ಕಸ ಸಂಗ್ರಹ ಮಾಸಿಕ ಶುಲ್ಕಕ್ಕೆ ವಿರೋಧ


Team Udayavani, Jun 12, 2020, 6:06 AM IST

kasa-sangraha

ಬೆಂಗಳೂರು: ನಗರದಲ್ಲಿ ಪ್ರತಿ ಮನೆಯಿಂದ ಕಸ ಸಂಗ್ರಹಕ್ಕೆ ಮಾಸಿಕ 200 ರೂ. ವಿಧಿಸುವ ಪ್ರಸ್ತಾವನೆಗೆ  ಸಾರ್ವಜನಿಕ ವಲಯದಿಂದ ವಿರೋಧ ವ್ಯಕ್ತವಾಗಿದೆ. ಸರ್ಕಾರ ಇತ್ತೀಚೆಗೆ ಅನುಮೋದನೆ ನೀಡಿದ್ದ “ಬಿಬಿಎಂಪಿಯ ಕಸ  ನಿರ್ವಹಣೆ ಉಪ ನಿಯಮ-2020’ರ ಅನ್ವಯ ನಗರದ ಪ್ರತಿ ಮನೆಯಿಂದ ತಿಂಗಳಿಗೆ 200 ರೂ. ಶುಲ್ಕ ಸಂಗ್ರಹ ಮಾಡುವುದಕ್ಕೆ ಪಾಲಿಕೆ ಮುಂದಾ ಗಿದ್ದು, ಜುಲೈನಿಂದ ಇದು ಜಾರಿಗೆ ಬರುವ ಸಾಧ್ಯತೆ ಇದೆ.

ಇದಕ್ಕೆ ತೀವ್ರ ವಿರೋಧ  ವ್ಯಕ್ತವಾಗಿದೆ. ಪಾಲಿಕೆ ಸದಸ್ಯೆ ಲತಾ ಕುಮಾರ್‌ ರಾಥೋಡ್‌ ಸೇರಿದಂತೆ ಗಾಂಧಿ  ನಗರದ ಕಾಂಗ್ರೆಸ್‌ ಮುಖಂಡರು, ವಿವಿಧ ಸಂಘ ಸಂಸ್ಥೆ ಪದಾಧಿಕಾರಿಗಳು ಗುರುವಾರ ಪಶ್ಚಿಮ ವಲಯದ ಜಂಟಿ ಆಯುಕ್ತರ ಕಚೇರಿಯ ಮುಂಭಾಗ  ಪ್ರತಿಭಟನೆ ನಡೆಸಿದ್ದು, ತ್ಯಾಜ್ಯಸಂಗ್ರಹಣೆಗೆ ಮಾಸಿಕ ಶುಲ್ಕ ವಿಧಿಸದಂತೆ ಜಂಟಿ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿದ ಘನತ್ಯಾಜ್ಯ ವಿಭಾಗದ ವಿಶೇಷ ಆಯುಕ್ತ ಡಿ.ರಂದೀಪ್‌, ಬಿಬಿಎಂಪಿಯು ಈಗಾಗಲೇ ಕಸ  ನಿರ್ವಹಣೆಗೆ ಕೋಟ್ಯಂತರ ರೂ. ವೆಚ್ಚ ಮಾಡುತ್ತಿದೆ. ಇದನ್ನು ಸರಿದೂಗಿಸುವ ಉದ್ದೇಶ ದಿಂದ ಕಸ ಸಂಗ್ರಹಕ್ಕೆ ಶುಲ್ಕ ವಿಧಿಸುವು ದು ಅನಿವಾರ್ಯ.

ಇನ್ನು ಕೇಂದ್ರ ಸರ್ಕಾರದ ಘನತ್ಯಾಜ್ಯ ನಿರ್ವಹಣೆ 2016ರ ನಿಯಮದ ಪ್ರಕಾರ ಬಿಬಿಎಂಪಿಯ ಕಸ ನಿರ್ವಹಣೆ ಉಪ ನಿಯಮ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ. ಕಸ ಶುಲ್ಕ ನೀಡದಿದ್ದರೆ ಸಂಬಂಧ  ಪಟ್ಟವರಿಂದ ಕಸ ಸಂಗ್ರಹ ಮಾಡುವುದಿಲ್ಲ. ಜಲಮಂಡಳಿಯ ನೀರಿನ ಶುಲ್ಕ ಸಂಗ್ರಹಿಸುವ ಮಾದರಿಯಲ್ಲಿ ಕಸದ ಮಾಸಿಕ ಶುಲ್ಕ ಸಂಗ್ರಹಿಸುವ  ಚಿಂತನೆ ಇದೆ. ಈ ಸಂಬಂಧ ಮೇಯರ್‌, ಆಯುಕ್ತರೊಂದಿಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಕಸ ಸಂಗ್ರಹಕ್ಕೆ ವಿಧಿಸಲಾಗುವ ಶುಲ್ಕ: ನಗರದಲ್ಲಿ ಕಸ ನೀಡುವ ಎಲ್ಲ ಮನೆಗಳಿಂದ ಮಾಸಿಕ 200 ರೂ. (ತ್ಯಾಜ್ಯಉತ್ಪಾದಕರಿಂದ) ಹಾಗೂ ವಾಣಿಜ್ಯ ಉತ್ಪಾದಕರಿಂದ ಕಸದ ಪ್ರಮಾಣ ಆಧರಿಸಿ ಶುಲ್ಕ ಸಂಗ್ರಹಿಸಲು ನಿರ್ಧರಿಸಲಾಗಿದೆ.  ಅದರಂತೆ, (ದಿನಕ್ಕೆ) 5 ಕೆ.ಜಿ. ಗಿಂತ ಕಡಿಮೆ ಕಸ ಉತ್ಪಾದಕರಿಗೆ 500 ರೂ., 5 ರಿಂದ 10 ಕೆ.ಜಿ. ಕಸ ಉತ್ಪಾದಕರಿಗೆ 1,400 ರೂ., 11 ರಿಂದ 25 ಕೆ.ಜಿ. ಕಸ ಉತ್ಪಾದಕರಿಗೆ 3,500 ರೂ., 26 ರಿಂದ 50 ಕೆ.ಜಿ. ಕಸ ಉತ್ಪಾದಕರಿಗೆ 7,000 ರೂ. ಹಾಗೂ  100 ಅಥವಾ ಹೆಚ್ಚಿನ ಕಸ ಉತ್ಪಾದಕರಿಗೆ 14,000 ರೂ. ಶುಲ್ಕ ಸಂಗ್ರಹಿಸಲು ನಿರ್ಧರಿಸಲಾಗಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.