![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Jun 25, 2020, 5:15 AM IST
ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಆತಂಕ ಪಡಬೇಕಿಲ್ಲ. ಸರ್ಕಾರ ಎಲ್ಲ ರೀತಿಯ ಸುರಕ್ಷತಾ ಕ್ರಮ ಕೈಗೊಂಡಿದೆ. ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಆರೋಗ್ಯ ಸಚಿವ ಶ್ರೀ ರಾಮುಲು ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದರು.
ವಿದ್ಯಾರ್ಥಿಗಳು ಕಡ್ಡಾಯವಾಗಿ ಮುಂಜಾಗ್ರತಾ ಕ್ರಮ ಪಾಲಿಸುವಂತೆ ಮನವಿ ಮಾಡಿದರು. ಪರೀಕ್ಷಾ ಕೇಂದ್ರಗಳಲ್ಲಿ ಸುರಕ್ಷತೆ ಸಂಬಂಧ ಶಿಕ್ಷಣ ಸಚಿವ ಸುರೇಶ್ ಕುಮಾರ್, ಆರೋಗ್ಯ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಹೊರರಾಜ್ಯದಿಂದ ಬಂದವರಿಂದ ಕೋವಿಡ್ 19 ಸೋಂಕು ಹರಡುತ್ತಿರುವುದು ಹೆಚ್ಚಾಗಿದೆ.
ಹೀಗಾಗಿ ಸಮುದಾಯಕ್ಕೆ ಸೋಂಕು ಹರಡದಂತೆ ನಾವು ಅಗತ್ಯವಾಗಿ ತಪಾಸಣೆ ಹೆಚ್ಚಿಸಬೇಕಿದೆ. ಸೋಮವಾರ ಮತ್ತೆ ಕಾರ್ಯಪಡೆ ಸಭೆ ಇದ್ದು ಈ ಕುರಿತು ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಿದ್ದೇವೆ ಎಂದು ಮಾಹಿತಿ ನೀಡಿದರು. ಹಾಗೆಯೇ ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿ ವಿಚಾರದಲ್ಲಿ ನಮ್ಮಲ್ಲಿ ತಜ್ಞರ ಸಮಿತಿ ಇದೆ. ನನ್ನ ವೈಯಕ್ತಿಕ ಅಭಿಪ್ರಾಯಗಳು ಬೇರೆ ಇದೆ, ಆದರೆ ಸರ್ಕಾರದ ತೀರ್ಮಾನ ಅಂತಿಮ ಎಂದು ತಿಳಿಸಿದರು.
You seem to have an Ad Blocker on.
To continue reading, please turn it off or whitelist Udayavani.