Bengaluru: ಪೊಲೀಸ್ಗೆ ಧಮ್ಕಿ: ಯುವಕನ ಮೇಲೆ ಕೇಸ್
Team Udayavani, Aug 24, 2024, 2:50 PM IST
ಬೆಂಗಳೂರು: ಮನೆಗೆ ಹೋಗುವಂತೆ ಸೂಚಿಸಿದ್ದಕ್ಕೆ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಯುವಕನೊಬ್ಬ ನಿಂದಿಸಿದ್ದು, ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋರಮಂಗಲ ನಿವಾಸಿ ಸುನೀಲ್ ಆರೋಪಿ.
ಬಂಡೆಪಾಳ್ಯ ಠಾಣಾ ಹೊಯ್ಸಳ ಪೊಲೀಸ್ ಸಿಬ್ಬಂದಿ ಆ.17ರಂದು ರಾತ್ರಿ 1 ಗಂಟೆ ಸುಮಾರಿಗೆ ಗಸ್ತು ಕರ್ತವ್ಯದಲ್ಲಿದ್ದರು. ಎಸ್.ವಿ.ಲೇಕ್ ವ್ಯೂ ಅಪಾಟ್ ìಮೆಂಟ್ ಆವರಣದಲ್ಲಿರುವ ಪಾರ್ಟಿ ಹಾಲ್ ಮೆಟ್ಟಿಲುಗಳ ಮೇಲೆ ಆರೋಪಿ ಸುನೀಲ್, ಆತನ ಸ್ನೇಹಿತ ಹಾಗೂ ಓರ್ವ ಮಹಿಳೆ ಕುಳಿತಿರುವುದನ್ನು ಗಮನಿಸಿದ್ದರು. ರಾತ್ರಿಯಾಗಿರುವುದರಿಂದ ವಿರಳ ಸಂಚಾರವಿದ್ದ ಕಾರಣ ಸುರಕ್ಷತೆಯ ದೃಷ್ಟಿಯಿಂದ ಮನೆಗೆ ಹೋಗುವಂತೆ ಮೈಕ್ ಮೂಲಕ ಹೊಯ್ಸಳ ಸಿಬ್ಬಂದಿ ಹೇಳಿದ್ದಾರೆ.
ಈ ವೇಳೆ ಸುನೀಲ್ ಪೊಲೀಸ್ ಸಿಬ್ಬಂದಿಯನ್ನು ಉದ್ದೇಶಿಸಿ ಏಕವಚನದಲ್ಲಿ ನಿಂದಿಸಿದ್ದ. “ನನಗೆ ಹಿರಿಯ ಅಧಿಕಾರಿಗಳ ಪರಿಚಯವಿದೆ’ ಎಂದು ಧಮ್ಕಿ ಹಾಕಿದ್ದ. ಹೊಯ್ಸಳ ವಾಹನವನ್ನು ಹೋಗಲು ಬಿಡದೆ ಕಿರಿಕ್ ಮಾಡಿದ್ದ. ಆರೋಪಿಯನ್ನು ಹೊಯ್ಸಳ ವಾಹನ ಹತ್ತಿಸಲು ಹೋದಾಗ ಪೊಲೀಸರನ್ನೇ ತಳ್ಳಾಡಿ ತಪ್ಪಿಸಿಕೊಂಡು ಹೋಗಿದ್ದ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.