ಮಕ್ಕಳ ಖಿನ್ನತೆ ತಡೆಗೆ ಟೆಲಿ ಸಮಾಲೋಚನೆ


Team Udayavani, Jun 16, 2020, 6:08 AM IST

depresion

ಬೆಂಗಳೂರು: ರೋಗಿಗಳಿಗೆ ಟೆಲಿ ಮೆಡಿಸಿನ್‌ ಆಯ್ತು. ಈಗ ಕೋವಿಡ್‌ 19 ಹಿನ್ನೆಲೆ ಮಕ್ಕಳು ಖಿನ್ನತೆಗೆ ಒಳಗಾದ ಮಕ್ಕಳಿಗಾಗಿ “ಟೆಲಿ ಆಪ್ತ ಸಮಾಲೋಚನೆ’ ಅಸ್ತಿತ್ವಕ್ಕೆ ಬರಲಿದೆ. ಮಕ್ಕಳ ಮಾನಸಿಕ ಒತ್ತಡ ಕಡಿಮೆ ಮಾಡಲು ಸಮಗ್ರ ಮಕ್ಕಳ ರಕ್ಷಣಾ ಯೋಜನೆ (ಐಸಿಪಿಎಸ್‌) ನಿರ್ದೇಶನಾಲಯ ಇದೇ ಮೊದಲ ಬಾರಿಗೆ ಇಂತಹದ್ದೊಂದು ಕೇಂದ್ರವನ್ನು ತೆರೆಯಲು ಮುಂದಾಗಿದೆ.

ಈ ಸಮಾಲೋಚನೆಯು ದೂರವಾಣಿ ಮೂಲಕ ನಡೆಯಲಿದ್ದು, ಉಚಿತ ದೂರವಾಣಿ ಸಂಖ್ಯೆ  ನೀಡುವ ಸಂಬಂಧ ಐಸಿಪಿಎಸ್‌ ನಿರ್ದೇ ಶನಾಲಯವು ಬಿಎಸ್‌ಎನ್‌ಎಲ್‌ ಜತೆ ಚರ್ಚೆ ನಡೆಸಿದೆ. ಮಾಸಾಂತ್ಯಕ್ಕೆ ಇದು ಆರಂಭವಾಗುವ ನಿರೀಕ್ಷೆ ಇದೆ. ಟೆಲಿ ಆಪ್ತ ಸಮಾಲೋಚನೆ ಆರಂಭಿಸಲು ಈಗಾಗಲೇ ಸರ್ಕಾರ ಅನುಮತಿ ನೀಡಿದ್ದು,  ವಿಶ್ವ ಸಂಸ್ಥೆಯ ಮಕ್ಕಳ ನಿಧಿ (ಯುನಿಸೆಫ್) ವಿವಿಧ ವೆಚ್ಚಗಳಿಗಾಗಿ ತಿಂಗಳಿಗೆ ಸುಮಾರು 17 ಸಾವಿರ ರೂ. ಅನುದಾನ ನೀಡಲು ಸಮ್ಮತಿ ನೀಡಿದೆ.

ಉಳಿದ ವೆಚ್ಚ ರಾಜ್ಯ ಸರ್ಕಾರ ಭರಿಸಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.  ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಾಲಾ-ಕಾಲೇಜು ಆರಂಭ ಸೇರಿದಂತೆ ಇನ್ನಿತರ ಗೊಂದಲಗಳಿಂದಾಗಿ ಮಕ್ಕಳು ಮಾನಸಿಕ ಒತ್ತಡ, ಖಿನ್ನತೆಗೆ ಒಳಗಾಗುತ್ತಿದ್ದಾರೆ. ಕೋವಿಡ್‌ 19 ಹೆಚ್ಚಳ ಹಾಗೂ ಯುವಜನತೆ ಮೃತಪಡುತ್ತಿದ್ದು, ಇಂತಹ  ಸಂದರ್ಭದಲ್ಲಿ ಪರೀಕ್ಷೆ ಬರೆಯುವುದು ಹೇಗೆ? ಸಾರಿಗೆ ಸಿಬ್ಬಂದಿಗೂ ಸೋಂಕು ತಗುಲಿದ್ದು, ಪರೀಕ್ಷೆ ಬರೆ ಯಲು ಕೇಂದ್ರಗಳಿಗೆ ಹೇಗೆ ಹೋಗಬೇಕು?

ಆನ್‌ಲೈನ್‌ ಮೂಲಕ ಪಾಠ ಮಾಡುತ್ತೇವೆ ಎಂದು ಕೆಲ ಶಿಕ್ಷಣ ಸಂಸ್ಥೆಗಳು ಹೇಳುತ್ತಿವೆ.  ಕೆಲ ಪೋಷಕರ ಬಳಿ ಸ್ಮಾರ್ಟ್‌ಫೋನ್‌ ಇಲ್ಲ. ಇದ್ದರೂ, ನೆಟ್‌ವರ್ಕ್‌ ಸಮಸ್ಯೆ ಎಂಬ ಆತಂಕದಲ್ಲಿ ಮಕ್ಕಳು ಹಾಗೂ ಪೋಷಕರಿದ್ದಾರೆ. ಇದು ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದ್ದು, ಆತಂಕ ನಿವಾರಣೆಗೆ ಹಾಗೂ ಮಕ್ಕಳ  ರಕ್ಷಣೆಗಾಗಿ ಟೆಲಿ ಆಪ್ತ ಸಮಾಲೋಚನೆ ನಡೆಸಲು ಐಸಿಪಿಎಸ್‌ ನಿರ್ಧರಿಸಿದೆ.

ಉಚಿತ ದೂರವಾಣಿ ಸಂಖ್ಯೆಯನ್ನು ಐಸಿಪಿಎಸ್‌ ರಾಜ್ಯಾದ್ಯಂತ ಪ್ರಚುರಪಡಿಸಲಿದ್ದು, ಬಂದ ಕರೆಗಳನ್ನು ಸ್ವೀಕರಿಸಲು ಇಬ್ಬರು ಸಿಬ್ಬಂದಿ  ನೇಮಕಗೊಳ್ಳಲಿದ್ದಾರೆ. ಕರೆ ಸ್ವೀಕರಿಸಿದ ಸಿಬ್ಬಂದಿಯು ಮಕ್ಕಳ ಮಾಹಿತಿ ಪಡೆದು ಆಪ್ತ ಸಮಾಲೋಚಕರಿಗೆ ಕರೆಯನ್ನು ರವಾನಿಸಲಿದ್ದಾರೆ. ಆದ್ದರಿಂದಾಗಿ ನಿಮಿಷಕ್ಕೆ ಎಷ್ಟೇ ಕರೆಗಳು ಬಂದರೂ, ತೊಂದರೆಯಾಗ ದಂತೆ ವ್ಯವಸ್ಥೆ  ಮಾಡಲಾಗಿದೆ.

ಯೂಟ್ಯೂಬ್‌ ಆನ್‌ಲೈನ್‌ ತರಬೇತಿ: ಮಕ್ಕಳಲ್ಲಿರುವ ಗೊಂದಲ, ಆತಂಕ ಹಾಗೂ ಖಿನ್ನತೆ ನಿವಾರಿಸಲು ಇಲಾಖೆಯಲ್ಲಿ ಸುಮಾರು 120 ಆಪ್ತ ಸಮಾಲೋಚಕರಿದ್ದು, ಇವರಿಗೆ ನಿಮ್ಹಾನ್ಸ್‌ ವೈದ್ಯರು ತರಬೇತಿ ನೀಡಲಿದ್ದಾರೆ. ಕೋವಿಡ್‌ 19 ಹಿನ್ನೆಲೆ ಸಾಮಾಜಿಕ ಅಂತರ ಕಾಯ್ದುಕೊ ಳ್ಳುವ ಸಂಬಂಧ ಅಂದಾಜು 15 ದಿನಗಳ ತರಬೇತಿಯು ಯೂಟ್ಯೂಬ್‌ ಮೂಲಕ ನಡೆಯಲಿದೆ. ಫೋನ್‌ ಮೂಲಕ ಆಪ್ತ ಸಮಾಲೋಚನೆ ಮಾಡುವುದು ಸವಾಲಿನ  ಕೆಲಸವಾಗಿದ್ದು, ಮಕ್ಕಳ ಧ್ವನಿಯನ್ನು ಗ್ರಹಿಸಿ ಮಾತನಾಡಲು ತರಬೇತಿ ನೀಡಲಿದ್ದಾರೆ ಎಂದು ಸಮಗ್ರ ಮಕ್ಕಳ ರಕ್ಷಣಾ ಯೋಜನೆ ನಿರ್ದೇಶಕಿ ಪಲ್ಲವಿ ಅಕುರಾತಿ ತಿಳಿಸಿದ್ದಾರೆ.

ಕೋವಿಡ್‌ 19 ಹಿನ್ನೆಲೆ ಸಾಮಾಜಿಕ ಅಂತರ ಕಾಯ್ದು ಕೊಳ್ಳುವ ಜತೆಗೆ ಮಕ್ಕಳಲ್ಲಿನ ಆತಂಕ, ಖಿನ್ನತೆ ನಿವಾ ರಿಸಲು ಟೆಲಿ ಆಪ್ತಸಮಾಲೋಚನೆ ಎಂಬ ವಿನೂತನ ಯೋಜನೆ ಹಾಕಿಕೊಳ್ಳಲಾಗಿದೆ. ಶೀಘ್ರವೇ ಆಪ್ತ ಸಮಾಲೋಚಕರಿಗೆ  ತರಬೇತಿ ನೀಡಲಾಗುವುದು. ನಂತರ ಟೆಲಿ ಆಪ್ತ ಸಮಾಲೋಚನೆ ಆರಂಭಿಸಲಾಗುವುದು.
-ಪಲ್ಲವಿ ಅಕುರಾತಿ, ಸಮಗ್ರ ಮಕ್ಕಳ ರಕ್ಷಣಾ ಯೋಜನೆ ನಿರ್ದೇಶಕರು

ಕೋವಿಡ್‌ 19 ಹಿನ್ನೆಲೆ ಮಕ್ಕಳು ಮಾನಸಿಕ ಒತ್ತಡ, ಆತಂಕ, ಖಿನ್ನತೆಗೆ ಒಳಗಾಗಿದ್ದು, ಈ ಸಂದರ್ಭದಲ್ಲಿ ನೇರ ಸಂದರ್ಶನದ ಮೂಲಕ ಆಪ್ತ ಸಮಾಲೋಚನೆ ಅಸಾಧ್ಯ ವಾಗಿದೆ. ಪ್ರಸ್ತುತ ಟೆಲಿ ಕೌನ್ಸಲಿಂಗ್‌ ಉಪಯುಕ್ತ ವಾಗಿದ್ದು, ಮಕ್ಕಳ  ಧ್ವನಿ ಗ್ರಹಿಸಿ ಸಮಾಲೋಚನೆ ನಡೆಸುವುದು ತಾತ್ಕಾಲಿಕ ಮಾರ್ಗೋಪಾಯ. 
-ಡಾ. ಬಿ.ಎನ್‌.ಗಂಗಾಧರ್‌, ನಿಮ್ಹಾನ್ಸ್‌ನ ನಿರ್ದೇಶಕ

* ಮಂಜುನಾಥ ಗಂಗಾವತಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.