ಸಿಬ್ಬಂದಿ ಮನೆ ಸದಸ್ಯರಿಂದಲೇ ಖಾಕಿ ಸಮವಸ್ತ್ರ!

ಪ್ರತಿ ಸಮವಸ್ತ್ರ ಹೊಲಿಗೆಗೆ 200-250 ರೂ. ಪ್ರೋತ್ಸಾಹ ಧನ | ಕೆಎಸ್‌ಆರ್‌ಪಿ 3ನೇ ಬೆಟಾಲಿಯನ್‌ನಲ್ಲಿರುವ ಟೈಲರಿಂಗ್‌ ಕೇಂದ್ರ

Team Udayavani, Oct 4, 2021, 11:09 AM IST

ಸಿಬಂದಿ ಮನೆ ಸದಸ್ಯರಿಂದಲೇ   ಖಾಕಿ ಸಮವಸ್ತ್ರ!

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್‌ ಮೀಸಲು ಪಡೆ(ಕೆಎಸ್‌ಆರ್‌ಪಿ) ಮಹಿಳಾ ಸಬಲೀಕರಣಕ್ಕೆ ಮುಂದಾಗಿದ್ದು, ಇಲಾಖೆ ಸಿಬ್ಬಂದಿ ಮನೆ ಮಹಿಳೆಯರ ಸ್ವಾವಲಂಬನೆಗಾಗಿ ಸೂಕ್ತ ವೇದಿಕೆಯೊಂದನ್ನು ಸೃಷ್ಟಿಸಿದೆ. ಈ ಮೂಲಕ ಇಲಾಖೆ ಸಿಬ್ಬಂದಿ ಮನೆ ಮಹಿಳಾ ಸದಸ್ಯರಿಂದಲೇ ಸಮವಸ್ತ್ರ ಸಿದ್ಧಪಡಿಸುತ್ತಿದೆ! ಅದರಿಂದ ಮಹಿಳೆಯರು ಮನೆ ಕೆಲಸದ ಜತೆಗೆ ಮಾಸಿಕ ಕನಿಷ್ಠ 10-12 ಸಾವಿರ ರೂ. ಗಳಿಸಲು ಅವಕಾಶ ಕಲ್ಪಿಸಿದೆ.

ಕೆಎಸ್‌ಆರ್‌ಪಿಗೆ ನೇಮಕಗೊಂಡ ಪ್ರತಿ ಅಧಿಕಾರಿ- ಸಿಬ್ಬಂದಿಗೆ ಪ್ರತಿ ವರ್ಷ ಸರ್ಕಾರದಿಂದ ಎರಡು ಜತೆ ಸಮವಸ್ತ್ರ ವಿತರಿಸಲಾಗುತ್ತದೆ. ಅದನ್ನು ಕೋರಮಂಗಲದಲ್ಲಿರುವ ಮೂರನೇ ಬೆಟಾಲಿಯನ್‌ ಆವರಣದಲ್ಲಿರುವ ಟೈಲರಿಂಗ್‌ ಕೇಂದ್ರದಲ್ಲಿ ಸಿದ್ಧಪಡಿಸಲಾಗುತ್ತದೆ. ಅದಕ್ಕಾಗಿ ಇಲಾಖೆಯಿಂದ ನುರಿತ ಟೈಲರ್‌ಗಳನ್ನು ನೇಮಿಸಿಕೊಳ್ಳಲಾಗಿದ್ದು, ನಿತ್ಯ ಹತ್ತಾರು ಜತೆ ಸಮವಸ್ತ್ರ ಸಿದ್ಧಪಡಿಸಬೇಕಾಗಿದೆ.

ಇದನ್ನೂ ಓದಿ;- ಕಾಶ್ಮೀರ ಕಣಿವೆ ಕಥನ; ಶಾಂತಿಯುತ ಬದುಕಿನ ಕನಸು ಕೊನರಿರುವುದೇ ದೊಡ್ಡ ಬದಲಾವಣೆ

ಈ ಕೇಂದ್ರದಲ್ಲಿ 2 ಕಾಜಾ ಮೆಷಿನ್‌, ಮೂರು ಓವರ್‌ಲಾಕ್‌ ಮೆಷಿನ್‌, 2 ಪ್ರಸ್‌ ಬಟನ್‌/ರೆಗ್ಯೂಲರ್‌ ಸ್ಟಿಚ್‌ ಮೆಷಿನ್‌ಗಳು, 25 ಹೊಲಿಗೆ ಯಂತ್ರಗಳು ಇವೆ. ಸಂಘದ ಅಡಿಯಲ್ಲಿ ಟೈಲರಿಂಗ್‌ ಕೇಂದ್ರ ಕಾರ್ಯನಿರ್ವಹಿಸುವುದರಿಂದ ಸಿಬ್ಬಂದಿ ಮನೆಯ ಆಸಕ್ತ ಮಹಿಳಾ ಸದಸ್ಯರಿಗೆ ಟೈಲರಿಂಗ್‌ ತರಬೇತಿ ಕೊಟ್ಟು, ಅವರಿಂದಲೇ ಸಮವಸ್ತ್ರ ಸಿದ್ಧಪಡಿಸಲಾಗುತ್ತದೆ. ಅದರಿಂದ ಇಂತಿಷ್ಟು ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ಕೆಎಸ್‌ಆರ್‌ಪಿ ಮೂಲಗಳು ತಿಳಿಸಿವೆ.

200-250 ರೂ. ಪ್ರೋತ್ಸಾಹ ಧನ: ಸಂಘದಿಂದ ಸಮವಸ್ತ ಸಿದ್ಧಪಡಿಸಲು ಬೇಕಾದ ಕಚ್ಚಾವಸ್ತುಗಳನ್ನು ಒದಗಿಸಲಾಗುತ್ತದೆ. ನುರಿತ ಟೈಲರ್ಸ್‌ ವಸ್ತ್ರ ಕಟ್ಟಿಂಗ್‌ ಮಾಡಿ, ಕಾಲರ್‌ ಸಿದ್ಧಪಡಿಸಿರುತ್ತಾರೆ. ಹೀಗಾಗಿ ಮಹಿಳೆಯರಿಗೆ ಹೆಚ್ಚು ಶ್ರಮ ಇರುವುದಿಲ್ಲ.

ಅವುಗಳನ್ನು ಜೋಡಿಸಿ ಹೊಲಿಗೆ ಹಾಕಬೇಕು ಅಷ್ಟೇ. ನಂತರ ಬಟನ್‌, ಕಾಜಾ ಹಾಕುವುದನ್ನು ಯಂತ್ರಗಳ ಮೂಲಕ ಮಾಡಿಕೊಳ್ಳಲಾಗುತ್ತದೆ. ಹೀಗಾಗಿ ಮಹಿಳೆಯರಿಗೆ ಇಂತಿಷ್ಟೇ ಸಮಯಕ್ಕೆ ಬರಬೇಕೆಂದು ಸೂಚಿಸಿಲ್ಲ. ಬೆಳಗ್ಗೆ 9 ಗಂಟೆಗೆ ಟೈಲರಿಂಗ್‌ ಕೇಂದ್ರ ತೆರೆಯುತ್ತದೆ. ಆದರೆ, ಮನೆಯ ಕೆಲಸ ಮುಗಿಸಿಕೊಂಡು ಬೆಳಗ್ಗೆ 11 ಗಂಟೆ ನಂತರ ಮಹಿಳೆಯರು ಬಂದು ಕೆಲಸ ಮಾಡಬಹುದು. ಒಂದು ಜತೆ ಸಮವಸ್ತ್ರ ಹೊಲಿದರೆ 200-250 ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ. ಅದರಿಂದ ಮಹಿಳೆಯರು, ಮನೆ ಕೆಲಸದ ಜತೆಗೆ ಮಾಸಿಕ 10-12 ಸಾವಿರ ರೂ. ಗಳಿಸಬಹುದು.‌

ಅದರಿಂದ ಮನೆಯ ಏಕಾಂತ ವಾತವರಣದಿಂದ ಹೊರಬರಲು ಸಹಾಯವಾಗುತ್ತದೆ. ಜತೆಗೆ ಸ್ವಾವಲಂಬಿ ಬದುಕಿಗೂ ನೆರವಾಗುತ್ತದೆ. ಪ್ರತಿನಿತ್ಯ 25 ಮಹಿಳೆಯರು ಕೆಲಸ ಮಾಡುತ್ತಿದ್ದಾರೆ ಎಂದು ಕೆಎಸ್‌ಆರ್‌ಪಿಯ 3ನೇ ಬೆಟಾಲಿಯನ್‌ ಕಮಾಂಡೆಂಟ್‌ ಎಂ.ವಿ.ರಾಮಕೃಷ್ಣ ಪ್ರಸಾದ್‌ ಮಾಹಿತಿ ನೀಡಿದರು.

ಇನ್ನಷ್ಟು ಮಹಿಳೆಯರಿಗೆ ತರಬೇತಿ: ರೋಟರಿ ಕ್ಲಬ್‌ ಜತೆ ಚರ್ಚಿಸಿ ಇನ್ನಷ್ಟು ಮಹಿಳೆಯರಿಗೆ ಹೊಲಿಗೆ ತರಬೇತಿ ಕೊಡಿಸಲಾಗುತ್ತದೆ. ಈ ಕ್ಲಬ್‌ ಅಡಿಯಲ್ಲಿ ತರಬೇತಿ ಪಡೆದರೆ, ಟೈಲರಿಂಗ್‌ ಕಿಟ್‌ ದೊರೆಯುವುದರಿಂದ, ಭವಿಷ್ಯದಲ್ಲಿ ಮನೆಯಲ್ಲೇ ಕೂತು ಟೈಲರಿಂಗ್‌ ಮಾಡಿಕೊಂಡೆ ಹಣ ಸಂಪಾದಿಸಬಹುದು ಎಂದು ಅಧಿಕಾರಿ ವಿವರಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.