Bangalore: ಲೇಡಿ ಪಿಎಸ್‌ಐಗೆ ಬ್ಲ್ಯಾಕ್‌ಮೇಲ್‌: ಪುರುಷ ಪಿಎಸ್‌ಐ ಸೆರೆ

ನನ್ನ ಜತೆಗಿನ ಫೋಟೋ ಇಟ್ಟುಕೊಂಡು ಲೈಂಗಿಕ ದೌರ್ಜನ್ಯ: ಮಹಿಳಾ ಪಿಎಸ್‌ಐ ಆರೋಪ; ಪೊಲೀಸ್‌ ತರಬೇತಿ ವೇಳೆ ಆರೋಪಿ ಪರಿಚಯ

Team Udayavani, Mar 14, 2024, 10:43 AM IST

6-bng

ಬೆಂಗಳೂರು: ಮಹಿಳಾ ಪಿಎಸ್‌ಐವೊಬ್ಬರ ಜೊತೆಗಿನ ವೈಯಕ್ತಿಕ ದೃಶ್ಯಗಳನ್ನು ಸೆರೆ ಹಿಡಿದು ಲೈಂಗಿಕ ದೌರ್ಜನ್ಯ ಹಾಗೂ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಸಹೋದ್ಯೋಗಿ ಪುರುಷ ಪಿಎಸ್‌ಐಯನ್ನು ಚಂದ್ರಾಲೇಔಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೆಎಸ್‌ಐಎಸ್‌ಎಫ್ನ ಸಂಜಯ್‌ ಕುಮಾರ್‌ (34) ಬಂಧಿತ ಪಿಎಸ್‌ಐ.

ಈತನ ಸಹೋದ್ಯೋಗಿ 28 ವರ್ಷದ ಮಹಿಳಾ ಪಿಎಸ್‌ಐ ಕೊಟ್ಟ ದೂರಿನ ಆಧಾರದ ಮೇಲೆ ಚಂದ್ರಾ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ.

ತರಬೇತಿ ಪಡೆಯುವ ವೇಳೆ ದೂರುದಾರ ಪಿಎಸ್‌ಐಗೆ ಆರೋಪಿ ಸಂಜಯ್‌ ಪರಿಚಯವಾಗಿತ್ತು. ಆರಂಭದಲ್ಲಿ ಸಂಜಯ್‌ ಪ್ರೇಮ ನಿವೇದನೆ ಮಾಡಿದ್ದರು. ಇದನ್ನು ದೂರುದಾರ ಮಹಿಳೆ ತಿರಸ್ಕರಿಸಿದ್ದರು. ಕೆಎಸ್‌ಐಎಸ್‌ಎಫ್ ಪಿಎಸ್‌ಐ ಆಗಿ ಇದ್ದುಕೊಂಡು ನಿಮ್ಮನ್ನು ವಿವಾಹ ಆಗುವುದಿಲ್ಲ. ಯುಪಿಎಸ್ಸಿ ಮಾಡುತ್ತೇನೆ. ನನಗೆ ಓದಲು ಸಹಾಯ ಮಾಡಿ ಎಂದು ಸಂಜಯ್‌ ಹೇಳಿದ್ದರು. ಓದಿನ ನೆಪ ಇಟ್ಟುಕೊಂಡು ದೂರುದಾರರಿಗೆ ಹತ್ತಿರವಾದರು. ತದನಂತರ ತರಬೇತಿ ಮುಗಿದ ಬಳಿಕ ಕರೆಮಾಡಿ ನೀವು ನನಗೆ ಓದಲು ಸಹಾಯ ಮಾಡುತ್ತೇನೆ ಎಂದು ಹೇಳಿದ್ದೀರಿ. ನನಗೆ ಹಲವು ಸಮಸ್ಯೆಗಳಿವೆ ಸಹಾಯ ಮಾಡಿ ಎಂದು ಹೇಳಿ ಆಗಾಗ ಹಣ ತೆಗೆದುಕೊಂಡು ವಾಪಸ್‌ ಕೊಡುತ್ತಿದ್ದರು ಎಂದು ದೂರಿನಲ್ಲಿ ಮಹಿಳಾ ಪಿಎಸ್‌ಐ ಉಲ್ಲೇಖೀಸಿದ್ದಾರೆ.

ಮಹಿಳಾ ಪಿಎಸ್‌ಐಗೆ ಬ್ಲ್ಯಾಕ್‌ ಮೇಲ್‌: 2020ರಲ್ಲಿ ನನ್ನಿಂದ 5.50 ಲಕ್ಷ ರೂ. ತೆಗೆದುಕೊಂಡರು. ಓದುವ ನೆಪದಲ್ಲಿ ಹತ್ತಿರ ಆಗಿ ಜೊತೆಗಿರುವ ಸಮಯದ ಫೋಟೋಗಳನ್ನು ನನಗೆ ತಿಳಿಯದೆ ತೆಗೆದುಕೊಂಡಿದ್ದಾರೆ.

ಅವುಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ ಮೇಲ್‌ ಮಾಡಿ ನನಗೆ ಲೈಂಗಿಕ ಕಿರುಕುಳ ಕೊಡುತ್ತಿದ್ದಾರೆ. ಸಾಯುತ್ತೇನೆ ಎನ್ನುವುದು, ಕೈ ಕೊಯ್ದುಕೊಳ್ಳುವುದು ಮಾಡುತ್ತಿದ್ದರು. ಈ ರೀತಿಯಾಗಿ ಬ್ಲ್ಯಾಕ್‌ ಮೇಲ್‌ ಮಾಡಿ ನನ್ನನ್ನು ಕರೆಸಿಕೊಳ್ಳುತ್ತಿದ್ದರು. ಮದ್ಯಪಾನ, ಆನ್‌ಲೈನ್‌ ಬೆಟ್ಟಿಂಗ್‌ ಚಟ ಹೊಂದಿರುವುದು ಗಮನಕ್ಕೆ ಬಂದು ನಾನು ಸುಮ್ಮನಿದ್ದೆ. ಸಂಜಯ್‌ ಬಳಿ ಮಾತನಾಡದೇ ಇದ್ದಾಗ ಅವರು ನನ್ನ ಕರ್ತವ್ಯ ಸ್ಥಳದಲ್ಲಿ ಸಿಬ್ಬಂದಿಗೆ ಕರೆ ಮಾಡುತ್ತಿದ್ದರು.

ನನ್ನ ಬ್ಯಾಚ್‌ ನವರಿಗೆ ಕರೆಮಾಡಿ ನನ್ನ ಬಗ್ಗೆ ಇಲ್ಲ-ಸಲ್ಲದ ಆರೋಪ ಮಾಡಿದ್ದಾರೆ. ನನ್ನ ಮನೆಯ ಸುತ್ತಾ ಚಾಕು ಹಿಡಿದು ತಿರುಗಾಡಿ ಜೀವ ಬೆದರಿಕೆ ಹಾಕಿದ್ದಾರೆ. ಕರ್ತವ್ಯ ಸ್ಥಳಕ್ಕೆ ಬಂದು ಥಳಿಸಿ ನನಗೆ ತೊಂದರೆ ಕೊಟ್ಟಿದ್ದಾರೆ. ನನ್ನ ಖಾಕಿ ಯೂನಿಫಾರಂ ಗೌರವ ಮತ್ತು ನನ್ನ ಘನತೆಗೆ ಚ್ಯುತಿ ತಂದಿದ್ದಾರೆ. ನೀನು ನನ್ನನ್ನು ತಿರಸ್ಕರಿಸಿದರೆ ಅಪಹರಿಸಿಕೊಂಡು ಹೋಗಿ ತಾಳಿ ಕಟ್ಟುವುದಾಗಿ ಬೆದರಿಕೆ ಒಡ್ಡಿದ್ದಾರೆ. ಮಾ.11ರಂದು ಸಂಜಯ್‌ ನನ್ನ ಮನೆಗೆ ನುಗ್ಗಿ ನನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಎಫ್ಐಆರ್‌ನಲ್ಲಿ ಮಹಿಳಾ ಪಿಎಸ್‌ಐ ಆರೋಪಿಸಿದ್ದಾರೆ. ಚಂದ್ರಾಲೇಔಟ್‌ ಠಾಣೆ ಪೊಲೀಸರು ತನಿಖೆ ನಡೆಸಿ ಸಂಜಯ್‌ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಎಫ್ಐಆರ್‌ನಲ್ಲಿ ಏನಿದೆ?

 ಕರ್ತವ್ಯ ಸ್ಥಳಕ್ಕೆ ಬಂದು ಥಳಿತ

 ಅಪಹರಿಸಿ ವಿವಾಹವಾಗುವ ಬೆದರಿಕೆ

 ಮನೆಗೆ ನುಗ್ಗಿ ಹಲ್ಲೆಗೆ ಯತ್ನ

 ಚಾಕು ಹಿಡಿದು ಜೀವ ಬೆದರಿಕೆ

 ನನ್ನ ಸ್ನೇಹಿತರಿಗೆ ಕರೆ ಮಾಡಿ ಅಪಪ್ರಚಾರ

-ಉದಯವಾಣಿ ಸಮಾಚಾರ

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.