ಕಳಪೆ ಬೀಜ ವಿತರಣೆ: ರೈತ ಸಂಘದಿಂದ ಕ್ರಮಕ್ಕೆ ಆಗ್ರಹ
Team Udayavani, Apr 23, 2020, 11:21 AM IST
ದಾವಣಗೆರೆ: ಕಳಪೆ ಗುಣಮಟ್ಟದ ಭತ್ತದ ಬೀಜ ನೀಡಿರುವ ಕಂಪನಿ ಮತ್ತು ಮಾರಾಟ ಮಾಡಿರುವ ಅಂಗಡಿ ಮಾಲಿಕರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಬುಧವಾರ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ(ಹುಚ್ಚವ್ವನಹಳ್ಳಿ ಮಂಜುನಾಥ್ಬಣ) ನೇತೃತ್ವದಲ್ಲಿ ರೈತರು ಕೃಷಿ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ದಾವಣಗೆರೆ ತಾಲೂಕಿನ ಕೋಲ್ಕುಂಟೆ ಗ್ರಾಮದ ಬಿ. ಬಸಪ್ಪ, ಕೆ.ಎಚ್. ನಾಗೇಂದ್ರಪ್ಪ, ಮಂಜುನಾಥ್, ಪೂಜಾರ್ ಗುರುಮೂರ್ತಿ, ಹನುಮಂತಪ್ಪ, ಉಲ್ಲಳ್ಳಿ ಮಂಜಪ್ಪ, ಹುಲೇಕಾರ್ ಭೀಮಪ್ಪ, ರುದ್ರೇಶ್ ಎಂಬುವವರು ದಾವಣಗೆರೆಯ ಅಂಗಡಿಯೊಂದರಲ್ಲಿ ಬಿಪಿಟಿ ಸೋನಾ ಬಿತ್ತನೆ ಬೀಜ ಖರೀದಿಸಿ ನಾಟಿ ಮಾಡಿದ್ದರು. ಒಡೆ ಬಿಚ್ಚುವ ಹಂತದಲ್ಲಿ ಸಾಕಷ್ಟು ಸಮಸ್ಯೆಯಾಗಿದೆ. ಕಳಪೆ ಗುಣಮಟ್ಟದ ಬಿತ್ತನೆ ಬೀಜದಿಂದ ಸರಿಯಾಗಿ ಒಡೆ ಹೊಡೆದಿಲ್ಲ ಎಂದು ರೈತರು ಆರೋಪಿಸಿದರು.
ಕಳಪೆ ಗುಣಮಟ್ಟದ ಭತ್ತದ ಬೀಜ ತಯಾರಿಕಾ ಕಂಪನಿ ಮತ್ತು ಮಾರಾಟಗಾರರ ವಿರುದ್ಧ ಕೂಡಲೇ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು. ನಷ್ಟಕ್ಕೀಡಾಗಿರುವ ರೈತರಿಗೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಿದರು. ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಅಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್, ಬಿ. ಬಸಪ್ಪ, ಕೆ.ಎಚ್. ನಾಗೇಂದ್ರಪ್ಪ, ಮಂಜುನಾಥ್, ಪೂಜಾರ್ ಗುರುಮೂರ್ತಿ, ಹನುಮಂತಪ್ಪ, ಉಲ್ಲಳ್ಳಿ ಮಂಜಪ್ಪ, ಹುಲೇಕಾರ್ ಭೀಮಪ್ಪ, ರುದ್ರೇಶ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ: 8 ಜನರ ವಿರುದ್ಧ ದೂರು ದಾಖಲು
ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್ ಹಬ್- ಜಿ.ಬಿ. ವಿನಯ್ ಕುಮಾರ್
Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್: ರೇಣು
Davanagere: ಗಣೇಶ ವಿಸರ್ಜನೆ ವೇಳೆ ಜೆಸಿಬಿ ಹರಿದು ಮಹಿಳೆ ಸೇರಿ 5-6 ಮಂದಿಗೆ ಗಂಭೀರ ಗಾಯ
Davanagere: 80 ಕಿಲೋಮೀಟರ್ ಉದ್ದದ ಮಾನವ ಸರಪಳಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.