ಕ್ಲಸ್ಟರ್‌ಗಳಲ್ಲಿ ಸೋಂಕು ಪ್ರಕರಣಗಳಿಲ್ಲ


Team Udayavani, Jun 13, 2020, 5:34 AM IST

bh anilkumar

ಬೆಂಗಳೂರು: ನಗರದ ವಿವಿಧ ವಾರ್ಡ್‌ಗಳಲ್ಲಿ ಸೋಂಕು ಪ್ರಕರಣಗಳು ದೃಢಪಡುತ್ತಿವೆ. ಸೋಂಕು ದೃಢಪಟ್ಟ ವ್ಯಕ್ತಿ ವಾಸವಿರುವ ಪ್ರದೇಶ ಕಂಟೈನ್ಮೆಂಟ್‌ ಮಾಡುತ್ತಿರುವುದರಿಂದ ನಗರದಲ್ಲಿ ಕಂಟೈನ್ಮೆಂಟ್‌ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್‌. ಅನಿಲ್‌ಕುಮಾರ್‌ ತಿಳಿಸಿದರು. ಪ್ರಾರಂಭದಲ್ಲಿ ನಗರದಲ್ಲಿ ಸೋಂಕು ದೃಢಪಟ್ಟ ವ್ಯಕ್ತಿ ಇದ್ದ ಒಂದು ಕಿ.ಮೀ. ವ್ಯಾಪ್ತಿ ಪ್ರದೇಶವನ್ನು ಕಂಟೈನ್ಮೆಂಟ್‌ ಮಾಡಲಾಗುತ್ತಿತ್ತು.

ಇದನ್ನು ಸದ್ಯ 100 ಮೀ. ಇಳಿಸಲಾಗಿದೆ. ಸದ್ಯ ಸೋಂಕು ಕಾಣಿಸಿಕೊಂಡ ವ್ಯಕ್ತಿಯ  ಮನೆ ಮಾತ್ರ ಕಂಟೈನ್ಮೆಂಟ್‌ ಮಾಡಲಾಗುತ್ತಿದ್ದು, ವಸತಿ ಸಮುತ್ಛಯವಾಗಿದ್ದರೆ, ಸೋಂಕು ದೃಢಪಟ್ಟ ವ್ಯಕ್ತಿ ವಾಸವಿದ್ದ ಮನೆಯ ಮೇಲ್ಭಾಗ ಮತ್ತು ಕೆಳಭಾಗದ ಮಹಡಿಗಳನ್ನು  ಕಂಟೈನ್ಮೆಂಟ್‌ ಮಾಡಲಾಗುತ್ತಿದೆ. ಇದರಿಂದ ನಗರದಲ್ಲಿ ಕಂಟೈನ್ಮೆಂಟ್‌ ಪ್ರದೇಶಗಳ ಸಂಖ್ಯೆ ಏರಿಕೆಯಾಗಿದೆ ಎಂದರು.

ಈ ಹಿಂದೆ ಪಾದರಾಯನಪುರ, ಹೊಂಗಸಂದ್ರ ಸೇರಿದಂತೆ ಪಾಲಿಕೆ ಗುರುತಿಸಿದ್ದ ಕ್ಲಸ್ಟರ್‌ ಪ್ರದೇಶಗಳಲ್ಲಿ ಹೆಚ್ಚಿನ  ಜನರಲ್ಲಿ ಸೋಂಕು ಕಾಣಿಸಿಕೊಳ್ಳತ್ತಿದ್ದಂತೆ ಈಗ ಯಾವುದೇ ನಿರ್ದಿಷ್ಟ ಪ್ರದೇಶದಲ್ಲಿ ಸೋಂಕು ಪ್ರಕರಣಗಳು ವರದಿಯಾಗುತ್ತಿಲ್ಲ. ಹೊರ ರಾಜ್ಯದಿಂದ ಆಗಮಿಸಿದವರು ಮತ್ತು ಕೆಮ್ಮು ಶೀತ ಮತ್ತು ಜ್ವರ (ಐಎಲ್‌ಐ) ಸಮಸ್ಯೆ  ಇರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ ಎಂದು ಹೇಳಿದರು. ನಗರದಲ್ಲಿ ನಿತ್ಯ ಎರಡು ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಅಲ್ಲದೆ, ರಾಜ್ಯದ ವಿವಿಧ ಜಿಲ್ಲೆಗಳಿಂದಲೂ ಸೋಂಕು ಪರೀಕ್ಷೆಗೆ  ಪಲ್‌ಗ‌ಳನ್ನು ಬೆಂಗಳೂರಿಗೆ ಕಳುಹಿಸಲಾಗುತ್ತಿದೆ.

ಇದರಿಂದ ವರದಿ ತಡವಾಗುತ್ತಿದ್ದು, ಸಮಸ್ಯೆಯಾಗುತ್ತಿದೆ. ನಾಲ್ಕೆ çದು ದಿನಗಳ ವರದಿ ಒಂದೇ ದಿನ ಬರುತ್ತಿದೆ ಎಂದರು. ಬಿಬಿಎಂಪಿ ನಡೆಸಿದ ಮನೆ- ಮನೆ ಆರೋಗ್ಯ ಸಮೀಕ್ಷೆಯಲ್ಲಿ ಪತ್ತೆಯಾಗಿರುವ  ಸೋಂಕು ಲಕ್ಷಣ ಇರುವವರು, ಹೊರ ರಾಜ್ಯದಿಂದ ಬಂದವರು ಹಾಗೂ ಕ್ವಾರಂಟೈನ್‌ನಲ್ಲಿ ಇರುವವರು ಸೇರಿದಂತೆ ಒಟ್ಟು ಎರಡು ಸಾವಿರ ಜನರನ್ನು ಸೋಂಕು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಮಾನ್ಯತಾ ಟೆಕ್‌ ಪಾರ್ಕ್‌ನಲ್ಲಿ ಸೋಂಕಿಲ್ಲ: ನಗರದಲ್ಲಿ ಗುರುವಾರ ಸೋಂಕು ದೃಢಪಟ್ಟ ಒಟ್ಟು 17 ಪ್ರಕರಣಗಳಲ್ಲಿ ಮಾನ್ಯತಾ ಟೆಕ್‌ಪಾರ್ಕ್‌ನಲ್ಲಿ ಸೋಂಕು ಪತ್ತೆಯಾಗಿಲ್ಲ. ಆದರೆ ಸಮೀಪದ ಅರ್ಕಾವತಿ ಬಡಾವಣೆಯಲ್ಲಿ 45   ವರ್ಷದ ಮಹಿಳೆಗೆ ಸೋಂಕು ದೃಢ ಪಟ್ಟಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. ಗುರುವಾರದ ವರದಿಯಲ್ಲಿ ಮಾನ್ಯತಾ ಪಾರ್ಕ್‌ನಲ್ಲಿ ಸೋಂಕುಎಂದು ಬಂದಿದ್ದು, ಪಾಸಿಟಿವ್‌ ಕೇಸ್‌ ಬಂದಿಲ್ಲ ಎಂದು ಪಾರ್ಕ್‌ನ ವಕ್ತಾರರು ತಿಳಿಸಿದ್ದಾರೆ.

ರಾಜಧಾನಿಯಲ್ಲಿ ರಿವರ್ಸ್‌ ಕ್ವಾರಂಟೈನ್‌!: ನಗರದಲ್ಲಿ ಕೋವಿಡ್‌ 19 ಸೋಂಕಿತರ ಸಂಪರ್ಕಿತರನ್ನು ಕ್ವಾರಂಟೈನ್‌ ಮಾಡುವ ವೇಳೆ “ರಿವರ್ಸ್‌ ಕ್ವಾರಂಟೈನ್‌” ಪದಟಛಿತಿ ಬಳಸಲಾಗುವುದು ಎಂದು ಆಯುಕ್ತರು ತಿಳಿಸಿದರು. ಕೋವಿಡ್‌ 19  ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಿವರ್ಸ್‌ ಕ್ವಾರಂಟೈನ್‌ ಪದ್ಧತಿ ಬಳಸುವಂತೆ ಸೂಚನೆ ನೀಡಲಾಗಿದೆ. ಸದ್ಯ ಸೋಂಕಿನ ಲಕ್ಷಣ ಮತ್ತು ಸೋಂಕಿತರ ಸಂಪರ್ಕದಲ್ಲಿ ಇದ್ದವರನ್ನು ಕ್ವಾರಂಟೈನ್‌ ಮಾಡಲಾಗುತ್ತಿದೆ.

ಸೋಂಕಿತರ  ಸಂಪರ್ಕದಲ್ಲಿದ್ದು, ಕ್ವಾರಂಟೈನ್‌ ಆಗುವ ಆರೋಗ್ಯವಂತರಿಗೂ ಸೋಂಕು ಹಬ್ಬುವ ಆತಂಕ ಎದುರಾಗಿದೆ. ಹೀಗಾಗಿ, ರಿವರ್ಸ್‌ ಕ್ವಾರಂಟೈನ್‌ಗೆ ನಿರ್ದೇಶಿಸ ಲಾಗಿದೆ. ಅದರಂತೆ ವಿದೇಶ, ರಾಜ್ಯದಿಂದ ಬರುವವರು ಮತ್ತು ಮನೆಯಿಂದ ನಿತ್ಯ  ಹೊರಗೆ ಓಡಾಡುವವರಿಂದ ಮನೆಯ ಲ್ಲಿರುವ ಮಕ್ಕಳು, ಹಿರಿಯರು, ಗರ್ಭಿಣಿ ಮತ್ತು ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರು ಪ್ರತ್ಯೇಕವಾಗಿ ಇರುವುದು ರಿವರ್ಸ್‌ ಕ್ವಾರಂಟೈನ್‌ ಪದಟಛಿತಿಯಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.