![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 2, 2022, 11:23 AM IST
ಹುಬ್ಬಳ್ಳಿ: ನೈಋತ್ಯ ರೈಲ್ವೆ ವಲಯ 2021-22ರ ಹಣಕಾಸು ವರ್ಷದಲ್ಲಿ 44.12 ಮಿಲಿಯನ್ ಟನ್ ಸರಕು ಸಾಗಣೆ ಮಾಡುವ ಮೂಲಕ ಕಳೆದ ಹಣಕಾಸು ವರ್ಷಕ್ಕಿಂತ ಶೇ. 15.5 ಹೆಚ್ಚಳ ದಾಖಲಿಸಿದೆ ಎಂದು ನೈಋತ್ಯ ರೈಲ್ವೆ ವಲಯ ಪ್ರಧಾನ ವ್ಯವಸ್ಥಾಪಕ ಸಂಜೀವ ಕಿಶೋರ ಹೇಳಿದರು.
ನೈಋತ್ಯ ರೈಲ್ವೆ ಪ್ರಧಾನ ಕಚೇರಿಯಲ್ಲಿ ಹುಬ್ಬಳ್ಳಿ, ಬೆಂಗಳೂರು ಮತ್ತು ಮೈಸೂರು ವಿಭಾಗಗಳ ಇಲಾಖೆಗಳ ಪ್ರಧಾನ ಮುಖ್ಯಸ್ಥರು ಮತ್ತು ವಿಭಾಗೀಯ ರೈಲ್ವೆ ವ್ಯವಸ್ಥಾಪಕರೊಂದಿಗೆ ಶುಕ್ರವಾರ ಸಭೆ ನಡೆಸಿ ಮಾತನಾಡಿದ ಅವರು, ಲೋಡ್ ಮಾಡಲಾದ ಸರಕುಗಳಲ್ಲಿ 17.04 ಮಿಲಿಯನ್ ಟನ್ ಕಬ್ಬಿಣದ ಅದಿರು, 9.13 ಮಿಲಿಯನ್ ಟನ್ ಕಲ್ಲಿದ್ದಲು, 9.05 ಮಿಲಿಯನ್ ಟನ್ ಪಿಗ್ ಐರನ್ ಮತ್ತು ಫಿನಿಶ್ಡ್ ಸ್ಟೀಲ್, 0.77 ಮಿಲಿಯನ್ ಟನ್ ಆಹಾರ ಧಾನ್ಯಗಳು, 0.98 ಮಿಲಿಯನ್ ಟನ್ ಸಿಮೆಂಟ್ ಇತ್ಯಾದಿ ಆಗಿದೆ. 2021-22ರಲ್ಲಿ ಸರಕು ಆದಾಯವು 4,160 ಕೋಟಿ ರೂ. ಆಗಿದ್ದು, ಇದು 2020-21ರ ಹಣಕಾಸು ವರ್ಷಕ್ಕಿಂತ ಶೇ.28.72 ಹೆಚ್ಚು. 2021-22ರಲ್ಲಿ ಪಾರ್ಸೆಲ್ ಆದಾಯವು 121.56 ಕೋಟಿ ರೂ. ಗಳಾಗಿದೆ. 2021-22ರ ಹಣಕಾಸು ವರ್ಷದಲ್ಲಿ 238 ಆಟೋಮೊಬೈಲ್ ರೇಕ್ಗಳನ್ನು ಲೋಡ್ ಮಾಡಿದೆ. ವಿವಿಧ ಬಗೆಯ ಗಳಿಕೆಯು ಶೇ.71.52 ಹೆಚ್ಚಳದೊಂದಿಗೆ 275.7 ಕೋಟಿ ರೂ. ಆಗಿದೆ. ನೈಋತ್ಯ ರೈಲ್ವೆಯು 138.04 ಕೋಟಿ ರೂ. ಮೌಲ್ಯದ ಸ್ಕ್ರ್ಯಾಪ್ ಮಾರಾಟ ಮಾಡಿದೆ ಮತ್ತು ರೈಲ್ವೆ ಮಂಡಳಿಯು ನಿಗದಿಪಡಿಸಿದ ಗುರಿ ಮೀರಿದೆ ಎಂದರು.
ನೈಋತ್ಯ ರೈಲ್ವೆಯು 2021-22ರಲ್ಲಿ 187 ಕಿಮೀ ಡಬ್ಲಿಂಗ್ ಮತ್ತು 22 ಕಿಮೀ ಹೊಸ ಮಾರ್ಗಗಳು ಮತ್ತು 511.7 ರೂಟ್ ಕಿಮೀ ವಿದ್ಯುದೀಕರಣ ಪೂರ್ಣಗೊಳಿಸಿದೆ. 26 ರೈಲುಗಳನ್ನು ಎಲೆಕ್ಟ್ರಿಕ್ ಟ್ರಾಕ್ಷನ್ದಲ್ಲಿ ಚಲಿಸುವಂತೆ ಪರಿವರ್ತಿಸಿದೆ. ಡೀಸೆಲ್ ಬಳಕೆ ಕಡಿಮೆ ಮಾಡುವ ಎಚ್ಒಜಿ ಪವರ್ ಕಾರ್ ಗಳ 40 ರೈಲುಗಳನ್ನು ಓಡಿಸುತ್ತಿದೆ. ಹಸಿರು ಉಪಕ್ರಮವಾಗಿ ವಲಯವು ತನ್ನ ವ್ಯಾಪ್ತಿಯಾದ್ಯಂತ 70 ಸಾವಿರ ಮರಗಳನ್ನು ಬೆಳೆಸಿದೆ ಎಂದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.