ಪ್ರತಿಯೊಬ್ಬರೂ ಒಗ್ಗೂಡಿದರೆ ಅದ್ಭುತ ಕಾರ್ಯ ಸಾಧನೆ ಸಾಧ್ಯ: ಚಿತ್ರನಟ ಶರತ್‌ ಲೋಹಿತಾಶ್ವ ಅಭಿಮತ


Team Udayavani, Dec 20, 2021, 4:34 PM IST

1-sss

ದಾವಣಗೆರೆ:ಗ್ರಾಮಾಭಿವೃದ್ಧಿ ಹಾಗೂ ಮಹಿಳೆಯರು ಸುರಕ್ಷಿತವಾಗಿ ಬಾಳುವ ಪರಿಸರ ನಿರ್ಮಾಣವಾದಾಗ ಮಾತ್ರ ದೇಶದ ಉದ್ಧಾರ ಸಾಧ್ಯ ಎಂದು ಹಿರಿಯ ಚಿತ್ರನಟ ಶರತ್‌ ಲೋಹಿತಾಶ್ವ ಹೇಳಿದರು. ದಾವಣಗೆರೆ ತಾಲೂಕಿನ ಕೋಲ್ಕುಂಟೆ ಗ್ರಾಮದಲ್ಲಿ ಭಾನುವಾರ ಗ್ರಾಮಾಭ್ಯುದಯ ಸಂಘ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ ಸಹಯೋಗದಲ್ಲಿ “ನಮ್ಮೂರು ನಮ್ಮ ಕೆರೆ’ ಕಾರ್ಯಕ್ರಮದಡಿ ಪುನಶ್ಚೇತನಗೊಳಿಸಲಾದ ಕೆರೆ ಹಸ್ತಾಂತರ ಹಾಗೂ ವಿವಿಧೋದ್ದೇಶ ಸಮುಚ್ಚಯ ನಿರ್ಮಾಣದ ಭೂಮಿಪೂಜೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಾನು ಎನ್ನುವುದರಿಂದ ಯಾವ ಕೆಲಸ ಮಾಡಲು ಆಗುವುದಿಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಸಮಷ್ಟಿ ಪ್ರಜ್ಞೆ ಬೇಕು. ಪ್ರತಿಯೊಬ್ಬರೂ ಒಗ್ಗೂಡಿ ಹಕ್ಕುಗಳನ್ನು ಪಡೆಯಲೇಬೇಕು ಎಂದು ಹೊರಟಾಗ ಮಾತ್ರ ಅದ್ಭುತ ಕೆಲಸಗಳನ್ನು ಮಾಡಲು ಸಾಧ್ಯ ಆಗುತ್ತದೆ ಎಂದರು.

ಕೋಲ್ಕುಂಟೆಯವರೇ ಆದ ಸುಚೇಂದ್ರಪ್ರಸಾದ್‌ ನನ್ನ 30 ವರ್ಷದ ಗೆಳೆಯ. ಎಂದಿಗೂ ಕೂಡ ತಮ್ಮ ಸ್ವಂತ ಕೆಲಸಕ್ಕಾಗಿ ಯೋಚನೆ ಮಾಡಿದವರಲ್ಲ. ಬದಲಾಗಿ ಸಮಷ್ಟಿ ಪ್ರಜ್ಞೆ ಇಟ್ಟುಕೊಂಡವರು. ಸಮಾಜದ ಬಗ್ಗೆ ಅಪರಿಮಿತ ಪ್ರೀತಿ ಇರಿಸಿಕೊಂಡ ಅವರು ಅದ್ಭುತ ಸಮಾಜ ನಿರ್ಮಾಣ ಆಗಬೇಕು ಎಂಬ ಬಗ್ಗೆ ದಿನನಿತ್ಯ ಯೋಚಿಸುತ್ತಿರುತ್ತಾರೆ. ಅವರ ಮಾರ್ಗದರ್ಶನದಲ್ಲಿ ಗ್ರಾಮಾಭಿವೃದ್ಧಿ ಕೆಲಸಗಳು ನಡೆಯಲಿ ಎಂದು ಆಶಿಸಿದರು. ಖ್ಯಾತ ಚಿತ್ರನಟ, ಕೋಲ್ಕುಂಟೆ ಗ್ರಾಮಾಭ್ಯುದಯ ಸಂಘದ ಗೌರವಾಧ್ಯಕ್ಷ ಸುಚೇಂದ್ರಪ್ರಸಾದ್‌ ಮಾತನಾಡಿ, ನಮ್ಮ ತಾಯಿಯ ಹಾಗೂ ತಾತನವರ ಊರಾದಕೋಲ್ಕುಂಟೆಯನ್ನುಮಾದರಿಗ್ರಾಮವನ್ನಾಗಿ ಮಾಡುವ ದೃಢ ಸಂಕಲ್ಪ ಹೊಂದಿದ್ದೇನೆ. ಸಮಸ್ತ ಗ್ರಾಮಸ್ಥರು ಗ್ರಾಮದ ಅಭಿವೃದ್ಧಿಗೆ ಕೈಜೋಡಿಸುವ ಮೂಲಕ ಇಚ್ಛಾಶಕ್ತಿ ಪ್ರದರ್ಶಿಸಬೇಕು ಎಂದು ಮನವಿ ಮಾಡಿದರು.

ತಹಶೀಲ್ದಾರ್‌ ಬಿ.ಎನ್‌.ಗಿರೀಶ್‌ ಮಾತನಾಡಿ, ದಾವಣಗೆರೆತಾಲೂಕಿನಲ್ಲಿನಎಲ್ಲ53ಕೆರೆಗಳನ್ನುಮೊಟ್ಟ ಮೊದಲಿಗೆ ಸಮೀಕ್ಷೆ ಮಾಡಿಸಲಾಗಿದೆ. 17 ಕೆರೆಗಳನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಕೆರೆಗಳನ್ನು ಒತ್ತುವರಿ ಮಾಡುವ ಮೂಲಕ ಕೆರೆ ಜಾಗದಲ್ಲಿ ಮನೆಗಳನ್ನು ಕಟ್ಟಿದರೆ ಮನೆಗಳು ಹೇಗೆ ಬಾಳಿಕೆ ಬರಲು ಸಾಧ್ಯ. ಮನೆಗಳಿಗೆ ನೀರು ನುಗ್ಗಿ ಹಾನಿಗೊಂಡರೆ ಸರ್ಕಾರಕ್ಕೆ ಪರಿಹಾರ ನೀಡಲು ಹಣ ಎಲ್ಲಿಂದ ಬರಬೇಕು,ಕೆರೆಗಳ ಒತ್ತುವರಿಯಿಂದ ಪಶು, ಪಕ್ಷಿಗಳಿಗೆ ಕುಡಿಯಲು ನೀರಿಲ್ಲದೆ ಶಾಪ ಹಾಕುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಜನರು ಕೇವಲ ಹಕ್ಕುಗಳಿಗಾಗಿ ಹೋರಾಟ ಮಾಡದೆ ತಮ್ಮ ಜವಾಬ್ದಾರಿಗಳನ್ನು ಅರಿತುಕೊಳ್ಳಬೇಕು. ನಮ್ಮ ಊರು, ಶಾಲೆ, ಹಾಗೂ ಪರಿಸರದ ಬಗ್ಗೆ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು ಎಂದರು.

ಮಾಜಿ ಶಾಸಕ ಎಂ. ಬಸವರಾಜ ನಾಯ್ಕ,ಬಹುಭಾಷಾ ಚಿತ್ರ ನಿರ್ಮಾಪಕ ರಾಜಶೇಖರ್‌, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಎನ್‌.ಇ.ಜೀವನಮೂರ್ತಿ, ಆರ್‌.ಆರ್‌. ರಮೇಶ್‌ಬಾಬು, ಬಿಜೆಪಿ ಮಂಡಲ ಅಧ್ಯಕ್ಷ ದೇವೇಂದ್ರಪ್ಪ ಶ್ಯಾಗಲೆ, ಕುರ್ಕಿ ಸಾಯಿ ಸಮಿತಿ ಅಧ್ಯಕ್ಷ ಕೆ.ಎಚ್‌. ಕೊಟ್ರಪ್ಪ, ಕೈದಾಳೆ ಪಿಡಿಒ ವಿದ್ಯಾವತಿ, ಹದಡಿ ಜಿ.ಪಂ.ಮಾಜಿ ಸದಸ್ಯ ಜೆ.ಸಿ. ನಿಂಗಪ್ಪ, ತಾ.ಪಂ. ಮಾಜಿ ಸದಸ್ಯೆ ಮೀನಾ ಶ್ರೀನಿವಾಸ್‌, ಮಾನವ ಕಂಪೂÂಟರ್‌ ಬಸವರಾಜ್‌ ಉಮ್ರಾಣಿ, ಗ್ರಾಪಂ ಉಪಾಧ್ಯಕ್ಷೆ ಆಶಾ ಬಸವರಾಜ್‌, ಕೋಲ್ಕುಂಟೆ ಗಾಮಾಭ್ಯುದಯ ಸಂಘದ ಅಧ್ಯಕ್ಷ ಕೆ.ಜಿ. ಮಂಜುನಾಥ್‌, ನಗರಪಾಲಿಕೆ ಮಾಜಿ ಸದಸ್ಯ ಬಾ.ಮ. ಬಸವರಾಜಯ್ಯ ಇತರರು ಇದ್ದರು. ಗ್ರಾಮದ ಮುಖಂಡ ಎಸ್‌. ಲೋಕೇಶಪ್ಪ ಸ್ವಾಗತಿಸಿದರು, ಶಿಕ್ಷಕ ವೀರೇಶ್‌ ನಿರೂಪಿಸಿದರು.

ಕೆರೆಯನ್ನು ಕಲ್ಮಶಗೊಳಿಸಿದಿರಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರಾಜ್ಯದಲ್ಲಿ 370 ಕೆರೆಗಳನ್ನು ಅಭಿವೃದ್ಧಿಗೊಳಿಸುವ ಮೂಲಕ ಆಯಾ ಗ್ರಾಮಗಳಕೆರೆ ಅಭಿವೃದ್ಧಿ ಸಮಿತಿಗಳಿಗೆ ಹಸ್ತಾಂತರ ಮಾಡಲಾಗಿದೆ. ಜಿಲ್ಲೆಯಲ್ಲಿ 11 ಕೆರೆಗಳ ಹೂಳೆತ್ತಲಾಗಿದೆ. ಈ ವರ್ಷ 6 ಕೆರೆಗಳ ಅಭಿವೃದ್ಧಿಗೆ ಮಂಜೂರಾತಿ ಪಡೆಯಲಾಗಿದೆ. ಎಂದಿಗೂ ಕೆರೆಯನ್ನುಕಲ್ಮಶಗೊಳಿಸಬೇಡಿ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಜಿಲ್ಲಾ ನಿರ್ದೇಶಕ ಜಯಂತ್‌ ಪೂಜಾರಿ ಮನವಿ ಮಾಡಿದರು.

ಸ್ವಾರ್ಥ ಸಾಧನೆಗೆಬಂದಿಲ್ಲ
ನನ್ನ ತಾತಬಿಟ್ಟು ಹೋದ ದೊಡ್ಡಆಸ್ತಿಎಂದರೆ ಅದುಕೋಲ್ಕುಂಟೆ ಗ್ರಾಮಸ್ಥರ ‌ಪ್ರೀತಿ. ಗ್ರಾಮದ ಜನರು ನೀಡುವಋಣದ ತೀರಿಸುವುದಕ್ಕಾಗಿ ನಾನು ಗ್ರಾಮಕ್ಕೆಬಂದಿದ್ದೇನೆಯೇ ಹೊರತುಯಾವುದೇ ಸ್ವಾರ್ಥ ಸಾಧನೆಗೆಬಂದಿಲ್ಲ. ಎಷ್ಟು ಸಾಧ್ಯವೋ ಅಷ್ಟು ಗ್ರಾಮಕ್ಕೆಒಳ್ಳೆಯ ಕೆಲಸಮಾಡುತ್ತೇನೆ. ಕಲಾವಿದರಿಗೆ ಕಲಾ ಸೇವೆ ಸಾಕಾಗಿರಬೇಕು, ಚುನಾವಣೆ ಸಂದರ್ಭಕ್ಕಾಗಿಬಂದಿರಬೇಕು ಎಂದು ಜನರುಮಾತನಾಡಿಕೊಂಡಿರಬಹುದು.ಆದರೆ ನಾನು ರಾಜಕಾರಣಿಯಲ್ಲ,ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲಎಂದು ಸುಚೇಂದ್ರ ಪ್ರಸಾದ್‌ ವಾಗ್ಧಾನ ಮಾಡಿದರು.

ಟಾಪ್ ನ್ಯೂಸ್

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.