ದೇವನಗರಿಗೆ ಮತ್ತೊಮ್ಮೆ ಅಪ್ಪಳಿಸಿದ ಕೋವಿಡ್


Team Udayavani, May 20, 2020, 11:35 AM IST

20-April-03

ಸಾಂದರ್ಭಿಕ ಚಿತ್ರ

ದಾವಣಗೆರೆ: ಇಡೀ ವಿಶ್ವವನ್ನೇ ನಡುಗಿಸಿರುವ ಕೋವಿಡ್ ವೈರಸ್‌ ಮಂಗಳವಾರ ಮಧ್ಯ ಕರ್ನಾಟಕದ ದಾವಣಗೆರೆ ಜಿಲ್ಲೆಯನ್ನ ಮತ್ತೆ ತಲ್ಲಣಗೊಳಿಸಿದೆ. ನಿನ್ನೆ ಹೊಸದಾಗಿ ಈಗ 22 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಈಗ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 112ಕ್ಕೇರಿದೆ.

ಕೇವಲ 20 ದಿನಗಳ ಹಿಂದೆ ದಾವಣಗೆರೆಯಲ್ಲಿ ಇದ್ದ ವಾತಾವರಣ ಈಗ ಇಲ್ಲ. ಈ ಅವಧಿಯಲ್ಲಿ ಜಿಲ್ಲೆಯ ಚಿತ್ರಣವೇ ಬದಲಾಗಿ ಹೋಗಿದೆ. ಏ.29ರಿಂದ ಕೋವಿಡ್‌-19ರ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ. ಈ ಮೊದಲು ದಾವಣಗೆರೆ ನಗರಕ್ಕೆ ಸೀಮಿತವಾಗಿದ್ದ ಸೋಂಕು ಈಗ ಹಳ್ಳಿಗೂ ವ್ಯಾಪಿಸುತ್ತಿರುವುದು ತೀವ್ರ ಆತಂಕಕ್ಕೀಡು ಮಾಡುವಂತಾಗಿದೆ.

ಈ ಮೊದಲು ಮಾರ್ಚ್‌ ಕೊನೆಯ ವಾರದಲ್ಲಿ ವಿದೇಶದಿಂದ ಬಂದಿದ್ದ ಮೂವರಲ್ಲಿ (ಒಂದು ಪ್ರಕರಣ ಚಿತ್ರದುರ್ಗ ಜಿಲ್ಲೆಯದ್ದು) ಕೋವಿಡ್ ಸೋಂಕು ದೃಢಪಟ್ಟಿತ್ತು. ಆಗ ಜಿಲ್ಲೆಯ ಜನ ಆತಂಕಗೊಂಡಿದ್ದರು. ಜಿಲ್ಲಾಡಳಿತ, ಆರೋಗ್ಯ ಹಾಗೂ ಪೊಲೀಸ್‌ ಇಲಾಖೆ, ಇತರರೂ ಒಳಗೊಂಡಂತೆ ಎಲ್ಲರ ಅವಿರತ ಶ್ರಮದಿಂದಾಗಿ ಮಹಾಮಾರಿ ಕೊರೊನಾ ಸೋಂಕು ಹರಡಲು ಅವಕಾಶವಾಗಲಿಲ್ಲ. ಆದರೆ, ಏ. 29ರ ನಂತರ ಕೋವಿಡ್ ದಾವಣಗೆರೆ ಜಿಲ್ಲೆಯ ಜನಜೀವನಕ್ಕೆ ಮುಳ್ಳಾಯಿತು.

ಜಿಲ್ಲೆಯಲ್ಲಿ ಪ್ರಥಮ (ವಿದೇಶದಿಂದ ಬಂದವರ ಬಿಟ್ಟು)ವಾಗಿ ದಾವಣಗೆರೆ ಬಾಷಾನಗರದ ವ್ಯಕ್ತಿ (ರೋಗಿ ನಂಬರ್‌ 533)ಗೆ ಕೋವಿಡ್ ದೃಢಪಟ್ಟ ಕೆಲವೇ ಗಂಟೆಗಳ ಅಂತರದಲ್ಲಿ ಜಾಲಿನಗರದ 69 ವರ್ಷದ ವಯೋವೃದ್ಧ (ರೋಗಿ ಸಂಖ್ಯೆ 556)ಗೆ ಕೋವಿಡ್ ಸೋಂಕು ಪತ್ತೆಯಾಯಿತು. ಜಾಲಿನಗರದ ವೃದ್ಧ ಮೇ 1 ರಂದು ಮೃತಪಟ್ಟರಲ್ಲದೆ, ಅಂದೇ 6 ಮಂದಿಗೆ (ಪಿ-533 ಹಾಗೂ ಪಿ-556ರ ಕುಟುಂಬದವರು) ಸೋಂಕು ಅಂಟಿಕೊಂಡಿತ್ತು. ಒಂದೇ ಬಾರಿಗೆ 6 ಮಂದಿಗೆ ಸೋಂಕು ತಗುಲಿದ್ದು ಜನರ ನೆಮ್ಮದಿ ಕೆಡುವಂತಾಯಿತು. ಆದರೆ ಮೇ 3ರಂದು ದಾವಣಗೆರೆಯಲ್ಲಿ 21 ಮಂದಿಗೆ ಕೋವಿಡ್ ದೃಢಪಟ್ಟ ವರದಿ ಜಿಲ್ಲಾಡಳಿತಕ್ಕೆ ಶಾಕ್‌ ನೀಡಿತು. ಆ ದಿನವೇ ಜಾಲಿನಗರದ 48 ವರ್ಷದ ಮಹಿಳೆ (ರೋಗಿ-651) ಸಹ ಮೃತಪಟ್ಟರು.

ಮೇ 3ರ ನಂತರ ಜಿಲ್ಲೆಯಲ್ಲಿ ಕೊರೊನಾಘಾತ ಮುಂದುವರಿದಿದೆ. ಮೇ 5ರಂದು 12 ಮಂದಿಯಲ್ಲಿ ಕಾಣಿಸಿಕೊಂಡ ಕೋವಿಡ್, ಅಂದು 55 ವರ್ಷದ ಮಹಿಳೆ (ರೋಗಿ-662)ಯನ್ನ ಬಲಿ ಪಡೆಯಿತು. ಮೇ 7ರಂದು ಮತ್ತೆ ಮೂವರಲ್ಲಿ ದೃಢಪಟ್ಟ ಸೋಂಕು, ಆ ದಿನ 55 ವರ್ಷದ ಮತ್ತೋರ್ವ ಮಹಿಳೆ (ರೋಗಿ-694) ಸಹ ಸಾವನ್ನಪಿದರು. ಹಾಗಾಗಿ ಕೆಲವೇ ದಿನಗಳ ಅಂತರದಲ್ಲಿ ಕೋವಿಡ್ ಸೋಂಕಿತರ ಜತೆಗೆ ಸಾವಿನ ಸಂಖ್ಯೆಯೂ ಏರತೊಡಗಿದ್ದರಿಂದ ನಗರದ ನಾಗರಿಕರು ಚಿಂತೆಗೀಡಾದರು. ಮೇ 8ರಂದು ಮತ್ತೆ 14 ಮಂದಿಗೆ ಕೋವಿಡ್ ಸೋಂಕು ಪತ್ತೆಯಾಯಿತಲ್ಲದೆ, ಕೋವಿಡ್‌ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರತೊಡಗಿತು. ಮೇ 9ಕ್ಕೆ 6, 11ರಂದು ಮೂವರು ಹಾಗೂ ಮೇ 12ರಂದು 12 ಮಂದಿಗೆ ಸೋಂಕು ವ್ಯಾಪಿಸಿರುವುದು ದೃಢಪಟ್ಟಿತು. ಪೊಲೀಸ್‌ ಪೇದೆ, ಈರುಳ್ಳಿ-ಬೆಳ್ಳುಳ್ಳಿ ವ್ಯಾಪಾರಿ, ಹೊರ ರಾಜ್ಯದಿಂದ ಬಂದ ಕೃಷಿ ಕಾರ್ಮಿಕ, ಸೇರಿದಂತೆ ಹಲವರು ಸೋಂಕಿಗೊಳಗಾಗಿದ್ದಾರೆ.

ಈಗ ಮಂಗಳವಾರ ಮತ್ತೆ ಆಘಾತವನ್ನುಂಟು ಮಾಡಿದೆ. ಜಿಲ್ಲೆಯಲ್ಲಿ ಹೊಸದಾಗಿ 22 ಮಂದಿಗೆ ಸೋಂಕು ದೃಢಪಟ್ಟಿದ್ದು, ಈಗ ಒಟ್ಟು ಸೋಂಕಿತರ ಸಂಖ್ಯೆ 112ಕ್ಕೇರಿದೆ. ಇವರಲ್ಲಿ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗುಣಮುಖರಾಗಿದ್ದಾರೆ. ಈಗ ಸಕ್ರಿಯ  ಕೋವಿಡ್ ಸೋಂಕಿತರ ಸಂಖ್ಯೆ 106.

ನೆಮ್ಮದಿ ಕಸಿದ ಮಹಾಮಾರಿ
ಕೇವಲ 21 ದಿನಗಳ ಹಿಂದೆ ಒಂದೂ ಸಕ್ರಿಯ ಪ್ರಕರಣವಿಲ್ಲದಿದ್ದ ದಾವಣಗೆರೆ ಜಿಲ್ಲೆಯಲ್ಲೀಗ ಸಂಖ್ಯೆ ಮೂರಂಕಿ ದಾಟಿದೆ. ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದ ಇನ್ನೂ ನೂರಾರು ಮಂದಿಯ ಗಂಟಲುದ್ರವ ಮಾದರಿ ಪರೀಕ್ಷಾ ವರದಿ ಬರಬೇಕಿದೆ. ದಿನೇ ದಿನೇ ಏರುತ್ತಿರುವ ಕೋವಿಡ್  ಸೋಂಕಿತರ ಸಂಖ್ಯೆ ಜಿಲ್ಲೆಯ ಜನರ ನೆಮ್ಮದಿಯನ್ನೇ ಕಸಿದುಕೊಂಡಿದೆ.

ಎನ್‌.ಆರ್‌. ನಟರಾಜ್‌

ಟಾಪ್ ನ್ಯೂಸ್

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.