ಮಕ್ಕಳಿಗೆ ಸಂಸ್ಕಾರ ಉಡುಗೊರೆ ಅವಶ್ಯ: ರಮಣರಾವ್‌

ಮಕ್ಕಳಿಗೆ ಹೇಳಿ ಕೊಡುವ ಮೂಲಕ ದಾಸರ ಸ್ಮರಣೆ ನಿರಂತರವಾಗಿರುವಂತೆ ನೋಡಿಕೊಳ್ಳಬೇಕು.

Team Udayavani, Nov 15, 2021, 2:50 PM IST

ಮಕ್ಕಳಿಗೆ ಸಂಸ್ಕಾರ ಉಡುಗೊರೆ ಅವಶ್ಯ: ರಮಣರಾವ್‌

ಹುಬ್ಬಳ್ಳಿ: ಹರಿಭಕ್ತಿ ನಿರಂತರವಾಗಿದ್ದು, ಸಂಸ್ಕಾರ, ಸಂಪ್ರದಾಯ ನಮ್ಮ ಆಸ್ತಿಯಾಗಿದೆ. ಅದನ್ನು ಮುಂದಿನ ಪೀಳಿಗೆಗೆ ಧಾರೆ ಎರೆಯುತ್ತ ಸಾಗಿದರೆ ಮಾತ್ರ ನಮ್ಮ ಜೀವನ ಸಾರ್ಥಕವಾಗುತ್ತದೆ ಎಂದು ಮಂತ್ರಾಲಯ ವಿದ್ಯಾಪೀಠದ ಪ್ರಾಚಾರ್ಯ ರಮಣರಾವ್‌ ಹೇಳಿದರು.

ಭವಾನಿ ನಗರದ ನಂಜನಗೂಡು ರಾಘವೇಂದ್ರ ಸ್ವಾಮಿ ಮಠದಲ್ಲಿ ಟಿಟಿಡಿ ದಾಸ ಸಾಹಿತ್ಯ ಪ್ರೊಜೆಕ್ಟ್ ಮತ್ತು ಶ್ರೀ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರೊಜೆಕ್ಟ್ ವತಿಯಿಂದ ಹಮ್ಮಿಕೊಂಡಿದ್ದ ವಿಜಯದಾಸರ ಆರಾಧನಾ ಮಹೋತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದಾಸರ ಕೀರ್ತನೆಗಳನ್ನು ಕಲಿಯುವುದು, ಅವರು ಕಲಿಸಿದ ಆಚಾರ-ವಿಚಾರ ಹಾಗೂ ಸಂಸ್ಕೃತಿ ಮುಂದಿನ ಪೀಳಿಗೆಗೆ ಕಲಿಸುವುದು ನಮ್ಮ ಕರ್ತವ್ಯ. ಇದೇ ನಿಜವಾದ ಆಸ್ತಿ ಆಗಲಿದೆ. ದಾಸರ ಸುಳಾದಿಗಳು ಹಾಗೂ ಹರಿಕಥಾಮೃತವನ್ನು ಮೊದಲು ನಾವು ತಿಳಿದುಕೊಳ್ಳಬೇಕು. ಅದನ್ನು ನಮ್ಮ ಮಕ್ಕಳಿಗೆ ಹೇಳಿ ಕೊಡುವ ಮೂಲಕ ದಾಸರ ಸ್ಮರಣೆ ನಿರಂತರವಾಗಿರುವಂತೆ ನೋಡಿಕೊಳ್ಳಬೇಕು.

ಹಣ ಸಂಪತ್ತು ಕೂಡಿಡುವ ಬದಲಾಗಿ ಮಕ್ಕಳಿಗಾಗಿ ಸಂಸ್ಕಾರದ ಉಡುಗೊರೆ ನೀಡಬೇಕು. ಗುರುರಾಯರ ತತ್ವ ಪಾಲನೆ ಬಗ್ಗೆ ಗಮನಹರಿಸಬೇಕು. ಮಕ್ಕಳಿಗೆ ಸಂಸ್ಕಾರ ಕಲಿಸಿದಾಗ ಮಾತ್ರ ಹಿರಿಯರ ಜೀವನ ಸಾರ್ಥಕ ಆಗುತ್ತದೆ ಎಂದರು. ಶ್ರೀಮಠದ ಗೋಪಾಲ ಕುಲಕರ್ಣಿ ಮಾತನಾಡಿ, ಧರ್ಮವು ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದನ್ನು ನೋಡಿಕೊಳ್ಳಬೇಕು. ಸಂಘಟಿತರಾಗಿ ಮುಂದುವರಿದರೆ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

ಸಮಾರೋಪ ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ ನಿರ್ಮಾಲ್ಯ ವಿಸರ್ಜನೆ, ದಾಸರಿಗೆ ಅಭಿಷೇಕ ಪಂಚಾಮೃತ, ವಿಜಯದಾಸರ ಕವಚ ಪಾರಾಯಣ, ರಥೋತ್ಸವ, ಶ್ರೀಮನ್ಯೂಸೂಕ್ತ ಹೋಮ ನಡೆದವು. ಮಹಿಳೆಯರಿಗಾಗಿ ಆಯೋಜಿಸಲಾಗಿದ್ದ ವಿಜಯದಾಸರ ಕವಚ ಅರ್ಥ ಸ್ಪರ್ಧೆ, ಸುಳಾದಿಗಳು, ವಿಜಯದಾಸರ ಜೀವನಚರಿತ್ರೆ, ಹಾಡಿನ ಸ್ಪರ್ಧೆ, ವೇಷಭೂಷಣ ಸ್ಪರ್ಧೆಗಳಲ್ಲಿ ವಿಜೆತರಾದವರಿಗೆ ಬಹುಮಾನ ವಿತರಿಸಲಾಯಿತು.

ಮಠದ ಧರ್ಮಾಧಿಕಾರಿ ರಾಘವೇಂದ್ರ ಆಚಾರ್ಯ ನಂಜನಗೂಡು, ವೆಂಕಟೇಶ ಆಚಾರ್ಯ, ರಘೋತ್ತಮ ಆಚಾರ್ಯ, ವ್ಯವಸ್ಥಾಪಕ ಶ್ರೀಧರ ವಿ.ಎನ್‌., ಬದರಿನಾರಾಯಣ ಆಚಾರ್ಯ, ಧೂಳಖೇಡ ನಾರಾಯಣ ಆಚಾರ್ಯ, ಸಮೀರಾಚಾರ್ಯ ಕಂಠಪಲ್ಲಿ, ಎ.ಸಿ. ಗೋಪಾಲ, ರಾಘವೇಂದ್ರ ಗಂಡಮಾಲಿ, ವಾದಿರಾಜ ಭಟ್‌, ಪ್ರಭುರಾಜ ಅಪರಂಜಿ, ಅರುಣ ಅಪರಂಜಿ, ರಘುವೀರ ಆಚಾರ್ಯ, ಶ್ರೀರಂಗ ಹನುಮಸಾಗರ, ಮನೋಹರ ಪರ್ವತಿ, ಧೂಳಖೇಡ ನಾರಾಯಣ ಆಚಾರ್ಯ, ವನಜಾ ಕಾತೋಟಿ ಮೊದಲಾದವರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.