ಮಳೆ: ಅಭಿವೃದ್ದಿ ಚಟುವಟಿಕೆಗೆ ಬ್ರೇಕ್‌


Team Udayavani, Nov 20, 2021, 1:23 PM IST

12developments

ಬೆಂಗಳೂರು: ಸತತ ಒಂದು ವಾರದಿಂದ ಸುರಿಯುತ್ತಿರುವ ಅಕಾಲಿಕ ಮಳೆಯು ರಾಜಧಾನಿಯ ಜನಜೀವನ ಅಸ್ತವ್ಯಸ್ಥಗೊಳಿಸಿರುವುದು ಮಾತ್ರವಲ್ಲದೇ, ಅಭಿವೃದ್ಧಿ ಚಟುವಟಿಕೆಗಳಿಗೆ ಬ್ರೇಕ್‌ ಹಾಕಿದೆ.

ಕಳೆದ 2-3 ದಿನಗಳಿಂದ ನಗರ ದಲ್ಲಿ ನಡೆಯುತ್ತಿರುವ ಕಾಮಗಾರಿಗಳು ಬಹುತೇಕ ಸ್ಥಗಿತಗೊಂಡಿವೆ. ನಗರದ ಅಭಿವೃದ್ಧಿ ಸ್ತಂಭಗಳಾದ ಬಿಬಿಎಂಪಿ, ಬೆಂಗಳೂರು ಜಲಮಂಡಳಿ ಬಿಡಿಎ ಹಾಗೂ ಬಿಎಂಆರ್‌ಸಿಎಲ್‌ ನಿಂದ ರಸ್ತೆ, ಮೇಲ್ಸೇತುವೆ, ನೀರಿನ ಕೊಳವೆ ಅಳವಡಿಕೆ, ಮೆಟ್ರೋ ನಿಲ್ದಾಣ, ವಸತಿ ಗೃಹ ನಿರ್ಮಾ ಣದಂತಹ ನೂರಾರು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದವು. ನಿರಂತರ ಮಳೆಯಿಂದ ಕಾಮಗಾರಿ ಸ್ಥಳದಲ್ಲಿ ಸಾಕಷ್ಟು ನೀರು ನಿಲ್ಲುತ್ತಿದೆ. ಅಗೆದ ಗುಂಡಿಗಳಲ್ಲಿ ನೀರು ತುಂಬುತ್ತಿದೆ.

ವೆಲ್ಡಿಂಗ್‌, ಗಾರೆ, ಪೇಟಿಂಗ್‌ ಕೆಲಸಗಳಿಗೆ ಮಳೆ ನೀರು ಬಿದ್ದು ಅಡಚಣೆಯಾಗುತ್ತಿದೆ. ಅಲ್ಲದೆ, ಮಳೆಯಿಂದ ಕಾರ್ಮಿಕರು ಕೂಡಾ ಕೆಲಸಕ್ಕೆ ಹಾಜರಾಗಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ, ಬಹುತೇಕ ಕಾಮಗಾರಿಗಳು ಸ್ಥಗಿತಗೊಂಡಿವೆ. ಕಳೆದ ಸೋಮವಾರದಿಂದಲೇ ಕಾಮಗಾರಿಗಳು ಮಂದಗತಿಯಲ್ಲಿ ಸಾಗುತ್ತಿದ್ದು, ಅದರಲ್ಲೂ ಕಳೆದ ಎರಡು ದಿನಗಳಿಂದ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ ಎಂದು ಆಯಾ ಸಂಸ್ಥೆಗಳ ಎಂಜಿನಿಯರ್‌ಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಸುರತ್ಕಲ್‌ ಟೋಲ್‌ಗೇಟ್‌ : ಭರವಸೆಯ ಮಹಾಪೂರಗಳ ನಡುವೆ ಮತ್ತೆ ವಿಸ್ತರಣೆ ಭಾಗ್ಯ

ನಗರದಲ್ಲಿ ಸಾವಿರಾರು ಖಾಸಗಿ ಕಟ್ಟಡಗಳು, ಮನೆಗಳ ನಿರ್ಮಾಣ ಕಾಮಗಾರಿಗಳು ನಡೆಯುತ್ತಿದ್ದು, ಇವುಗಳಿಗೆ ಕೂಡಾ ಮಳೆ ತೊಡಕಾಗಿದೆ. ಬಹುತೇಕ ಕಟ್ಟಡ ನಿರ್ಮಾಣ ಸಂಸ್ಥೆಗಳು ಒಳಾಂಗಣ ಕಾಮಗಾರಿಗಳಿಗೆ ಮೊರೆ ಹೋಗಿದ್ದಾರೆ. ಹಲವು ಕಂಪನಿಗಳು ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮಳೆ ನಿಂತ ನಂತರ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಿದ್ದಾರೆ.

“ಮಳೆಯಿಂದ ಕಟ್ಟಡ ನಿರ್ಮಾಣ ಸಾಮಗ್ರಿಗಳ ಸಾಗಣೆಯೂ ಕಷ್ಟ ಸಾಧ್ಯವಾಗಿದ್ದು, ಕಾಮ ಗಾರಿಯ ಗುಣ ಮಟ್ಟಕ್ಕೆ ಹಾನಿಯಾಗುತ್ತದೆ. ಹೀಗಾಗಿ ಮಳೆ ಕಡಿಮೆಯಾಗುವವರೆಗೂ ಕಾಮಗಾರಿಗಳನ್ನು ಮುಂದೂಡಲಾಗಿದೆ’ ಎನ್ನುತ್ತಾರೆ ಖಾಸಗಿ ಸಂಸ್ಥೆ ಎಂಜಿನಿಯರ್‌ ಸುಹಾಸ್‌ನಾಯಕ್‌.

ಮುಂಜಾಗ್ರತಾ ಕ್ರಮವಾಗಿಯೂ ಸ್ಥಗಿತ

ನಿರಂತರ ಮಳೆಯಿಂದ ಮಣ್ಣು ಸಡಿಲವಾಗಿರುತ್ತದೆ. ದೊಡ್ಡ ಕಟ್ಟಡ, ಸೇತುವೆ ಕಾಮಗಾರಿಗಳಲ್ಲಿ ಮಣ್ಣು, ಗೋಡೆ ಕುಸಿತ ಉಂಟಾಗುವ ಸಾಧ್ಯತೆಗಳಿರುತ್ತದೆ. ವಿದ್ಯುತ್‌ ಅವಘಡಗಳು ಉಂಟಾಗುತ್ತವೆ. ಇದರಿಂದ ಕಾರ್ಮಿಕರು ಅಪಾಯಕ್ಕೆ ಸಿಲುಕುತ್ತಾರೆ. ಹೀಗಾಗಿಯೇ, ಹಲವು ಕಾರ್ಮಿಕರು ಕೆಲಸಕ್ಕೆ ಬರಲು ಹಿಂದೇಟು ಹಾಕುತ್ತಾರೆ. ಮುಂಜಾಗ್ರತಾ ಕ್ರಮವಾಗಿ ಕಾಮಗಾರಿಗಳನ್ನು ತಾತ್ಕಾಲಿಕ ನಿಲ್ಲಿಸಲಾಗಿದೆ. ಸುರಕ್ಷಿತ ಸ್ಥಳದಲ್ಲಿರುವ ಮತ್ತು ಒಳಾಂಗಣ ಕಾಮಗಾರಿಗಳು ನಡೆಸಲಾಗುತ್ತಿದೆ ಎನ್ನು ತ್ತಾರೆ ಬಿಬಿಎಂಪಿ, ಬಿಡಿಎ ಎಂಜಿನಿಯರ್‌ಗಳು.

ನಷ್ಟ ಇಲ್ಲ; ಮುಕ್ತಾಯ ವಿಳಂಬ

ಮಳೆ ಯಿಂದ ಸ್ಥಗಿತಗೊಂಡ ಕಾಮಗಾರಿಗಳಿಂದ ಇಲಾಖೆಗಳಿಗೆ ಹೆಚ್ಚಿನ ನಷ್ಟವಿಲ್ಲ. ಆದರೆ, ಕಾಮಗಾರಿಗಳು ನಿಗದಿತ ಸಮಯಕ್ಕೆ ಮುಕ್ತಾಯವಾಗುವುದಿಲ್ಲ. ರಸ್ತೆ ಗುಂಡಿ ವಿಚಾರದಲ್ಲಿ ಮಾತ್ರ ಮಳೆ ಹೆಚ್ಚಾದಷ್ಟು ಗುಂಡಿಗಳ ಸಂಖ್ಯೆ ಹೆಚ್ಚಳವಾಗುತ್ತದೆ ಎಂದು ಎಂಜಿನಿಯರ್‌ಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.