ಕಾಫಿ ನಾಡಲ್ಲೊಂದು ಭಕ್ತಿ ಅನುಭೂತಿ ತಾಣ!


Team Udayavani, May 25, 2021, 8:54 PM IST

25-15

ಚಿಕ್ಕಮಗಳೂರು: ಕಾಫಿನಾಡು ಪ್ರಕೃತಿ ಸೌಂದರ್ಯದ ಜೊತೆ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳನ್ನು ಒಳಗೊಂಡಿದ್ದು ಶ್ರದ್ಧಾಭಕ್ತಿಯ ಕೇಂದ್ರವಾಗಿದೆ. ಪ್ರಕೃತಿ ಸೌಂದರ್ಯದ ಜೊತೆಯ ಭಕ್ತಿಯ ಪರಾಕಷ್ಠೆಯ ರಸಾನುಭೂತಿಯನ್ನು ಉಣ ಬಡಿಸುತ್ತಿದೆ.

ನಗರದಿಂದ 15 ಕಿಮೀ ದೂರದಲ್ಲಿರುವ ಆಂಜನೇಯ ಗುಡ್ಡವು ಅಂತಹ ಸ್ಥಳಗಳಲ್ಲಿ ಒಂದಾಗಿದೆ. ಆಂಜನೇಯ ಗುಡ್ಡ ಬಾಚಿಗನಹಳ್ಳಿ ಮತ್ತು ಮೆಣಸಿನ ಮಲ್ಲೇದೇವರಹಳ್ಳಿಯ ನಡುವೆ ಇದೆ. ಬೆಟ್ಟದ ನೆತ್ತಿಯಲ್ಲಿ ಕಲ್ಲಿನಲ್ಲಿ ಒಡಮೂಡಿರುವ ವೀರಾಂಜನೇಯ ಸ್ವಾಮಿಯ ಕಲ್ಲಿನ ವಿಗ್ರಹವಿದ್ದು ಈ ಕಾರಣದಿಂದ ಈ ಗುಡ್ಡವನ್ನು ಆಂಜನೇಯ ಗುಡ್ಡ ಎಂದು ಕರೆಯಲಾಗುತ್ತಿದೆ.

ಈ ಗುಡ್ಡ ಸುತ್ತಮುತ್ತಲ ಗ್ರಾಮದವರಿಗೆ ಚಿರಪರಿಚಿತವಾಗಿದ್ದು, ವರ್ಷಪೂರ್ತಿ ಆಂಜನೇಯ ಮೂರ್ತಿಗೆ ಪೂಜೆ ಸಲ್ಲಿಸಲಾಗುತ್ತದೆ. ಶಕ್ತಿದೇವರು ಎಂಬ ನಂಬಿಕೆ ಭಕ್ತರಲ್ಲಿದೆ. ಆದರೆ, ಈ ಸ್ಥಳ ಅಷ್ಟೊಂದು ಬೆಳಕಿಗೆ ಬಾರದಿರುವುದರಿಂದ ಇಂದಿಗೂ ಈ ಸ್ಥಳ ಅಪರಿಚಿತವಾಗಿದೆ. ಮುಂದೊಂದು ದಿನ ಪ್ರವಾಸಿ ತಾಣ ಮತ್ತು ಶ್ರದ್ಧಾಭಕ್ತಿ ಕೇಂದ್ರವಾಗಿ ಮಾರ್ಪಟ್ಟರೆ ಆಶ್ವರ್ಯ ಪಡಬೇಕಾಗಿಲ್ಲ. ಬಾಚಿಗನಹಳ್ಳಿಯಿಂದ ಈ ಬೆಟ್ಟಕ್ಕೆ ಕಾಲುದಾರಿಯಲ್ಲಿ ನಡೆದು ಸಾಗಬೇಕು. ಕಲ್ಲುಮುಳ್ಳು, ಕೊರಕಲು, ಸುತ್ತಲೂ ಹಚ್ಚಹಸಿರಿನ ಕಿರಿದಾದ ಕಾಲುದಾರಿಯಲ್ಲಿ ನಡೆದು ಸಾಗಬೇಕು.

ಪ್ರಕೃತಿಯ ಮಡಿಲಿನಲ್ಲಿ ನಡೆದು ಸಾಗುತ್ತಿದ್ದರೆ ಒಂದು ರೀತಿ ಟ್ರಕಿಂಗ್‌ ಮಾಡಿದ ಅನುಭವ ನೀಡುತ್ತದೆ. ಆಂಜನೇಯ ಮೂರ್ತಿ ಇರುವ ಸ್ಥಳಕ್ಕೆ ಬಾಚಿಗನಹಳ್ಳಿಯಿಂದ ಸುಮಾರು ಒಂದೂವರೆ ಕಿಮೀನಷ್ಟು ದೂರ ಕಾಲುದಾರಿಯಲ್ಲಿ ನಡೆದು ಸಾಗಬೇಕು. ಆಂಜನೇಯ ದೇವರ ಇತಿಹಾಸವನ್ನು ಗ್ರಾಮದ ಹಿರಿಯರನ್ನು ಕೇಳಿದರೆ ಒಬ್ಬೊಬ್ಬರು ಒಂದೊಂದು ಕಥೆಯನ್ನು ಹೇಳುತ್ತಾರೆ. ಇದು ಸತ್ಯದೇವರು ಆಂಜನೇಯಸ್ವಾಮಿ ಮೂರ್ತಿಗೆ ಅನೇಕ ವರ್ಷಗಳ ಹಿಂದೇ ಸಿಡಿಲುಬಡಿದು ಮೂರ್ತಿಯ ಎಡಗೈ ಭಾಗದಲ್ಲಿ ಮೇಲಿಂದ ಕೆಳಗೆ ಸೀಳಲ್ಪಟ್ಟಿತ್ತು. ನಾವು ಚಿಕ್ಕವರಿದ್ದಾಗಿನಿಂದ ನೋಡಿದ್ದೇವೆ ಎನ್ನುತ್ತಾರೆ.

ಮೂರ್ತಿ ಬಿರುಕುಬಿಟ್ಟ ಜಾಗದಲ್ಲಿ ಬೆರಳುಗಳು ತೂರುವಷ್ಟು ಬಿರುಕು ಬಿಟ್ಟಿತ್ತು. ಕ್ರಮೇಣ ಆ ಬಿರುಕು ಕೂಡುತ್ತಿದ್ದು ಮೂರ್ತಿಯ ನೆತ್ತಿಯ ಮೇಲೆ ಸ್ವಲ್ಪ ಬಿರುಕು ಮಾತ್ರ ಕಾಣಿಸುತ್ತಿದೆ. ಯಾವುದೇ ಮೂರ್ತಿ ವಿಘ್ನಗೊಂಡ ಬಳಿಕ ಕೂಡುವುದಿಲ್ಲ. ಆದರೆ ಈ ಮೂರ್ತಿ ಬಿರುಕು ಕೂಡಿದ್ದು ಇದು ಸತ್ಯವಂತ ದೇವರು ಎಂಬುದು ಸುತ್ತಮುತ್ತಲ ಜನರ ನಂಬಿಕೆಯಾಗಿದೆ.ಸುತ್ತಮುತ್ತಲ ಗ್ರಾಮಗಳಾದ ವಸ್ತಾರೆ, ಆಲದಗುಡ್ಡೆ, ಬಾಚಿಗನಹಳ್ಳಿ, ಮಾರಿಕಟ್ಟೆ, ತೊಂಡವಳ್ಳಿ, ವಳಗೇರಹಳ್ಳಿ, ಕೆಸವಿನಮನೆ, ಮೆಣಸಿನಮಲ್ಲೇದೇವರಹಳ್ಳಿ, ದುಮ್ಮಗೆರೆ, ಶಿರಗುಂದ, ದಂಬದಹಳ್ಳಿಯ ಗ್ರಾಮಸ್ಥರು ವರ್ಷಕ್ಕೊಮ್ಮೆಯಾದರೂ ದೇವರ ದರ್ಶನ ಪಡೆಯುತ್ತಾರೆ.

ಇಲ್ಲಿ ಯಾರಾದರೂ ಪೂಜೆ ಸಲ್ಲಿಸಬಹುದಾಗಿದ್ದು ಯಾವುದೇ ಕಟ್ಟುಪಾಡುಗಳಿಲ್ಲದಿರುವುದು ಒಂದು ವಿಶೇಷ. ಸುತ್ತಮುತ್ತಲ ಗ್ರಾಮಗಳಲ್ಲಿ ಹಸು-ಕರುಗಳು ಕಳೆದು ಹೋದರೆ ಬೆಟ್ಟದ ಆಂಜನೇಯ ಸ್ವಾಮಿಯನ್ನು ಬೇಡಿಕೊಂಡರೆ ಹಸು-ಕರುಗಳು ಮರಳಿ ಮನೆಗೆ ಬರುತ್ತವೆ ಎಂಬ ನಂಬಿಕೆ ಇದ್ದು, ಹಸು ಕರುವಿಗೆ ಜನ್ಮ ನೀಡಿದ ನಂತರ ಹಾಲಿನ ಮತ್ತು ಮೊಸರು ಅಭಿಷೇಕವನ್ನು ವೀರಾಂಜನೇಯನಿಗೆ ಅರ್ಪಿಸುತ್ತಾರೆ ಎನ್ನುತ್ತಾರೆ ಗ್ರಾಮದ ಹಿರಿಯರು.

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.