ಪೊಲೀಸ್‌ ಪೇದೆಯ 14 ಜನ ಸಂಬಂಧಿಕರು ಕ್ವಾರಂಟೈನ್‌ಗೆ


Team Udayavani, Jun 3, 2020, 11:16 AM IST

03-June-03

ಸಾಂದರ್ಭಿಕ ಚಿತ್ರ

ಮಲೇಬೆನ್ನೂರು: ದಾವಣಗೆರೆಯ ಪೇದೆಯೊಬ್ಬರಿಗೆ ಕೋವಿಡ್ ಪಾಸಿಟೀವ್‌ ಬಂದಿದ್ದು, ಅವರು ಮಲೇಬೆನ್ನೂರಿಗೆ ಬಂದು ಹೋಗಿದ್ದರಿಂದ ಪೇದೆಯ ಸಂಬಂಧಿಕರ ಮನೆಯ ಸದಸ್ಯರನ್ನು ಮಂಗಳವಾರ ಕ್ವಾರಂಟೈನ್‌ ಮಾಡಲಾಗಿದೆ.

ದಾವಣಗೆರೆಯಲ್ಲಿ ಕ್ವಾರಂಟೈನ್‌ ಕರ್ತವ್ಯ ನಿರ್ವಹಿಸುತ್ತಿದ್ದ ಪೇದೆಯೊಬ್ಬರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. ಪೇದೆಗೆ ಕೋವಿಡ್ ಪಾಸೀಟೀವ್‌ ಬಂದಿದೆ. ಮಲೇ ಬೆನ್ನೂರಿನ ಗೌಸ್‌ ನಗರದಲ್ಲಿರುವ ಅವರ ಅಣ್ಣನ ಮನೆಗೆ ರಂಜಾನ್‌ ಹಬ್ಬಕ್ಕೆ ಬಂದಿದ್ದರು. ಪೇದೆಯ ಮಗನನ್ನು ಮಲೇಬೆನ್ನೂರಿನ ತನ್ನ ಅಣ್ಣನ ಮನೆಯಲ್ಲಿ ಬಿಟ್ಟಿದ್ದನು. ತನ್ನ ಮಗನ ಹುಟ್ಟುಹಬ್ಬಕ್ಕೆಂದು ಮಲೇಬೆನ್ನೂರಿಗೆ ಬಂದಾಗ ಆತನಿಗೆ ಕೋವಿಡ್  ಪಾಸೀಟೀವ್‌ ಬಂದಿದೆ ಎಂದು ಲ್ಯಾಬ್‌ ರಿಪೋರ್ಟ್‌ ಬಂದಿದೆ. ಪೇದೆ ಮತ್ತು ಮಗ ಸೇರಿದಂತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ಕು ಜನರು ಜಿಲ್ಲಾ ಆಸ್ಪತ್ರೆಯಲ್ಲಿ ಐಸೊಲೇಶನ್‌ ಮಾಡಲಾಗಿದೆ. ಮಲೇಬೆನ್ನೂರಿನ ಆತನ ಅಣ್ಣನ ಮನೆಯವರ ಮತ್ತು ಪಕ್ಕದ ಮನೆಯವರ ಸದಸ್ಯರನ್ನು ಪೇದೆಯ ದ್ವಿತೀಯ ಸಂಪರ್ಕದಲ್ಲಿದ್ದ 9ಜನ ಮತ್ತು ಐದು ಮಕ್ಕಳು, ಒಬ್ಬಳು ಬಾಣಂತಿ ಮತ್ತು 5 ತಿಂಗಳ ಹಸುಗೂಸು ಸೇರಿದಂತೆ ಒಟ್ಟು 14 ಜನರನ್ನು ಮನೆಯಲ್ಲಿ ಕ್ವಾರಂಟೈನ್‌ ಮಾಡಲಾಗಿದೆ. ಮಲೇಬೆನ್ನೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ 7 ಜನರ ಗಂಟಲು ದ್ರವ ಸಂಗ್ರಹಿಸಲಾಗಿದ್ದು, ಉಳಿದ 7 ಜನರ ಗಂಟಲು ದ್ರವ ಸಂಗ್ರಹಿಸಲು ಹರಿಹರದ ಆಸ್ಪತ್ರೆಗೆ 108 ತುರ್ತು ವಾಹನದಲ್ಲಿ ಕಳುಹಿಸಿ ಕೊಡಲಾಗಿದೆ. ಇನ್ನೆರಡು ದಿನಗಳಲ್ಲಿ ವರದಿ ಬರಲಿದೆ.

ತಹಶೀಲ್ದಾರ್‌ ಕೆ.ಬಿ. ರಾಮಚಂದ್ರಪ್ಪ, ಉಪ ತಹಶೀಲ್ದಾರ್‌ ಆರ್‌. ರವಿ, ಪುರಸಭೆ ಮುಖ್ಯಾಧಿಕಾರಿ ಧರಣೇಂದ್ರ ಕುಮಾರ್‌, ತಾಲೂಕು ಆರೋಗ್ಯಾಧಿಕಾರಿ ಚಂದ್ರಮೋಹನ್‌, ಪಿಎಸ್‌ಐ ವೀರಬಸಪ್ಪ ಕುಸಲಾಪುರ್‌, ವಾರ್ಡ್‌ ಸದಸ್ಯ ಆರೀಪ್‌ ಅಲಿ ಅವರು ಪಟ್ಟಣದ ಗೌಸ್‌ ನಗರದಲ್ಲಿರುವ ಎರಡು ಮನೆಗೆ ಭೇಟಿ ನೀಡಿ ಪರಿಶೀಲಿಸಿ ಅವರಿಗೆ ಧೈರ್ಯ ತುಂಬಿದ್ದಾರೆ. ಎರಡೂ ಮನೆಯ ಮುಂದೆ ಬ್ಯಾರಿಕೇಡ್‌ಗಳನ್ನು ಹಾಕಿ ಮನೆಯ ಗೋಡೆಗೆ ಕ್ವಾರಂಟೈನ್‌ ಗೆ ಒಳಪಡಿಸಿದೆ ಎಂಬ ಸೂಚನಾ ಫಲಕ ಹಾಕಿಸಿದ್ದಾರೆ.

ಮನೆಯ ಸದಸ್ಯರಿಗೆ ಯಾವುದಕ್ಕೂ ಮನೆಯಿಂದ ಹೊರಗಡೆ ಬರಬೇಡಿ, ನಿಮಗೆ ಅವಶ್ಯಕ ವಸ್ತುಗಳಿಗೆ ವ್ಯವಸ್ಥೆ ಮಾಡಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಧರಣೇಂದ್ರ ಕುಮಾರ್‌ ತಿಳಿಸಿದ್ದಾರೆ. ಪಟ್ಟಣದ ಎಲ್ಲಾ ಬೀದಿಗಳಲ್ಲಿ ಸಂಚರಿಸಿ ಅಂಗಡಿಗಳ ಮಾಲೀಕರು, ಗ್ರಾಹಕರು, ಗ್ರಾಮಸ್ಥರು ಸಂಪೂರ್ಣವಾಗಿ ಮಾಸ್ಕ್ ಧರಿಸುವಂತೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜಾಗೃತಿ ಜಾಥಾ ಮೂಡಿಸಲಾಯಿತು.

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; Argument over flag hoisting: Complaint filed against 8 people

Davanagere; ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ: 8 ಜನರ ವಿರುದ್ಧ ದೂರು ದಾಖಲು

ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್‌ ಹಬ್‌- ಜಿ.ಬಿ. ವಿನಯ್‌ ಕುಮಾರ್‌

Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್‌: ರೇಣು

Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್‌: ರೇಣು

Davanagere-JCB

Davanagere: ಗಣೇಶ ವಿಸರ್ಜನೆ ವೇಳೆ ಜೆಸಿಬಿ ಹರಿದು ಮಹಿಳೆ ಸೇರಿ 5-6 ಮಂದಿಗೆ ಗಂಭೀರ ಗಾಯ

davanagere

Davanagere: 80 ಕಿಲೋಮೀಟರ್ ಉದ್ದದ ಮಾನವ ಸರಪಳಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.