ಉತ್ತರ ಕರ್ನಾಟಕದ ಶಂಕಿತರ ಪರೀಕ್ಷೆ ನಗರದಲ್ಲಿ!


Team Udayavani, Jun 5, 2020, 5:53 AM IST

test of north

ಬೆಂಗಳೂರು: ಕ್ವಾರೆಂಟೈನ್‌ ಕೇಂದ್ರಗಳಲ್ಲಿ ಇರುವವರನ್ನು ಸೋಂಕು ಪರೀಕ್ಷೆಗೆ ಒಳಪಡಿಸಿ ಅವರ ವರದಿ ಬರುವ ಮುನ್ನವೇ ಮನೆಗೆ ಕಳುಹಿಸುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಗರದಲ್ಲಿ ಕಂಟೈನ್ಮೆಂಟ್‌ ಪ್ರದೇಶಗಳ ಸಂಖ್ಯೆ  ಹೆಚ್ಚಾಗುತ್ತಿದೆ. ದೆಹಲಿಯಿಂದ ಹಿಂದಿರುಗಿದ ತಾಯಿ ಮತ್ತು ಮಗ (ರೋಗಿ ಸಂಖ್ಯೆ 3398 ಮತ್ತು 4007) ಇಬ್ಬರ ಪ್ರಕರಣದಲ್ಲೂ ಇದೇ ರೀತಿ ಆಗಿದೆ ಎಂದು ಬಿಬಿಎಂಪಿಯ ಆರೋಗ್ಯಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇತ್ತೀಚಿನ  ದಿನಗಳಲ್ಲಿ ಕ್ವಾರೆಂಟೈನ್‌ನಲ್ಲಿ ಇರುವ ವರನ್ನು ಕೋವಿಡ್‌ 19 ಸೋಂಕು ಪರೀಕ್ಷೆಗೆ ಒಳಪಡಿಸಿದ ಮೇಲೆ ವರದಿ ಬರುವ ಮುನ್ನವೇ ಮನೆಗೆ ಕಳುಹಿಸಲಾಗುತ್ತಿದೆ. ಇದರಿಂದ ನಗರ ದಲ್ಲಿ ಕಂಟೈನ್ಮೆಂಟ್‌ ಪ್ರದೇಶಗಳ ಸಂಖ್ಯೆಯೂ  ಹೆಚ್ಚಳವಾಗು ತ್ತಿದೆ. ಈ ಸಂಬಂಧ “ಉದಯವಾಣಿ’ಯೊಂದಿಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ಬಿ.ಎಚ್‌. ಅನಿಲ್‌ಕುಮಾರ್‌, ಉತ್ತರ ಕರ್ನಾಟಕದ ಕಲಬುರಗಿ, ಯಾದಗಿರಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಹೆಚ್ಚು ಜನರನ್ನು ಕೋವಿಡ್‌  19 ಸೋಂಕು ಪರೀಕ್ಷೆಗೆ ಒಳಪಡಿಸಲಾಗುತ್ತಿದ್ದು,

ಕೆಲವು ಮಾದರಿಗಳನ್ನು ಬೆಂಗಳೂರಿಗೆ ಕಳುಹಿ ಸಲಾಗುತ್ತಿದೆ. ಹೀಗಾಗಿ, ವರದಿ ಬರುವುದು ತಡವಾಗುತ್ತಿದ್ದು, ಕ್ವಾರಂಟೈನ್‌ ನಲ್ಲಿ ಏರುಪೇರಾ ಗುತ್ತಿದೆ. ಈ ವಿಚಾರವನ್ನು ಮುಖ್ಯ ಕಾರ್ಯ  ದರ್ಶಿಗಳ ಗಮನಕ್ಕೆ ತರಲಾ  ಗಿದ್ದು, ಇದಕ್ಕೆ ಶೀಘ್ರವೇ ಪರಿಹಾರ ಕಂಡುಕೊಳ್ಳುವು ದಾಗಿ ತಿಳಿಸಿದ್ದಾರೆ. ಶುಕ್ರವಾರದಿಂದ ಸೋಂಕು ವರದಿಗಳು 24 ಗಂಟೆಯೊಳಗೆ ಬರುವ ಸಾಧ್ಯತೆ ಇದ್ದು, ಇದಕ್ಕೆ ಪರಿಹಾರ ಸಿಗಲಿದೆ ಎಂದು  ಮಾಹಿತಿ ನೀಡಿದರು.

ದೆಹಲಿಯಿಂದ ಬಂದ ಇಬ್ಬರಲ್ಲಿ ಸೋಂಕು: ದೆಹಲಿಯಿಂದ ಹಿಂದಿರುಗಿದ ತಾಯಿ ಮತ್ತು ಮಗ (ರೋಗಿ ಸಂಖ್ಯೆ 3398 ಮತ್ತು 4007) ಇಬ್ಬರಲ್ಲಿ ಗುರುವಾರ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರು ನೆಲೆಸಿದ್ದ ಜೆ.ಪಿ. ನಗರದ ರಾಗೀಗುಡ್ಡದಲ್ಲಿ ಅಪಾರ್ಟ್‌ಮೆಂಟ್‌ವೊಂದನ್ನು ಕಂಟೈನ್ಮೆಂಟ್‌ ಮಾಡಲಾಗಿದೆ ಎಂದು ಬಿಬಿಎಂಪಿಯ ದಕ್ಷಿಣ ವಲಯದ ಆರೋಗ್ಯಾಧಿಕಾರಿ ಡಾ.ಶಿವಕುಮಾರ್‌ ತಿಳಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿದ ಅವರು, ದೆಹಲಿಯಿಂದ ಬಂದ  ತಾಯಿ ಮತ್ತು ಮಗನನ್ನು ಹೆಬ್ಟಾಳದ ಹಾಸ್ಟೆಲ್‌ವೊಂದರಲ್ಲಿ ಏಳು ದಿನ ಕ್ವಾರಂಟೈನ್‌ ಮಾಡಲಾಗಿತ್ತು.

ಕ್ವಾರಂಟೈನ್‌ ಮುಗಿಯುವ ವೇಳೆ ಸೋಂಕು ಪರೀಕ್ಷೆ ಮಾಡಲಾಗಿದ್ದು, ಕೋವಿಡ್‌ 19 ಇರುವುದು ದೃಢಪಟ್ಟಿದೆ. ಇಬ್ಬರನ್ನು ಸದ್ಯ  ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಿಬ್ಬರಲ್ಲಿಯೂ ಕೋವಿಡ್‌ 19 ಲಕ್ಷಣಗಳು ಕಾಣಿಸಿಕೊಂಡಿಲ್ಲ ಎಂದರು. ಇನ್ನು ಇಬ್ಬರು ಕ್ವಾರಂಟೈನ್‌ ಕೇಂದ್ರದಿಂದ ಬಂದ ದಿನವೇ ಸೋಂಕು ದೃಢಪಟ್ಟಿದೆ. ಇವರು ಅಪಾರ್ಟ್‌ಮೆಂಟ್‌ನಿಂದ ಬೇರೆ  ಎಲ್ಲಿಯೂ ಹೋಗಿಲ್ಲ. ಹೀಗಾಗಿ, ಅಪಾರ್ಟ್‌ಮೆಂಟ್‌ ಅನ್ನು ಕಂಟೈನ್ಮೆಂಟ್‌ ಮಾಡಲಾಗಿದ್ದು, ಅವರು ನೆಲೆಸಿದ್ದ ಮನೆಯ ಮೇಲ್ಭಾಗ ಹಾಗೂ ಕೆಳಭಾಗದಲ್ಲಿ ನೆಲೆಸಿರುವವರನ್ನು ಕ್ವಾರಂಟೈನ್‌ ಆಗಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಮತ್ತಿಬ್ಬರು ಮೃತ: ನಗರದಲ್ಲಿ ಗುರುವಾರ ಒಟ್ಟು 9 ಮಂದಿಯಲ್ಲಿ ಕೋವಿಡ್‌ 19 ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 428 ಏರಿಕೆಯಾಗಿದೆ. ಇಬ್ಬರು (ಉಸಿರಾಟದ ಸಮಸ್ಯೆಯಿಂದ)ಮೃತಪಟ್ಟಿದ್ದು, ಒಟ್ಟು ಸಾವನ್ನಪ್ಪಿದವರ  ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ತಮಿಳುನಾಡಿನಿಂದ ಆಗಮಿಸಿದ ನಾಲ್ವರು, ಆಂಧ್ರಪ್ರದೇಶದಿಂದ ಬಂದಿದ್ದ ಇಬ್ಬರು, ಮಹಾರಾಷ್ಟ್ರದಿಂದ ಆಗಮಿಸಿದ ಒಬ್ಬರು ಹಾಗೂ ರೂಪೇನ ಅಗ್ರಹಾರದ ರೋಗಿ ಸಂಖ್ಯೆ -2834 ಅವರ ಪ್ರಾಥಮಿಕ  ಸಂಪರ್ಕದಲ್ಲಿದ್ದ 65 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಚಾಮರಾಜಪೇಟೆಯ 60 ವರ್ಷದ ಮಹಿಳೆಯೊಬ್ಬರು ಜ್ವರ, ತೀವ್ರ ಉಸಿರಾಟದ ಸಮಸ್ಯೆಯಿಂದ ಬುಧವಾರ  ಬೌರಿಂಗ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್‌ 19 ಸೋಂಕಿನಿಂದ ವಿಶ್ವೇಶ್ವರಪುರದ 65 ವರ್ಷದ ಮಹಿಳೆ ಮೃತಪಟ್ಟಿದ್ದಾರೆ.

ಪಾದರಾಯನಪುರದಲ್ಲಿ ಗರ್ಭಿಣಿಗೆ ಸೋಂಕು: ಪಾದರಾಯನಪುರದಲ್ಲಿ ಗರ್ಭಿಣಿಯಲ್ಲಿ ಕೋವಿಡ್‌ 19 ಸೋಂಕು ದೃಢಪಟ್ಟಿದೆ. ಜಗಜೀವನರಾಂ ನಗರದ 9 ತಿಂಗಳ ಗರ್ಭಿಣಿಗೆ ಕೋವಿಡ್‌ 19 ಸೋಂಕು ದೃಢಪಟ್ಟಿದೆ. ಮಹಿಳೆಯ  ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಕ್ವಾರಂಟೈನ್‌ ಮಾಡಲಾಗುತ್ತಿದೆ. ಕರಿಸಂದ್ರವಾರ್ಡ್‌ನ ನಿವಾಸಿಯೊಬ್ಬರಿಗೆ ಕೋವಿಡ್‌ 19 ಸೋಂಕು ದೃಢಪಟ್ಟಿತ್ತು. ಇವರು ಹೌಸ್‌ ಕೀಪಿಂಗ್‌ ಮಾಡುತ್ತಿದ್ದ ಮಲ್ಲೇಶ್ವರ ನ್ಯಾಷನಲ್‌  ಬ್ಯಾಂಕ್‌ಅನ್ನು ಸೀಲ್‌ಡೌನ್‌ ಮಾಡಲಾಗಿದೆ ಎಂದು ಬಿಬಿಎಂಪಿಯ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.