ಬಸವ ಜಯಂತಿ; ಮುಷ್ಟಿ ಅಕ್ಕಿ ಅಭಿಯಾನಕ್ಕೆ ಚಾಲನೆ

ಎಪಿಎಂಸಿ ಆವರಣದಲ್ಲಿ ಬಸವೇಶ್ವರ ಪುತ್ಥಳಿ ಮೆರವಣಿಗೆ

Team Udayavani, May 3, 2022, 1:16 PM IST

12

ಹುಬ್ಬಳ್ಳಿ: ಬಸವ ಜಯಂತಿ ಉತ್ಸವ ಅಂಗವಾಗಿ ಅಶ್ವಾರೂಢ ಶ್ರೀ ಬಸವೇಶ್ವರ ಪುತ್ಥಳಿಯ ಭವ್ಯ ಮೆರವಣಿಗೆಯು ಸೋಮವಾರ ಅಮರಗೋಳದ ಶ್ರೀ ಜಗಜ್ಯೋತಿ ಬಸವೇಶ್ವರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (ಎಪಿಎಂಸಿ) ಒಂದನೇ ಗೇಟ್‌ನಿಂದ ಆಹಾರಧಾನ್ಯ ವರ್ತಕರ ಮಾರುಕಟ್ಟೆ ವರೆಗೆ ನಡೆಯಿತು.

ಎಪಿಎಂಸಿ ಬಸವ ಜಯಂತಿ ಉತ್ಸವ ಸಮಿತಿ, ಎಪಿಎಂಸಿಯ ಎಲ್ಲ ಸಂಘ-ಸಂಸ್ಥೆಗಳು ಹಾಗೂ ಬಸವ ಸೇವಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮೆರವಣಿಗೆಗೆ ಮೂರುಸಾವಿರ ಮಠದ ಜಗದ್ಗುರು ಡಾ| ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಚಾಲನೆ ನೀಡಿದರು.

ನಂತರ ನಡೆದ ಬಸವ ಜಯಂತಿ ಉತ್ಸವ ಕಾರ್ಯಕ್ರಮ ಹಾಗೂ ಮುಷ್ಟಿ ಅಕ್ಕಿ ಅಭಿಯಾನಕ್ಕೆ ವಿವಿಧ ಶ್ರೀಗಳು, ಗಣ್ಯರು ಚಾಲನೆ ನೀಡಿದರು.

ಮೂರು ಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮಿಗಳು ಮಾತನಾಡಿ, ಮೂರು ಸಾವಿರ ಮಠದ ಕರ್ತೃ ಗುರುಸಿದ್ಧ ಶ್ರೀಗಳನ್ನು ಹುಚ್ಚನೆಂದು ಕರೆಯುತ್ತಿದ್ದರು. ಅವರ ಹೆಸರಿನಲ್ಲೇ ಹುಚ್ಚನ ಪ್ಯಾಟಿ ಅನ್ನುತ್ತಿದ್ದರು. ಕಾಳು-ಕಡಿ ವ್ಯಾಪಾರಸ್ಥರೆಲ್ಲ ಆ ಪ್ಯಾಟಿಯ ವ್ಯಾಪಾರಿಗಳಾಗಿದ್ದರು. ಅವರೆಲ್ಲ ಪ್ರತಿದಿನ ವ್ಯಾಪಾರಕ್ಕೂ ಮೊದಲು ಮೂರುಸಾವಿರ ಮಠದ ಹುಚ್ಚನ ದಾಸೋಹಕ್ಕೆ ಎಂದು ಒಂದು ಮುಷ್ಟಿ ಇರಿಸುತ್ತಿದ್ದರು. ಅದನ್ನೆ ಮಠದಿಂದ ಹೋಗಿ ಸಂಗ್ರಹಿಸಿ ದಾಸೋಹ ಮಾಡಲಾಗುತ್ತಿತ್ತು. ಈ ಪರಂಪರೆ 300-400 ವರ್ಷಗಳ ಹಿಂದೆ ನಡೆದುಕೊಂಡದ್ದಾಗಿದೆ. ಈಗ ಎಪಿಎಂಸಿ ವ್ಯಾಪಾರಸ್ಥರು ಮುಷ್ಟಿ ಅಕ್ಕಿ ಅಭಿಯಾನ ಆರಂಭಿಸಿದ್ದು ಶ್ಲಾಘನೀಯ.ಪ್ರತಿದಿನ ಶ್ರೀಮಠದಲ್ಲಿ 800-1000 ಜನ ಪ್ರಸಾದ ಮಾಡುತ್ತಿದ್ದಾರೆ. ಅದು ಎಪಿಎಂಸಿ ಮಾರುಕಟ್ಟೆಯಿಂದಲೇ ನಿರಂತರವಾಗಿ ನಡೆಯಬೇಕೆಂಬುದು ನನ್ನ ಆಸೆ ಎಂದರು.

ಭೈರನಹಟ್ಟಿ ಶ್ರೀ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಸ್ವಾಮೀಜಿ ಮಾತನಾಡಿ, ಬಸವಣ್ಣ ಜನಿಸದಿದ್ದರೆ ನಾವಿಂದು ಮೌಡ್ಯತೆ, ಕಂದಾಚಾರ, ವರ್ಣಾಶ್ರಮದ ವ್ಯವಸ್ಥೆಯಲ್ಲೇ ಬದುಕಬೇಕಿತ್ತು. ಅವರು ಬಂದಿದ್ದರಿಂದಲೇ ಮನುಷ್ಯರು ಮನುಷ್ಯರಂತೆ ಕಾಣಲು ಸಾಧ್ಯವಾಯಿತು. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರಿಗೆ ಸ್ವಾತಂತ್ರ್ಯ ಕೊಟ್ಟರು. ವರ್ಗಭೇದ, ವರ್ಣಭೇದ, ಲಿಂಗ ಭೇದ ತೊಡೆದು ಹಾಕುವಲ್ಲಿ ಅವರ ಪಾತ್ರ ದೊಡ್ಡದು ಎಂದರು.

ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಬಸವಣ್ಣನವರು ಕಾಯಕದ ಜೊತೆ ದಾಸೋಹಕ್ಕೆ ಹೆಚ್ಚಿನ ಪ್ರಾಧಾನ್ಯತೆ ಕೊಟ್ಟಿದ್ದರು. ಗುಜರಾತಿನ ವ್ಯಾಪಾರಿಗಳು ತಮ್ಮ ಲಾಭದಲ್ಲಿ ಮತ್ತು ಮುಸ್ಲಿಮರು ಜಕಾತ್‌ನಲ್ಲಿ ಒಂದಿಷ್ಟು ಹಣ ಮೀಸಲಿಡುವಂತೆ ಈ ಭಾಗದ ವ್ಯಾಪಾರಿಗಳು ತಮ್ಮ ಲಾಭದ ಒಂದಿಷ್ಟು ಹಣವನ್ನು ಸಮಾಜಕ್ಕಾಗಿ ಮೀಸಲಿಡಬೇಕು ಎಂದು ಹೇಳಿದರು.

ಕೆಎಲ್‌ಇ ನಿರ್ದೇಶಕ ಶಂಕರಣ್ಣ ಮುನವಳ್ಳಿ, ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಮಾಜಿ ಸದಸ್ಯ ಮಲ್ಲಿಕಾರ್ಜುನ ಗುಂಡೂರ, ಗಂಗನಗೌಡ (ಮುತ್ತು) ಪಾಟೀಲ, ಅಜ³ಪ್ಪ ಬೆಂಡಿಗೇರಿ, ರಾಜು ಶೀಲವಂತರ, ಮಲ್ಲು ಬುರಟ್ಟಿ, ಶಿವಾನಂದ ಸಣ್ಣಕ್ಕಿ, ಬಸವರಾಜ ಯಕಲಾಸಪೂರ, ಅಜಯ ಕೆಸರಪ್ಪನವರ, ಎಪಿಎಂಸಿ-ನವನಗರ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ ಬಿ.ಎಂ. ಮಂಟೂರ ಮೊದಲಾದವರಿದ್ದರು.

ಎಪಿಎಂಸಿ ಅಧ್ಯಕ್ಷ ಬಸನಗೌಡ ಚನ್ನಗೌಡರ ಅಧ್ಯಕ್ಷತೆ ವಹಿಸಿದ್ದರು. ರಾಜು ಶೆಟ್ಟರ ಸ್ವಾಗತಿಸಿದರು. ಎಪಿಎಂಸಿ ಸದಸ್ಯ ಚನ್ನು ಹೊಸಮನಿ ಪ್ರಾಸ್ತಾವಿಕ ಮಾತನಾಡಿದರು. ಪ್ರಭುದೇವ ಹುಗ್ಗಿಶೆಟ್ಟರ, ಕೃಷ್ಣ ಬಡಿಗೇರ ಸಂಗಡಿಗರು ವಚನ ಸಂಗೀತ ಪ್ರಸ್ತುತ ಪಡಿಸಿದರು. ರಾಮು ಮೂಲಗಿ ನಿರೂಪಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.