸೋಂಕು ಪರೀಕ್ಷೆ ಮಾಡುವುದಕ್ಕೆ ಸರ್ಕಾರ ಪಿಪಿಇ ಕಿಟ್‌ಗಳನ್ನು ನೀಡಿದೆ. ಆದರೆ, ಇದಕ್ಕೆ ಪೂರಕವಾಗಿ ಸಿಬ್ಬಂದಿ ನೇಮಕ ಮಾಡಿಕೊಳ್ಳುವ  ಹಾಗೂ ಆರೋಗ್ಯ ಸಿಬ್ಬಂದಿಗೆ ತರಬೇತಿ ನೀಡುವುದು ಸವಾಲಾಗಿ ಪರಿಣಮಿಸಿದೆ. ಗುರುವಾರದಿಂದ ಸೋಂಕು ಪರೀಕ್ಷೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಗುರುವಾರ 11 ಜನರಿಗೆ ಶುಕ್ರವಾರ 16 ಜನರಿಗೆ ಕೊರೊನಾ ಸೋಂಕು ಪರೀಕ್ಷೆ  ಮಾಡಲಾಗಿದೆ. ಈ ರೀತಿ ತಪಾಸಣೆ ಮಾಡುವುದಾದರೆ, ಸಾವಿರ ಮಂದಿಯನ್ನು ತಪಾಸಣೆ ಮಾಡಲಿಕ್ಕೂ ತಿಂಗಳುಗಳೇ ಹಿಡಿಯಲಿದೆ.

ಬಿಬಿಎಂಪಿ ಏನು ವ್ಯವಸ್ಥೆ ಮಾಡಿಕೊಂಡಿದೆ: ಇಲ್ಲಿನ ಜಗಜೀವನ್‌ ರಾವ್‌ ಪೊಲೀಸ್‌ ಠಾಣೆಯ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ನ ಮೊಬೈಲ್‌ ಕ್ಲಿನಿಕ್‌ನಲ್ಲಿ ಪಾದರಾಯನಪುರದ ಹರಫತ್‌ ನಗರದ ಜನರನ್ನು ತಂದು ತಪಾಸಣೆ  ಮಾಡಲಾಗುತ್ತಿದೆ. ಅಲ್ಲದೆ, ಗೌರಿಪಾಳ್ಯದ ರೆಫರಲ್‌ ಆಸ್ಪತ್ರೆಯಲ್ಲಿ ಕೊರೊನಾ ಸೋಂಕು ಪರೀಕ್ಷೆಗೆ ಕಿಯೋಸ್ಕ್ ತೆರೆಯಲಾಗಿದೆ. ಬಿಬಿಎಂಪಿಯ ವೈದ್ಯಕೀಯ ಸಿಬ್ಬಂದಿ ಹೇಳುವಂತೆ ಒಂದು ಕಿಯೋಸ್‌ಕ್‌ ನಿರ್ವಹಣೆಗೆ ಕನಿಷ್ಠ ಏಳು ಜನ  ಬೇಕು. ಈ ಮಧ್ಯೆ ಮತ್ತೂಂದು ಕಿಯೋಸ್ಕ್ ತೆರೆಯುವುದಾಗಿ ಹೇಳಲಾಗಿತ್ತಾ  ದರೂ, ಇನ್ನು ಕಾರ್ಯರೂಪಕ್ಕೆ ಬಂದಿಲ್ಲ.

ಪಾದರಾಯನಪುರಕ್ಕೆ ಬಂದು ಗಂಟಲು ದ್ರವ ಸಂಗ್ರಹಿಸುವು ದಕ್ಕೆ ವೈದ್ಯಕೀಯ ಸಿಬ್ಬಂದಿ ಹಿಂದೇಟು  ಹಾಕುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಪಾದರಾಯನಪುರದಲ್ಲಿ ಗಂಟಲು ದ್ರವದ ಮಾದರಿ ಸಂಗ್ರಹ ಮಾಡುವುದಕ್ಕೆ ಸಂಬಂಧಿಸಿದಂತೆ ಏಳು ಮಂದಿಯ ವೈದ್ಯಕೀಯ ತಂಡಕ್ಕೆ ಪಾದರಾಯನಪುರದಲ್ಲಿಯೇ ತರಬೇತಿ ನೀಡಲಾಗಿದೆ. ಸದ್ಯಕ್ಕೆ 16  ಸಿಬ್ಬಂದಿ ಗಂಟಲ ದ್ರವದ ಮಾದರಿ ಸಂಗ್ರಹಿಸುತ್ತಿದ್ದಾರೆ. ಇದರಲ್ಲೂ ಕೆಲವರು ಗೈರುಹಾಜರಾಗುತ್ತಿರುವುದರಿಂದ ಪರೀಕ್ಷೆ ಪ್ರಕ್ರಿಯೆ ಸವಾಲಾಗಿದೆ ಎಂದು ಹೆಸರು ಹೇಳಲಿಚ್ಛಿಸದ ವೈದ್ಯಕೀಯ ಸಿಬ್ಬಂದಿ ‘ಉದಯವಾಣಿ’ ಗೆ ಮಾಹಿತಿ ನೀಡಿದ್ದಾರೆ.

ಸಿಂಪಡಣೆ ವಾಹನಕ್ಕೆ ಚಾಲನೆ: ವಾರ್ಡ್‌ ಮಟ್ಟದಲ್ಲಿ ಸೋಂಕು ಹರಡದಂತೆ ತಡೆಗಟ್ಟಲು ಖಾಸಗಿ ಕಂಪನಿಯು ಕೊರೊನಾ ಔಷಧ ಸಿಂಪಡಿ ಸುವ ವಾಹನಕ್ಕೆ ಆಹಾರ ಮತ್ತು ನಾಗರಿಕ ಸರಬರಾಜು ವ್ಯವಹಾರಗಳ ಸಚಿವ  ಗೋಪಾಲಯ್ಯ  ಶುಕ್ರವಾರ ಚಾಲನೆ ನೀಡಿ ದರು. ಮಹಾಲಕ್ಷಿ$¾ ಲೇಔಟ್‌ ನಲ್ಲಿ ಆಯೋ ಜಿಸಿದ್ದ ಕಾರ್ಯಕ್ರಮ ದಲ್ಲಿ ವಾಹನ ಯಂತ್ರ ಉದ್ಘಾಟಿಸಿ ಬೆಂಗಳೂರಿನ ಎಲ್ಲ ವಾರ್ಡ್‌ ಹಾಗೂ ರಾಜ್ಯದ ನಗರ ಸ್ಥಳೀಯ ಸಂಸ್ಥೆ ಗಳಲ್ಲೂ ಇದರ ಬಳಕೆ ಮಾಡಲಾಗು ವುದು ಎಂದರು. ಬಿಬಿಎಂಪಿ ಮಾಜಿ ಉಪ ಮಹಾ ಪೌರ ಎಸ್‌ ಹರೀಶ್‌, ಬಿಬಿಎಂಪಿ ಸದಸ್ಯ ರಾಜೇಂದ್ರ ಕುಮಾರ್‌ ಉಪಸ್ಥಿತರಿದ್ದರು.

ಸಿಬ್ಬಂದಿ ಕೊರತೆ ಉಂಟಾಗಿಲ್ಲ: ಕೊರೊನಾ ಸೋಂಕು ಪರೀಕ್ಷೆ ಮಾಡುವುದರಲ್ಲಿ ಯಾವುದೇ ಹಿನ್ನಡೆ ಉಂಟಾಗಿಲ್ಲ. ಇಲ್ಲಿ ಎಲ್ಲವೂ ಹೊಸದಾಗಿ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೇವೆ. ಆದ್ಯತೆಯ ಮೇಲೆ ಎಲ್ಲರನ್ನು ಕೊರೊನಾ ಸೋಂಕು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಎಲ್ಲವನ್ನೂ ಎಚ್ಚರಿಕೆಯಿಂದ ಮಾಡಬೇಕಿದೆ. ಗಂಟಲು ದ್ರವ ಸಂಗ್ರಹದ ಹಂತದಿಂದ ವರದಿ ನೀಡುವವರೆಗೆ ಎಲ್ಲಿಯೂ ಲೋಪವಾಗದಂತೆ ನೋಡಿಕೊಳ್ಳಬೇಕಾಗಿದೆ. ಸದ್ಯ ಎರಡು ದಿನಗಳಾಗಿದ್ದು,  ದಿನ  ದಿನಗಳಲ್ಲಿ ಪರೀಕ್ಷೆ ಮಾಡುವವರ ಸಂಖ್ಯೆ ಹೆಚ್ಚಾಗಲಿದೆ ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.