ವ್ಯಾಪಾರ-ವಹಿವಾಟು ಚುರುಕು

ಜಿಲ್ಲಾಡಳಿತದಿಂದ ಲಾಕ್‌ಡೌನ್‌ ಮತ್ತಷ್ಟು ಸಡಿಲಿಕೆ; ಕ್ವಾರಂಟೈನ್‌ದಲ್ಲಿದ್ದ ಬಹುತೇಕರ ವರದಿ ನೆಗೆಟಿವ್‌

Team Udayavani, May 12, 2020, 7:25 AM IST

Hubli-Business

ಹುಬ್ಬಳ್ಳಿ: ಕೋವಿಡ್ ಹಾವಳಿಯಿಂದ ನಲುಗಿದ್ದ ಮಹಾ ನಗರದಲ್ಲಿ ಸೋಮವಾರ ವ್ಯಾಪಾರ ವಹಿವಾಟು ಕೊಂಚ ಚುರುಕು ಪಡೆದಿದ್ದು, ಸಾಮಾಜಿಕ ಅಂತರದಂತ ನಿಯಮ ಪಾಲಿಸುವ ಮೂಲಕ ಅಂಗಡಿ- ಮುಂಗಟ್ಟುಗಳು ಕಾರ್ಯರಂಭಗೊಂಡಿವೆ. ನೆರೆಹೊರೆ ಜಿಲ್ಲೆಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆ. ಇತ್ತೀಚೆಗೆ ಪತ್ತೆಯಾದ ಮೂವರು
ಸೋಂಕಿತರ ಟ್ರಾವೆಲ್‌ ಹಿಸ್ಟರಿ ಮಹಾ ನಗರದಲ್ಲಿ ದೊಡ್ಡ ಆತಂಕವನ್ನೇ ಸೃಷ್ಟಿಸಿತ್ತು. ಸೋಂಕಿತರೊಂದಿಗೆ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕ ಹೊಂದಿದವರನ್ನು ಕ್ವಾರಂಟೈನ್‌ಗೆ ಒಳಪಡಿಸಿ, ಪರೀಕ್ಷಿಸಲಾಗಿದೆ. ಬಹುತೇಕರ ವರದಿ ನೆಗೆಟಿವ್‌ ಬಂದಿದೆ. ಹೀಗಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಆತಂಕವಿಲ್ಲ ಎನ್ನುವ ಕಾರಣದಿಂದ ಜಿಲ್ಲಾಡಳಿತ
ಲಾಕ್‌ಡೌನ್‌ ಮತ್ತಷ್ಟು ಸಡಿಲಿಕೆ ಮಾಡಿದ್ದು, ಆರ್ಥಿಕ ಚಟುವಟಿಕೆಗಳ ಉತ್ತೇಜನಕ್ಕೆ ಮುಂದಾಗಿದೆ.

ಬೆಳಗ್ಗೆ 7ರಿಂದ ಸಂಜೆ 7 ಗಂಟೆ ವರೆಗೆ ಅಗತ್ಯ ವಸ್ತುಗಳನ್ನು ಪೂರೈಸುವ ನೋಂದಣಿ ಮಾಡಿಕೊಂಡಿರುವ ಅಂಗಡಿ- ಮುಂಗಟ್ಟು ತೆರೆಯಲು ಅನುಮತಿ ನೀಡಲಾಗಿದೆ. ಹೀಗಾಗಿ ಇಲ್ಲಿನ ಆಜಾದ್‌ ಕಾಲೋನಿ, ಮುಲ್ಲಾ ಓಣಿ, ಶಾಂತಿ ನಗರದ ಸೀಲ್‌ ಡೌನ್‌ ಪ್ರದೇಶ ಹೊರತುಪಡಿಸಿ ಇನ್ನಿತರ ಪ್ರದೇಶಗಳ ಅಂಗಡಿ-ಮುಂಗಟ್ಟುಗಳು ಕಾರ್ಯರಂಭ ಮಾಡಿವೆ. ಮೂರನೇ ಹಂತದ ಲಾಕ್‌ಡೌನ್‌ ಆರಂಭದಲ್ಲಿ ಆರ್ಥಿಕ ಚಟುವಟಿಕೆ ಆರಂಭಕ್ಕೆ ಕೇಂದ್ರ ಸರಕಾರ ಮಾರ್ಗಸೂಚಿ ನೀಡಿತ್ತು. ಹೀಗಾಗಿ ಜಿಲ್ಲಾಡಳಿತ ಮೇ 4ರಿಂದ ಲಾಕ್‌ಡೌನ್‌ನಲ್ಲಿ ಒಂದಿಷ್ಟು ಸಡಿಲಿಕೆ
ಮಾಡಿದ್ದರಿಂದ ಕೆಲ ವ್ಯಾಪಾರ-ವಹಿವಾಟು ಆರಂಭವಾಗಿದ್ದವು. ಕಳೆದ ಒಂದು ವಾರದಿಂದ ಕ್ರಮೇಣ ಒಂದೊಂದಾಗಿ ವ್ಯಾಪಾರ ಶುರುವಾಗುತ್ತಿದ್ದವು. ಆದರೆ ಕಂಟೈನ್ಮೆಂಟ್‌ ಪ್ರದೇಶ
ವ್ಯಾಪ್ತಿಯಲ್ಲಿ ವ್ಯಾಪಾರಕ್ಕೆ ಕಡಿವಾಣ ಹಾಕಲಾಗಿತ್ತು. ಇದೀಗ ಮತ್ತಷ್ಟು ಚಟುವಟಿಕೆಗಳಿಗೆ ಜಿಲ್ಲಾಡಳಿತ ವಿನಾಯಿತಿ ನೀಡಿ, ಸೀಲ್‌ಡೌನ್‌ ಪ್ರದೇಶ ವ್ಯಾಪ್ತಿ ಕಡಿಮೆ ಮಾಡಿದ ಹಿನ್ನೆಲೆಯಲ್ಲಿ 45-50 ದಿನಗಳಿಂದ ಸ್ಥಗಿತವಾಗಿದ್ದ ಅಂಗಡಿ ಮುಂಗಟ್ಟುಗಳು ಬಾಗಿಲು ತೆರೆಯಲು ಆರಂಭಿಸಿವೆ.

ನಿಯಮ ಪಾಲನೆ: ಸೋಂಕಿನ ಪರಿಣಾಮ ಅರಿತಿರುವ ಜನರು ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದಕ್ಕೆ ಹೆಚ್ಚಿನ ಆದ್ಯತೆ ನೀಡಿದಂತಿದೆ. ಮಾಸ್ಕ್ ಇಲ್ಲದೇ ಬರುವ ಗ್ರಾಹಕರನ್ನು ಅಂಗಡಿ
ಮಾಲೀಕರು ತರಾಟೆ ತೆಗೆದುಕೊಂಡು ವಾಪಸ್ಸು ಕಳುಹಿಸುತ್ತಿದ್ದಾರೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಅಂಗಡಿಗಳ ಎದುರು ಗುರುತು ಹಾಕಲಾಗಿದೆ. ಇನ್ನು ಕೆಲ ಅಂಗಡಿಗಳ ಎದುರು ಅಂತರ ಕಾಪಾಡಿಕೊಂಡು ವ್ಯಾಪಾರ ನಡೆಸಲಾಗುತ್ತಿದೆ.

ಹೆಚ್ಚಿದ ಜನರ ಓಡಾಟ: ಒಂದಿಷ್ಟು ಅಂಗಡಿ- ಮುಂಗಟ್ಟುಗಳಿಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಸಾಮಾನ್ಯವಾಗಿ ಜನರ ಓಡಾಟ ಎಂದಿಗಿಂತ ಕೊಂಚ ಹೆಚ್ಚಾಗಿತ್ತು. ಪ್ರಮುಖ ರಸ್ತೆ ಸೇರಿದಂತೆ ಮಾರುಕಟ್ಟೆ ಪ್ರದೇಶಗಳಲ್ಲಿ ವಾಹನಗಳ ಸಂಚಾರವಿತ್ತು. ಕಟ್ಟಡ ನಿರ್ಮಾಣ ಕಾಮಗಾರಿ, ಅಂಗಡಿ-ಮುಂಗಟ್ಟುಗಳು ಆರಂಭವಾದ ಹಿನ್ನೆಲೆ ಯಲ್ಲಿ ಅಲ್ಲಲ್ಲಿ ಜನರ ಓಡಾಟ ಹೆಚ್ಚಾಗಿದೆ.

ಅಂಗಡಿಕಾರರಲ್ಲಿ ಗೊಂದಲ
ಜಿಲ್ಲಾಡಳಿತ ಅಗತ್ಯ ವಸ್ತುಗಳ ಮಾರಾಟಕ್ಕೆ ಯಾವುದೇ ನಿರ್ಬಂಧವಿಲ್ಲ ಎನ್ನುವ ಸೂಚನೆ ನೀಡಿದ್ದು, ಕೆಲವು ವ್ಯಾಪಾರಿಗಳಿಗೆ ಗೊಂದಲವಾಗಿ ಕಾಡುತ್ತಿದೆ. ಹೀಗಾಗಿಯೇ ಚಿನ್ನಾಭರಣ, ಬಟ್ಟೆ ಮಾರುವವರು ತಮ್ಮ ಅಂಗಡಿಗಳ ಬಾಗಿಲನ್ನು ಅರ್ಧಂಬರ್ಧ ತೆಗೆದಿದ್ದರು. ಕೆಲವೆಡೆ ಬಟ್ಟೆ ಅಂಗಡಿಗಳು ಪೂರ್ಣ ಪ್ರಮಾಣದಲ್ಲಿ ವ್ಯಾಪಾರಕ್ಕೆ ಮುಂದಾಗಿದ್ದವು. ಆದರೂ ಪೊಲೀಸರು ಬರಬಹುದೇ ಎಂದು ನೋಡಲು ಅಂಗಡಿ ಹೊರಗೆ ಒಬ್ಬರನ್ನು ಕೂಡಿಸಲಾಗಿತ್ತು. ದೊಡ್ಡ ಬಟ್ಟೆ ಅಂಗಡಿಗಳು ಎಂದಿನಂತೆ ಮುಚ್ಚಿದ್ದವು. ಮೊದಲ ದಿನ ಆರಂಭವಾದ ಬಟ್ಟೆ ಅಂಗಡಿಗಳಲ್ಲಿ
ಗ್ರಾಹಕರು ಕಂಡುಬರಲಿಲ್ಲ.

ಮಾರುಕಟ್ಟೆಗೆ ಕಡಿವಾಣ
ಸದಾ ಜನರಿಂದ ಕಿಕ್ಕಿರಿದು ತುಂಬಿರುತ್ತಿದ್ದ ದುರ್ಗದಬೈಲ್‌ನಲ್ಲಿ ಒಂದಿಷ್ಟು ಜನರ ಓಡಾಟವಿತ್ತು. ಅಲ್ಲೊಂದು, ಇಲ್ಲೊಂದು ಅಂಗಡಿಗಳು ಕಾರ್ಯ ನಿರ್ವಹಿಸಿದವು. ಆದರೆ ದುರ್ಗದ ಬೈಲ್‌ನಲ್ಲಿ ತರಕಾರಿ, ಹಣ್ಣು, ಹೂವಿನ ಮಾರುಕಟ್ಟೆ ಆರಂಭಿಸಲು ಪಾಲಿಕೆ ಅಧಿಕಾರಿಗಳು ಅವಕಾಶ ನೀಡಲಿಲ್ಲ. ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಬೇಕಾಗುವ ಮುಂಜಾಗ್ರತೆ ಕೈಗೊಳ್ಳಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ಪಾಲಿಕೆ ಅಧಿಕಾರಿಗಳು ಅವಕಾಶ ನೀಡಿಲ್ಲ. ಅಂಗಡಿ ತೆರೆಯಲು ಬಂದಿದ್ದ ವರ್ತಕರನ್ನು ವಾಪಸ್ಸು ಕಳುಹಿಸಿದ್ದಾರೆ. ಅಲ್ಲದೇ ಜನ ದಟ್ಟಣೆ ಆಗುವಂತಹ ವಾಣಿಜ್ಯ ಸಂಕೀರ್ಣದಲ್ಲಿರುವ ಮಳಿಗೆಗಳನ್ನು ತೆಗೆಯಲು ಅವಕಾಶ ನೀಡಲಿಲ್ಲ.

ಇಂದು ಏನೇನಿದ್ದವು?
ಸೀಲ್‌ಡೌನ್‌ ಪ್ರದೇಶ ಹೊರತುಪಡಿಸಿ ಬಹುತೇಕ ಆಟೋ ಮೊಬೈಲ್ಸ್‌, ಝೆರಾಕ್ಸ್‌, ಸಣ್ಣಪುಟ್ಟ ಬಟ್ಟೆ ಅಂಗಡಿ, ಎಲೆಕ್ಟ್ರಿಕಲ್‌, ತಂಪು ಪಾನೀಯ, ದುರಸ್ತಿ ಅಂಗಡಿ, ಜನರಲ್‌ ಸ್ಟೋರ್, ಪುಸ್ತಕ ಮಳಿಗೆ, ಕೆಲ ಖಾಸಗಿ ಕ್ಲಿನಿಕ್‌, ಫೋಟೋ ಲ್ಯಾಬ್‌ ಸೇರಿದಂತೆ ಇನ್ನಿತರ ಅಂಗಡಿಗಳು ಕಾರ್ಯಾರಂಭ ಮಾಡಿವೆ. ಇನ್ನು ಪಾರ್ಸಲ್‌ ನೀಡುವ ನಿಬಂಧನೆಗೆ ಒಳಪಟ್ಟು ಅಲ್ಲಲ್ಲಿ ಹೋಟೆಲ್‌ಗ‌ಳು ಆರಂಭವಾಗಿವೆ. ಅಲ್ಲದೇ ಕಾರು, ಬೈಕ್‌ ಗ್ಯಾರೇಜ್‌, ಮೆಡಿಕಲ್‌ ಶಾಪ್‌ ಹಾಗೂ ಕೆಲ ದಿನಸಿ ಅಂಗಡಿಗಳು ಮಾತ್ರ ಇಲ್ಲಿಯ ವರೆಗೆ ಕಾರ್ಯನಿರ್ವಹಿಸುತ್ತಿದ್ದವು.

ಯಾವ್ಯಾವುದಕ್ಕೆ ನಿಷೇಧ?
ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಸ್ಥಳಗಳಿಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಶಾಲೆ-ಕಾಲೇಜು, ಕೋಚಿಂಗ್‌ ಕ್ಲಾಸ್‌, ಚಿತ್ರ ಮಂದಿರ, ಮಾಲ್‌, ಶಾಪಿಂಗ್‌ ಸೆಂಟರ್‌, ಮನರಂಜನಾ ಉದ್ಯಮ, ಧಾರ್ಮಿಕ, ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆ, ಸಾರ್ವಜನಿಕ ಪೂಜೆ, ಪ್ರಾರ್ಥನೆ ಇತ್ಯಾದಿ.

ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

1-mannn

Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

13-belagavi

ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Yasin Malik

SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ

ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

1-mannn

Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.