![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 2, 2020, 1:11 PM IST
ಹುಬ್ಬಳ್ಳಿ: ಇಂಡಿಗೋ ವಿಮಾನಯಾನ ಕಂಪನಿಯು ನ. 7ರಿಂದ ಪ್ರತಿದಿನ ಸಂಜೆ ಬೆಂಗಳೂರು-ಹುಬ್ಬಳ್ಳಿ ನಡುವೆ ಮತ್ತೂಂದು ಎಟಿಆರ್ ವಿಮಾನ ಆರಂಭಿಸುತ್ತಿದೆ. ಪ್ರತಿದಿನ ಸಂಜೆ 6:15 ಗಂಟೆಗೆ ಬೆಂಗಳೂರಿನಿಂದ ಹೊರಡುವ (6ಇ-7114) ವಿಮಾನವು 7:40 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿದೆ. ನಂತರ ರಾತ್ರಿ 8:10 ಗಂಟೆಗೆ ಹುಬ್ಬಳ್ಳಿಯಿಂದ ಹೊರಡುವ (6ಇ-7115) ವಿಮಾನವು 9:25 ಗಂಟೆಗೆ ಬೆಂಗಳೂರು ತಲುಪಲಿದೆ.
ಈಗಾಗಲೇ ಇಂಡಿಗೋ ಕಂಪನಿಯು ಬೆಂಗಳೂರು-ಹುಬ್ಬಳ್ಳಿ-ಬೆಂಗಳೂರು ನಡುವೆ ರವಿವಾರ, ಮಂಗಳವಾರ ಹೊರತುಪಡಿಸಿ ವಾರದಲ್ಲಿ ಐದುದಿನಗಳ ಕಾಲ ಎಟಿಆರ್ ವಿಮಾನಯಾನ ಆರಂಭಿಸಿದೆ. ಈ ವಿಮಾನವು ಬೆಂಗಳೂರಿನಿಂದ (6ಇ-7162)
ಮಧ್ಯಾಹ್ನ 1:35 ಗಂಟೆಗೆ ಹೊರಟು ಹುಬ್ಬಳ್ಳಿಗೆ 3:00 ಗಂಟೆಗೆ ತಲುಪಲಿದೆ.
ನಂತರ ಹುಬ್ಬಳ್ಳಿಯಿಂದ (6ಇ-7161) ಮಧ್ಯಾಹ್ನ 3:30 ಗಂಟೆಗೆ ಹೊರಟು ಸಂಜೆ 4:35 ಗಂಟೆಗೆ ಬೆಂಗಳೂರು ತಲುಪಲಿದೆ. ಈಗ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರ ಮುತುವರ್ಜಿ ಮೇರೆಗೆ ಕಂಪನಿಯು ಬೆಂಗಳೂರು-ಹುಬ್ಬಳ್ಳಿ-ಬೆಂಗಳೂರು ನಡುವೆ ಮತ್ತೂಂದು ಎಟಿಆರ್ ವಿಮಾನಯಾನ ಆರಂಭಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.