ಕಾಂಗ್ರೆಸ್‌ ರಾಜ್ಯಕ್ಕಿರುವ ಶಾಪ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಲ್ಲದ 50 ಸಾವಿರ ಮತಗಳಿಂದ ಗೆಲ್ಲುವುದು ಖಚಿತ ಎಂದು ಭವಿಷ್ಯ ನುಡಿದರು

Team Udayavani, Apr 26, 2023, 5:15 PM IST

ಕಾಂಗ್ರೆಸ್‌ ರಾಜ್ಯಕ್ಕಿರುವ ಶಾಪ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಕಾಂಗ್ರೆಸ್‌ ಪಕ್ಷವೇ ರಾಜ್ಯಕ್ಕೆ ಇರುವ ಶಾಪ. ರಾಜ್ಯದಲ್ಲಿ ಐದು ವರ್ಷ ಆಡಳಿತ ನಡೆಸಿ ಇನ್ನಿಲ್ಲದ ಭಾಗ್ಯಗಳನ್ನು ತಂದರು. ಆದರೆ ಅವ್ಯಾವುವು ಜನರಿಗೆ ತಲುಪಲಿಲ್ಲ. ಅವರದೆಲ್ಲವೂ ದೌರ್ಭಾಗ್ಯಗಳೇ. ರಾಜ್ಯಕ್ಕೆ ಮತ್ತೂಮ್ಮೆ ಇಂತಹ ದೌರ್ಭಾಗ್ಯದ ಪಕ್ಷವು ಬರಬಾರದೆಂದರೆ ಬಿಜೆಪಿಗೆ ಮತ ನೀಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅಮರಗೋಳದಲ್ಲಿ ಮಂಗಳವಾರ ಹು-ಧಾ ಪಶ್ಚಿಮ ಕ್ಷೇತ್ರದ ಅಭ್ಯರ್ಥಿ, ಶಾಸಕ ಅರವಿಂದ ಬೆಲ್ಲದ ಪರ ಜನವಾಹಿನಿ ರೋಡ್‌ ಶೋ ಮೂಲಕ ಪ್ರಚಾರ ನಡೆಸಿದ ಅವರು ಗ್ರಾಮದ ಚವಡಿ ಓಣಿ ವೃತ್ತದಲ್ಲಿ ಜನರನ್ನುದ್ದೇಶಿಸಿ ಮಾತನಾಡಿದರು.

ಕಾಂಗ್ರೆಸ್‌ ಮತ ಬ್ಯಾಂಕ್‌ ಛಿದ್ರಗೊಂಡಿದೆ. ಹೀಗಾಗಿ ಲಿಂಗಾಯತ ಧರ್ಮ ಇನ್ನಿತರೆ ಬಗ್ಗೆ ಮಾತನಾಡುತ್ತಿದ್ದಾರೆ. ದಾರಿ ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಪ್ರೇಕ್ಷಕರಿಲ್ಲದ ನಾಟಕ ಕಂಪನಿಯಾಗಿದ್ದು, ಕೆಲವೇ ದಿನಗಳಲ್ಲಿ ದಿವಾಳಿಯಾಗಿ ಮುಚ್ಚಿಕೊಂಡು ಹೋಗಲಿದೆ ಎಂದು ಲೇವಡಿ ಮಾಡಿದರು.

ಕಾಂಗ್ರೆಸ್‌ನವರಿಗೆ ಈಗ ಬಸವಣ್ಣನ ಮೇಲೆ ಬಹಳ ಪ್ರೀತಿ ಬಂದಿದೆ. ರಾಹುಲ್‌ ಗಾಂಧಿ ಕೂಡಲಸಂಗಮಕ್ಕೆ ಬಂದು ವಿಭೂತಿ ಹಚ್ಚಿಕೊಂಡು ಹೋದರು. ಸಿದ್ದರಾಮಯ್ಯ ಸರ್ಕಾರ ಇದ್ದಾಗ ಉತ್ತರ ಕರ್ನಾಟಕದಲ್ಲಿ ಅತೀ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರು. ಆಗ ರಾಹುಲ್‌ ಸೇರಿದಂತೆ ಯಾರಾದರೂ ಬಂದು ಪರಿಹಾರ ಕೊಟ್ಟರೆ? ನಾವು ಅಧಿಕಾರದಲ್ಲಿ ಇಲ್ಲದಿದ್ದರೂ ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗೆ ತೆರಳಿ
ಪರಿಹಾರ ಕೊಟ್ಟೆವು ಎಂದರು.

ಹು-ಧಾ ಪಶ್ಚಿಮ ಕ್ಷೇತ್ರದಲ್ಲಿ ಕೆಲಸಗಾರರು ಯಾರು, ಅಭಿವೃದ್ಧಿ ಮಾಡುವವರು ಯಾರು ಹಾಗೂ ಚುನಾವಣೆ ಸಂದರ್ಭದಲ್ಲಿ ಬಂದು ಜಾತ್ರೆ ಮಾಡುವವರು ಯಾರು ಎಂಬುವರ ನಡುವೆ ಸ್ಪರ್ಧೆ ನಡೆಯುತ್ತಿದೆ.

500-1000ರೂ.ದಲ್ಲಿ ಹೊಲಿಗೆ ಯಂತ್ರ ತಂದು ಕೊಟ್ಟು ಮತದಾರರಿಗೆ ಆಮಿಷವೊಡ್ಡಿ ಮತ ಪಡೆಯುವವರು ಬೇಕಿಲ್ಲ. ನಮ್ಮ ಊರು, ಕೇರಿ, ಸಮಾಜ, ಯುವಕರ ಭವಿಷ್ಯ, ಮಹಿಳೆಯರಿಗೆ ಅವಕಾಶ ನೀಡುವಂತಹ ಸರ್ಕಾರ, ಜನಪ್ರತಿನಿಧಿಗಳು ಬೇಕು. ಅರವಿಂದ ಬೆಲ್ಲದ ಸಜ್ಜನ, ಯಶಸ್ವಿ ಉದ್ಯಮಿ. ಅವರನ್ನು ಎಲ್ಲ ವರ್ಗ, ಸಮಾಜ ಒಗ್ಗಟ್ಟಾಗಿ ಕಳೆದ ಬಾರಿಗಿಂತ ಹೆಚ್ಚಿನ ಮತಗಳಿಂದ ಚುನಾಯಿಸಬೇಕು. ಬೆಲ್ಲದ 50 ಸಾವಿರ ಮತಗಳಿಂದ ಗೆಲ್ಲುವುದು ಖಚಿತ ಎಂದು ಭವಿಷ್ಯ ನುಡಿದರು.

ಅಮರಗೋಳ ನನ್ನ ಗ್ರಾಮ. ಇಲ್ಲಿಯೇ ನನ್ನ ಹೊಲವಿದೆ. ನಮ್ಮ ತಂದೆ-ತಾಯಿ ಕೂಡ ಇದೇ ಭೂಮಿಯಲ್ಲಿದ್ದು, ಈ ಗ್ರಾಮವನ್ನು ಎಂದೂ ಮರೆಯಲ್ಲ. ತಂದೆಯವರು ಸಹಿತ ಗ್ರಾಮದವರೊಂದಿಗೆ ತುಂಬಾ ಹಳೆಯ ಒಡನಾಟ ಹೊಂದಿದ್ದರು ಎಂದರು.

ಚವಡಿ ಓಣಿಯ ವೃತ್ತದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಸಿಎಂ ಬೊಮ್ಮಾಯಿ ಅವರಿಗೆ ಸೇಬು ಹಣ್ಣುಗಳು, ಹೂವಿನ ಗುತ್ಛಗಳಿಂದ ನಿರ್ಮಿಸಿದ್ದ ಬೃಹತ್‌ ಹಾರವನ್ನು ಕ್ರೇನ್‌ ಮೂಲಕ ಹಾಕಿ ಬರಮಾಡಿಕೊಂಡರು. ಇದಕ್ಕೂ ಮೊದಲು ಅಮರಗೋಳದ ಶ್ರೀ ಬೀರೇಶ್ವರ ಗುಡಿಯಿಂದ ತೆರೆದ ವಾಹನದಲ್ಲಿ ಗ್ರಾಮದ ವಿವಿಧ ಪ್ರದೇಶಗಳಲ್ಲಿ ಸಂಚರಿಸಿ
ಮತಯಾಚಿಸಿದರು. ಶಾಸಕ ಅರವಿಂದ ಬೆಲ್ಲದ, ಪಾಲಿಕೆ ಸದಸ್ಯರಾದ ಚಂದ್ರಶೇಖರ ಮನಗುಂಡಿ, ಸುನಿತಾ ಮಾಳವಕರ, ಮಾಜಿ ಸದಸ್ಯರಾದ ಅಜ್ಜಪ್ಪ ಹೊರಕೇರಿ, ಮಲ್ಲಿಕಾರ್ಜುನ ಹೊರಕೇರಿ, ಶಾಂತಪ್ಪ ದೇವಕ್ಕಿ ಮೊದಲಾದವರಿದ್ದರು.

ಕಾಂಗ್ರೆಸ್‌ ಇಂದು ಹತಾಶಗೊಂಡಿದೆ. ಅವರು ದೀನ ದಲಿತರು, ಹಿಂದುಳಿದವರು ನಮ್ಮ ಮತ ಬ್ಯಾಂಕ್‌ ಎಂದುಕೊಂಡಿದ್ದರು. ಈಗ ಅವರು ಸೇರಿದಂತೆ ರೈತರು, ಮಹಿಳೆಯರು, ಯುವಕರು ಬಿಜೆಪಿ ಬೆಂಬಲಿಸುತ್ತಿದ್ದಾರೆ. ಅವರೆಲ್ಲ ಕಾಂಗ್ರೆಸ್‌ ಅನ್ನು ಬಾವಿಗೆ
ಹಾಕಲು ತೀರ್ಮಾನಿಸಿದ್ದಾರೆ.
*ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ಟಾಪ್ ನ್ಯೂಸ್

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

Mahalaya

Mahalaya Shraddha: ಋಣಮುಕ್ತಗೊಳಿಸಿ, ವಂಶವನ್ನು ಬೆಳಗಿಸುವ ಮಹಾಲಯ ಕಾರ್ಯ

Chikkamela: ಯಕ್ಷಗಾನಕ್ಕೆ ಮುಸ್ಲಿಂ, ಕ್ರೈಸ್ತರ ಮನೆಗಳಲ್ಲೂ ಸ್ವಾಗತ

Chikkamela: ಯಕ್ಷಗಾನಕ್ಕೆ ಮುಸ್ಲಿಂ, ಕ್ರೈಸ್ತರ ಮನೆಗಳಲ್ಲೂ ಸ್ವಾಗತ

GRUHALAKHMI

Congress Guarantee: ರಾಜ್ಯದ 1.82 ಲಕ್ಷ ಗೃಹಲಕ್ಷ್ಮೀಯರಿಗೆ ಇನ್ನೂ 1 ಕಂತೂ ಸಿಕ್ಕಿಲ್ಲ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Yathanal

MUDA Case: ಸಿದ್ದರಾಮಯ್ಯ ಅಧಿಕಾರದಲ್ಲಿದ್ರೆ ತನಿಖೆ ಮೇಲೆ ಪ್ರಭಾವ ಖಚಿತ: ಶಾಸಕ ಯತ್ನಾಳ್‌

Let Siddaramaiah bow to the court order and resign: Pramod Muthalik

Hubli; ಕೋರ್ಟ್ ಆದೇಶಕ್ಕೆ ತಲೆಬಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಪ್ರಮೋದ ಮುತಾಲಿಕ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

Mahalaya

Mahalaya Shraddha: ಋಣಮುಕ್ತಗೊಳಿಸಿ, ವಂಶವನ್ನು ಬೆಳಗಿಸುವ ಮಹಾಲಯ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.